Connect with us

    LATEST NEWS

    ಪುತ್ತೂರು ಕಂಬಳ ಸಂಪನ್ನ: ಹೊಸ ದಾಖಲೆ ಸೃಷ್ಠಿ-169 ಜೋಡಿ ಕೋಣಗಳು ಭಾಗಿ

    Published

    on

    ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯಲ್ಲಿ ನಡೆದ ಕೋಟಿ-ಚೆನ್ನೆಯ ಜೋಡುಕೆರೆ ಕಂಬಳ ನಿನ್ನೆ ಸಮಾಪನಗೊಂಡಿದ್ದು, ದಾಖಲೆಯನ್ನು ನಿರ್ಮಾಣ ಮಾಡಿದೆ.


    ಬರೋಬ್ಬರಿ 33 ಗಂಟೆಗಳ ಕಾಲ ಜರುಗಿದ ಕಂಬಳಕ್ಕೆ ಶನಿವಾರ ಬೆಳಗ್ಗೆ 10.30ಕ್ಕೆ ಕಂಬಳಕ್ಕೆ ಚಾಲನೆ ನೀಡಲಾಗಿದ್ದು, ನಿನ್ನೆ ರಾತ್ರಿ 8 ಗಂಟೆಯ ತನಕ ನಿರಂತರವಾಗಿ ನಡೆಯಿತು.

    ರಾತ್ರಿ ಸುಮಾರು 8.30 ವೇಳೆಗೆ ಸಮಾಪನಗೊಂಡಿದೆ. ಶನಿವಾರ ಬೆಳಗ್ಗೆಯಿಂದ ನಿನ್ನೆ ಸಮಾರೋಪ ಸಮಾರಂಭದ ತನಕ ಲಕ್ಷಾಂತರ ಮಂದಿ ಕಂಬಳ ವೀಕ್ಷಿಸುವ ಮೂಲಕ ಕೋಟಿ-ಚೆನ್ನೆಯ ಕಂಬಳಕ್ಕೆ ಸಾಕ್ಷಿಯಾದರು.

    ಸಮಾರೋಪದಲ್ಲಿ ಕೋಣಗಳ ವಿಜೇತರಿಗೆ ಚಿನ್ನದ ಪದಕ, ನಗದು ಜತೆಗೆ ಈ ಬಾರಿ ವಿಶೇಷವಾಗಿ ಕೋಟಿ-ಚೆನ್ನಯ ಟ್ರೋಫಿಯನ್ನು ವಿತರಿಸಲಾಯಿತು.

    ಕಂಬಳ ಸಮಿತಿಯ ಕೋಶಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ,ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್,ಪಿವಿ ಉಪಾಧ್ಯಕ್ಷರಾದ ಶಿವರಾಮ ಆಳ್ವ, ಜಿನ್ನಪ್ಪ ಪೂಜಾರಿ , ಪ್ರೇಮಾನಂದ ನಾಯಕ್, ವಸಂತ ರೈ ದುಗ್ಗಳ, ಪ್ರವೀಣ್ ಚಂದ್ರ ಆಳ್ವ ,ಸದಸ್ಯರಾದ ಯೋಗೀಶ್ ಸಮಾನಿ ಸಂಪಿಗೆದಡಿ, ಕೃಷ್ಣಪ್ರಸಾದ್ ಆಳ್ವ ರೋಶನ್ ರೈ ಬನ್ನೂರು ಮತ್ತಿತರರು ಪಾಲ್ಗೊಂಡಿದ್ದರು.

    ಕಂಬಳ ಸಮಿತಿ ಅಧ್ಯಕ್ಷ ಎನ್ .ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು.ಸಮಿತಿಯ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರನ್ನು ಸನ್ಮಾನಿಸಲಾಯಿತು.

    ಪ್ರಧಾನ ತೀರ್ಪುಗಾರ ಗುಣಪಾಲ ಕಡಂಬ ವಿಜೇತರ ಪಟ್ಟಿ ಒದಿದರು. 29ನೇ ವರ್ಷದ ಪುತ್ತೂರು ಕೋಟಿ ಚೆನ್ನೆಯ ಜೋಡುಕರೆ ಕಂಬಳದಲ್ಲಿ ಉಡುಪಿ , ದ.ಕ ಜಿಲ್ಲೆಯ 169 ಜೋಡಿ ಕೋಣಗಳು ಪಾಲ್ಗೊಂಡಿದ್ದು ಕನೆಹಲಗೆ 4 ಜತೆ, ಅಡ್ಡಹಲಗೆ 6 ಜತೆ , ಹಗ್ಗ ಕಿರಿಯ 14 ಜತೆ, ನೇಗಿಲು ಹಿರಿಯ 30ಜತೆ, ಹಗ್ಗ ಕಿರಿಯ 21 ಜತೆ ,ನೇಗಿಲು ಕಿರಿಯ 93 ಜೊತೆ ಸೇರಿದಂತೆ ಒಟ್ಟು 169 ಜತೆ ಕೋಣಗಳು ಇದ್ದವು.

    ಫಲಿತಾಂಶ ವಿವರ:

    ಕನೆಹಲಗೆ: 04 ಜೊತೆ
    ಅಡ್ಡಹಲಗೆ: 06 ಜೊತೆ
    ಹಗ್ಗ ಹಿರಿಯ: 14 ಜೊತೆ
    ನೇಗಿಲು ಹಿರಿಯ: 30 ಜೊತೆ
    ಹಗ್ಗ ಕಿರಿಯ: 21 ಜೊತೆ
    ನೇಗಿಲು ಕಿರಿಯ: 93 ಜೊತೆ
    ಒಟ್ಟು ಕೋಣಗಳ ಸಂಖ್ಯೆ: 169 ಜೊತೆ
    ••••••••••••••••••••••••••••••••••••••••••••••
    ಕನೆಹಲಗೆ:
    ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ
    ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
    ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
    ••••••••••••••••••••••••••••••••••••••••••••••
    ಅಡ್ಡ ಹಲಗೆ:
    ಪ್ರಥಮ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
    ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
    ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ್ ಕುಮಾರ್ ಶೆಟ್ಟಿ
    ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
    ••••••••••••••••••••••••••••••••••••••••••••••
    ಹಗ್ಗ ಹಿರಿಯ:
    ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಎ”
    ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
    ದ್ವಿತೀಯ: ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ “ಎ”
    ಓಡಿಸಿದವರು:ಭಟ್ಕಳ ಶಂಕರ್ ನಾಯ್ಕ್
    ••••••••••••••••••••••••‌‌‌‌‌••••••••••••••••••••••
    ಹಗ್ಗ ಕಿರಿಯ:
    ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
    ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
    ದ್ವಿತೀಯ: ಮೂಡಬಿದ್ರಿ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್ “ಬಿ”
    ಓಡಿಸಿದವರು: ಲಾಡಿ ಸುರೇಶ್ ಶೆಟ್ಟಿ
    ••••••••••••••••••••••••••••••••••••••••••••••
    ನೇಗಿಲು ಹಿರಿಯ:
    ಪ್ರಥಮ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ “ಎ”
    ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
    ದ್ವಿತೀಯ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ “ಬಿ”
    ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
    ••••••••••••••••••••••••••••••••••••••••••••••
    ನೇಗಿಲು ಕಿರಿಯ:
    ಪ್ರಥಮ: ಬೆಳ್ಳಾರೆ ಕುಂಟಿಪುನಿ ಗುತ್ತು ಪ್ರಮೋದ್ ಸುರೇಶ್ ಶೆಟ್ಟಿ “ಎ”
    ಓಡಿಸಿದವರು: ಮರೋಡಿ ಶ್ರೀಧರ್
    ದ್ವಿತೀಯ: ನಿಟ್ಟೆ ಪರಪ್ಪಾಡಿ ನಿಹಾಲ್ ಕೋಟ್ಯಾನ್
    ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending