Connect with us

    ಉಳ್ಳಾಲ ಸೇತುವೆಯಲ್ಲಿ ಹಿಟ್‌ & ರನ್ : ಮದುಮಗ ದಾರುಣ ಸಾವು..!  

    Published

    on

    ಉಳ್ಳಾಲ ಸೇತುವೆಯಲ್ಲಿ ಹಿಟ್‌ & ರನ್ : ಮದುಮಗ ದಾರುಣ ಸಾವು..!

    ಮಂಗಳೂರು : ಮಂಗಳೂರು ಹೊರವಲಯದ ನೇತ್ರಾವತಿ ಸೇತುವೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಿಮೆಂಟ್ ಲಾರಿಯಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

    28 ವರ್ಷದ ಉಬೇದ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಪಘಾತ ನಡೆಸಿದ ಬಳಿಕ ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು ತೊಕ್ಕೊಟ್ಟು ಫ್ಲೈ ಓವರ್ ಬಳಿ ಪೊಲೀಸರು ಕಾರು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

    ಹಿಟ್ & ರನ್ ಮಾಡಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಬಂಡಿಕೊಟ್ಯ ನಿವಾಸಿಯಾಗಿರುವ ಉಬೇದ್‌ ಗೆ ಇದೇ ಜುಲೈ 23 ರಂದು ಮದುವೆ ಕೂಡ ನಿಶ್ಚಯವಾಗಿತ್ತು.

    ಉಬೇದ್‌ ಒಟ್ಟಿಗೆ ಇದ್ದ ಸಹ ಸವಾರ ಕೂಡ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹಿಟ್ & ರನ್ ಮಾಡಿದ ಸೋಮೇಶ್ವರ ಪುರಸಭಾ ವ್ಯವಸ್ಥಾಪಕ ಕೃಷ್ಣ ಸೇರಿ ಇಬ್ಬರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಎರಡು ದಿನಗಳ ಹಿಂದಷ್ಟೇ ಪುರಸಭಾ ವ್ಯವಸ್ಥಾಪಕ ಈ ಕಾರು ಖರೀದಿ ಮಾಡಿದ್ದ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಪೇಜರ್‌ ಸ್ಫೋ*ಟದ ಹಿಂದೆ ಕೇರಳದ ವ್ಯಕ್ತಿಯ ಹೆಸರು..?

    Published

    on

    ಮಂಗಳೂರು/ಕೇರಳ : ಪೇಜರ್ ಸ್ಫೋ*ಟದ ಬಳಿಕ ನಡೆದಿದ್ದ ಪ್ರಾಥಮಿಕ ತನಿಖೆಯಲ್ಲಿ ತೈವಾನ್ ಮೂಲದ ಗೋಲ್ಡ್‌ ಅಪೋಲೋ ಈ ಪೇಜರ್ ತಯಾರಿಸಿದ್ದಾಗಿ ಹೇಳಲಾಗಿತ್ತು. ಆದ್ರೆ, ಕಂಪೆನಿ ಇದು ಹಂಗೇರಿಯ ಬುಡಾಪೆಸ್ಟ್‌ ಮೂಲದ BAC ಕನ್ಸಲ್ಟಿಂಗ್ KFT ಕಂಪನಿ ತಯಾರಿಸಿದ್ದಾಗಿ ಹೇಳಿತ್ತು. ಇದಕ್ಕೆ ಟ್ರೇಡ್‌ ಮಾರ್ಕ್‌ ಸಾಕ್ಷಿಯಾಗಿದೆ ಎಂದು ವಾದಿಸಿತ್ತು.

    ತನಿಖೆ ನಡೆಸಿದಾಗ ಇದು ನಾರ್ಟಾ ಗ್ಲೋಬಲ್‌ ಲಿಮಿಟೆಡ್‌ ಈ ಸ್ಫೋ*ಟಕ ನೀಡಿದೆ ಎಂದು ಹೇಳಲಾಗಿದೆ. 2022 ರಲ್ಲಿ ಸೋಫೀಯಾದಲ್ಲಿ ಆರಂಭವಾದ ಈ ಕಂಪೆನಿಯು ನಾರ್ವೇಜಿಯನ್‌ನಲ್ಲಿರುವ ರಿನ್ಸನ್‌ ಜೋಸ್ ಒಡೆತನದ ಕಂಪೆನಿ ಎಂದು ಮಾಹಿತಿ ಲಭ್ಯವಾಗಿದೆ.

    ರಿನ್ಸನ್ ಜೋಸ್​​​ ನಾರ್ವೆಗೆ ಬಂದಿದ್ದೇಕೆ?

    ಸುದ್ದಿ ಸಂಸ್ಥೆ IANS ವರದಿಯ ಪ್ರಕಾರ, ಜೋಸ್  ಡಿಜಿಟಲ್ ವ್ಯಾಸಾಂಗ ಮಾಡಲು ನಾರ್ವೆಗೆ ಹೋಗಿದ್ದಾರೆ. ಇದಕ್ಕೂ ಮೊದಲು ಅವರು ಲಂಡನ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತನಿಖೆಯಲ್ಲಿ ಗೊತ್ತಾಗಿದೆ.

    ಡಿಜಿಟಲ್ ಕಂಪೆನಿಯಲ್ಲಿ ಐದು ವರ್ಷಗಳ ಕಾಲ ಕೆಲಸ ಮಾಡಿದ್ದ ಜೋಸ್‌ ತನ್ನ ಪತ್ನಿಯೊಂದಿಗೆ ಓಸ್ಲೋದಲ್ಲಿ ನೆಲೆಸಿದ್ದಾನೆ. ಇಬ್ಬರು ಸಹೋದರರು ಲಂಡನ್‌ನಲ್ಲಿದ್ದು, ಕಳೆದ ಮೂರು ದಿನಗಳಿಂದ ಸಹೋದರರ ಸಂಪರ್ಕಕ್ಕೂ ಜೋಸ್ ಸಿಕ್ಕಿಲ್ಲ ಎಂದು ಹೇಳಲಾಗಿದೆ.

    ಇದನ್ನೂ ಓದಿ : ನಿಫಾ ಆತಂಕ; 41 ಜನರಿಗೆ ಹೋಂ ಐಸೊಲೇಷನ್

    ಜೋಸ್ ಸಹೋದರರು ಈ ಆರೋಪವನ್ನು ತಳ್ಳಿ ಹಾಕಿದ್ದು, ಜೋಸ್ ನೇರವಾದ ವ್ಯಕ್ತಿಯಾಗಿದ್ದು, ಅವರಿಗೂ ಈ ಸ್ಫೋ*ಟಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

    Continue Reading

    LATEST NEWS

    ನಿಫಾ ಆತಂಕ; 41 ಜನರಿಗೆ ಹೋಂ ಐಸೊಲೇಷನ್

    Published

    on

    ಬೆಂಗಳೂರು: ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಮತ್ತೆ ಹೋಮ್ ಕ್ಯಾರಂಟೈನ್ ಶುರುವಾಗಲಿದೆ.

    ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರು ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

    ಇನ್ನು 41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು, ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತವನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

    Continue Reading

    LATEST NEWS

    ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

    Published

    on

    ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

    ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.

    Continue Reading

    LATEST NEWS

    Trending