Connect with us

LATEST NEWS

ಹಿಜಾಬ್‌ ವಿವಾದದಲ್ಲಿ ವಿದ್ಯಾರ್ಥಿನಿಯರ ಹೇಳಿಕೆ ರಾಜಕೀಯ ಪ್ರೇರಿತ: ಶಾಸಕ ಖಾದರ್‌

Published

on

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಸುಳ್ಳು ಹೇಳಿಕೆ ಅಚ್ಚರಿ ಹಾಗೂ ಮನಸ್ಸಿಗೆ ನೋವು ತಂದಿದೆ.

ಈ ಸುಳ್ಳು ಹೇಳಿಕೆಗಳು ದುರುದ್ದೇಶದಿಂದ ಕೂಡಿದ ರಾಜಕೀಯ ಪ್ರೇರಿತವಾಗಿದ್ದು ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ ಕುಮ್ಮಕ್ಕು ಎದ್ದು ಕಾಣುತ್ತಿದೆಯೆಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.


ಈ ವಿವಾದಕ್ಕೆ ಸಂಬಂಧಿಸಿದಂತೆ ಮೇ.18ರಂದು ರಂದು ವಿದ್ಯಾರ್ಥಿನಿಯರೋರ್ವರು ನನಗೆ ಕರೆ ಮಾಡಿ, ಕಳೆದ ಬಾರಿ ರಾಜ್ಯದಾದ್ಯಂತ ಹಿಜಾಬ್ ವಿವಾದ ಇದ್ದಾಗಲೂ ಕೂಡಾ ನಮ್ಮ ಕಾಲೇಜಿನ ಕ್ಯಾಲೆಂಡರಿನಲ್ಲಿ ವಸ್ತ್ರದೊಂದಿಗೆ ಹಿಜಾಬ್ ಹಾಕಲು ನಿಯಮ ಇದ್ದ ಕಾರಣ ನಮಗೆ ಯಾರಿಗೂ ತೊಂದರೆಯಾಗಿರಲಿಲ್ಲ.

ಇದೀಗ ಈ ಶೈಕ್ಷಣಿಕ ವರ್ಷದ ಮದ್ಯದಲ್ಲಿ ಹಠಾತ್ತನೆ ಹಿಜಾಬ್ ಹಾಕಲು ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಉಪಕುಲಪತಿಗಳ ಬಳಿ ವಿಚಾರ ಕೇಳಿದಾಗ ಸಿಂಡಿಕೇಟ್ ಸಮಿತಿಯ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ, ನೀವು ಜಿಲ್ಲಾಧಿಕಾರಿಗಳ ಬಳಿಗೆ ಹೋಗಿ,

ಈ ನಿಯಮ ಪಿ.ಯು.ಕಾಲೇಜುಗಳಿಗೆ ಮಾತ್ರ ಅನ್ವಯ ಡಿಗ್ರಿ ಕಾಲೇಜಿಗೆ ಅನ್ವಯಿಸುವುದಿಲ್ಲ ಎಂಬ ಆದೇಶ ನೀಡಿದರೆ ನನಗೆ ನಿಮ್ಮನ್ನು ಸಹಾಯ ಮಾಡಬಹುದು ಎಂದು ತಿಳಿಸಿರುತ್ತಾರೆ.

ಹಾಗಾಗಿ ಈಗ ನಾವು ಜಿಲ್ಲಾಧಿಕಾರಿಗಳ ಕಛೇರಿಗೆ ಬಂದಿದ್ದೇವೆ, ತಾವು ಬಂದರೆ ಒಳ್ಳೆಯದಿತ್ತು ಎಂಬುದಾಗಿ ಕೇಳಿಕೊಳ್ಳುತ್ತಾರೆ.

ಆ ಸಂದರ್ಭದಲ್ಲಿ ನಾನು ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕಾರಣ ನನಗೆ ಬರಲು ಅನಾನುಕೂಲ ಆಗಬಹುದು, ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಅವರ ಯಾವ ಸಮಯದಲ್ಲಿ ಸಿಗುತ್ತಾರೆಂಬುದನ್ನು ಕೇಳಿ ನಿಮಗೆ ತಿಳಿಸುತ್ತೇನೆಂದು ಹೇಳಿದೆ.

ನಂತರ ತಕ್ಷಣ ನಾನು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ವಿಚಾರಿಸಿದಾಗ ಜಿಲ್ಲಾಧಿಕಾರಿಗಳು ಈಗ ಕಛೇರಿಯಲ್ಲಿ ಇಲ್ಲ. ಸಂಜೆ 4 ಗಂಟೆಗೆ ಬರಲಿ ಎಂದು ತಿಳಿಸುತ್ತಾರೆ.

ತಕ್ಷಣ ನಾನು ನನಗೆ ಕರೆ ಮಾಡಿದ ವಿದ್ಯಾರ್ಥಿನಿಗೆ ಮರು ಕರೆ ಮಾಡಿ ಜಿಲ್ಲಾಧಿಕಾರಿಗೆ ಮಾತನಾಡಿ ಘಟನೆಯ ಬಗ್ಗೆ ವಿವರಿಸಿದ್ದೇನೆ. ಅವರು ಕಛೇರಿಯಲ್ಲಿ ಇಲ್ಲದ ಕಾರಣಕ್ಕಾಗಿ ಸಂಜೆ ನಾಲ್ಕು ಘಂಟೆಗೆ ಬರಲು ತಿಳಿಸಿರುತ್ತಾರೆ,

ಹೋಗಿ ಮಾತನಾಡಿ ಎಂದು ವಿದ್ಯಾರ್ಥಿನಿಗೆ ಹೇಳಿದೆ. ಆದರೆ ಸ್ವಲ್ಪ ಸಮಯದ ನಂತರ ನನಗೆ ಪುನಃ ಕರೆ ಮಾಡಿದ ಜಿಲ್ಲಾಧಿಕಾರಿಗಳು ಪ್ರಾಕೃತಿಕ ವಿಕೋಪದ ಸಭೆಯಲ್ಲಿರುವುದರಿಂದ ನನಗೆ 4 ಗಂಟೆಗೆ ಸಿಗಲು ಅಸಾಧ್ಯವಾಗಬಹುದು.

ಆದುದರಿಂದ ನಾಳೆ ಬೆಳಗ್ಗೆ 10 ಗಂಟೆಗೆ ಕೊಟ್ಟಾರ ಜಿಲ್ಲಾ ಪಂಚಾಯತ್ ಗೆ ಬರಲಿ ಎಂದು ತಿಳಿಸಿದಾಗ ನಾನು ಪುನಹ ವಿದ್ಯಾರ್ಥಿನಿಗೆ ಕರೆ ಮಾಡಿ ಜಿಲ್ಲಾಧಿಕಾರಿಗಳು

ನಾಳೆ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಕಛೇರಿಗೆ ಬರಲು ಹೇಳಿದ್ದಾರೆ. ನನಗೆ ನಾಳೆ ಆ ಸಮಯದಲ್ಲಿ ಪೂರ್ವ ನಿಗದಿ ಕಾರ್ಯಕ್ರಮದಲ್ಲಿ ಭಾಗಿಯಾವುದಾಗಿ ಹೇಳಿ

ಮಾಜಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ,ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ರವರನ್ನು ನಿಮ್ಮೊಂದಿಗೆ ಕಳುಹಿಸುತ್ತೇನೆಂದು ಹೇಳಿ ವಿದ್ಯಾರ್ಥಿನಿಗೆ ಶಾಹುಲ್ ರವರ ನಂಬರನ್ನು ನೀಡಿದೆ.
ಮರುದಿನ ಶಾಹುಲ್ ಹಮೀದ್ ರವರು ವಿದ್ಯಾರ್ಥಿಗಳೊಂದಿಗೆ ತೆರಳಿ ಜಿಲ್ಲಾಧಿಕಾರಿಗಳ ಬಳಿ ಘಟನೆಯ ಬಗ್ಗೆ ವಿವರಿಸುತ್ತಾರೆ.

ಅಂತೆಯೇ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸುತ್ತೇನೆಂಬ ಭರವಸೆಯನ್ನು ನೀಡಿದ್ದಾರೆ. ಈ ಮಧ್ಯೆ ನಾನು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಿಗೆ ಕರೆ ಮಾಡಿ ಕಾಲೇಜಿನ ಕ್ಯಾಲೆಂಡರ್ ನಲ್ಲಿದ್ದಂತೆ

ವಿದ್ಯಾರ್ಥಿಗಳು ವಸ್ತ್ರದ ಜತೆಯಲ್ಲಿ ಶಿರವಸ್ತ್ರ ಹಾಕಿಕೊಂಡು ಬರುವುದಕ್ಕೆ ಯಾಕೆ ತಡೆಯೊಡ್ಡಿದ್ದೀರಿ? ಎಂದು ಪ್ರಶ್ನಿಸಿದಾಗ ಅವರು ಇದು ಯುನಿವರ್ಸಿಟಿಯ ಬಂದ ಆದೇಶ, ಅದನ್ನು ನಾವು ಅನುಷ್ಠಾನಗೊಳಿಸಿದ್ದೇವೆ ಅಷ್ಟೆ,ನಾವು ಏನು ಮಾಡಲೂ ಸಾಧ್ಯವಿಲ್ಲ ಎಂದು ಹೇಳಿದರು.

ನಂತರ ನಾನು ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಿಗೂ ಕರೆ ಮಾಡಿ ಮೇಲೆ ತಿಳಿಸಿದ ಎಲ್ಲಾ ವಿಚಾರಗಳನ್ನು ವಿವರಿಸಿದಾಗ, ಉಪ ಕುಲಪತಿಗಳು ಇದು ಸಿಂಡಿಕೇಟ್ ಸಮಿತಿಯ ಬಹುಮತದ ತೀರ್ಮಾನದ ಮೇಲೆ ಈ ನಿರ್ಧಾರ ಮಾಡಲಾಗಿದೆಯೆಂಬ ಉತ್ತರ ಬಂತು.

ಸಿಂಡಿಕೇಟ್ ಸಮಿತಿಯ ನಿರ್ಧಾರವಾದರೆ ಮತ್ಯಾಕೆ ತಾವು ವಿದ್ಯಾರ್ಥಿನಿಯರನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಅಲೆದಾಡಿಸುತ್ತೀರಿ, ಜಿಲ್ಲಾಧಿಕಾರಿಗಳ ಆದೇಶ ಇದ್ದರೆ ಸಮಸ್ಯೆ ಬಗೆಹರಿಯುತ್ತಾ ಕೇಳಿದಾಗ ಇಲ್ಲ ಎಂಬ ಉತ್ತರ ಉಪ ಕುಲಪತಿಗಳಿಂದ ಬಂತು.

ಈ ಮದ್ಯೆ ಜಿಲ್ಲಾಧಿಕಾರಿಗಳ ಭೇಟಿಯ ಬಳಿಕ ಕರೆ ಮಾಡಿದ್ದ ವಿದ್ಯಾರ್ಥಿನಿ ಜಿಲ್ಲಾಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ,

ತಾವು ಹೇಗಾದರೂ ಮಾಡಿ ಜಿಲ್ಲಾಧಿಕಾರಿಗಳಿಂದ ಪದವಿ ಕಾಲೇಜಿಗೆ ಅನ್ವಯಿಸುವುದಿಲ್ಲವೆಂಬ ಲೆಟರ್ ತೆಗೆಸಿಕೊಡಿ ಎಂದು ಮನವಿ ಮಾಡಿದರು. ಆ ಸಂದರ್ಭದಲ್ಲಿ ನಾನು ಜಿಲ್ಲಾಧಿಕಾರಿಗಳು,

ಉಪ ಕುಲಪತಿಗಳು ಹಾಗೂ ಪ್ರಾಂಶುಪಾಲರ ಬಳಿ ಚರ್ಚೆ ನಡೆಸಿದ ಎಲ್ಲಾ ವಿಚಾರಗಳನ್ನು ತಿಳಿಸಿ ಸದ್ಯಕ್ಕೆ ತಾವುಗಳು ಎಲ್ಲರೂ ತರಗತಿಗಳಿಗೆ ತೆರಳಿ ನಂತರ ಇದರ ಬಗ್ಗೆ ಕಾನೂನು ಹೋರಾಟ ನಡೆಸುವ, ಈಗ ಅಲ್ಲಿ ಇಲ್ಲಿ ಅಲೆದಾಡಿ ಹಾಜರಾತಿ ಕಡಿಮೆಯಾದರೆ ತಮ್ಮ ಶಿಕ್ಷಣಕ್ಕೆ ಧಕ್ಕೆಯಾಗಬಹುದು.

ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುವುದು ಒಳಿತು ಎಂದು ತಿಳಿಸಿ, ಕಾನೂನು ಹೋರಾಟ ಕ್ಕಾಗಿ ಹೈಕೋರ್ಟ್ ಸೆಂಟ್ರಲ್ ಅಡ್ವಕೇಟ್ ಫೋರಂ ಶಾಹುಲ್ ಹಮೀದ್ ರವರ ನಂಬರನ್ನು ವಿದ್ಯಾರ್ಥಿನಿಯರಿಗೆ ನೀಡಿ ಅವರಲ್ಲಿ ಚರ್ಚಿಸಲು ತಿಳಿಸಿದೆ.

ನಂತರ ಪುನಹ ಮತ್ತೆ ಕರೆ ಮಾಡಿದ್ದ ವಿಧ್ಯಾರ್ಥಿಗಳು ಜಿಲ್ಲಾಧಿಕಾರಿಗಳು ಲೆಟರ್ ನೀಡುತ್ತಿಲ್ಲ ಎಂದು ಹೇಳಿದಾಗ,

ನನ್ನ ಅನುಭವದ ಪ್ರಕಾರ ಇದು ಕಾನೂನು ಮತ್ತು ನ್ಯಾಯಾಲಯದ ಪರಿಮಿತಿಯಲ್ಲಿರುವುದರಿಂದ ನ್ಯಾಯಾಲಯದ ಮೊರೆ ಹೋಗುವುದು ಸೂಕ್ತ, ಈಗಾಗಲೇ ಕಾನೂನು ಹೋರಾಟದ ಬಗ್ಗೆ ಅಡ್ವಕೇಟ್ ಬಳಿ ವಿವರ ತಿಳಿಸಿದ್ದೇನೆ.

ನಿಮಗೂ ಅಡ್ವಕೇಟ್ ನಂಬರ್ ನೀಡಿದ್ದೆ,ಅವರ ಬಳಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ ಇಲ್ಲ ನ್ಯಾಯಾಲಯಕ್ಕೆ ಹೋಗಲು ಕೆಲವರಿಗೆ ಮನಸ್ಸಿಲ್ಲ ಎಂದು ವಿದ್ಯಾರ್ಥಿನಿ ತಿಳಿಸಿದರು.

ಕಾನೂನು ಎಲ್ಲರಿಗೂ ಒಂದೇ, ನ್ಯಾಯಾಲಯಕ್ಕೆ ಹೋಗುವುದು ಸೂಕ್ತ ಎಂದು ತಿಳಿ ಹೇಳಿದಾಗ ಈ ಬಗ್ಗೆ ನಾವು ಪುನಹ ಚರ್ಚಿಸಿ ಮತ್ತೆ ತಿಳಿಸುತ್ತೇವೆ ಎಂದರು.

