Connect with us

    DAKSHINA KANNADA

    ಉಳ್ಳಾಲ ಕ್ಷೇತ್ರದಲ್ಲಿ ‘ಹಿಂದೂ ಶಾಸಕ’ ಅಭಿಯಾನ: ಫೀಲ್ಡಿಗಿಳಿದ VHPಗೆ ಖಾದರ್ ತಿರುಗೇಟು!

    Published

    on

    ಮಂಗಳೂರು: ಕೋಮುವಾದಿಗಳಿಗೆ ಉಳ್ಳಾಲದ ಮಣ್ಣಿನಲ್ಲಿ ಅವಕಾಶ ಕೊಡಲ್ಲ. ಉಳ್ಳಾಲದ ಶಾಸಕ ಯಾರಾಗಬೇಕು ಅಂತ ಸರ್ವ ಧರ್ಮದ ಮತದಾರರು ತೀರ್ಮಾನಿಸ್ತಾರೆ. ಹೊರಗಿನವರು ಬಂದು ಮಾತನಾಡಿದ್ರೆ ಏನೂ ಪ್ರಯೋಜನ ಇಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.


    ಚುನಾವಣೆ ಸಮೀಪಿಸುತ್ತಿರೋ ಹೊತ್ತಲ್ಲೇ ಕರಾವಳಿಯಲ್ಲಿ ಈ ಬಾರಿ ಹಿಂದೂ ಶಾಸಕನ ಆಯ್ಕೆಗಾಗಿ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಿದ್ದು ಈ ಹಿನ್ನೆಲೆ ಯು.ಟಿ ಖಾದರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

    ‘ಹಿಂದೂ ಶಾಸಕ’ ಅಭಿಯಾನಕ್ಕೆ ವಿಎಚ್ ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಕರೆ ನೀಡಿ ಮಾತನಾಡಿ ‘ಬದಲಾವಣೆಗೆ ವಿಎಚ್ ಪಿ ಅಭಿಯಾನ ನಡೆಸ್ತಿದೆ. ‘ಉಳ್ಳಾಲದಲ್ಲಿ ಹಿಂದೂಗಳ ಪರ ಧ್ವನಿ ಎತ್ತಲು ಹಿಂದೂ ಶಾಸಕ ಇರಲಿ, ಮುಂದಿನ ಚುನಾವಣೆಯಲ್ಲಿ ಉಳ್ಳಾಲದಲ್ಲಿ ಹಿಂದೂ ಶಾಸಕನ ಗೆಲ್ಲಿಸಲು ವಿಎಚ್ ಪಿ ಈ ಅಭಿಯಾನ ನಡೆಸ್ತಿದೆ ಅಂತ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ.

    ಬಿಜೆಪಿ, ಕಾಂಗ್ರೆಸ್ ಯಾವುದೇ ಪಕ್ಷದಲ್ಲಿ ಹಿಂದೂ ಶಾಸಕ ಬರಲಿ. ಉಳ್ಳಾಲದಲ್ಲಿ ರಾಹುಲ್ ಗಾಂಧಿಯೇ ನಿಲ್ಲಲಿ, ಕಾಂಗ್ರೆಸ್ ಹಿಂದೂವನ್ನ ನಿಲ್ಲಿಸಿ ಗೆಲ್ಲಿಸಲಿ. ಉಳ್ಳಾಲದಲ್ಲಿ ಹಲವು ವರ್ಷಗಳಿಂದ ಒಂದೇ ಕುಟುಂಬದ ಮುಸ್ಲಿಂ ಶಾಸಕರಿದ್ದಾರೆ. ಉಳ್ಳಾಲ ಕಾಂಗ್ರೆಸ್ ನಲ್ಲಿ ಸಾಕಷ್ಟು ಹಿಂದೂಗಳಿದ್ದು, ಅವರಿಗೆ ಅವಕಾಶ ಕೊಡಿ. ಉಳ್ಳಾಲದಲ್ಲಿ 50% ಮುಸಲ್ಮಾನರಿದ್ದು, ಹಿಂದೂಗಳಿಗೆ ಬದುಕಲು ಕಷ್ಟ ಇದೆ ಅನ್ನೋ ಭಯ ಇದೆ’ ಎಂದು ಹೇಳಿದ್ದಾರೆ.

    ಇದಕ್ಕೆ ತದ್ವಿರುದ್ಧವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಯು.ಟಿ ಖಾದರ್ “ಎಲ್ಲಾ ಜಾತಿ-ಧರ್ಮದ ಜೊತೆ ಇದ್ದುಕೊಂಡೇ ನಾನು ರಾಜಕೀಯ ಮಾಡಿದ್ದೇನೆ. ತಂದೆ ಶಾಸಕರಾಗಿದ್ದರೂ ನಾನು ಜನಾರ್ದನ ಪೂಜಾರಿ ತತ್ವ ಆದರ್ಶದಿಂದ ಬೆಳೆದವನು.

    ನನ್ನ ಮನೆ, ಕಚೇರಿಗೆ ಬಂದವರಿಗೆ ಯಾವ ಜಾತಿ-ಧರ್ಮ ಅಂತ ಕೇಳಿದವನಲ್ಲ. ಕ್ಷೇತ್ರವ್ಯಾಪ್ತಿಯ ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ರಸ್ತೆ ಮತ್ತು ಮೂಲಭೂತ ಸೌಕರ್ಯ ಮಾಡಿದ್ದೇನೆ. ಪಕ್ಷದ ಎಲ್ಲಾ ಧರ್ಮದ ಕಾರ್ಯಕರ್ತರು, ಮುಖಂಡರು, ಮತದಾರರು ಸೌಹಾರ್ದತೆಯಿಂದ ಇದ್ದಾರೆ. ಕೋಮುವಾದಿಗಳಿಗೆ ಉಳ್ಳಾಲದ ಮಣ್ಣಿನಲ್ಲಿ ಅವಕಾಶ ಕೊಡಲ್ಲ ಎಂದರು.

    ಚುನಾವಣೆ ಬಂದಾಗ ಒಂದೊಂದು ಅಭಿಯಾನ, ವಿಚಾರ ತರ್ತಾರೆ. ಹಿಂದೆಯೂ ಆಂತರಿಕವಾಗಿ ಮಾಡಿದ್ದರು, ಈ ಬಾರಿ ಬಹಿರಂಗವಾಗಿ ಮಾಡಿದ್ದಾರೆ. ನನ್ನ ಕ್ಷೇತ್ರ ಸೌಹಾರ್ದತೆಯ ಸರ್ವಧರ್ಮೀಯರು ಪ್ರೀತಿಸೋ ಕ್ಷೇತ್ರ. ಅಲ್ಲಿ ಎಲ್ಲ ಜಾತಿ-ಧರ್ಮವನ್ನ ಪ್ರೀತಿಸೋರನ್ನ ಶಾಸಕರನ್ನಾಗಿ ಜನ ಗೆಲ್ಲಿಸ್ತಾರೆ.

    ರಾಜಕೀಯಕ್ಕೋಸ್ಕರ ಜನರನ್ನು ವಿಭಾಗ ಮಾಡಲು ಹೋಗಬೇಡಿ. ಜನರ ಸೌಹಾರ್ದತೆ ಹಾಳು ಮಾಡೋದು ದೇಶದ್ರೋಹಿಗಳ ಕೆಲಸ. ಕಾಂಗ್ರೆಸ್ ಮುಂದೆ ನನ್ನನ್ನೇ ನಿಲ್ಲಿಸುತ್ತದೆ ಅಂತ ಹೇಳಲು ಆಗಲ್ಲ‌. ಕಾಂಗ್ರೆಸ್ ಅಲ್ಲಿ ಯಾರಿಗೂ ಮುಂದೆ ಟಿಕೆಟ್ ಕೊಡಬಹುದು. ಮಹಿಳೆಯರು ಅಥವಾ ಯಾರಿಗೂ ಪಕ್ಷ ಮುಂದೆ ಟಿಕೆಟ್ ಕೊಡಬಹುದು. ಆದರೆ ಕಾಂಗ್ರೆಸ್ ಯಾರನ್ನ ನಿಲ್ಲಿಸಿದ್ರೂ ಆ ಕ್ಷೇತ್ರದ ಜನ ಗೆಲ್ಲಿಸ್ತಾರೆ‌ ಎಂದು ತಿರುಗೇಟು ನೀಡಿದರು.

    ಪಕ್ಷ ಮುಂದೆ ಅಲ್ಲಿ ಬದಲಾಯಿಸಲೂ ಬಹುದು, ಏನೇ ಮಾಡಿದ್ರೂ ಸಂತೋಷ. ವಿಎಚ್ ಪಿ ಒಂದು ಬಿಜೆಪಿಯ ಅಂಗಸಂಸ್ಥೆ. ಅದರಲ್ಲಿ 80% ಹಿಂದೂ ಸಹೋದರರು ಇಲ್ಲ, ಕೇವಲ 20% ಇದಾರೆ. ಉಳಿದ ಎಲ್ಲರೂ ಪ್ರೀತಿ ವಿಶ್ವಾಸದಿಂದ ಜೊತೆ ಇದ್ದಾರೆ. ರಾಜಕೀಯಕ್ಕಾಗಿ ಇಬ್ಭಾಗ ಮಾಡಬೇಡಿ, ಅಲ್ಲಿ ರಕ್ತ ಚೆಲ್ಲಬೇಡಿ. ಜನರ ಶಾಂತಿ ನೆಮ್ಮದಿಗಾಗಿ ಬೇಕಾದ್ರೆ ನಾನು ದೂರ ನಿಲ್ಲಲು ಸಿದ್ದ ಎಂದು ಸ್ಪಷ್ಟ ಹೇಳಿಕೆ ನೀಡಿದರು.

    DAKSHINA KANNADA

    ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು

    Published

    on

    ಮಂಗಳೂರು/ಆನೇಕಲ್ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ‌ ದುರ್ದೈವಿ.

    ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್‌ ಮೂಲಕ ಆನೇಕಲ್‌ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.

    ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು

    ಅಪಘಾ*ತದ ರಭಸಕ್ಕೆ ಬೈಕ್‌ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    DAKSHINA KANNADA

    ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !

    Published

    on

    ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.


    ನಳೀನ್ ಕುಮಾರ್‌ಗೆ ಗುಡ್ ನ್ಯೂಸ್;
    ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾ‌ರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

     

    Continue Reading

    DAKSHINA KANNADA

    ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

    Published

    on

    ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.

    ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.

    ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಂದು(ಸೆ.16) ಈದ್ ಮಿಲಾದ್  ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    Continue Reading

    LATEST NEWS

    Trending