Connect with us

DAKSHINA KANNADA

ಬ್ಯಾಂಕ್‌ ಆಫ್‌ ಬರೊಡಾ ವತಿಯಿಂದ ಡಾ.ಅತ್ತೂರು ಸದಾನಂದ ಶೆಟ್ಟಿ ಅವರಿಗೆ ಸನ್ಮಾನ

Published

on

ಮಂಗಳೂರು:  ಡಾ. ಅತ್ತೂರು ಸದಾನಂದ ಶೆಟ್ಟಿ ಅವರು ದೀಘ೯ಕಾಲದಿಂದ ಕ್ರೀಡಾ, ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕ ಸಾಧನೆ ಮತ್ತು ಇತ್ತೀಚೆಗೆ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ವತಿಯಿಂದ ಡಾಕ್ಟರೇಟ್‌ ಪದವಿ ಪ್ರಶಸ್ತಿ ಪಡೆದಿದ್ದರು.

ಈ ಹಿನ್ನೆಲೆಯಲ್ಲಿ ಅ.3ರ ಮಂಗಳವಾರದಂದು ಬ್ಯಾಂಕ್‌ ಆಫ್‌ ಬರೊಡಾ ಮಂಗಳೂರು ವಲಯ ವತಿಯಿಂದ ಕಛೇರಿಯ ಸಭಾಂಗಣದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಬ್ಯಾಂಕ್‌ ಆಫ್‌ ಬರೊಡಾದ ಮಹಾಪ್ರಬಂಧಕಿ ಮತ್ತು ವಲಯ ಮುಖ್ಯಸ್ಥೆ ಶ್ರೀಮತ ಗಾಯತ್ರಿ ಆರ್.‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ ಅತ್ತೂರು ಸದಾನಂದ ಶೆಟ್ಟಿಯವರು ಬ್ಯಾಂಕ್‌ ಆಫ್‌ ಬರೊಡಾದ ಮೇಲ್ಪಂಕ್ತಿಯ ಗ್ರಾಹಕರಲ್ಲಿ ಒಬ್ಬರು ಎಂದಿದ್ದಾರೆ.

ಈ ಸಂದಭ೯ದಲ್ಲಿ ಅಂಬೇಡ್ಕರ್‌ ವೃತ್ತದ ಬಳಿ, ಬ್ಯಾಂಕ್‌ ಆಫ್‌ ಬರೊಡಾದ ವಲಯ ಕಛೇರಿಯ ಮುಂಭಾಗ ಸ್ಮಾಟ್‌೯ ಸಿಟಿ ಮಂಗಳೂರು ಇದರ ವತಿಯಿಂದ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಶಾಶ್ವತ ನಾಮಫಲಕ ಅನಾವರಣಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್‌, ಮಂಗಳೂರು ನಗರ ಕಮೀಷನರ್‌ ಆನಂದ್‌ ಸಿ.ಎಲ್.‌, ಮೇಯರ್‌ ಸುಧೀರ್ ಶೆಟ್ಟಿ‌ ಕಣ್ಣೂರು, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ವಿರೋಧ ಪಕ್ಷದ ನಾಯಕ ಪ್ರವೀಣ್‌ಚಂದ್ರ ಆಳ್ವ, ಸ್ಥಳೀಯ ಕಾಪೋ೯ರೇಟರ್‌ ವಿನಯರಾಜ್‌, ಮತ್ತು ಸ್ಮಾಟ್‌೯ ಸಿಟಿಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಡಾ. ಆನಂದ್‌, ಜನರಲ್‌ ಮ್ಯಾನೇಜರ್ ಕೆ.ಎಸ್.‌ ಅರುಣ್‌ ಪ್ರಭಾ, ಅಸಿಸ್ಟೆಂಟ್‌ ಇಂಜೀನಿಯರ್‌ ಗುರುಕಿರಣ್‌, ಎಕ್ಸಿಕ್ಯೂಟಿವ್‌ ಇಂಜೀನಿಯರ್‌ ಚಂದ್ರಕಾಂತ್‌, ನರೇಶ್‌ ಶೆಣೈ, ಜ್ಞಾನೇಶ್‌, ಚಂದ್ರಶೇಖರ್, ಹೃತಿಕಾ ಕನ್ಸ್‌ಟ್ರಕ್ಷನ್‌ನ ಮಾಲಕರಾದ ಉದಯ ಶೆಟ್ಟಿ ಮತ್ತು ಮಾಜಿ ಮೇಯರ್‌ಗಳು, ನಗರಪಾಲಿಕೆಯ ವಿವಿಧ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿರುವರು.

 

Click to comment

Leave a Reply

Your email address will not be published. Required fields are marked *

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending