LATEST NEWS
35 ರ ಆಸುಪಾಸಿನವರೇ ಈತನ ಟಾರ್ಗೆಟ್; 17 ಮಹಿಳೆಯರಿಗೆ ವಂಚಿಸಿದಾತ ಪೊಲೀಸ್ ಬಲೆಗೆ!
ಮಂಗಳೂರು/ನೋಯ್ಡಾ : ದುಡಿದು ತಿನ್ನುವ ವಯಸ್ಸಿನಲ್ಲೂ ಕುಳಿತು ತಿನ್ನಲು ಬಹಳ ಜನ ನಾನಾ ರೀತಿಯ ಸಂಚು ಮಾಡುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೈ ತುಂಬಾ ಸಂಬಳ ಬರುವ ಕೆಲಸವಿದ್ದರೂ ಸಲ್ಲದ ಅನ್ಯ ಮಾರ್ಗವನ್ನು ಹುಡುಕುವವರ ಸಂಖ್ಯೆ ಬೆಳೆಯುತ್ತಿದೆ. ಇಲ್ಲೊಬ್ಬ ವ್ಯಕ್ತಿ ಲಕ್ಷ ಲಕ್ಷ ಸಂಬಳ ಬರೋ ಕೆಲಸ ಕಳೆದುಕೊಂಡ ಬಳಿಕ ಸುಲಭದಲ್ಲಿ ಹಣ ಮಾಡಬೇಕೆಂದು ಮ್ಯಾಟ್ರಿಮೋನಿ ಸೈಟ್ಗಳಲ್ಲಿ ಮಹಿಳೆಯರನ್ನು ಬಲೆಗೆ ಬೀಳಿಸಿ ಹಣ ದೋಚುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರಿನ ವಿಪ್ರೋ ಕಂಪೆನಿಯಲ್ಲಿ 1.37 ಲಕ್ಷ ಸಂಬಳ ಬರುವ ಕೆಲಸ ಮಾಡ್ತಿದ್ದ ರಾಹುಲ್ ಚತುರ್ವೇದಿ ಎಂಬ ಖತರ್ನಾಕ್ ಖಿಲಾಡಿ ಕೆಲಸ ಕಳೆದುಕೊಂಡ ಬಳಿಕ ಸುಲಭ ದಾರಿಯಲ್ಲಿ ಹಣ ಗಳಿಸಲು ಮ್ಯಾಟ್ರಿಮೋನಿ ಸೈಟ್ಗಳಲ್ಲಿ ನಕಲಿ ಖಾತೆ ತೆರೆದಿದ್ದಾನೆ. 35 ರ ಆಸುಪಾಸಿನ ವಯಸ್ಸಿನ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಅವರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ದೋಚುತ್ತಿದ್ದ. ಈವರೆಗೆ ಈತ ಮದುವೆಯಾಗುವುದಾಗಿ ನಂಬಿಸಿ ಸುಮಾರು 17 ಮಹಿಳೆಯರಿಗೆ ವಂಚನೆ ಮಾಡಿದ್ದಾನೆ ಎಂದು ವರದಿಯಾಗಿದೆ.
ವಂಚನೆಗೊಳಗಾದ ಮಹಿಳೆಯೊಬ್ಬಳು ದೂರು ನೀಡಿದ ಆಧಾರದ ಮೇಲೆ ಈ ಖದೀಮನನ್ನು ಬಂಧಿಸಲಾಗಿದೆ. ʼ39 ವರ್ಷದ ರಾಹುಲ್ ಚತುರ್ವೇದಿ ವಿವಿಧ ಮ್ಯಾಟ್ರಿಮೋನಿ ವೆಬ್ಸೈಟ್ಗಳಲ್ಲಿ ನಕಲಿ ಖಾತೆಯನ್ನು ತೆರೆದು ಸುಮಾರು 35 ರ ಆಸುಪಾಸಿನ ಮಹಿಳೆಯರನ್ನು ಟಾರ್ಗೆಟ್ ಮಾಡಿ ಬಲೆಗೆ ಬೀಳಸಿ ಮದುವೆಯಾಗುತ್ತೇನೆಂದು ನಂಬಿಸಿ ಸ್ನೇಹ ಬೆಳೆಸಿ ಕೊನೆಗೆ ವಿವಿಧ ಆಮಿಷವೊಡ್ಡಿ ಆ ಮಹಿಳೆಯರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ’ ಎಂಬುವುದಾಗಿ ನೋಯ್ಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಅಕ್ರಮ ಮರಳುಗಾರಿಕೆಯ ವಿರುದ್ಧ ಸಿಡಿದೆದ್ದ ಮಂಗಳೂರಿಗರು..! ಬೃಹತ್ ಪ್ರತಿಭಟನೆ..!
