LATEST NEWS
ಹಿಜಾಬ್ ಬಗ್ಗೆ ಹೈಕೋರ್ಟ್ನಲ್ಲಿ ವಾದ-ಪ್ರತಿವಾದ: ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್ನಲ್ಲಿ ಇಂದು ವಿಚಾರಣೆ ನಡೆದಿದೆ. ಏಕಸದಸ್ಯದಲ್ಲಿ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣಮೂರ್ತಿ ದೀಕ್ಷಿತ್ ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ. ವಾದ-ಪ್ರತಿವಾದವೂ ಮುಂದುವರೆದಿದೆ.
ಸುದೀರ್ಘ ಒಂದೂವರೆ ಘಂಟೆ ನಡೆದ ವಾದ-ಪ್ರತಿವಾದ ಆಲಿಸಿದ ನ್ಯಾಯಧೀಶರು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದ್ದಾರೆ.
ಒಟ್ಟು ಮೂರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಯ ಮುಂದೆ ಅರ್ಜಿದಾರರ ಪರ ವಕೀಲರಾದ ಮೊಹಮ್ಮದ್ ತಾಹಿರ್, ದೇವದತ್ ಕಾಮತ್ ವಾದ ಮಂಡಿಸಿದ್ದರೆ.
ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವಡ ದೆಹಲಿಯಿಂದ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ಕಾರವನ್ನು ಪ್ರತಿನಿಧಿಸಿದ್ದರು. ಬೆಂಗಳೂರಿನಲ್ಲಿ ಅಡಿಷನ್ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಂ ಅವರು ಸರ್ಕಾರವನ್ನು ಪ್ರತಿನಿಧಿಸಿದ್ದಾರೆ.
ಎರಡು ತಿಂಗಳು ಹಿಜಾಬ್ ಧರಿಸಲು ಅವಕಾಶ ನೀಡಲಿ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಬಗ್ಗೆ ಸರ್ಕಾರ ನೂತನ ನೀತಿ ತಯಾರಿಸಲಿ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.
ಈ ಮಧ್ಯೆ ಜಡ್ಜ್ ಪವಿತ್ರ ಕುರಾನ್ ಪ್ರತಿಯನ್ನು ಕೋರ್ಟ್ ಲೈಬ್ರೆರಿಯಿಂದ ತರಿಸಿದ್ದಾರೆ.
ಖುರಾನ್ನಲ್ಲಿರುವ ವಸ್ತ್ರಸಂಹಿತೆ ಬಗ್ಗೆ ಉಲ್ಲೇಖ ನಡೆಯುತ್ತಿತ್ತು. ಕಳೆದ ಒಂದೂವರೆ ಗಂಟೆಯಿಂದ ವಾದ-ಪ್ರತಿವಾದ ನಡೆಯುತ್ತಿದ್ದು, ಇದೀಗ 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
LATEST NEWS
ಕನ್ಯಾನ ಸದಾಶಿವ ಶೆಟ್ಟಿಗೆ ಮಾತೃ ವಿಯೋಗ
ಬೆಳ್ತಂಗಡಿ : ಕೊಡುಗೈ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ತಾಯಿ, ಕನ್ಯಾನ ದಿವಂಗತ ಪಕೀರ ಶೆಟ್ಟಿ ಅವರ ಪತ್ನಿ ಲೀಲಾವತಿ ಶೆಟ್ಟಿ ನಿಧ*ನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಮಕ್ಕಳಾದ ಕನ್ಯಾನ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರ ಶೆಟ್ಟಿ, ವಿಜಯಲಕ್ಷ್ಮೀ ಶೆಟ್ಟಿ, ದಿವಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಗಣ್ಯರ ಸಂತಾಪ :
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಶಶಿಧರ್ ಶೆಟ್ಟಿ, ಯಕ್ಷಧ್ರುವ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
DAKSHINA KANNADA
ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?
ದಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್ನ ಬ್ಯೂಟಿ ಕ್ವೀನ್ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.
ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.
ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.
ಮಲಯಾಳಂ ಸಿನಿಮಾದಲ್ಲಿ ಬಿಝಿ :
‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.
ಮಲಯಾಳಂನಲ್ಲಿ RIAL 5- ಹಾರರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.
LATEST NEWS
ಹಳೆಯಂಗಡಿ : ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ
ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.
ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು.
ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯೆಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ,ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು.
ಮಹಿಳಾ ಕೇಂದ್ರೀಯ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷೆ ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಪಾವಂಜೆ ಮೇಳದಿಂದ ಧರ್ಮಸಿಂಹಾಸನ ಯಕ್ಷಗಾನ ಪ್ರದರ್ಶನಗೊಂಡಿತು.