ಎರಡು ದಿನಗಳ ಬಳಿಕ ಮತ್ತೆ ನಾನು ಉಪ ಕುಲಪತಿಗಳಿಗೆ ಕರೆ ಮಾಡಿ ವಿಚಾರದ ಬಗ್ಗೆ ಕೇಳಿದಾಗ, ಕಾಲೇಜು ಪ್ರಾಂಶುಪಾಲರಿಗೆ ಅಲ್ಲಿನ ಅಭಿವೃದ್ಧಿ ಸಮಿತಿಯ ಸಭೆ ಕರೆದು ಈ ಶೈಕ್ಷಣಿಕ ವರ್ಷದಲ್ಲಿ ಹಿಂದಿನಂತೆಯೇ

ಇರುವ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗುವ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಎಂಬ ನಿರ್ಣಯ ಮಾಡಿ ಕಳಿಸಿಕೊಡಿ ಎಂದು ತಿಳಿಸಿದ್ದೇನೆ ಎಂದರು.

ಈ ಬೆಳವಣಿಗೆಯ ಬಗ್ಗೆ ಮಾಹಿತಿ ಪಡೆಯಲು ಮತ್ತೆ ನಾನು ವಿದ್ಯಾರ್ಥಿನಿಯರಿಗೆ ಕಾಲ್ ಮಾಡಿದಾಗ ಕರೆಯನ್ನು ಸ್ವೀಕರಿಸಲಿಲ್ಲ,ನನ್ನ ಕಛೇರಿಯ ಅಪ್ತ ಸಹಾಯಕನ ಕರೆಯನ್ನು ಕೂಡಾ ಸ್ವೀಕರಿಸಿಲ್ಲ. ಮತ್ತೆ ನಾನೇ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿದ ವಿದ್ಯಾರ್ಥಿನಿ ರಾಂಗ್ ನಂಬರ್ ಎಂದು ಕಾಲ್ ಕಟ್ ಮಾಡಿರುತ್ತಾರೆ.

ನಂತರ ಈ ಬಗ್ಗೆ ಯಾರೂ ಕೂಡಾ ನನ್ನನ್ನು ಸಂಪರ್ಕಿಸಿಲ್ಲ. ಮತ್ತೆ ಜಿಲ್ಲಾಧಿಕಾರಿಗಳ ಭೇಟಿಗೆ ತೆರಳಿದ್ದೂ ತಿಳಿದಿಲ್ಲ. ಆ ದಿನ ನಾನು ಬೆಂಗಳೂರಿನಲ್ಲಿದ್ದ ಸಂದರ್ಭ ಮಾದ್ಯಮದ ಮೂಲಕ ಈ ವಿಚಾರ ತಿಳಿದು ಸರಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿವರಿಸಿ ಜಿಲ್ಲಾಧಿಕಾರಿಗಳು ಹಾಗೂ ಉಪ ಕುಲಪತಿಗಳ ಬಳಿ ಈ ಬಗ್ಗೆ ಚರ್ಚಿಸಿ ಗೊಂದಲ ಸರಿಪಡಿಸಬೇಕೆಂದು ಮನವಿ ಮಾಡಿದೆ.
ಇಷ್ಟೆಲ್ಲಾ ಬೆಳವಣಿಗೆ ಆಗಿದ್ದರೂ ಕೂಡಾ ಇದ್ಯಾವುದು ವಿಚಾರಗಳನ್ನು ತಿಳಿಸದೆ ವಿದ್ಯಾರ್ಥಿನಿಯರು ತಮ್ಮ ಅತ್ಯಮೂಲ್ಯವಾದ ಈ ಪ್ರಾಯದಲ್ಲಿಯೇ ಯಾವುದೋ ರಾಜಕೀಯ ಶಕ್ತಿಗಳಿಗೆ ಮಣಿದು ಮಾದ್ಯಮಗಳಿಗೆ ಸುಳ್ಳು ಹೇಳಿಕೆ ನೀಡಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆಯಲ್ಲ ಎಂದು ವಿವಾದದ ಬಗ್ಗೆ ಸವಿಸ್ತಾರವಾಗಿ ತಿಳಿಸಿದ ಯು.ಟಿ.ಖಾದರ್ ವಿಷಾದ ವ್ಯಕ್ತಪಡಿಸಿದರು