ಮಂಗಳೂರು : ಅಕ್ರಮ ಮರಳು ದಂಧೆಯ ವಿರುದ್ಧ ಮಂಗಳೂರಿನ ಜನರ ಆಕ್ರೋಶ ಮುಗಿಲು ಮುಟ್ಟಿದೆ ಅನ್ನೋದಿಕ್ಕೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ. ಪಾವೂರು ಉಳಿಯ, ಉಳ್ಳಾಲ ಪೊಯ್ಯೆ ಮೊದಲಾದ ದ್ವೀಪ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ.
ಮರಳು ಮಾಫಿಯಾದಿಂದ ದ್ವೀಪಗಳು ನಾಶವಾಗುತ್ತಿದೆ ಅಂತ ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಹಲವಾರು ಪ್ರತಿಭಟನೆಗಳನ್ನೂ ಕೂಡಾ ನಡೆಸಲಾಗಿತ್ತು. ಆದ್ರೆ ಇದ್ಯಾವುದಕ್ಕೂ ಜಗ್ಗದ ಅಕ್ರಮ ದಂಧೆಕೋರರು ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಸಿದ್ದರು. ಜಿಲ್ಲಾಡಳಿತ , ಗಣಿ ಇಲಾಖೆ ಕೂಡಾ ಇದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬ ರೀತಿ ವರ್ತಿಸಿತ್ತು. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಕ್ಕ ಪಾಠ ಕಲಿಸಲು ಜನರೇ ಮುಂದಾಗಿದ್ದು, ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನರು ಅಕ್ರಮ ಮರಳುಗಾರಿಕೆಯ ವಿರುದ್ಧ ಸಿಡಿದೆದ್ದಿದ್ದಾರೆ.
ಈ ಹೋರಾಟ ಕೇವಲ ದ್ವೀಪ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಿಸದೆ ಜಿಲ್ಲೆಯ ಎಲ್ಲೆಡೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧದ ಹೋರಾಟವಾಗಿದೆ. ಜಿಲ್ಲಾಡಳಿತ, ಹಾಗೂ ಜಿಲ್ಲೆಯ ಎರಡೂ ಪ್ರಭಲ ರಾಜಕೀಯ ಪಕ್ಷಗಳು ಈ ಅಕ್ರಮದಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನೂ ಅಕ್ರಮ ಮರಳುಗಾರಿಕೆ ನಡೆದಲ್ಲಿ ಪೊಲೀಸ್ ಠಾಣೆಯ ಮುಂಬಾಗದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಪ್ರತಿಭಟನೆಯಲ್ಲಿ ನೀಡಲಾಗಿದೆ. ಮಂಗಳೂರು ಕ್ಯಾಥೋಲಿಕ್ ಸಭಾ, ಸಮಾನ ಮನಸ್ಕ ಸಂಘಟನೆ ಹಾಗೂ ಜಾತಿ, ಧರ್ಮ, ಪಕ್ಷಾತೀತ ನಿಲುವಿನ ಜನರ ಜೊತೆ ಸೇರಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.
DAKSHINA KANNADA
300 ಕೋಟಿ ವಂಚನೆ..!ಮಥುರಾ ಕೃಷ್ಣ ದೇವಸ್ಥಾನದಲ್ಲಿದ್ದ ಆರೋಪಿಯ ಬಂಧನ..!
ಮಂಗಳೂರು/ಮುಂಬೈ : ಮಥುರಾ ಕೃಷ್ಣ ಗೋಪಾಲ ದೇವಸ್ಥಾನದ ವೃಂದಾವನದ ಮಹಾಂತ ಎಂದು ಜನರನ್ನು ವಂಚಿಸಿ 300 ಕೋಟಿ ರೂಪಾಯಿ ಪಂಗನಾಮ ಹಾಕಿದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮಥುರಾ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆಯಲ್ಲಿ ಮಂಹಾಂತನ ಸೋಗಿನಲ್ಲಿದ್ದ ಆರೋಪಿ ವಿಶ್ವನಾಥ ಶಿಂಧೆಯನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ನಿವಾಸಿಯಾಗಿದ್ದ ವಿಶ್ವನಾಥ ಶಿಂಧೆ, ಜಿಜಾವು ಮಾಸಾಹೇಬ್ ಮಲ್ಟಿ ಸ್ಟೇಟ್ ಬ್ಯಾಂಕ್ ನ ಠೇವಣಿದಾರರಿಗೆ 300 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ. ಈ ನಕಲಿ ಮಹಾಂತ ಶಿಂಧೆಗಾಗಿ ಅನೇಖ ದಿನದಿಂದ ಬೀಡ್ ಪೊಲೀಸರು ಹುಡುಕಾಟ ನಡೆಸಿದ್ದರು. ಈ ವೇಳೆ ಉತ್ತರ ಪ್ರದೇಶದ ಮಥುರಾ ಕೃಷ್ಣ ಗೋಪಾಲ ದೇವಸ್ಥಾನದಲ್ಲಿ ಇದ್ದಾನೆ ಎಂಬ ಸುಳಿವು ಸಿಕ್ಕಿತ್ತು. ಮಥುರಾದ ಶಿವಾಜಿನಗರ ಪೊಲೀಸರ ಸಹಾಯ ಪಡೆದ ಬೀಡ್ ಪೊಲೀಸರು ದೇವಸ್ಥಾನಕ್ಕೆ ದಾಳಿ ನಡೆಸಿದ್ದು ಈ ವೇಳೆ ಕೊಠಡಿಯೊಂದರಲ್ಲಿ ವಿಶ್ವನಾಥ ಶಿಂಧೆ ಅಡಗಿ ಕುಳಿತಿದ್ದ. ಆತ ಬಂಧನದ ಬಳಿಕ ಮಥುರಾ ನ್ಯಾಯಾಲಯಕ್ಕೆ ಹಾಜರು ಪಡಿಸಿ ಬಳಿಕ ಟ್ರಾನ್ಸಿಟ್ ವಾರೆಂಟ್ ಪಡೆದುಕೊಂಡು ಆರೋಪಿಯನ್ನು ಮುಂಬೈಗೆ ಕರೆತರಲಾಗಿದೆ. ಆರೋಪಿಯು ಈ ಹಿಂದೆ ಕೂಡಾ ಅಪರಾಧ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
LATEST NEWS
ಯುರೋಪ್ ದೇಶಕ್ಕೂ ಕಾಲಿಟ್ಟ ಯಕ್ಷಧ್ರುವ ಪಟ್ಲ ಫೌಂಡೇಶನ್
ಮಂಗಳೂರು: ಇತ್ತೀಚೆಗೆ ಕರಾವಳಿಯ ಗಂಡು ಕಲೆ ಯಕ್ಷಗಾನವನ್ನು ಅಮೆರಿಕಾದಲ್ಲಿ ಪಸರಿಸಿ ಅಲ್ಲಿನ ಜನರಿಗೆ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಾಡಿತ್ತು. ಪಟ್ಲ ಸತೀಶ್ ಸೇರಿದಂತೆ ತಂಡದ 9 ಕಲಾವಿದರು ಸುಮಾರು 75 ದಿನಗಳ ಕಾಲ ಅಮೆರಿಕಾದ ವಿವಿಧ ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನದ ಜೊತೆ ಕಾರ್ಯಾಗಾರ ನಡೆಸಿದ್ದರು.
ಇದೀಗ ಯಕ್ಷಧ್ರುವ ಪಟ್ಲ ಫೌಂಡೇಶನ್ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದ್ದು, ಯುರೋಪ್ ದೇಶದಲ್ಲಿ ತನ್ನ ಘಟಕವನ್ನು ಆರಂಭಿಸುತ್ತಿದೆ. ಅಕ್ಟೋಬರ್ 3 ರಂದು ಜರ್ಮನಿಯ ಮ್ಯೂನಿಕ್ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯೂರೋಪ್ ಘಟಕ ಉದ್ಘಾಟನೆಗೊಳ್ಳಲಿದೆ.
ಮ್ಯೂನಿಕ್ನ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದ ರಾಜೀವ್ ಚಿತ್ಕರ್, ನಿವೃತ್ತ ಎಮಿನೆಂಟ್ ಇಂಡೋಲಜಿಯ ಪ್ರೋಫೆಸರ್ ಡಾ.ರೋಬಾರ್ಟ್, ಸನಾತನ ಅಕಾಡೆಮಿಯ ಸಂಸ್ಥಾಪಕರಾದ ಡಾ.ಅನೂಷ್ ನಾಗರಾಜ್ ಶಾಸ್ತ್ರಿ , ಸಿರಿಗನ್ನಡ ಕೂಟ ಮ್ಯೂನಿಕ್ ಇದರ ಅಧ್ಯಕ್ಷರಾದ ಶ್ರೀಧರ್ ಲಕ್ಷ್ಮಾಪುರ್, ಹಾಗೂ ರೈನ್ ಮೈನ್ ಕನ್ನಡ ಸಂಘ ಜರ್ಮನಿ ಇದರ ಅಧ್ಯಕ್ಷರಾದ ವೇದಮೂರ್ತಿ ಕುಮಾರ್ ಅವರು ಈ ಜರ್ಮನಿ ಘಟಕದ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಕ್ಕಳ ತಂಡದಿಂದ ಮಾಯಾಮೃಗ ಎಂಬ ಕಥಾ ಪ್ರಸಂಗದ ಪ್ರದರ್ಶನ ಕೂಡಾ ಆಯೋಜಿಸಲಾಗಿದೆ. ಜೊತೆಗೆ ಯಕ್ಷಗಾನದ ಬಣ್ಣಗಾರಿಕೆ, ನೃತ್ಯ, ಹಿಮ್ಮೇಳದ ಬಗ್ಗೆ ಪ್ರಾತಿಕ್ಷಿಕೆ ಕೂಡಾ ನಡೆಸಲಾಗುವುದು.
- FILM6 days ago
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
- DAKSHINA KANNADA6 days ago
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!
- LATEST NEWS5 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS3 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?