Connect with us

    FILM

    ಗೌರವ ಡಾಕ್ಟರೇಟ್ ತಿರಸ್ಕರಿಸಿದ ಕಿಚ್ಚ ಸುದೀಪ್; ಯಾಕೆ ಗೊತ್ತಾ!?

    Published

    on

    ಬೆಂಗಳೂರು : ಕನ್ನಡ ಚಿತ್ರರಂಗದ ಮೇರು ಪ್ರತಿಭೆ ಕಿಚ್ಚ ಸುದೀಪ್. ಹಲವು ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಕಲಾವಿದ. ತನ್ನ ನಟನೆಯಿಂದ, ವಿಶಿಷ್ಟ ಮ್ಯಾನರಿಸಂನಿಂದ ಕಂಗೊಳಿಸುತ್ತಿರೋ ಅಭಿಮಾನಿಗಳ ನೆಚ್ಚಿನ ನಟ. ಜೊತೆಗೆ ಸಾಮಾಜಿಕ ಕಳಕಳಿಯನ್ನೂ ಮೆರೆದಿದ್ದಾರೆ. ಅವರ ಕಾರ್ಯಕ್ಕೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲು ಮುಂದಾಗಿತ್ತು. ಆದರೆ, ಕಿಚ್ಚ ನಿರಾಕರಿಸಿದ್ದಾರೆ.


    ಯಾಕೆ ಈ ನಿರ್ಧಾರ ?

    ಅಭಿನಯ ಚಕ್ರವರ್ತಿ ಸುದೀಪ್ 40 ಕ್ಕೂ ಅಧಿಕ ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ಅಲ್ಲದೇ, ನಿರ್ದೇಶಕನಾಗಿ, ನಿರ್ಮಾಪಕನಾಗಿಯೂ ಸಾಧನೆ ಮೆರೆಯುತ್ತಿದ್ದಾರೆ. ಕಿರುತೆರೆಯಲ್ಲಿ ಧಾರಾವಾಹಿಗಳನ್ನು ನಿರ್ಮಿಸಿದ್ದು ಮಾತ್ರವಲ್ಲದೇ, ರಿಯಾಲಿಟಿ ಶೋವನ್ನೂ ನಡೆಸಿಕೊಟ್ಟು ಜನಮನಸೂರೆಗೊಂಡಿದ್ದಾರೆ.
    ಹೀಗಿರುವ ಅವರ ಸಾಧನೆಗೆ ಮೆಚ್ಚಿ ತುಮಕೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಗೌರವ ಡಾಕ್ಟರೇಟ್ ನೀಡುವ ಬಗ್ಗೆ ನಿರ್ಧರಿಸಿತ್ತು. ಈ ಬಗ್ಗೆ ಸುದೀಪ್ ಗಮನಕ್ಕೆ ತರಲಾಯಿತು. ಆದರೆ, ಕಿಚ್ಚ ವಿವಿ ನಿರ್ಧಾರವನ್ನು ನಯವಾಗಿ ತಿರಸ್ಕರಿಸಿದ್ದಾರೆ. ಹಾಗಂತ ತನ್ನನ್ನು ಆಯ್ಕೆ ಮಾಡಿರುವುದಕ್ಕೆ ಧನ್ಯವಾದ ತಿಳಿಸಲು ಮರೆತಿಲ್ಲ. ಆದರೆ, ಡಾಕ್ಟರೇಟ್ ಬೇಡ ಎಂದಿದ್ದಾರೆ. ‘ಸಮಾಜದಲ್ಲಿ ಸೇವೆ ಸಲ್ಲಿಸಿರುವ ನನಗಿಂತ ಹಿರಿಯರು ಹಲವರು ಇದ್ದಾರೆ. ಅವರಿಗೆ ಈ ಗೌರವ ನೀಡಿ’ ಎಂದು ಮನವಿ ಮಾಡಿದ್ದಾರೆ.

    ಡಾಕ್ಟರೇಟ್ ​ಪ್ರದಾನ ಕಾರ್ಯಕ್ರಮ :

    ನಾಳೆ (ಆಗಸ್ಟ್ 7) ತುಮಕೂರು ವಿಶ್ವ ವಿದ್ಯಾಲಯದಲ್ಲಿ ಗೌರವ ಡಾಕ್ಟರೇಟ್ ಪದವಿ ಸಮಾರಂಭ ನಡೆಯುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮದಲ್ಲಿ ಡಾಕ್ಟರೇಟ್ ​ಪ್ರದಾನ ಮಾಡಲಿದ್ದಾರೆ. ಕೈಗಾರಿಕೋದ್ಯಮಿ ಎಚ್. ಜಿ‌.ಚಂದ್ರಶೇಖರ್, ಜಲಕ್ರೀಡಾ ಸಾಹಸಿಗ ಹಾಗೂ‌ ಸಾಮಾಜಿಕ ಕಾರ್ಯಕರ್ತ ಸಿ. ಎಸ್ ನಾಗಾನಂದನ ಸ್ವಾಮಿ ಮತ್ತು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
    36 ಪಿಹೆಚ್‌ಡಿ, 1758 ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುತ್ತಿದೆ. ನಟ ಸುದೀಪ್ ಮನರಂಜನೆ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ಡಾಕ್ಟರೇಟ್ ಗೌರವ ನೀಡಲು ವಿವಿ ನಿರ್ಧರಿಸಿತ್ತು. ಆದರೆ, ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ.

    ಇದನ್ನೂ ಓದಿ : ‘ಮಂಜುಮ್ಮೆಲ್ ಬಾಯ್ಸ್‌’ ಸಿನೆಮಾಗೆ ಕೊನೆಗೂ ಬಿಗ್ ರಿಲೀಫ್..!!

    ಕಿಚ್ಚ ಸಿನಿಮಾದಲ್ಲಿ ಬ್ಯುಸಿ :
    ಕಿಚ್ಚ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ‘ಮ್ಯಾಕ್ಸ್’ ಚಿತ್ರ ತೆರೆಗೆ ಬರಲು ಸಜ್ಜಾಗುತ್ತಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಟೀಸರ್ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯನ್ ನಿರ್ದೇಶನ ಚಿತ್ರಕ್ಕಿದೆ. ತಮಿಳು ನಿರ್ದೇಶಕ ಚೇರನ್ ಸಿನಿಮಾವನ್ನು ಸುದೀಪ್ ಒಪ್ಪಿಕೊಂಡಿದ್ದಾರೆ. ಮತ್ತೊಂದೆಡೆ ಅನೂಪ್ ಭಂಡಾರಿ ‘ಬಿಲ್ಲ ರಂಗ ಭಾಷ’ ಸಿನಿಮಾ ಕಿಚ್ಚ ಕೈಯಲ್ಲಿದೆ.

    FILM

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    Published

    on

    ಬೆಂಗಳೂರು/ಮಂಗಳೂರು: ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನವಾಗಿದೆ. 21 ವರ್ಷ ಪ್ರಾಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಕೊರಿಯೋಗ್ರಾಫರ್ ಬಂಧನವಾಗಿದೆ.

    ಇತ್ತೀಚಿಗೆ ಖ್ಯಾತ ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಸ್ಟರ್ ವಿರುದ್ಧ 21 ವರ್ಷದ ಸಹಾಯಕ ಡ್ಯಾನ್ಸರ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಿಂದಿ, ತೆಲುಗು, ಕನ್ನಡ, ತಮಿಳು ಸಿನೆಮಾಗಳಿಗೆ ಮಾತ್ರವಲ್ಲದೆ ಸ್ಟಾರ್ ನಟರಿಗೆ ಕೊರಿಯೋಗ್ರಫಿ ಮಾಡಿರುವ ಕೋರಿಯೋಗ್ರಾಫರ್ ಇದೀಗ ಬಂಧನಕ್ಕೊಳಗಾಗಿದ್ದಾರೆ.

    ಏನಿದು ಘಟನೆ?
    ಯುವತಿಯ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಜೀರೋ ಎಫ್‌ಐಆರ್ ದಾಖಲಾಗಿತ್ತು. ಆ ಬಳಿಕ ನೃತ್ಯ ನಿರ್ದೇಶಕ ತಲೆ ಮರೆಸಿಕೊಂಡಿದ್ದರು. ಮೂರು ದಿನಗಳಿಂದ ಹುಡುಕಾಡುತ್ತಿದ್ದ ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಾಗಿ ಶೋಧ ನಡೆಸಿದ್ದರು. ಇಂದು (ಸೆಪ್ಟೆಂಬರ್ 19) ಬೆಳಗ್ಗೆ ಗೋವಾದಲ್ಲಿ ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದು ಕಡೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ. ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರ ಮೇಲೆ ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು. ಅಲ್ಲದೆ ಔಟ್ ಡೋರ್ ಶೂಟಿಂಗ್ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಮಾಡಿದ್ದಾರೆ.

    ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ

    ಈ ದೂರಿನ ಬೆನ್ನಲ್ಲೇ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಸೆಕ್ಷನ್ 376, 506, 323 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನರಸಿಂಗಿ ಠಾಣೆಯ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ಝೀರೊ ಎಫ್‌ಐಆರ್ ಕೂಡ ದಾಖಲಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿಯನ್ನು ವಿಚಾರಣೆ ಮಾಡಿದ್ದರು. ಆಕೆಯ ಮನೆಯಲ್ಲಿಯೇ ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.

    Continue Reading

    FILM

    ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ

    Published

    on

    ಮಂಗಳೂರು/ಮುಂಬೈ : ನಟ ಸಲ್ಮಾನ್‌ ಖಾನ್‌ ತಂದೆ, ಹಿರಿಯ ಸಾಹಿತಿ ಸಲೀಂ ಖಾನ್ ಅವರಿಗೆ ವಾಕಿಂಗ್ ವೇಳೆ ಮಹಿಳೆಯೊಬ್ಬರು ಬೆದರಿ*ಕೆ ಹಾಕಿದ್ದಾರೆ ಎನ್ನಲಾಗಿದೆ.  ಮುಂಜಾನೆಯ ವಾಕಿಂಗ್ ಸಮಯದಲ್ಲಿ ಮಹಿಳೆಯೊಬ್ಬಳು ಡಾನ್‌ ಲಾರೆನ್ಸ್‌ ಬಿಷ್ಣೋಯ್‌ ಹೆಸರಿನಲ್ಲಿ ಬೆದರಿ*ಕೆ ಹಾಕಿದ್ದಾಗಿ ವರದಿಯಾಗಿದೆ. ಈ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವಾಕಿಂಗ್ ವೇಳೆ ಹತ್ತಿರಕ್ಕೆ ಬಂದಿದ್ದ ಮಹಿಳೆ ಸಲೀಂ ಖಾನ್‌ ಅವರಿಗೆ, ಸರಿಯಾಗಿ ನಡೆದುಕೊಳ್ಳಿ, ಇಲ್ಲದೆ ಇದ್ದರೆ ಸಲ್ಮಾನ್‌ ಖಾನ್‌ ಅವರಿಗೆ ಕೊ*ಲೆ ಬೆದರಿ*ಕೆ ಹಾಕಿರುವ ಡಾನ್‌ ಲಾರೆನ್ಸ್‌ಗೆ ಕರೆ ಮಾಡುವುದಾಗಿ ಹೇಳಿದ್ದಾಗಿ ದೂರು ನೀಡಲಾಗಿದೆ. ಮಹಿಳೆ ಯಾರು? ಎಲ್ಲಿಂದ ಬಂದವಳು ? ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ಸಲ್ಮಾನ್‌ ಖಾನ್‌ ನಗರದಿಂದ ಹೊರಟ ಕೆಲವೇ ಗಂಟೆಯಲ್ಲಿ ಈ ಘಟನೆ ನಡೆದಿದೆ

    ಎಪ್ರಿಲ್‌ ತಿಂಗಳಲ್ಲಿ ಸಲ್ಮಾನ್ ಖಾನ್‌ ಅವರ ಬಾಂದ್ರದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಹೊರಗೆ ಗುಂಡಿನ ದಾ*ಳಿ ನಡೆಸಲಾಗಿತ್ತು. ಇದು ಲಾರೆನ್ಸ್ ಬಿಷ್ಣೋಯ್‌ ಸಹೋದರ ಅನ್ಮೋಲ್ ಬಿಷ್ಣೋಯ್‌ ಮಾಡಿರುವುದಾಗಿ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದ. ಸಲ್ಮಾನ್ ಖಾನ್‌ ವಿಚಾರಣೆಯ ವೇಳೆಯಲ್ಲಿ ತನ್ನ ಕುಟುಂಬಕ್ಕೆ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನಿಂದ ಬೆದರಿ*ಕೆ ಇದೆ ಎಂದು ಹೇಳಿಕೆ ನೀಡಿದ್ದರು.

    ಇದನ್ನೂ ಓದಿ : ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾ*ರ ಕೇಸ್ ದಾಖಲು

    ಇದೀಗ ಸಲ್ಮಾನ್ ಖಾನ್‌ ತಂದೆ ಸಲೀಂ ಖಾನ್‌ ಅವರಿಗೆ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಸಲ್ಮಾನ್ ಖಾನ್ ಕುಟುಂಬಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಹಿಳೆ ಯಾರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

    Continue Reading

    FILM

    ಮೊದಲ ಬಾರಿಗೆ ದರ್ಶನ್ ಭೇಟಿಗೆ ಬಂದ ತಾಯಿ..! ದರ್ಶನ್‌ಗಾಗಿ ತಾಯಿ ತಂದಿದ್ದೇನು ಗೊತ್ತಾ?

    Published

    on

    ಮೈಸೂರು/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಗೆ ಬಿಡುಗಡೆ ಭಾಗ್ಯ ಇನ್ನೂ ದೊರೆತಿಲ್ಲ. ಇನ್ನು ಜೈಲಲ್ಲಿರುವ ದರ್ಶನ್ ಭೇಟಿಗೆ ಚಿತ್ರರಂಗದ ನಟ ನಟಿಯರು ಭೇಟಿ ನೀಡುತ್ತಿದ್ದಾರೆ. ಕೆಲ ದಿನಗಳ ಹಿಂದ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ತೂಗುದೀಪ ಅವರಲ್ಲಿ ತಾಯಿಯಯನ್ನು ಕಾಣುವ ಹಂಬಲ ವ್ಯಕ್ತಪಡಿಸಿದ್ದರು. ಈ ಹಿಂದೆಯೇ ತಾಯಿ ಮೀನಾ ಕೂಡಾ ದರ್ಶನ್ ಭೇಟಿ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ.

    ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ಸೆ.30ರವರೆಗೆ ಜೈಲೇ ಗತಿ

    ಇದೀಗ ದರ್ಶನ್ ತಾಯಿ ಮೀನಾ ತೂಗುದೀಪ ಹಾಗೂ ಅಕ್ಕ, ಭಾವ ಮತ್ತು ಅವರ ಮಕ್ಕಳು ಕೇಂದ್ರ ಕಾರಾಗ್ರಹಕ್ಕೆ ಭೇಟಿ ನೀಡಿದ್ದಾರೆ.  ಪರಪ್ಪನ ಅಗ್ರಹಾರದಲ್ಲಿದ್ದಾಗ ದರ್ಶನ್​​ರನ್ನು ಕಾಣಲು ಮಗ ದಿನಕರ್​ ತೂಗುದೀಪ ಜೊತೆ ಬಂದಿದ್ದರು. ಬಳ್ಳಾರಿ ಜೈಲಿಗೆ ಇದೇ ಮೊದಲ ಬಾರಿಗೆ ತಾಯಿ ಮೀನಾ ತೂಗುದೀಪ ಬಂದಿದ್ದಾರೆ. ಮಗನನ್ನು ಕಾಣುವ ತವಕದಲ್ಲಿ ತನ್ನ ಮಗಳ ಜೊತೆಗೆ ಕೇಂದ್ರ ಕಾರಾಗೃಹಕ್ಕೆ ಬಂದಿದ್ದಾರೆ.

    ದರ್ಶನ್​ ನೋಡಲು ಬಂದ ವೇಳೆ ತಾಯಿ ಮೀನು ತೂಗುದೀಪ ಮತ್ತು ಕುಟುಂಬಸ್ಥರು ಕೈಯಲ್ಲಿ ಎರಡು ಬ್ಯಾಗ್ ತಂದಿದ್ದಾರೆ. ಸ್ವೀಟ್ಸ್, ಊಟದ ಬಾಕ್ಸ್, ಹಣ್ಣು ತಂದಿದ್ದಾರೆ. ಮಡದಿ ವಿಜಯಲಕ್ಷ್ಮೀ, ಸ್ನೇಹಿತರು ಈಗಾಗಲೇ ದರ್ಶನ್​​ರನ್ನು ಭೇಟಿ ಮಾಡಿದ್ದಾರೆ. ಆದರೆ ಬೆಂಗಳೂರಿನಿಂದ ಬಳ್ಳಾರಿಗೆ 300ಕಿಮೀ ಅಂತರವಿರುವ ಕಾರಣ ತಾಯಿ ಮೀನಾ ತೂಗುದೀಪ್​ ದರ್ಶನ್​​ರನ್ನು ಭೇಟಿ ಮಾಡಿರಲಿಲ್ಲ.

    Continue Reading

    LATEST NEWS

    Trending