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

LATEST NEWS

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

Published

on

ಚಿತ್ರದುರ್ಗ : ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾ*ವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಚಳ್ಳಕೆರೆ ನಗರದ ವಿಠಲನಗರದ ನಿವಾಸಿ ಯಶೋದಮ್ಮ ( 55) ಅವರು ಮೃ*ತ ಶಿಕ್ಷಕಿ.


ಯಶೋದಮ್ಮ ಹೊಟ್ಲೆಪನಹಳ್ಳಿ 202 ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತರಾಗಿದ್ದರು. ಈ ಸಂದರ್ಭ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ದಾರಿ‌ಮಧ್ಯದಲ್ಲಿ ಸಾ*ವನಪ್ಪಿದ್ದಾರೆ. ಮೃ*ತ ಶಿಕ್ಷಕಿ ಯಶೋಧ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಚುನಾವಣಾ ಕರ್ತವ್ಯ ನಿಮಿತ್ತ ಯಶೋದಮ್ಮ ಹೊಟ್ಲೆಪನಹಳ್ಳಿ ಮತಗಟ್ಟೆಗೆ ಬಂದಿದ್ದರು. ಸಹಾಯಕ ಪೋಲಿಂಗ್‌ ರಿಟರ್ನಿಂಗ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮತದಾನ ಆರಂಭವಾದಾಗ ಆರೋಗ್ಯವಾಗಿದ್ದ ಯಶೋದಮ್ಮ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಈ ಬಗ್ಗೆ ರಿಟರ್ನಿಂಗ್ ಆಫೀಸರ್ ಗಮನಕ್ಕೆ ತಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಆಸ್ಪತ್ರೆ ತಲುಪುವ ಮೊದಲೇ ಯಶೋದಮ್ಮ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಕಾಣದೆ ಕಂಗಾಲಾದ ಮಹಿಳೆ; ಅಧಿಕಾರಿಗಳೊಂದಿಗೆ ಜಗಳ!

ಘಟನೆಯ ಮಾಹಿತಿ ಪಡೆದ ಶಾಸಕ ಟಿ.ರಘುಮೂರ್ತಿ ಹಾಗೂ ಚುನಾವಣಾ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮೃ*ತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Continue Reading

FILM

ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

Published

on

ಮಂಗಳೂರು : ಪ್ರೀತಿ ಎಂಬ ಎರಡಕ್ಷರವನ್ನ ಬಣ್ಣದ ಲೋಕದಲ್ಲಿರುವ ಅನೇಕರು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಹೀಗಾಗಿಯೇ ದಿನಕ್ಕೊಂದು ಸಂಬಂಧ ಇಲ್ಲಿ ಬದಲಾಗುತ್ತೆ. ಲವ್ ಬೆನ್ನಲ್ಲಿಯೇ ಬ್ರೇಕ್‌ಪ್ ಆಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಶ್ರುತಿ ಹಾಸನ್ ಮತ್ತು ಶಾಂತನು ಹಜಾರಿಕಾ.

ಹೌದು, ನಿಮಗೆ ಗೊತ್ತಿರಲಿ.. ಮೂರ್ನಾಲ್ಕು ವರ್ಷಗಳ ಹಿಂದೆ, ಕಮಲ ಹಾಸನ್ ಅವರ ಮುದ್ದಿನ ಮಗಳು ಶ್ರುತಿ ಹಾಸನ್, ಬ್ರಿಟಿಷ್ ನಟ ಮೈಕಲ್ ಕೋರ್ಸೆಲ್ ಜೊತೆ ಪ್ರೇಮದ ಖಾತೆ ತೆರೆದಿದ್ದರು. ಜೊತೆ ಜೊತೆಯಲ್ಲಿ ಇಬ್ಬರು ಅನೇಕ ಕಡೆ ಕಾಣಿಸಿಕೊಂಡಿದ್ದರು. ಆದರೆ ಆ ನಂತರ ಏನಾಯಿತೋ ಗೊತ್ತಿಲ್ಲ. ಸಂಬಂಧ ಮುರಿದು ಬಿತ್ತು.

ಎರಡನೇ ಬಾಯ್‌ಫ್ರೆಂಡ್‌:

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಾಂತನು ಹಜಾರಿಕಾ. ಶಾಂತನು ಜೊತೆ ಎರಡು ವರ್ಷ ಪ್ರೇಮದ ತಪಸ್ಸು ಮಾಡಿದ್ದ ಶ್ರುತಿ ಹಾಸನ್ ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ತನ್ನ ಮೇಲೆ ಶಾಂತನುಗೆ ಇರುವ ಕಾಳಜಿ ಪ್ರೀತಿಯನ್ನೂ ಮೆಚ್ಚಿ ಮಾತನಾಡಿದ್ದರು. ಇನ್ನು ಎರಡು ವರ್ಷದ ಹಿಂದೆ ಅಂದರೆ 2022ರ ಸಮಯದಲ್ಲಿ ತಮ್ಮ ಮದುವೆ ಆಗಿದೆ ಎಂಬ ವಿಚಾರವನ್ನ ಕದ್ದು ಶಾಂತನು ಹೇಳಿದ್ದರು.

ಮದುವೆ ಆದ ನಂತರದಿಂದ ನಮ್ಮ ಸಂಬಂಧ ಇನ್ನು ಗಟ್ಟಿಯಾಗಿದೆ ಹಾಗೂ ಉತ್ತಮವಾಗಿದೆ. ಒಬ್ಬರಿಗೊಬ್ಬರು ಪರಸ್ಪರ ಅರ್ಥ ಮಾಡಿಕೊಂಡು ಜೀವನ ನಡೆಸಲು ನಮ್ಮ ಮದುವೆ ನಮಗೆ ದಾರಿ ಮಾಡಿಕೊಟ್ಟಿದೆ. ಮುಂದೆಯೂ ಹೀಗೆ ಸಂತೋಷದಿಂದ ದಿನಗಳನ್ನು ಕಳೆಯಲು ತೀರ್ಮಾನಿಸಿದ್ದೇವೆ ಎಂದಿದ್ದರು.

ಇದನ್ನೂ ಓದಿ  “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?

ಆದರೆ ಈಗ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಇದ್ದ ಪ್ರೇಮ ಸೇತುವೆ ಮುರಿದು ಬಿದ್ದಿದೆ ಅನ್ನುವ ಎಂಬ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಶ್ರುತಿ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಶಾಂತನು ಜೊತೆ ಫೋಟೋಗಳೆಲ್ಲ ಮಾಯವಾಗಿವೆ. ಶಾಂತನು ಅವರನ್ನ ಶ್ರುತಿ ಹಾಸನ್ ಅನ್ ಫ್ರೆಂಡ್ ಮಾಡಿದ್ದಾರೆ. ಒಟ್ಟಿನಲ್ಲಿ

ಸದ್ಯಕ್ಕೆ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಮೊಳಕೆಯೊಡೆದಿದ್ದ ಪ್ರೀತಿ ಈಗ ಕಮರಿಹೋಗಿದೆ ಅನ್ನುವ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಹರಿದಾಡುತ್ತಿರುವ ಈ ಸುದ್ದಿಯ ಬಗ್ಗೆ ಶ್ರುತಿ ಹಾಸನ್ ಸ್ಪಷ್ಟೀಕರಣ ಕೊಡ್ತಾರಾ ಅನ್ನುವುದನ್ನ ಕಾದು ನೋಡಬೇಕಿದೆ.

Continue Reading

LATEST NEWS

Trending