Connect with us

    ಲಾಕ್ ಡೌನ್ ನ ವಿಷಮ ಸ್ಥಿತಿಯಲ್ಲಿ ಗ್ರಾಹಕರ ರಕ್ತ ಹೀರುತ್ತಿರುವ ಹಾಪ್ ಕಾಮ್ಸ್

    Published

    on

    ಲಾಕ್‌ ಡೌನ್‌ ನ ವಿಷಮ ಸ್ಥಿತಿಯಲ್ಲಿ ಗ್ರಾಹಕರ ರಕ್ತ ಹೀರುತ್ತಿರುವ ಹಾಪ್‌ ಕಾಮ್ಸ್‌

    ಮಂಗಳೂರು: ಕೊರೊನಾ ಮಾಹಾಮಾರಿಗೆ ಇಡೀ ವಿಶ್ವವೇ ಥರಗುಟ್ಟಿದೆ. ಕೈಗಾರಿಕೆ, ಉದ್ಯಮ, ವ್ಯವಹಾರಗಳು ಸ್ತಬ್ದವಾದ ನೆಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿಯೇ ನೆಲಕಚ್ಚಿದೆ.

    ಶ್ರೀಮಂತ, ಬಡವರೆನ್ನದೆ ಎಲ್ಲಾ ವರ್ಗವೂ ಸಂಕಷ್ಟಕ್ಕೆ ಸಿಲುಕಿ ಮೇಲೇಳಲಾಗದೇ ವಿಲವಿಲನೇ ಒದ್ದಾಡುತ್ತಿದೆ.

    ಹೆಚ್ಚಿನ ಜನಸಾಮಾನ್ಯರು ಹೊಟ್ಟೆ ಹೊರೆಯುವ ಚಿಂತೆಯಲ್ಲಿ ತಮ್ಮ ಬಳಿ ಅಳಿದುಳಿದ ಚಿಲ್ಲರೆ ಕಾಸಿನಲ್ಲಿ ಸಂಸಾರ ತೂಗಿಸೋ ಬಗ್ಗೆ ಆಲೋಚನೆ ಮಾಡ್ತಾರೆ.

    ಆದ್ರೆ ಈ ವಿಷಮ ಪರಿಸ್ಥಿತಿಯಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಸಿ ಹಾಗೂ ತರಕಾರಿ ವ್ಯಾಪಾರಿಗಳು ‘ಲಾಕ್ ಡೌನ್’ ಬಂಡವಾಳ ಮಾಡಿಕೊಂಡು ಹಗಲು ದರೋಡೆ ಮಾಡುತ್ತಿದ್ದಾರೆ.

    ಶಾಂತವಾಗಿದ್ದ ಇಡೀ ದೇಶಕ್ಕೆ ಕೊರೊನಾ ಎಂಬ ಮಹಾಮಾರಿ ಬಿರುಗಾಳಿ ಎಬ್ಬಿಸಿ.. ಇದೀಗ ಇಡೀ ದೇಶವೇ ಕೆಲಸವಿಲ್ಲದೆ, ವ್ಯವಹಾರವಿಲ್ಲದೆ ಕಂಗಾಲಾಗಿದೆ.

    ಕಾರ್ಮಿಕರು ಕೆಲಸವಿಲ್ಲದೆ ಕಂಗಾಲಾದ್ರೆ, ಉದ್ಯಮಿಗಳು ಹಾಗೂ ವ್ಯಾಪಾರಿಗಳು ವ್ಯವಹಾರವಿಲ್ಲದೆ ಚಿಂತಾಕ್ರಾಂತರಾಗಿ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ.

    ಒಂದು ಕಾಲದಲ್ಲಿ ಎಲ್ಲರ ಕೈಯಲ್ಲಿ ಝಣಝಣ ಅಂತ ಸ್ಟೆಪ್ ಹಾಕಿ ಕುಣಿದಾಡುತ್ತಿದ್ದ ಕುರುಡು ಕಾಂಚಾಣ ಇಂದು ಕಣ್ಣಂಚಿನಿಂದ ಮರೆಯಾಗಿ, ಪೈಸೆ ಪೈಸೆಗೂ ಲೆಕ್ಕ ಇಡುವಂತೆ ಮಾಡಿದೆ.

    ಆದ್ರೆ ಇದನ್ನೆಲ್ಲಾ ಕಂಡೂ ಕಾಣದಂತಿರುವ ಕೆಲವು ತರಕಾರಿ ಹಾಗೂ ದಿನಸಿ ವ್ಯಾಪಾರಿಗಳು ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡಿಯುತ್ತಿದ್ದಾರೆ.

    ಆದ್ರೆ ವಿಪರ್ಯಾಸ ಅಂದ್ರೆ ಈ ಸುಲಿಗೆದಾರರಿಗೆ ಮೂಗುದಾರ ಹಾಕೋಕೆ ಜಿಲ್ಲಾಡಳಿತ ವಿಫಲವಾಗಿದೆ.

    ಇಲ್ಲಿ ಜಿಲ್ಲೆಯ ಚಿಲ್ಲರೆ ಅಂಗಡಿಯಲ್ಲಿ ಮಾತ್ರವಲ್ಲದೇ, ಮೂಗುದಾರ ಹಾಕಬೇಕಾದ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಅಧೀನದಲ್ಲಿ ಬರುವ ಹಾಪ್ ಕಾಮ್ಸ್ ನವರಲ್ಲೇ ತರಕಾರಿ-ಹಣ್ಣುಗಳಿಗೆ ಚಿನ್ನದ ಬೆಲೆ.

