BELTHANGADY
ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಸಾಲು ಸಾಲು ಗುಡ್ಡ ಕುಸಿತ; ಫುಲ್ ಟ್ರಾಫಿಕ್ ಜಾಮ್
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮವಾಗಿ ಚಾರ್ಮಡಿ ಘಾಟ್ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಧಾರಾಕಾರ ಮಳೆಯಿಂದ ನೀರು ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದ್ದು, ಹೀಗಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಹಿಂದಕ್ಕೂ ಹೋಗದೇ, ಮುಂದಕ್ಕೆ ಹೋಗದೆ ಮಧ್ಯವೇ ಪರದಾಡುವಂತಾಗಿದೆ.
ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಕ್ಕಿಂಜೆ, ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣ ಜಲಮಯವಾಗಿದೆ. ನೆರಿಯಾ, ಪುಲ್ಲಾಜೆ ಸೇತುವೆಗಳು ಮುಳುಗಡೆಯಗಿದೆ.
ಚಾರ್ಮಾಡಿಯ 3ನೇ ತಿರುವಿನಲ್ಲಿ ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
BELTHANGADY
ಬೆಳ್ತಂಗಡಿ: ಸಹಾಯದ ಹೆಸರಲ್ಲಿ ಅಪರಿಚಿತರಿಂದ ವಂಚನೆ
ಬೆಳ್ತಂಗಡಿ: ಸಹಾಯ ಮಾಡುವ ಹೆಸರು ಹೇಳಿ ಬ್ಯಾಂಕ್ ಖಾತೆಯಿಂದ ಇನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಅಬೂಬಕ್ಕರ್ (71) ಅವರ ಹಣ ಎಗರಿಸಿದ ಘಟನೆ ಬೆಳ್ತಂಗಡಿ ಗೇರಕಟ್ಟೆ ಕೆನರಾ ಬ್ಯಾಂಕ್ನ ಎಟಿಎಂ ಕೇಂದ್ರದಲ್ಲಿ ನಡೆದಿದೆ.
ಅ.2 ರಂದು ಮಧ್ಯಾಹ್ನ 12 ಗಂಟೆಗೆ ಹಣ ಡ್ರಾ ಮಾಡುತ್ತಿರುವಾಗ ಒಳ ಪ್ರವೇಶಿಸಿದ ಅಪರಿಚಿತರಿಬ್ಬರು ಹಿಂದಿಯಲ್ಲಿ ಮಾತಾಡಿ ಸಹಾಯಕ್ಕೆ ಬಂದಿದ್ದರು. ಅಬಾಬಕ್ಕರ್ ಸಹಾಯದ ಅಗತ್ಯ ಇಲ್ಲ ಎಂದು ಹೇಳಿದರೂ, ಒಳಗಡೆಯೇ ನಿಂತಿದ್ದರು. ಮಧ್ಯಾಹ್ನ 12 ಗಂಟೆಗೆ ಹಣ ತೆಗೆದು ಎಟಿಎಂ ಕೇಂದ್ರದಿಂದ ಕಾರ್ಡ್ ಸಹಿತ ಹೊರಗೆ ಹೋಗಿದ್ದರು. ನಂತರ ಅ.4 ರಂದು ಅಳಿಯ ಹಾಗೂ ಮಗ ಹಾಕಿದ ಹಣವನ್ನು ಡ್ರಾ ಮಾಡಲು ಎಟಿಎಂ ಕೇಂದ್ರಕ್ಕೆ ಹೋದಾಗ ಕಾರ್ಡ್ ರೀಡ್ ಆಗಲಿಲ್ಲ.
ಅನುಮಾನದಿಂದ ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಎಟಿಎಂ ಕಾರ್ಡ್ ಬದಲಾಗಿದೆ ಎಂದು ತಿಳಿಸಿದ್ದು, ನಂತರ ಬ್ಯಾಲೆನ್ಸ್ ಚೆಕ್ ಮಾಡಿದಾಗ ಖಾತೆಯಲ್ಲಿದ್ದ 49,200 ರೂ. ಅನ್ನು ವಂಚಿಸಿರುವುದು ಗೊತ್ತಾಯಿತು.
ಅ.2 ರಂದು ಎಟಿಎಂ ಕೇಂದ್ರದಲ್ಲಿದ್ದ ಅಪರಿಚಿತ ಇಬ್ಬರು ವ್ಯಕ್ತಿಗಳು ಬೇರೆ ಬೇರೆ ಎಟಿಎಂ ಕೇಂದ್ರದಲ್ಲಿ ತೆಗೆದು ಕಳವು ಮಾಡಿದ್ದು, ಈ ಬಗ್ಗೆ ವಂಚಿಸಿ ಕಳವು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆ ಮಾಡಲು ಸಹಕರಿಸಿ, ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಈ ಮೂಲಕ ಕೋರಲಾಗುತ್ತಿದೆ.
ಸಂಪರ್ಕಿಸಬೇಕಾದ ಸಂಖ್ಯೆ: 08256-232093
BELTHANGADY
ಉಕ್ಕಿ ಹರಿದ ನದಿಗಳು; ರಾತ್ರೋ ರಾತ್ರಿ ಭಯಾನಕ ವಾತವರಣ ಸೃಷ್ಠಿ
ಬೆಳ್ತಂಗಡಿ: ಅಚಾನಕ್ಕಾಗಿ ಬಂದ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಜನರು ಆತಂಕಕ್ಕೊಳಗಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ನಿನ್ನೆ (ಅ.8) ರಾತ್ರಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಚಾರ್ಮಾಡಿ, ದಿಡುಪೆ, ನೆರಿಯ ಭಾಗದ ನದಿಗಳಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿ ರಸ್ತೆಗೆ ನೀರು ನುಗ್ಗಿದೆ.
ನೆರಿಯಾದಲ್ಲಿ ಸೇತುವೆ ಮುಳುಗಡೆಯಾಗಿದಲ್ಲದೆ ಅಲ್ಲಲ್ಲಿ ರಸ್ತೆಗೆ ತೋಟಗಳಿಗೆ ನೀರು ನುಗ್ಗಿದೆ. ಇದರಿಂದ ನದಿ ತೀರದ ಜನರಲ್ಲಿ ಆತಂಕ ಉಂಟಾಗಿದೆ. ಸ್ಥಳೀಯರು ಹೇಳುವಂತೆ 2019 ರ ನೆರೆಯ ನಂತರ ಮಂಗಳವಾರ ರಾತ್ರಿ ನದಿಗಳಲ್ಲಿ ಅತೀ ಹೆಚ್ಚು ನೀರು ಬಂದಿದೆ. ರಾತ್ರಿ 7 ಗಂಟೆಯಿಂದ 9 ಗಂಟೆಯವರೆಗೆ ನೀರಿನ ಮಟ್ಟ ಏರಿಕೆ ಕಂಡಿದ್ದು ಮತ್ತೆ ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
BELTHANGADY
ಬೆಳ್ತಂಗಡಿ: ದನಗಳ ಅಕ್ರಮ ಸಾಗಾಟ ಪತ್ತೆ: ನಾಲ್ವರ ಬಂಧನ
ಬೆಳ್ತಂಗಡಿ: ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- BIG BOSS6 days ago
ಕನ್ನಡ ಬಿಗ್ಬಾಸ್ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!
- LATEST NEWS7 days ago
ಗರ್ಲ್ಫ್ರೆಂಡ್ ಜೊತೆ ಜಾಲಿ ರೈಡಿಂಗ್; ಹೆಂಡತಿ ಎದುರು ಬಂದ್ರೆ …!?
- LATEST NEWS4 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- BIG BOSS6 days ago
BBK11: ಬಿಗ್ಬಾಸ್ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು
Pingback: ಉಡುಪಿ: ಕಾರು ಡಿಕ್ಕಿ ಹೊಡೆದು ಯುವಕ ಸಾವು...!! - NAMMAKUDLA NEWS - ನಮ್ಮಕುಡ್ಲ ನ್ಯೂಸ್