LATEST NEWS
ಬ್ಯಾಂಕ್ ಮ್ಯಾನೇಜರ್ಗೆ ಹನಿಟ್ರ್ಯಾಪ್ ನಡೆಸಿ ಪೊಲೀಸರ ಅತಿಥಿಯಾದ ಆಂಟಿ
ಜೈಪುರ: ಖಾಸಗಿ ರಂಗದ ಪ್ರಖ್ಯಾತ ಬ್ಯಾಂಕ್ನ ಮ್ಯಾನೇಜರ್ ಒಬ್ಬನನ್ನು ಹೋಟೆಲಿಗೆ ಕರೆಸಿಕೊಂಡ ಖತರ್ನಾಕ್ ಆಂಟಿಯೊಬ್ಬಳು ಹನಿಟ್ರ್ಯಾಪ್ ನಡೆಸಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ಘಟನೆ ರಾಜಸ್ತಾನದಲ್ಲಿ ನಡೆದಿದೆ. ಸದ್ಯ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಜೈಪುರದ ಭರತಪುರದ 44 ವರ್ಷದ ಸೀಮಾ ಶರ್ಮಾ ಮೂಲತಃ ದೆಹಲಿಯ ಉತ್ತಮನಗರದ ನಿವಾಸಿ. ಈಕೆ ಖಾಸಗಿ ರಂಗದ ಬ್ಯಾಂಕ್ನ ಮ್ಯಾನೇಜರ್ ಅನ್ನು ಆತನ ಗೆಳೆಯನ ಮೂಲಕವೇ ಪರಿಚಯ ಮಾಡಿಕೊಂಡು ಪ್ರೊಜೆಕ್ಟ್ ಗಾಗಿ ಸಾಲ ಪಡೆದುಕೊಳ್ಳುವ ಕುರಿತಾಗಿ ಮಾತನಾಡಲು ಹೋಟೇಲ್ಗೆ ಮ್ಯಾನೇಜರ್ ನನ್ನು ಕರೆಸಿಕೊಂಡಿದ್ದಾಳೆ.
ಹೊಟೇಲ್ನ ಕೋಣೆಗೆ ಬ್ಯಾಂಕ್ ಮ್ಯಾನೇಜರ್ ಬರುವ ಮೊದಲೇ ಕ್ಯಾಮೆರಾ ಅಳವಡಿಸಿ, ಮ್ಯಾನೇಜರ್ ಒಳಗೆ ಬರುತ್ತಿದ್ದಂತೆ ಆತನೊಂದಿಗೆ ಅಶ್ಲೀಲವಾಗಿ ನಡೆದುಕೊಂಡು ಎರಡು ವಿಡಿಯೋ ಮಾಡಿದ್ದಾಳೆ.
ನಂತರ ಮ್ಯಾನೇಜರ್ ಹೋಟೆಲ್ ನಿಂದ ಹೊರ ಹೋಗುತ್ತಿದ್ದಂತೆ ಕರೆ ಮಾಡಿದ ಆಕೆ, ಇಬ್ಬರ ಅಶ್ಲೀಲ ವಿಡಿಯೋ ಸೆರೆ ಹಿಡಿದಿದ್ದೇನೆ. 20 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇರಿಸಿದ್ದಳು.ಇಲ್ಲದಿದ್ದರೆ ವಿಡಿಯೋ ವೈರಲ್ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾಳೆ.
ಇದರಿಂದ ಗಾಬರಿಗೊಂಡ ಬ್ಯಾಂಕ್ ಮ್ಯಾನೇಜರ್ ವಿಧಾಯಕಪುರಿಗೆ ಠಾಣೆಗೆ ತೆರಳಿ ಹನಿಟ್ರ್ಯಾಪ್ ದೂರು ನೀಡಿದ್ದರು.
ದೂರು ದಾಖಲಾಗುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿನಿಮೀಯ ರೀತಿಯಲ್ಲಿ ಆಂಟಿಯನ್ನು ಬಂಧಿಸಿದ್ದಾರೆ.
ಪೊಲೀಸರ ಸೂಚನೆಯಂತೆ ಸೀಮಾಗೆ ಕರೆ ಮಾಡಿದ ಬ್ಯಾಂಕ್ ಮ್ಯಾನೇಜರ್ ಹಣ ಅರೇಂಜ್ ಮಾಡಿಕೊಂಡಿದ್ದು ಎಲ್ಲಿ ತಲುಪಿಸಬೇಕು ಎಂದು ಕೇಳಿದಾಗ ಭರತಪುರಕ್ಕೆ ಬರುವಂತೆ ಹೇಳಿದ್ದಾಳೆ. ಬ್ಯಾಂಕ್ ಮ್ಯಾನೇಜರ್ ಜೊತೆ ಪೊಲೀಸರು ಸಹ ಮಾರುವೇಷದಲ್ಲಿ ಹೋಗಿದ್ದರು. ಆದರೆ ಭರತಪುರ ಹೋಗುತ್ತಿದ್ದಂತೆ ಪ್ಲಾನ್ ಬದಲಿಸಿದ ಸೀಮಾ ಅಲ್ವಾರಾಗೆ ಬರುವಂತೆ ಹೇಳಿದ್ದಾಳೆ. ಆದರೆ ಅಲ್ಲಿಯೂ ಆಕೆ ಬಂದಿರಲಿಲ್ಲ.
ಕೊನೆಗೆ ಕರೆ ಮಾಡಿದ ಸೀಮಾ, ತಾನೇ ಜೈಪುರಕ್ಕೆ ಬರುತ್ತಿರೋದಾಗಿ ತಿಳಿಸುತ್ತಾಳೆ. ಪೊಲೀಸರ ಹೆಣೆದ ಬಲೆಯಲ್ಲಿ ತಾನೇ ಬಂದು ಬೀಳುತ್ತಾಳೆ.
ಜೈಪುರಿಗೆ ಬಂದ ಸೀಮಾ ಬ್ಯಾಂಕ್ ಮ್ಯಾನೇಜರ್ ನನ್ನು ರಾಜಾಪಾರ್ಕ್ಗೆ ಕರೆಸಿಕೊಂಡಿದ್ದಾಳೆ. ಭೇಟಿಯಾಗುತ್ತಿದ್ದಂತೆ ಸೀಮಾ ಹಣ ಕೇಳಿದ್ದಾಳೆ.
ಮ್ಯಾನೇಜರ್ ಒಂದು ಲಕ್ಷ ರೂ. ನೀಡಿದ್ದಕ್ಕೆ ಕೋಪಗೊಂಡು ಶೀಘ್ರದಲ್ಲಿಯೇ ಉಳಿದ ಹಣ ನೀಡುವಂತೆ ತಾಕೀತು ಮಾಡಿ ಹೋಗುತ್ತಿರುವಾಗ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆಯೂ ಮಹಿಳೆ ಇದೇ ರೀತಿ ಪುರುಷರನ್ನ ಕರೆಸಿಕೊಂಡು ಹನಿಟ್ರ್ಯಾಪ್ ವ್ಯೂಹದಲ್ಲಿ ಸಿಲುಕಿಸಿ ಹಣ ಕಿತ್ಕೊಂಡಿದ್ದಳು.
ನಂತರ ಜೈಲುವಾಸ ಅನುಭವಿಸಿ ದೆಹಲಿಯಿಂದ ಜೈಪುರಗೆ ಬಂದೂ ಅದೇ ರೀತಿ ಹಣ ದೋಚಲು ಮುಂದಾಗಿದ್ದಳು.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
bengaluru
ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!
ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.
ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA7 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA6 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!