    ಬೈಕಂಪಾಡಿಯ ಎಪಿಎಂಸಿ ಪ್ರಾಂಗಣದಲ್ಲಿ ಟೊಮ್ಯಾಟೋ ರಖಂ ಆಗಿ 10 ರೂ.ಗೆ ವಿಕ್ರಯವಾದರೆ, ಅದೇ ಟೊಮ್ಯಾಟೋಗೆ ಹಾಪ್ ಕಾಮ್ಸ್ ನಲ್ಲಿ 25ರೂ. ಚಿಲ್ಲರೆ ಅಂಗಡಿಯಲ್ಲಿ 20ರೂ.

    ಅಲಸಂಡೆಯೂ ರಖಂನಲ್ಲಿ 25ರೂ.ಗೆ ವಿಕ್ರಯವಾದರೆ, ಹಾಪ್ ಕಾಮ್ಸ್ ನಲ್ಲಿ 65ರೂ., ಚಿಲ್ಲರೆ ಅಂಗಡಿಯಲ್ಲಿ 60ರೂ.ಗೆ ಮಾರಾಟವಾಗುತ್ತಿದೆ.

    ಬದನೆ ದರ ರಖಂ 15 ರೂ. ಇದ್ದರೆ, ಹಾಪ್ ಕಾಮ್ಸ್ ನಲ್ಲಿ 50ರೂ. ಚಿಲ್ಲರೆಯಲ್ಲಿ 45 ರೂ.ಗೆ ಮಾರಾಟವಾಗುತ್ತಿದೆ.

    ಒಟ್ನಲ್ಲಿ ಪ್ರತಿಯೊಂದು ತರಕಾರಿಗಳ ಮೇಲೆ ಕನಿಷ್ಠ ರಖಂ ದರಕ್ಕಿಂತ ಕೆಜಿಗೆ 20 ರಿಂದ 50ರೂ. ವ್ಯತ್ಯಾಸಗಳು ಕಂಡು ಬರುತ್ತಿದೆ.

    ಅಗತ್ಯ ವಸ್ತುಗಳ ಮಳಿಗೆ ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 12.30ರ ವರೆಗೆ ತೆರೆಯಲು ವಿನಾಯಿತಿ ನೀಡಲಾಗಿದೆ.

    ಈ ಅರ್ಧ ದಿನದಲ್ಲಿ ಬಹುತೇಕ ದಿನಸಿ ಹಾಗೂ ತರಕಾರಿ ಅಂಗಡಿಯವರಿಗೆ ಇಡೀ ದಿನದ ವ್ಯವಹಾರವಾಗುತ್ತಿದೆ.

    ಎಲ್ಲ ಉದ್ಯಮ, ಹೊಟೇಲ್, ವ್ಯಾಪಾರಗಳು ಸ್ತಬ್ದವಾಗಿ ಸಂಕಷ್ಟದಲ್ಲಿದ್ದರೂ ಅಗತ್ಯ ವಸ್ತುಗಳ ವ್ಯವಹಾರ ಮಾಡುವವರಿಗೆ ಲಾಕ್ ಡೌನ್ ಅಷ್ಟಾಗಿ ಹೊಡೆತ ನೀಡಿಲ್ಲ.

    ಆದರೆ ಇದನ್ನೇ ಬಂಡವಾಳವಾಗಿಸಿಕೊಂಡ ಕೆಲವು ವ್ಯಾಪಾರಸ್ಥರು ಸುಲಿಗೆ ಮಾಡಲು ಹೊರಟಿರುವುದು ಗ್ರಾಹಕರ ಪಿತ್ತ ನೆತ್ತಿಗೇರಿಸಿದೆ.

    ಬೈಕಂಪಾಡಿ ಎಪಿಎಂಸಿ ಪ್ರಾಂಗಣದಲ್ಲಿ ಹೋಲ್ ಸೇಲ್ ನಲ್ಲಿ ತರಕಾರಿ ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದರೂ, ಅದೇ ತರಕಾರಿಯನ್ನು ಹಾಪ್ ಕಾಮ್ಸ್ ಮತ್ತು ದಿನಸಿ ಅಂಗಡಿಗಳಲ್ಲಿ ಎರಡರಿಂದ ಮೂರು ಪಟ್ಟು ಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿದೆ.

    ಈ ಬಗ್ಗೆ ಜಿಲ್ಲಾಡಳಿತಕ್ಕೆ ಸಾರ್ವಜನಿಕರು ಅನೇಕ ಬಾರಿ ದೂರು ನೀಡಿದ್ದು, ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆ ನೀಡಿ ವ್ಯಾಪಾರಿಗಳನ್ನು ಬೆದರಿಸುವ ತಂತ್ರ ಮಾಡಿದೆ.

    ಆದರೆ ಜಿಲ್ಲಾಡಳಿತದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತೆ ಹಾಪ್ ಕಾಮ್ಸ್ ಹಾಗೂ ಚಿಲ್ಲರೆ ವ್ಯಾಪಾರಿಗಳು ವರ್ತನೆ ತೋರುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending