Connect with us

DAKSHINA KANNADA

ಮಂಗಳೂರು ಮಳಲಿ ದರ್ಗಾವಿದ್ದ ಜಾಗದಲ್ಲೇ ಹಿಂದೂ ದೇವಾಲಯ ಪತ್ತೆ..! ಸ್ಥಳಕ್ಕೆ ಪೊಲೀಸ್ ಭದ್ರತೆ..

Published

on

ಮಂಗಳೂರು : ಮಂಗಳೂರು ಹೊರವಲಯದ ಗುರುಪುರ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಇತಿಹಾಸ ಪ್ರಸಿದ್ಧ ದರ್ಗಾ‌ ಮತ್ತು ಮಸೀದಿಯ ಪಕ್ಕ ನಿಗೂಢವಾಗಿ ಉಳಿದಿದ್ದ ದೇವಸ್ಥಾನದ ಗುಡಿ ಪತ್ತೆಯಾಗಿದೆ.

ಇತ್ತೀಚೆಗೆ ಮಳಲಿ ದರ್ಗಾದ ನವೀಕರಣದ ಸಲಯವಾಗಿ ಅದನ್ನು ತೆಗೆಯಲಾಗಿದ್ದು, ಈ ವೇಳೆ ಈ ಗುಡಿ ಪತ್ತೆಯಾಗಿದೆ. ಇದುವರೆಗೂ ಹಿಂದೂಗಳಿಗೆ ಇದರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ.

ಆದರೆ ಹಳೆಯ ದರ್ಗಾ ಕೆಡವಿದಾಗ ಅದರ ಹಿಂದೆ ಅನೇಕ ವರ್ಷಗಳಿಂದ ನಿಗೂಢವಾಗಿ ಉಳಿದಿದ್ದ ಗುಡಿ ಪತ್ತೆಯಾಗಿದೆ. ಕಲಷ, ತೋಮರ, ಕಂಬಗಳು ಇರುವ ದೇಗುಲ ಇದಾಗಿದ್ದು, ಇದರೊಳಗಡೆ ಯಾವ ದೇವರ ಮೂರ್ತಿ ಇದೆ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.

ಆದರೆ‌ ಮಸೀದಿಯವರು ದೇವಸ್ಥಾನಕ್ಕೆ ಹಾನಿ ಮಾಡದೆ ಸೌಹಾರ್ದತೆ ಮರೆದಿದ್ದಾರೆ.ಮಳಲಿ ಅಬ್ಬಕ್ಕನ ಊರಾಗಿದ್ದು, ಇಲ್ಲಿ ಅನೇಕ ಜೈನ ಹಾಗೂ ಹಿಂದೂಗಳ ದೇವರ ಕುರುಹುಗಳು ಪತ್ತೆಯಾಗಿದೆ‌.

ಇದಕ್ಕೆ ಮಳಲಿ ದೇವರಗುಡ್ಡೆಯೂ ಒಂದು. ಅದೇ ರೀತಿ ಮಳಲಿಯ ಕುರ್ವೆಮಾರ್ ಫಲ್ಗುಣಿ ಸಮೀಪವೂ ಶಿವಲಿಂಗ ಹಾಗೂ ಪಾಣಿಪೀಠ ಪತ್ತೆಯಾಗಿದೆ. ಆದರೆ ಇದರ ದೇವಸ್ಥಾನ ಎಲ್ಲಿತ್ತು ಎಂದು ತಿಳಿದುಬಂದಿಲ್ಲ.

ಪೊಳಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ದೇವಸ್ಥಾನ ಇದಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಅದರ ಪಕ್ಕ ಮಸೀದಿ ಹೇಗೆ ನಿರ್ಮಾಣವಾಯಿತು,

ಇಲ್ಲಿಗೆ ಟಿಪ್ಪೂ ಸುಲ್ತಾನ್ ಬಂದಿದ್ದನೇ ಎಂದು ಐತಿಹಾಸಿಕ ಅಧ್ಯಯನಗಳ ಮೂಲಕ ತಿಳಿದುಬರಬೇಕಿದೆ. ಕೆಲವೊಂದು ಮೂಲಗಳ ಪ್ರಕಾರ ಮಳಲಿಯಲ್ಲಿ ಟಿಪ್ಪುವಿನ ಟಂಕಸಾಲೆಯೂ ಇದ್ದಿರಬಹುದೆಂದು ಇತಿಹಾಸ ತಜ್ಞರು ಶಂಕಿಸಿದ್ದಾರೆ.

ಸದ್ಯ ಸದರಿ ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತಹಶೀಲ್ದಾರ್ ಮುಂದಾಗಿದ್ದು, ಸದ್ಯಕ್ಕೆ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.

ಇನ್ನು, ದರ್ಗಾ ಆಡಳಿತ ಮಂಡಳಿಯು ಕೆಲಸ ಸ್ಥಗಿತಗೊಳಿಸಿದ್ದು, ಜಿಲ್ಲಾಡಳಿತದ ಸೂಚನೆಗೆ ಸಮ್ಮತಿ ಸೂಚಿಸಿದೆ. ಈ ಬಗ್ಗೆ ಮಾತನಾಡಿದ ಶರಣ್ ಪಂಪ್ವೆಲ್ ಈ ಜಾಗದಲ್ಲಿ ಹಿಂದೂ ದೇವಸ್ಥಾನದ ಕುರುಹು ಸ್ಪಷ್ಟವಾಗಿ ಕಾಣುತ್ತಿದೆ.

ಆದ್ದರಿಂದ ಈ ಬಗ್ಗೆ ತನಿಖೆ ನಡೆಸಬೇಕು, ಅಲ್ಲಿಯವರೆಗೆ ಈ ಜಾಗದಲ್ಲಿ ಮಸೀದಿ ನವೀಕರಣ ಮಾಡಲು ಅನುಮತಿ ನೀಡಬಾರದು.

ತಾತ್ಕಾಲಿಕ ತಡೆ ನೀಡಬೇಕು ಎಂದಿದ್ದಾರೆ. ಪ್ರಸ್ತುತ ಸ್ಥಳಕ್ಕೆ ಪೊಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು ಪ್ರಕರಣ ಇತ್ಯಾರ್ಥವಾಗುವ ವರೆಗೆ ಪೊಲೀಸ್ ಭದ್ರತೆಯನ್ನಯ ಹಾಕಲಾಗಿದೆ.

DAKSHINA KANNADA

Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!

Published

on

ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್‌ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ ಜಂಕ್ಷನ್‌ ಬಳಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ  ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್‌ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Continue Reading

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BELTHANGADY

ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!

Published

on

ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.

ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.

Continue Reading

LATEST NEWS

Trending