Connect with us

LATEST NEWS

ಬೆತ್ತಲೆ ವಿಡಿಯೋ ಕಾಲ್‌ ಮಾಡಿ ಹನಿಟ್ರ್ಯಾಪ್ ಮಾಡುವ ಚೆಂದುಳ್ಳಿ ಚೆಲುವೆಯರು

Published

on

ಬೆಳಗಾವಿ: ಗಣ್ಯ ವ್ಯಕ್ತಿಗಳು ಹಾಗೂ ಅಮಾಯಕ ಯುವಕರನ್ನೇ ಟಾರ್ಗೆಟ್ ಮಾಡಿ ಫೇಸ್​​​ಬುಕ್​ನಲ್ಲಿ ಬೆತ್ತಲಾಗುವ ಚೆಂದುಳ್ಳಿ ಚೆಲುವೆಯರು ಬಳಿಕ ಬ್ಲ್ಯಾಕ್‌ಮೇಲ್‌  ಮಾಡಿ ಹಣ ಕೀಳುತ್ತಿರುವ ಆನ್​ಲೈನ್​ ಹನಿಟ್ರ್ಯಾಪ್ ಗ್ಯಾಂಗ್ ಬೆಳಗಾವಿಯಲ್ಲಿ ಸಕ್ರಿಯವಾಗಿದೆ.


ಈಗಾಗಲೇ ನಾಲ್ಕೈದು ಪ್ರಕರಣಗಳು ಬೆಳಗಾವಿಯಲ್ಲಿ ಬೆಳಕಿಗೆ ಬಂದಿವೆ. ಯಾಮಾರಿ ಸಾವಿರಾರು ರೂಪಾಯಿ ಕಳೆದುಕೊಂಡಿರುವವರ ಬಳಿ ಮತ್ತೆ ಹಣ ನೀಡುವಂತೆ ಈ ಗ್ಯಾಂಗ್​ ಸತಾಯಿಸುತ್ತಿದೆ. ಇದರಿಂದ ರೋಸಿ ಹೋಗಿರುವ ಸಂತ್ರಸ್ತರು ಬೆಳಗಾವಿಯ ಸಿಇಎನ್ ಠಾಣೆ ಮೆಟ್ಟಿಲೇರಿದ್ದಾರೆ. ಫೇಸ್ಬುಕ್​ನಲ್ಲಿ ಚೆಂದದ ಫೋಟೋಗಳನ್ನು ಹರಿಬಿಡುವ ಮೂಲಕ ಗಣ್ಯ ವ್ಯಕ್ತಿಗಳು ಹಾಗೂ ಯುವಕರನ್ನೇ ಈ ಚೆಲುವೆಯರ ಗ್ಯಾಂಗ್ ಟಾರ್ಗೆಟ್ ಮಾಡ್ತಿದೆ. ಫ್ರೆಂಡ್ ರಿಕ್ವೆಸ್ಟ್ ಕಳಿಸುವ ಚೆಂದುಳ್ಳಿಯರು ಅಕ್ಸೆಪ್ಟ್​ ಆಗ್ತಿದ್ದಂತೆ ಮೆಸೇಂಜರ್​ನಲ್ಲಿ ಚಾಟ್ ಶುರು ಹಚ್ಚಿಕೊಳ್ಳುತ್ತಾರೆ. ಕೆಲ ದಿನಗಳ ಕಾಲ ಚಾಟ್ ಮಾಡಿ ವಿಶ್ವಾಸಗಳಿಸುವ ಯುವತಿಯರು, ಬಳಿಕ ವಾಟ್ಸ್​​ಆ್ಯಪ್​ ನಂಬರ್ ಶೇರ್ ಆಗುವಂತೆ ನೋಡಿಕೊಳ್ಳುತ್ತಾರೆ.

ಬಳಿಕ ವಿಡಿಯೋ ಕಾಲ್ ಮಾಡಿ ನಗ್ನವಾಗಿ ಕಾಣಿಸಿಕೊಳ್ಳುತ್ತಾರೆ. ಎದುರಿನವರನ್ನು ನಗ್ನವಾಗುವಂತೆ ಪ್ರಚೋದಿಸುತ್ತಾರೆ. ಆಗ ನಗ್ನವಾಗಿದ್ದುಕೊಂಡು ಸಂಭಾಷಣೆಯ ದೃಶ್ಯವನ್ನು ಸ್ಕ್ರೀನ್​ ರೆಕಾರ್ಡಿಂಗ್ ಮಾಡಿಕೊಳ್ಳುತ್ತಾರೆ. ನಂತರ ತಮ್ಮ ಅಸಲಿ ಆಟ ಶುರು ಮಾಡುವ ಈ ನಾರಿಮಣಿಯರು ಮೊದಲು ಸಣ್ಣ ಪ್ರಮಾಣದ ಹಣಕ್ಕೆ ಬೇಡಿಕೆ ಇಡುತ್ತಾರೆ. ಹಣ ನೀಡಲು ನಿರಾಕರಿಸಿದರೆ ನಗ್ನ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕುತ್ತಾರೆ. ಆಗ ಸಾಕಷ್ಟು ಜನರು ಮರ್ಯಾದೆಗೆ ಅಂಜಿ ಹಣ ನೀಡುತ್ತಾರೆ. ಇಷ್ಟಕ್ಕೆ ಸುಮ್ಮನಿರದ ಈ ಆನ್​​ಲೈನ್​ ಹನಿಟ್ರ್ಯಾಪ್ ಗ್ಯಾಂಗ್​ನವರು ಪದೇ ಪದೆ ಹಣ ನೀಡುವಂತೆ ಕಾಟ ನೀಡುತ್ತಾರೆ.

ಫೇಸ್ಬುಕ್​ನಲ್ಲಿ ಅಪರಿಚಿತರ ಫ್ರೆಂಡ್ ರಿಕ್ವೆಸ್ಟ್ ಎಕ್ಸೆಪ್ಟ್​ ಮಾಡಿಕೊಳ್ಳದಂತೆ ಮಹಾನಗರ ಡಿಸಿಪಿ ಡಾ. ವಿಕ್ರಂ ಆಮಟೆ ಮನವಿ ಮಾಡಿದ್ದಾರೆ. ರಿಕ್ವೆಸ್ಟ್ ಸ್ವೀಕರಿಸಿದ್ರೂ ಮೆಸೇಂಜರ್​ನಲ್ಲಿ ಚಾಟ್ ಮಾಡಬಾರದು. ಆಗ ಮಾತ್ರ ಆನ್​ಲೈನ್​ ಹನಿಟ್ರ್ಯಾಪ್ ಗ್ಯಾಂಗ್​ನಿಂದ ಬಚಾವ್ ಆಗಲು ಸಾಧ್ಯ. ಇಲ್ಲವಾದರೆ ಹಣ ಕಳೆದುಕೊಳ್ಳಬೇಕಾಗುತ್ತದೆ. ಈಗಾಗಲೇ ಯಾರಿಗಾದರೂ ಈ ರೀತಿಯ ವಂಚನೆ ಆಗ್ತಿದ್ದರೆ ದಯವಿಟ್ಟು ಪೊಲೀಸರಿಗೆ ದೂರು ನೀಡಬೇಕು. ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ತಿಳಿಸಿದ್ದಾರೆ.

DAKSHINA KANNADA

ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending