LATEST NEWS
ಹಿಂದೂ ಯುವತಿಯನ್ನು ಅಪಹರಿಸಲು ವಿಫಲ ಯತ್ನ : ದಾರಿ ಮಧ್ಯೆ ಗುಂಡಿಕ್ಕಿ ಹತ್ಯೆ
ಪಾಕಿಸ್ತಾನ: ಹಿಂದೂ ಯುವತಿಯನ್ನು ಅಪಹರಿಸಲು ನಡೆಸಿದ ವಿಫಲ ಯತ್ನದಿಂದಾಗಿ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ಪೂಜಾ ಒಡ್ (18) ಹತ್ಯೆಗೀಡಾದ ಯುವತಿ. ತನ್ನನ್ನು ಅಪಹರಿಸಲು ಬಂದ ದಾಳಿಕೋರರಿಗೆ ಪ್ರತಿರೋಧವೊಡ್ಡಿದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ನಡುರಸ್ತೆಯಲ್ಲಿ ಹತ್ಯೆ ಮಾಡಲಾಗಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಮಹಿಳೆಯರನ್ನು ಸಿಂಧ್ ಪ್ರಾಂತ್ಯದಲ್ಲಿ ಅಪಹರಿಸಿ ಒತ್ತಾಯಪೂರ್ವಕವಾಗಿ ಮತಾಂತರ ಮಾಡಲಾಗುತ್ತಿದೆ.
ಒತ್ತಾಯಪೂರ್ವಕ ಅಂತರ್ಧರ್ಮೀಯ ವಿವಾಹವನ್ನೂ ನಡೆಸಲಾಗುತ್ತಿದೆ.
LATEST NEWS
ಕೊಲ್ಯದಲ್ಲಿ ಅಕ್ಟೋಬರ್ 7 ರಂದು ಶಾರದಾ ಮಂದಿರ ಲೋಕಾರ್ಪಣೆ
ಕೊಲ್ಯದ ಶ್ರೀ ಶಾರದಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಹಾಗೂ ಶ್ರೀ ಶಾರದಾ ಮಂದಿರ ನಿರ್ಮಾಣ ಸಮಿತಿ ವತಿಯಿಂದ 43 ನೇ ವರ್ಷದ ಶಾರದಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ.
ಅಕ್ಟೋಬರ್ 6 ರಿಂದ 12 ರ ವರೆಗೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾರದೋತ್ಸವು ನೆರವೇರಲಿದೆ. 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀ ಶಾರದಾ ಮಂದಿರದ ಲೋಕಾರ್ಪಣೆ ಅಕ್ಟೋಬರ್ 7 ರಂದು ನಡೆಯಲಿದೆ.
ಈ ಬಗ್ಗೆ ಸಮಿತಿಯ ಪ್ರಧಾನ ಸಂಚಾಲಕ ಪ್ರವೀಣ್ ಎಸ್. ಕುಂಪಲ ಅವರು ಉಳ್ಳಾಲ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೆದ್ದಾರಿ ಅಗಲೀಕರಣಕ್ಕಾಗಿ ಹಿಂದೆ ಇದ್ದ ಶಾರದಾ ಸಭಾ ಭವನ ಬಿಟ್ಟುಕೊಡಲಾಗಿತ್ತು. ಇದೀಗ ಹಳೆ ಕಟ್ಟಡದ ಸಮೀಪ ಹನ್ನೆರಡು ಸೆಂಟ್ಸ್ ಜಾಗ ಖರೀದಿಸಿ ಮೂರೂ ಸಮಿತಿಗಳು ದಾನಿಗಳ ಸಹಕಾರದಿಂದ ಈ ಭವ್ಯ ಮಂದಿರ ನಿರ್ಮಾಣ ಮಾಡಿವೆ ಎಂದು ತಿಳಿಸಿದ್ದಾರೆ.
LATEST NEWS
ಮಾನದಂಡಗಳನ್ನು ಪಾಲಿಸದ ಶಿವಮೊಗ್ಗ ವಿಮಾನ ನಿಲ್ದಾಣ – 20 ಲಕ್ಷ ದಂಡ
ಶಿವಮೊಗ್ಗ: ಏರೋಡ್ರೋಮ್ ಮಾನದಂಡಗಳನ್ನು ಪೂರೈಸದ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಾಹಕ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) 20 ಲಕ್ಷ ದಂಡ ವಿಧಿಸಿದೆ.
ಡಿಜಿಸಿಎಯ ವರದಿಯು ವಿಮಾನ ನಿಲ್ದಾಣ ನಿರ್ವಹಣೆಯಲ್ಲಿನ ಹಲವಾರು ಲೋಪಗಳನ್ನು ಎತ್ತಿ ತೋರಿಸಿದ್ದು ಅದು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದ್ದು, ಈ ಶಿಸ್ತಿನ ಕ್ರಮಕ್ಕೆ ಕಾರಣವಾಯಿತು.
ರನ್ ವೇ ಆ್ಯಂಡ್ ಸೇಫ್ಟಿ ಏರಿಯಾ ನಿರ್ವಹಣೆ ಸಮರ್ಪಕವಾಗಿಲ್ಲ. ರನ್ ವೇನ ಟ್ರಾನ್ಸ್ವರ್ಸ್ ಭಾಗದಲ್ಲಿ ಮಣ್ಣು ಕುಸಿತ ಸೇರಿದಂತೆ ಕೆಲವು ನ್ಯೂನತೆಗಳಿದ್ದು, ನಿರ್ವಹಣೆ ಸರಿ ಇಲ್ಲ. ರನ್ ವೇ ಭಾಗದಲ್ಲಿ ಕಲ್ಲುಗಳು ಪತ್ತೆಯಾಗಿವೆ. ರನ್ ವೇ ಅಂಚಿನಲ್ಲಿ ಲೈಟ್ ಪ್ಯಾನಲ್ಗಳ ನಿರ್ವಹಣೆ ಸರಿ ಇಲ್ಲ ಎಂದು ತಿಳಿಸಲಾಗಿದೆ.
ನ್ಯೂನತೆಗಳ ಕುರಿತು ವಿಮಾನಯಾನ ನಿರ್ದೇಶನಾಲಯವು ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಆ.1ರಂದು ನೊಟೀಸ್ ಜಾರಿ ಮಾಡಿತ್ತು. ಹತ್ತು ದಿನದ ಬಳಿಕ ವಿಮಾನ ನಿಲ್ದಾಣದ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ಉತ್ತರ ನೀಡಿತ್ತು. ಆದರೆ ಉತ್ತರ ಸಮಾಧಾನಕರವಾಗಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಿ ನೋಟಿಸ್ ನೀಡಿದೆ ಎಂದು ಹೇಳಲಾಗಿದೆ.
DAKSHINA KANNADA
ಕರಾವಳಿಯಲ್ಲಿ ದಸರಾ ಸಂಭ್ರಮ; ಜಗಮಗಿಸುತ್ತಿರುವ ಮಂಗಳೂರು
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮುಖ್ಯವಾಗಿ ಮಂಗಳೂರು ದಸರಾವನ್ನು ಆಚರಿಸುತ್ತಾರೆ. ನವರಾತ್ರಿ ಹಬ್ಬ, ವಿಜಯದಶಮಿ ಎಂಬುವುದಾಗಿಯೂ ಕರೆಯುತ್ತಾರೆ. ಈ ಹಬ್ಬದ ಸಮಯದಲ್ಲಿ ಹುಲಿ ನೃತ್ಯ, ಸಿಂಹ ನೃತ್ಯ ಮತ್ತು ಕರಡಿ ನೃತ್ಯ ಬಹು ಆಕರಷಣೀಯವಾಗಿರುತ್ತದೆ. 10 ದಿನಗಳ ಕಾಲ ಮಂಗಳೂರಿನ ಬಹುತೇಕ ರಸ್ತೆಗಳಲ್ಲಿ ದಸರಾ ಮೆರವಣಿಗೆಗಾಗಿ ದೀಪಗಳು ಮತ್ತು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿರುವುದನ್ನು ಕಾಣಬಹುದು. . ಮಂಗಳೂರು ದಸರಾವನ್ನು ಬಿ.ಆರ್.ಕರ್ಕೇರ ಮೊದಲು ಪ್ರಾರಂಭಿಸಿದರು.
ಹುಲಿವೇಷದ ಅಬ್ಬರ:
ಹುಲಿವೇಷ ದಸರಾ ಸಂದರ್ಭದಲ್ಲಿ ಮಾಡುವ ಜಾನಪದ ನೃತ್ಯವಾಗಿದೆ. ವಿಶಿಷ್ಟವಾಗಿ ಯುವ ಪುರುಷರು ಪಡೆ ರಚಿಸಿಕೊಂಡು ಹುಲಿಗಳಂತೆ ಬಣ್ಣ ಹಚ್ಚಿ ವೇಷಭೂಷಣವನ್ನು ಧರಿಸುತ್ತಾರೆ. ತುಳುವಿನಲ್ಲಿ ಇದನ್ನು ತಾಸೆ ತಂಡ ಎಂದು ಕರೆಯುತ್ತಾರೆ.
ಈ ಪಡೆಗಳು ತಮ್ಮ ಬ್ಯಾಂಡ್ಗಳ ಡ್ರಮ್ ಬೀಟ್ಗಳೊಂದಿಗೆ ಪಟ್ಟಣಗಳ ಬೀದಿಗಳಲ್ಲಿ ಸಂಚರಿಸುತ್ತಾರೆ. ಅವರು ಸುಮಾರು ಹತ್ತು ನಿಮಿಷಗಳ ಕಾಲ ಬಿಡುವಿಲ್ಲದೆ ಪ್ರದರ್ಶನವನ್ನು ನೀಡುತ್ತಾರೆ. ದೇವಿಯ ನೆಚ್ಚಿನ ಪ್ರಾಣಿ ಹುಲಿಯಾದ್ದರಿಂದ ಪಿಲಿನಲಿಕೆ ಶಾರದಾ ದೇವಿಯನ್ನು ಗೌರವಿಸಲು ನಡೆಸಲಾಗುತ್ತದೆ.
ಗೋಕರ್ಣನಾಥೇಶ್ವರ ದೇವಾಲಯದ ದೇವಿ ವಿಗ್ರಹಗಳು:
ನವರಾತ್ರಿಯ ಸಮಯದಲ್ಲಿ ಶಾರದಾ ದೇವಿಯೊಂದಿಗೆ ವಿವಿಧ ಮೂರ್ತಿಗಳನ್ನು ಸ್ವರ್ಣ ಕಲಾಮಂಟಪದಲ್ಲಿ ಸ್ತೋತ್ರಗಳ ಪಠಣ ಹಾಗೂ ವೈದಿಕ ಆಚರಣೆಗಳ ನಡುವೆ ಪ್ರತಿಷ್ಠಾಪಿಸುತ್ತಾರೆ. ಒಂಬತ್ತು ದಿನಗಳ ಆಚರಣೆಗಳಲ್ಲಿ, ಮಹಾಗಣಪತಿ ಮತ್ತು ನವದುರ್ಗೆಯರ ಜೊತೆಗೆ ಶಾರದಾ ದೇವಿಯ ಅಲಂಕೃತ ವಿಗ್ರಹಗಳನ್ನು ಪೂಜಿಸಲಾಗುತ್ತದೆ.
ನವರಾತ್ರಿ ನವದುರ್ಗೆಯರು:
ಶಾರದಾ ದೇವಿಯ, ಮಹಾಗಣಪತಿ, ಆದಿ ಶಕ್ತಿ ದೇವಿಯನ್ನು ವಿಶೇಷವಾಗಿ ಪ್ರತಿಷ್ಠಾಪಿಸಲಾಗುತ್ತದೆ. ಜೊತೆಗೆ ನವದರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾಯಿನಿ, ಸ್ಕಂದಮಾತಾ, ಕಾತ್ಯಾಯಿನಿ, ಕಾಳರಾತ್ರಿ, ಮಹಾಗೌರಿ ಹಾಗೂ ಸಿದ್ಧಿದಾತ್ರಿ ಯನ್ನು ಪ್ರತಿಷ್ಠಾಪಿಸಿರುತ್ತಾರೆ,
ಸಂಭ್ರಮದ ಮೆರವಣಿಗೆ:
ವಿಜಯ ದಶಮಿ ದಿನ ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಿ ಮರುದಿನ ಮುಂಜಾನೆ ನಡೆಯುತ್ತದೆ. ಮಹಾಗಣಪತಿ ಮತ್ತು ಶಾರದೆಯ ಜೊತೆಗೆ ನವದುರ್ಗೆಯರ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಈ ಮೆರವಣಿಗೆಯಲ್ಲಿ ಪುಷ್ಪಗಳು, ಅಲಂಕಾರಿಕ ಛತ್ರಿಗಳು, ಬ್ಯಾಂಡ್ಗಳು, ಚೆಂಡೆ ಮತ್ತು ಸಾಂಪ್ರದಾಯಿಕ ನೃತ್ಯ, ಜಾನಪದ ನೃತ್ಯಳ, ಯಕ್ಷಗಾನ ಪಾತ್ರಗಳು, ಡೊಳ್ಳು ಕುಣಿತ, ಪಿಲಿನಲಿಕೆ ಮತ್ತು ಇತರ ಸಾಂಪ್ರದಾಯಿಕ ಕಲಾ ಪ್ರಕಾರಗಳು ಇರುತ್ತದೆ. ಕುದ್ರೋಳಿ, ಮಣ್ಣಗುಡ್ಡ, ಲೇಡಿಹಿಲ್, ಲಾಲ್ಬಾಗ್, ಕೆಎಸ್ ರಾವ್ ರಸ್ತೆ, ಹಂಪನಕಟ್ಟೆ, ಕಾರ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಈ ಮೆರವಣಿಗೆ ಸಾಗುತ್ತದೆ.
ದಸರಾ ಸಂಭ್ರಮದ ಇತರ ಸ್ಥಳಗಳು:
ಮಂಗಳೂರು ದಸರಾವನ್ನು ಮಂಗಳಾದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವದ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಮುಲ್ಕಿ ಬಪ್ಪನಾಡು ದೇವಸ್ಥಾನ, ಉರ್ವ ಮಾರಿಯಮ್ಮ ದೇವಸ್ಥಾನ, ಶ್ರೀ ವೆಂಕಟ್ರಮಣ ದೇವಸ್ಥಾನ, ಶ್ರೀ ಜೋಡುಮುತ್ತು ಮುಂತಾದ ದೇವಸ್ಥಾನಗಳಲ್ಲಿ ಆಚರಣೆಯನ್ನುಆಯೋಜಿಸುತ್ತಾರೆ.
ಬಹು ವಿಶೇಷ ಮಂಗಳಾದೇವಿ ದಸರಾ:
ಮಂಗಳಾದೇವಿ ದೇವಸ್ಥಾನ, ಬೋಳಾರ್ ಭಾರತದಾದ್ಯಂತ ಇರುವ ಭಕ್ತರನ್ನು ಆಕರ್ಷಿಸುತ್ತದೆ. ಮಂಗಳೂರು ಎಂಬ ಹೆಸರು ಮಂಗಳಾದೇವಿಯಿಂದ ಬಂದಿದೆ. ಮಂಗಳಾದೇವಿ ದೇವಸ್ಥಾನವು ಜಾನಪದ, ಸಂಗೀತ, ನಾಟಕ, ವಿವಿಧ ವಿಷಯಗಳ ನಾಟಕಗಳು, ಮತ್ತು ಭಕ್ತಿಗೀತೆಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತದೆ. ಮಹಾನವಮಿ ಎಂದು ಕರೆಯಲ್ಪಡುವ ಒಂಬತ್ತನೇ ದಿನದಂದು ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ. ಅಲಂಕೃತ ದೇವಿಯನ್ನು ಭವ್ಯ ರಥದ ಮೇಲೆ ಕೂರಿಸಿದ ನಂತರ ರಥವನ್ನು ಎಳೆಯಲಾಗುತ್ತದೆ.
- DAKSHINA KANNADA7 days ago
ಮಂಗಳೂರು : ಪಾನಿಪುರಿ ಸವಿಯುತ್ತಿದ್ದ ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿದ ಭೂಪ!
- DAKSHINA KANNADA6 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- DAKSHINA KANNADA7 days ago
ಮೂಡುಬಿದಿರೆ: ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾ*ವು
- LATEST NEWS6 days ago
ಪುತ್ತೂರು: ಸಾಲ ವಸೂಲಿಗೆಂದು ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ತಂದೆ ಮಗ