LATEST NEWS
ಮದ್ರಾಸ್ ಹೈಕೋರ್ಟ್ನಲ್ಲೂ ಸದ್ದು ಮಾಡಿದ ಹಿಜಾಬ್-ಕೇಸರಿ ಕಲಹ
ಚೆನ್ನೈ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಬ್-ಕೇಸರಿ ಶಾಲು ವಿವಾದವು ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ.
ಧಾರ್ಮಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ರಾಷ್ಟ್ರವೋ ಅಥವಾ ಧರ್ಮವೋ, ಯಾವುದು ಮುಖ್ಯ ಎಂದು ಪ್ರಶ್ನಿಸಿದೆ.
ದೇವಾಲಯಗಳಲ್ಲಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ಎನ್.ಭಂಡಾರಿ ಮತ್ತು ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರಿದ್ದ ಪೀಠವು, ಇದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಕೆಲವರು ಹಿಜಬ್ಗಾಗಿ ಹೋಗುತ್ತಾರೆ.
ಮತ್ತೆ ಕೆಲವರು ಟೋಪಿಗಾಗಿ ಹೋರಾಡುತ್ತಾರೆ. ಇನ್ನೂ ಕೆಲವರು ತಮಗೆ ಅಗತ್ಯವಿರುವುದಕ್ಕಾಗಿ ಪ್ರತಿಭಟಿಸುತ್ತಾರೆ. ಇದು ಒಂದು ರಾಷ್ಟ್ರವೋ ಅಥವಾ ಧರ್ಮದಿಂದ ವಿಭಜನೆಯಾಗಿದೆಯೋ ಎಂದು ಖಾರವಾಗಿ ಪ್ರಶ್ನಿಸಿದೆ. ಭಾರತ ಜಾತ್ಯತೀತ ರಾಷ್ಟ್ರ.
ಪ್ರಚಲಿತ ವಿದ್ಯಾಮಾನಗಳಿಂದ ಕಂಡು ಬರುತ್ತಿರುವುದು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನವಲ್ಲದೇ ಬೇರೇನೂ ಅಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಭಂಡಾರಿ ಕಟು ಪದಗಳಿಂದ ಧರ್ಮದ ಹೆಸರಿನಲ್ಲಿ ದೇಶ ಒಡೆಯುವವರ ವಿರುದ್ಧ ಚಾಟಿ ಬೀಸಿದ್ದಾರೆ.
ತಿರುಚಿರಪಳ್ಳಿ ಜಿಲ್ಲೆಯ ರಂಗರಾಜನ್ ನರಸಿಂಹನ್ ಎಂಬವರು ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಭಕ್ತರಿಗೆ ವಸ್ತ್ರ ಸಂಹಿತೆ ರೂಪಿಸಬೇಕು. ರಾಜ್ಯಾದ್ಯಂತ ಇರುವ ದೇವಾಲಯಗಳಿಗೆ ಹಿಂದೂಯೇತರರು ಕಾಲಿಡದಂತೆ ಮತ್ತು ದೇವಸ್ಥಾನಗಳ ಆವರಣದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮನವಿ ಮಾಡಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಪೀಠವು, ಮನವಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನೀಡುವಂತೆ ಅರ್ಜಿದಾರನನ್ನು ಪ್ರಶ್ನಿಸಿದೆ. ಆಗಮಗಳ ಯಾವ ಭಾಗವು ಪ್ಯಾಂಟ್, ಧೋತಿ ಮತ್ತು ಶರ್ಟ್ಗಳ ಕುರಿತು ಉಲ್ಲೇಖ ಮಾಡಿದೆ ಎಂದು ಪೀಠ ಕೇಳಿದೆ.
ಅಂತಿಮವಾಗಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ವಿವರಣೆಗಳೊಂದಿಗೆ ಅಫಿಡವಿಟ್ ಸಲ್ಲಿಸಲು ಅರ್ಜಿದಾರರಿಗೆ ಪೀಠವು ಅವಕಾಶ ನೀಡಿದೆ.
FILM
ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್ ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ
ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.
ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್ ಸ್ಟೆಪ್ಸ್ :
‘ಪುಷ್ಪ 2 : ದಿ ರೂಲ್’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.
ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.
ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ. ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ತೆರೆಗೆ ಯಾವಾಗ?
ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.
‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.
LATEST NEWS
ಹೊಸ ಅಪ್ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?
ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.
ಏನಿದು ಫೀಚರ್ ?
ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ನಿಯರ್ ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್ಆ್ಯಪ್ ಸಹಾಯ ಮಾಡುತ್ತದೆ.
LATEST NEWS
123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.
ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.
ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:
ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.
- DAKSHINA KANNADA7 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
- FILM6 days ago
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
- DAKSHINA KANNADA7 days ago
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
- FILM6 days ago
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!