Connect with us

    BANTWAL

    ಉಪ್ಪಿನಂಗಡಿ-ವಿಟ್ಲದಲ್ಲಿ ಹಿಜಾಬ್‌ ವಿವಾದ: ಪೊಲೀಸರ ಮಧ್ಯಪ್ರವೇಶ, 2 ದಿನ ರಜೆ

    Published

    on

    ಮಂಗಳೂರು: ರಾಜ್ಯದಾದ್ಯಂತ ಹರಡಿರುವ ಹಿಜಾಬ್ ವಿವಾದ ಇದೀಗ  ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಗೂ ವ್ಯಾಪಿಸಿದೆ.


    ಇಂದು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಿಜಾಬ್ ಧರಿಸಿ ಕಾಲೇಜಿಗೆ‌ ಬಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸದಂತೆ ಮನವಿ ಮಾಡಿದ್ದಾರೆ. ಆದರೆ ವಿದ್ಯಾರ್ಥಿನಿಯರಿಗೆ ಒಂದು ಸಮುದಾಯದ ವಿದ್ಯಾರ್ಥಿಗಳ ಗುಂಪು ಬೆಂಬಲ ಸೂಚಿಸಿದ್ದು, ಹಿಜಾಬ್ ಧರಿಸಿಯೇ ತರಗತಿಗೆ ಬಿಡುವಂತೆ ಪಟ್ಟು ಹಿಡಿದಿದೆ.

    ಈ ನಡುವೆ ಸಮವಸ್ತ್ರ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಇನ್ನೊಂದು ಸಮುದಾಯದ ವಿದ್ಯಾರ್ಥಿಗಳ ಗುಂಪು ಪ್ರಾಂಶುಪಾಲರನ್ನು ಆಗ್ರಹಿಸಿದೆ.

    ಈ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಗುಂಪು ಸೇರಿದ ವಿದ್ಯಾರ್ಥಿಗಳನ್ನು ಚದುರಿಸಿದ್ದಾರೆ.

    ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಕಾಲೇಜಿಗೆ ಎರಡು ದಿನಗಳ ರಜೆಯನ್ನು ಘೋಷಿಸಿದ್ದಾರೆ.

    ತಮಗೆ ತರಗತಿ ನಡೆಸುವಂತೆ ಒಂದು ಗುಂಪಿನ ವಿದ್ಯಾರ್ಥಿಗಳು ಮತ್ತೆ ಪ್ರಾಂಶುಪಾಲರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಇನ್ನೊಂದು ಗುಂಪು ಹಿಜಾಬ್ ಧರಿಸಿಯೇ ತಮಗೆ ತರಗತಿಯಲ್ಲಿ ಕೂರಲು ಅನುಮತಿ ನೀಡಬೇಕೆಂದು ಒತ್ತಾಯಿಸಿದ ಹಿನ್ನೆಲೆಯಲ್ಲಿ ಪೊಲೀಸರು ಎರಡೂ ಗುಂಪುಗಳನ್ನು ಲಾಠಿ ಬೀಸಿ ಚದುರಿಸಿದ್ದಾರೆ.

    ಹಿಜಾಬ್ ವಿಚಾರದಲ್ಲಿ ಕಾಲೇಜಿಗೆ ರಜೆ ನೀಡಿದ ಪ್ರಾಂಶುಪಾಲರ ಕ್ರಮಕ್ಕೆ ಕಾಲೇಜಿನ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವೇ ವಿದ್ಯಾರ್ಥಿಗಳ ಹಠದಿಂದಾಗಿ ತಮ್ಮ ಶಿಕ್ಷಣಕ್ಕೂ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.


    ಬಂಟ್ವಾಳ ತಾಲೂಕಿನ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ಹಿಜಾಬ್ ವಿವಾದ ಎರಡನೇ ದಿನಕ್ಕೆ ಕಾಲಿರಿಸಿದೆ.

    ನಿನ್ನೆ 11 ವಿದ್ಯಾರ್ಥಿನಿಯರು ಹಿಜಾಬ್ ಇಲ್ಲದೆ ಕಾಲೇಜಿಗೆ ಹಾಜರಾಗುವುದಿಲ್ಲ ಎಂದು ಮನೆಗೆ ತೆರಳಿದ್ದು, ಇಂದು 11 ವಿದ್ಯಾರ್ಥಿನಿಯರಲ್ಲಿ 6 ವಿದ್ಯಾರ್ಥಿನಿಯರು ಮತ್ತೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದು,

    ಪ್ರಾಂಶುಪಾಲರು ವಿದ್ಯಾರ್ಥಿನಿಯರನ್ನು ಕಾಲೇಜು ಗ್ರಂಥಾಲಯದಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವ ಮೂಲಕ ಕಾಲೇಜಿನ ಆವರಣ ಪ್ರವೇಶಿಸಲು ಅವಕಾಶ ನೀಡಿದ್ದಾರೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending