Connect with us

LATEST NEWS

ಹಿಜಾಬ್ ವಿವಾದ: ತಾಳ್ಮೆ ಪರೀಕ್ಷೆಗೆ ಮುಂದಾದರೆ, ದಿಟ್ಟ ಉತ್ತರ- ಯಶ್‌ಪಾಲ್ ಸುವರ್ಣ

Published

on

ಉಡುಪಿ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಬೆರಳೆಣಿಕೆಯ ವಿದ್ಯಾರ್ಥಿನಿಯರು ಮತೀಯವಾದಿ ಸಂಘಟನೆಗಳ ಕುಮ್ಮಕ್ಕಿನಿಂದ ತರಗತಿಯಲ್ಲಿ ಹಿಜಾಬ್ ಧರಿಸಿ ವಿವಾದ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಡಿಸಲು ಯತ್ನಿಸುತ್ತಿದ್ದು,

ತಾಳ್ಮೆ ಪರೀಕ್ಷೆಗೆ ಮುಂದಾಗಿದ್ದು, ಮುಂದೆ ದಿಟ್ಟ ಉತ್ತರ ನೀಡುವುದಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.


ಕಾಲೇಜಿನ ಹಿತದೃಷ್ಟಿಯಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಯಮದಿಂದ ಸಮಸ್ಯೆ ಬಗೆಹರಿಸಲು ಕಾಲೇಜು ಅಭಿವೃದ್ಧಿ ಸಮಿತಿ ಯತ್ನಿಸುತ್ತಿದ್ದು,

ಇದನ್ನೇ ದೌರ್ಬಲ್ಯವೆಂದು ಭಾವಿಸಿರುವ ಮತೀಯವಾದಿಗಳು ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಾಧ್ಯಮಗಳ ಮೂಲಕ ಘಟನೆಯನ್ನು ವೈಭವೀಕರಿಸಿ ಕಾಲೇಜಿನ ಘನತೆಗೆ ಧಕ್ಕೆತರಲು ಯತ್ನಿಸುತ್ತಿದ್ದಾರೆ.

ಈಗಾಗಲೇ ಶಿಕ್ಷಣ ಇಲಾಖೆ ಕಾಲೇಜಿನ ಸಮವಸ್ತ್ರ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಸುವಂತೆ ಆದೇಶ ನೀಡಿದ್ದರೂ ವಿದ್ಯಾರ್ಥಿಗಳು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರದೃಷ್ಟಕರ. ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ರಘುಪತಿ ಭಟ್ ಅವರು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಆನ್‌ಲೈನ್ ತರಗತಿಯಲ್ಲಿ ಭಾಗವಹಿಸಲು ಅವಕಾಶ ನೀಡಿದರೂ ವಿದ್ಯಾರ್ಥಿನಿಯರು ಪಟ್ಟು ಸಡಿಲಿಸದೆ ಉದ್ಧಟತನ ಮೆರೆದಿದ್ದಾರೆ ಎಂದು ಯಶ್‌ಪಾಲ್ ಟೀಕಿಸಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಈ ಘಟನೆಯನ್ನು ವ್ಯವಸ್ಥಿತವಾಗಿ ರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರಗೊಳಿಸಿ ರಾಜಕೀಯ ಲಾಭ ಪಡೆಯಲು ಸಂಘಟನೆಗಳು ಯತ್ನಿಸುತ್ತಿವೆ.

ಕಾಲೇಜಿನ ಉಪನ್ಯಾಸಕರಿಗೆ ಅಗೌರವ ತೋರುತ್ತಾ, ಅಶಿಸ್ತಿನಿಂದ ವರ್ತಿಸುತ್ತಿರುವ ವಿದ್ಯಾರ್ಥಿನಿಯರಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ಸಾವಿರಾರು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆ ಉಂಟಾಗಿದೆ.

ವಿದ್ಯೆ ಕಲಿಸುವ ಗುರುಗಳ ಬಗ್ಗೆ ಅಗೌರವ ತೋರುವ ವಿದ್ಯಾರ್ಥಿಗಳಿಂದ ಹೆಚ್ಚಿನದನ್ನು ನಿರೀಕ್ಷಿಸುವುದು ಅಸಾಧ್ಯವಾಗಿದ್ದು, ವಿದ್ಯಾರ್ಥಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಮತೀಯವಾದಿಗಳಿಗೆ ಕಾಲೇಜಿನ ಶಿಕ್ಷಣದ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಅವಕಾಶ ನೀಡುವುದಿಲ್ಲ.

ಕಾಲೇಜಿನ ಶಿಸ್ತು ಕಾಪಾಡುವ ವಿಚಾರದಲ್ಲಿ ರಾಜೀ ಪ್ರಶ್ನೆಯೇ ಇಲ್ಲ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

DAKSHINA KANNADA

ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!

Published

on

ಮಂಗಳೂರು: ನಾವು ಯಾವುದೇ ಹಿಂದೂ ಧರ್ಮದವರ ಮನೆಗೆ ಹೋದಾಗ ಅಲ್ಲಿ ಏನು ನೋಡುತ್ತೇವೊ ಗೊತ್ತಿಲ್ಲ ಆದರೆ ಮನೆಯ ಎದುರೊಂದು ತುಳಸಿ ಗಿಡ ಇದ್ದೇ ಇರುತ್ತದೆ. ಯಾಕೆಂದರೆ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜನೀಯ ಸ್ಥಾನ ಕೊಡುತ್ತಾರೆ. ಬೆಳಗ್ಗೆ ಎದ್ದ ಕೂಡಲೇ ಮಹಿಳೆಯರು ದೇವರಿಗೆ ದೀಪ ಇಟ್ಟು ಬಳಿಕ ತುಳಸಿ ಗಿಡಕ್ಕೆ ಕಲಶದಲ್ಲಿ ನೀರನ್ನು ಹಾಕುತ್ತಾರೆ.

ಕೆಲವರ ಮನೆಯಲ್ಲಿ ಒಂದೇ ತುಳಸಿ ಗಿಡವನ್ನು ನೋಡಿದರೆ ಇನ್ನು ಕೆಲವರ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ಇರುತ್ತದೆ. ಆರೋಗ್ಯದ ಪ್ರಯೋಜನವಾಗಿಯೂ ಇದನ್ನು ಬಳಸುತ್ತಾರೆ. ಆದರೆ ಕೆಲವೊಂದು ನಿಯಮವನ್ನು ಅನುಸರಿಸುವುದು ಮುಖ್ಯವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ತುಳಸಿ ಗಿಡವನ್ನು ಇಟ್ಟು ಕೊಂಡರೆ ಏನಾಗುತ್ತದೆ ಎಂಬುದರ ಬಗ್ಗೆ ತಿಳಿಯೋಣ.

ತುಳಸಿ ಗಿಡ ಬೆಸ ಸಂಖ್ಯೆಯಲ್ಲಿ ಇರಬೇಕು:

ಕೆಲವೊಂದು ಮನೆಯಲ್ಲಿ ತುಳಸಿ ಗಿಡ ಎಲ್ಲಾ ಕಡೆಯಲ್ಲಿ ಬೆಳೆಯುತ್ತದೆ. ಇನ್ನು ಕೆಲವು ಮನೆಯಲ್ಲಿ ನೆಟ್ಟ ಒಂದು ಗಿಡವೂ ಸರಿಯಾಗಿ ಉಳಿಯುವುದು ಕಷ್ಟ. ಆದರೆ ತುಳಸಿ ಗಿಡದ ಸಂಖ್ಯೆ ಬೆಸಸಂಖ್ಯೆಯಲ್ಲಿರಬೇಕು. 1, 3, 5, 7 ಹೀಗೆ ಬೆಸಸಂಖ್ಯೆಯಲ್ಲಿ ತುಳಸಿ ಗಿಡವನ್ನು ಮನೆಯಲ್ಲಿಟ್ಟುಕೊಳ್ಳಬೇಕು. ಈ ರೀತಿಯಾಗಿ ಇದ್ದರೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ತುಳಸಿ ಗಿಡವನ್ನು ಹೀಗೆ ನೆಡಬೇಕು:

ತುಳಸಿ ಗಿಡವನ್ನು ನೇರವಾಗಿ ನೆಲದ ಮೇಲೆ ನೆಡಬಾರದು. ಇಂತಹ ತಪ್ಪನ್ನು ಎಂದಿಗೂ ಮಾಡಬಾರದು. ಈ ಸಸಿಯನ್ನು ಕುಂಡದಲ್ಲಿ ಅಥವಾ ತೊಟ್ಟೆಯಲ್ಲಿ ಪ್ರತ್ಯೇಕವಾಗಿ ನೆಡಬೇಕು. ಕುಂಡದಲ್ಲಿ ತುಳಸಿ ಗಿಡವನ್ನು ನೆಟ್ಟರೆ ಯಾವೂದೇ ರೀತಿಯ ಅಶುದ್ಧತೆಗಳು ತುಳಸಿ ಗಿಡವನ್ನು ಮುಟ್ಟುವುದಿಲ್ಲ.

ಈ ದಿನದಂದು ತುಳಸಿಯನ್ನು ಕೀಳಬಾರದು:

ತುಳಸಿ ಗಿಡವನ್ನು ಎಲ್ಲಾ ದಿನ ನೆಡಬಾರದು. ತುಳಸಿಯನ್ನು ಭಾನುವಾರದಂದು ಮತ್ತು ಏಕಾದಶಿಯ ದಿನದಂದು ನೆಡಬಾರದು ಮತ್ತು ಅದರ ಎಲೆಗಳನ್ನು ತೆಗೆಯಬಾರದು. ಈ ಎರಡು ದಿನ ತುಳಸಿಯನ್ನು ಕೀಳುವುದು ಮತ್ತು ಮುಟ್ಟುವುದು ಮಾಡಿದರೆ ಅಶುಭವೆಂದು ಹೇಳುತ್ತಾರೆ.

ತುಳಸಿಯನ್ನು ನಾವು ಮನೆಯಲ್ಲಿ ನೆಡುವಾಗ ಈ ಮೇಲಿನ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ನೆಡಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಸಮ ಸಂಖ್ಯೆಯಲ್ಲಿ ತುಳಸಿ ಗಿಡವಿದ್ದರೆ ಯಾವೂದಾದರು ಒಂದನ್ನು ಬೇರೆಯವರಿಗೆ ದಾನ ಮಾಡಿ. ಇದರಿಂದ ಯಾವೂದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ.

Continue Reading

LATEST NEWS

ಕೂಲಿ ಕೆಲಸಕ್ಕಿಳಿದ ಪದ್ಮಶ್ರೀ ಪುರಸ್ಕೃತ!

Published

on

ಹೈದರಾಬಾದ್ : ‘ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ’ ಎಂಬಂತೆ ಅನೇಕ ಕಲಾವಿದರು ಕಲಾಪೋಷಣೆಯಲ್ಲಿ ತೊಡಗಿಕೊಂಡಿರುತ್ತಾರೆ. ಅಂತಹ ಕಲಾವಿದರಲ್ಲಿ ಕೆಲವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವ ಕೆಲಸಗಳೂ ನಡೆಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಎಲೆ ಮರೆಯ ಕಾಯಿಯಂತಿರುವ ಕಲಾವಿದರನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಶಸ್ತಿಯೇನೋ ಸಿಗುತ್ತದೆ. ಒಂದಷ್ಟು ಜನ ಮನ್ನಣೆಯೂ ಸಿಗುತ್ತದೆ. ಆದರೆ, ಬದುಕು? ಹಾಗೇ  ಉಳಿದಿರುತ್ತೆ. ಅದಕ್ಕೆ ಸಾಕ್ಷಿ ಈ ಸಾಧಕ.

ಹೌದು, ಇವರು ಎರಡು ವರ್ಷಗಳ ಹಿಂದೆಯಷ್ಟೇ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು. ಆದ್ರೆ, ಈಗ ಹೊಟ್ಟೆಪಾಡಿಗಾಗಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಅವರೇ ಸಂಗೀತ ಸಾಧಕ ತೆಲಂಗಾಣದ ಸಾಧಕ ದರ್ಶನಂ ಮೊಗುಳಯ್ಯ. ಅವರು ಕೆಲಸ ಮಾಡುತ್ತಿರುವ ಫೋಟೋ, ವೀಡಿಯೋ ವೈರಲ್ ಆಗಿವೆ.


ದರ್ಶನಂ ಮೊಗುಳಯ್ಯ ಸಂಗೀತ ವಾದನವಾದ ಕಿನ್ನೇರವನ್ನು ನುಡಿಸುವಲ್ಲಿ ಖ್ಯಾತರು, ಆ ವಾದನಕ್ಕೆ ರಾಷ್ಟ್ರೀಯ ಗೌರವ ಸಿಗುವಲ್ಲಿ ದರ್ಶನಂ ಮೊಗುಳಯ್ಯ ಅವರ ಪಾತ್ರ ಹಿರಿದು. ಹೀಗಾಗಿಯೇ ಕೇಂದ್ರ ಸರ್ಕಾರವು 2022ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಆಗ ರಾಷ್ಟ್ರಪತಿಯಾಗಿದ್ದ ರಾಮನಾಥ್‌ ಕೋವಿಂದ್‌ ಅವರು ದರ್ಶನಂ ಮೊಗುಳಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. ಇದಾದ ಬಳಿಕ ದರ್ಶನಂ ಮೊಗುಳಯ್ಯ ಅವರನ್ನು ಇಡೀ ದೇಶವೇ ಮೆಚ್ಚಿಕೊಂಡಿತ್ತು. ‘ವ್ಹಾ’ ಎಂದಿತ್ತು. ಆದರೆ, ಈಗಿನ ಪರಿಸ್ಥಿತಿ ಕೇಳಿದ್ರೆ ‘ಅಯ್ಯೋ’ ಎನ್ನುವಂತಿದೆ.

ಕೂಲಿ ಕೆಲಸ ಮಾಡ್ತಿದ್ದಾರೆ ಪದ್ಮಶ್ರೀ ಪುರಸ್ಕೃತ :


ದರ್ಶನಂ ಮೊಗುಳಯ್ಯ ತಮ್ಮ ಸಾಧನೆಗಾಗಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಆದರೆ, ಈಗ ತಮ್ಮ 73ನೇ ವಯಸ್ಸಿನಲ್ಲಿ ಹೈದರಾಬಾದ್ ಬಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಕುಟುಂಬಕ್ಕೆ ಇವರೇ ಆಧಾರ ಸ್ತಂಭ. ಹಾಗಾಗಿ ಮೂರು ಹೊತ್ತಿನ ಊಟಕ್ಕಾಗಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಫೋಟೊಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಇವರ ದುಸ್ಥಿತಿ ಕಂಡು ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಸುರಕ್ಷತೆಗೆ ಬಂತು ‘ವುಮೆನ್ ಸೇಫ್ಟೀ’ ಅಪ್ಲಿಕೇಷನ್‌..!

ಒಂದು ಕೋಟಿ ರೂ. ಎಲ್ಲಿ ಹೋಯ್ತು ?

ದರ್ಶನಂ ಮೊಗುಳಯ್ಯ ಸಾಧನೆಗೆ ಸರ್ಕಾರವೇನೋ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದೆ. ಇದರ ಬೆನ್ನಲ್ಲೇ ತೆಲಂಗಾಣ ಸರ್ಕಾರವು ಅವರಿಗೆ ಒಂದು ಕೋಟಿ ರೂ. ಪ್ರೋತ್ಸಾಹ ಧನವನ್ನೂ ನೀಡಿತ್ತು. ಅಂದಿನ ಸಿಎಂ ಕೆ.ಚಂದ್ರಶೇಖರ್‌ ರಾವ್‌ ಒಂದು ನಿವೇಶನವನ್ನೂ ಮಂಜೂರು ಮಾಡಿದ್ದರು.

ಆದರೆ, ಸರ್ಕಾರ ಕೊಟ್ಟ ಪ್ರೋತ್ಸಾಹಧನದಲ್ಲಿ ಒಂದಷ್ಟು ಹಣವನ್ನು ಮಗಳ ಮದುವೆಗೆ ಖರ್ಚು ಮಾಡಿದ ಅವರು, ಉಳಿದ ಹಣವನ್ನು ಸಾಲ ತೀರಿಸಲು, ಕುಟುಂಬದ ತುರ್ತು ಸಂದರ್ಭಗಳಿಗೆ ಬಳಸಿದ್ದಾರಂತೆ. ಹಾಗಾಗಿ, ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.

Continue Reading

DAKSHINA KANNADA

ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

Published

on

ಉಪ್ಪಿನಂಗಡಿ : ಕೋವಿಶೀಲ್ಡ್‌ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂತ ಅಡ್ಡ ಪರಿಣಾಮದ ಬಗ್ಗೆ ಒಪ್ಪಿಕೊಂಡಿದ್ದ ಸೀರಂ ಸಂಸ್ಥೆಯಿಂದ ಭಾರತದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೋವಿಡ್ ಲಸಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಆರೋಗ್ಯವಾಗಿದ್ದ ಯುವಕನೊಬ್ಬ ಹೃದಯಾ*ಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.


ಗಾರೆ ಕೆಲಸ ಮಾಡಿಕೊಂಡು ಆರೋಗ್ಯವಾಗಿದ್ದ 27 ವರ್ಷದ ಜನಾರ್ದನ ಎಂಬ ಯುವಕ ಅಸು ನೀಗಿದ್ದಾನೆ. ಉಪ್ಪಿನಂಗಡಿ ಸಮೀಪದ ನಿನ್ನಿಕಲ್ಲು ನಿವಾಸಿಯಾಗಿದ್ದ ಜನಾರ್ದನ ಮೇಸ್ತ್ರಿಯಾಗಿ ಗಾರೆ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೆಲಸಕ್ಕೆ ರಜೆ ಹಾಕಿ ಬಂದಿದ್ದ ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ನಿದ್ರೆಗೆ ಜಾರಿದ ಜನಾರ್ದನ್ ಮತ್ತೆ ಮೇಲೆದ್ದಿಲ್ಲ.

ಇದನ್ನೂ ಓದಿ : ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

ಮಗ ಮಲಗಿದ್ದಾನೆ ಅಂತ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು ಸಂಜೆ ಬಂದು ಮಗನನ್ನು ಎಬ್ಬಿಸಿದಾಗಲೇ ವಿಚಾರ ಗೊತ್ತಾಗಿದೆ. ಕರೆದರೂ ಮಗ ಎದ್ದಿಲ್ಲ ಎಂದು ತಾಯಿ ಮಗನನ್ನು ಅಲುಗಾಡಿಸಿ ಎಚ್ಚರಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ, ಆ ವೇಳೆ ಯಾವುದೇ ರೆಸ್ಪಾನ್ಸ್‌ ಇಲ್ಲದ ಕಾರಣ ತಾಯಿಗೆ ಅನುಮಾನ ಬಂದು ಉಸಿರು ಪರಿಶೀಲಿಸಿದಾಗ ಮಗ ಮೃ*ತಪಟ್ಟಿರುವುದು ಆರಿವಾಗಿದೆ.

 

Continue Reading

LATEST NEWS

Trending