Connect with us

    bangalore

    ಹನಿಟ್ರ್ಯಾಪ್ : ಸುಂದರಿ ಮನೆಗೆ ಕರೆದಳೆಂದು ಹೋಗಿ 40 ಲಕ್ಷ ಕಳೆದುಕೊಂಡ ಉದ್ಯಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದ ಮೂಲಕ ಮೋಸ ಹೋಗುವವರ ಸಂಖ್ಯೆ ಹೆಚ್ಚುತ್ತಿದೆ. ಫೇಕ್ ಅಕೌಂಟ್ ಗಳ ಮೋಸದ ಜಾಲಕ್ಕೆ ಬಿದ್ದು ಲಕ್ಷಗಟ್ಟಲೆ ಕಳೆದುಕೊಳ್ಳುವವರಿಗೇನೂ ಕೊರತೆಯಿಲ್ಲ. ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಇಲ್ಲಿ ಉದ್ಯಮಿಯೊಬ್ಬರು ಹೆಣ್ಣಿನ ಹೆಸರಿನಲ್ಲಿ ನಡೆದ ಮಹಾಜಾಲಕ್ಕೆ ಬಲಿಯಾಗಿದ್ದಾರೆ.

    ಉದ್ಯಮಿ ಗಣೇಶ್ ಎಂಬುವವರಿಗೆ ಕುಟುಂಬ ಎಂಬ ಸೋಷಿಯಲ್ ಮೀಡಿಯಾ ಆ್ಯಪ್ನಲ್ಲಿ ಕಾವ್ಯ ಎಂಬಾಕೆ ಪರಿಚಯವಾಗಿದ್ದು, ಗಣೇಶ್ ಬರೋಬ್ಬರಿ 40 ಲಕ್ಷ ಕಳೆದುಕೊಂಡ ಘಟನೆ ಕುರಿತು ಅಶೋಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ಕಾವ್ಯ ನಾಲ್ಕು ವರ್ಷಗಳ ಹಿಂದೆ ಸಿನಿಮಾ ಮಾಡುವ ವಿಚಾರವಾಗಿ ಪರಿಚಯವಾಗಿದ್ದಾಳಂತೆ. ನಿರ್ದೇಶಕ ಎಸ್.ಆರ್.ಪಾಟೀಲ್ ಗೆ 4.25 ಲಕ್ಷ ಹಣ ಅಗತ್ಯತೆ ಇದೆ ಎಂದು ಹೇಳಿ ಗಣೇಶ್ನಿಂದ ವಸೂಲಿ ಮಾಡಿದ್ದಾಳೆ. ಕೊಟ್ಟ ಹಣ ವಾಪಸ್ಸು ಕೇಳಿದಾಗ ಅವನನ್ನು ರೂಮಿಗೆ ಬರ ಹೇಳಿ, ಒತ್ತಾಯದಿಂದ ಲೈಂಗಿಕ ಕ್ರಿಯೆ ನಡೆಸಿ ಹನಿಟ್ರ್ಯಾಪ್ ಮಾಡಿದ್ದಾಳೆ ಎಂದು ತಿಳಿದುಬಂದಿದೆ.
    ಲಕ್ಷಗಟ್ಟಲೆ ಕಬಳಿಸಿದ ಯುವತಿ :
    ಡೈರೆಕ್ಟರ್ಗೆ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ರೂ, ಹಣ ಪಡೆದಿದ್ದಾಳಂತೆ. ಅದನ್ನು ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದರ ವಿಡಿಯೋ ತೆಗೆದಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಉದ್ಯಮಿಯಿಂದ ಬ್ರಾಸ್ಲೈಟ್, ಚೈನ್ ಅಂತೆಲ್ಲಾ ಸುಮಾರು 40 ಲಕ್ಷ ರೂಪಾಯಿ ಹಣ ಪೀಕಿದ್ದಾಳಂತೆ. ಅಷ್ಟಕ್ಕೆ ಸುಮ್ಮನಾಗದೇ ಕಾರು ಕೊಡಿಸು ಎಂದು ದುಂಬಾಲು ಬಿದ್ದಿದ್ದಾಳಂತೆ. ಇದಕ್ಕೆ ಒಪ್ಪದಿದ್ದಾಗ ಆರೋಪಿ ಮಹಿಳೆ ತನ್ನ ಸ್ನೇಹಿತರಾದ ರವಿ ಮತ್ತು ದಿಲೀಪ್ ಎಂಬವರಿಂದ ಕರೆ ಮಾಡಿಸಿ ಹಣಕ್ಕೆ ಧಮ್ಕಿ ಹಾಕಿಸಿದ್ದಾಳಂತೆ. ಹಣ ಕೊಡದಿದ್ದರೆ ವೀಡಿಯೋಗಳನ್ನ ಟಿವಿಗೆ ಕೊಡೋದಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾಳಂತೆ.
    ಉದ್ಯಮಿ ಗಣೇಶ್ ನೀಡಿದ ದೂರಿನ ಆಧಾರದ ಮೇಲೆ ಕಾವ್ಯ, ದಿಲೀಪ್, ರವಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬೆಂಬತ್ತಿದ್ದಾರೆ.

     

    ಇದನ್ನೂ ಓದಿ: WATCH : ‘ಶೆಡ್ಡಿಗ್ ಬಾ’ ಎಂದ ಹೈಕೋರ್ಟ್ ಜಡ್ಜ್; ವೀಡಿಯೋ ವೈರಲ್

    bangalore

    ಬಸ್ ಚಾಲನೆ ವೇಳೆಯೇ ಚಾಲಕನಿಗೆ ಹೃದಯಾಘಾತ,; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಜೀವ !

    Published

    on

    ಮಂಗಳೂರು/ಬೆಂಗಳೂರು: ಸರ್ಕಾರಿ ಬಸ್ ಚಾಲಕನಿಗೆ ಬಸ್ ಚಾಲನೆ ವೇಳೆಯೇ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಆ ಸಮಯದಲ್ಲಿ ಪೊಲೀಸರು ತೋರಿದ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 45 ಜನರ ಜೀವ ಉಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


    BMTC ಬಸ್ ಡ್ರೈವರ್ ವೀರೇಶ್ ಅವರಿಗೆ ಗುರುವಾರ(ಸೆ.19) ಮಧ್ಯಾಹ್ನ ಶಾಂತಿನಗರದ ಡಬಲ್ ರೋಡ್ ಬಳಿ ಬಸ್ ರನ್ನಿಂಗ್ನಲ್ಲಿದ್ದ ವೇಳೆ ಏಕಾಏಕಿ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ವೇಗವಾಗಿ ಓಡುತ್ತಿದ್ದ ಬಸ್ ನಿಧಾನವಾಗ ತೊಡಗಿದ ವೇಳೆ ಅನುಮಾನಗೊಂಡ ಹಲಸೂರು ಟ್ರಾಫಿಕ್ ಪೊಲೀಸ್ ಎಎಸ್ಐ ಆರ್ . ರಘುಕುಮಾರ್ ಬಸ್ ಬಳಿ ಓಡಿ ಬಂದು ನೋಡಿದಾಗ ಎದೆಗೆ ಕೈ ಹಿಡಿದು ಬಸ್ ಚಾಲಕ ಒಂದು ಕಡೆಗೆ ವಾಲಿದ್ದನು.
    ಹಾರ್ಟ್ ಅಟ್ಯಾಕ್ ಆಗಿರುವುದನ್ನ ಗಮನಕ್ಕೆ ಬಂದಿದ್ದು, ಟ್ರಾಫಿಕ್ ಎಎಸ್ಐ ತಕ್ಷಣ ಹ್ಯಾಂಡ್ ಬ್ರೇಕ್ ಹಾಕಿ ಚಾಲಕನನ್ನು ಕೆಳಗೆ ಇಳಿಸಿ ಆಂಬುಲೆನ್ಸ್ಗೂ ಕಾಯದೆ, ಅಶೋಕ ನಗರ ಟ್ರಾಫಿಕ್ ಸಿಬ್ಬಂದಿ ಪ್ರಸನ್ನಕುಮಾರ್ ಸಹಾಯದಿಂದ ಬಸ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರು.
    ಅದೃಷ್ಟವಶಾತ್, ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದರಿಂದ ಚಾಲಕ ವೀರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಪೊಲೀಸರ ಸಮಯಪ್ರಜ್ಞೆ 45 ಜನರ ಪ್ರಾಣವನ್ನೂ ಉಳಿಸಿದೆ.

    Continue Reading

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    LATEST NEWS

    Trending