LATEST NEWS
ನಾವು ಬಳಸುವ ಮಸಾಲೆ ಪದಾರ್ಥಗಳು ಅಸಲಿಯೋ..ನಕಲಿಯೋ..ತಿಳಿಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಮಂಗಳೂರು : ನಾವು ಅಡುಗೆಮನೆಯಲ್ಲಿ ಹಲವಾರು ರೀತಿಯ ಮಸಾಲೆಗಳನ್ನು ಬಳಸುತ್ತೇವೆ. ಆದರೆ ಅವುಗಳನ್ನು ಮಾರುಕಟ್ಟೆಯಿಂದ ತರುವಾಗ, ನಿಜವಾದ ಮತ್ತು ನಕಲಿ ಮಸಾಲೆಗಳನ್ನು ಗುರುತಿಸುವಲ್ಲಿ ನಾವು ಗೊಂದಲಕ್ಕೊಳಗಾಗುತ್ತೇವೆ. ಅಂತಹ ಪರಿಸ್ಥಿತಿಯಲ್ಲಿ ನಾವು ಏನು ಮಾಡಬಹುದು ಅನ್ನೋ ಸಣ್ಣ ಟಿಪ್ಸ್ ಇಲ್ಲಿದೆ.
ಇತ್ತೀಚೆಗೆ ದೆಹಲಿಯಲ್ಲಿ ನಕಲಿ ಸಾಂಬಾರ ಪದಾರ್ಥಗಳನ್ನು ತಯಾರಿಸುತ್ತಿದ್ದ ಕೆಲವರನ್ನು ಬಂಧಿಸಲಾಗಿದೆ. ಈ ಜನರು ಕೊಳೆತ ಅಕ್ಕಿ, ತೆಂಗಿನಕಾಯಿ ಮತ್ತು ಆ್ಯಸಿಡ್ನಿಂದ ಹೆಚ್ಚಿನ ಪ್ರಮಾಣದಲ್ಲಿ ನಕಲಿ ಮಸಾಲೆ ತಯಾರಿಸುತ್ತಿದ್ದರು. ಇವರಿಂದ ಸುಮಾರು 15 ಟನ್ ನಕಲಿ ಸಾಂಬಾರ ಪದಾರ್ಥಗಳು ಮತ್ತು ತಯಾರಿಕಾ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಪ್ರತಿಷ್ಠಿತ ಕಂಪೆನಿಗಳು ಕೂಡಾ ಈ ರೀತಿಯಾದ ನಕಲಿ ಸಾಂಬಾರು ಪುಡಿ ಮಾರಾಟ ಮಾಡುತ್ತಿದ್ದ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿದೆ.
ನೋಡಲು ಹಾಗೂ ಪರಿಮಳದಲ್ಲಿ ಅಸಲಿಯಂತೆ ಕಾಣುವ ಈ ನಕಲಿ ಮಸಾಲೆ ಪುಡಿಗಳನ್ನು ಗುರುತಿಸುವುದೇ ಕಷ್ಟ. ಆದ್ರೆ, ಕೆಲವೊಂದು ನಿತ್ಯ ಬಳಸುವ ಪದಾರ್ಥಗಳನ್ನು ಈ ರೀತಿಯಾಗಿ ಗುರುತಿಸಬಹುದಾಗಿದೆ.
ನಿಜವಾದ ಮತ್ತು ನಕಲಿ ಮಸಾಲೆಗಳನ್ನು ಗುರುತಿಸುವುದು ಹೇಗೆ?
ಕೆಂಪು ಮೆಣಸಿನಕಾಯಿ
ಅಡುಗೆಯಲ್ಲಿ ಕೆಂಪು ಮೆಣಸಿನಕಾಯಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮೆಣಸಿನಪುಡಿ ಚೆನ್ನಾಗಿಲ್ಲಾ ಅಂದ್ರೆ ಅದು ಪದಾರ್ಥದ ರುಚಿಯನ್ನೇ ಕೆಡಿಸಿ ಬಿಡುತ್ತದೆ. ಇತ್ತೀಚಿನ ದಿನಗಳಲ್ಲಿ ಪ್ಯಾಕೇಟ್ಗಳಲ್ಲಿ ಬರೋ ಮೆಣಸಿನ ಪುಡಿ ಕೂಡಾ ನಕಲಿಯಾಗಿದೆ. ಕೆಂಪು ಇಟ್ಟಿಗೆಯ ಪುಡಿಗೆ ಬಟ್ಟೆಗೆ ಬಳಸುವ ಕೆಂಪು ಬಣ್ಣದ ಮಿಶ್ರಣ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಮೆಣಸಿನ ಪುಡಿಯನ್ನು ಪರೀಕ್ಷೆ ಮಾಡಲು ಸ್ವಲ್ಪ ನೀರಿನಲ್ಲಿ ಹಾಕಿ ನೋಡಬೇಕು. ಪುಡಿ ತೇಲುತ್ತಿದ್ದರೆ ಅದು ಅಸಲಿಯಾಗಿದ್ದು, ಪುಡಿ ನೀರಿನಲ್ಲಿ ಮುಳುಗಿದ್ರೆ ಅದು ನಕಲಿ ಅಥವಾ ಕಲಬೆರಕೆಯಾಗಿದೆ ಎಂದು ತಿಳಿಯಬಹುದು.
ಕೊತ್ತಂಬರಿ ಪುಡಿ
ಯಾವುದೇ ಅಡುಗೆಯಲ್ಲಿ ಖಾದ್ಯದ ರುಚಿಯನ್ನು ಹೆಚ್ಚಿಸಲು ಕೊತ್ತಂಬರಿ ಬೇಕೇಬೇಕು. ಆದ್ರೆ, ಈ ಕೊತ್ತಂಬರಿ ಪುಡಿಯನ್ನು ಕೂಡಾ ನಕಲಿ ಮಾಡಲಾಗುತ್ತಿದೆ. ಪ್ರಾಣಿಗಳ ಮಲ, ಹುಳು ಮತ್ತು ಕಳೆಗಳನ್ನು ನುಣ್ಣಗೆ ರುಬ್ಬಿ ಅದಕ್ಕೆ ಕೊತ್ತಂಬರಿ ಪ್ಲೇವರ್ ಹಾಕುವ ಮೂಲಕ ಕೊತ್ತಂಬರಿ ಪುಡಿ ತಯಾರಿಸಲಾಗುತ್ತಿದೆ. ಇನ್ನು ಹಿಟ್ಟಿನ ಹುಡಿಗೆ ಹಸಿರು ಬಣ್ಣ ಸೇರಿಸಿ ಕೊತ್ತಂಬರಿ ಪುಡಿ ಎಂದು ಮಾರಾಟ ಮಾಡಲಾಗುತ್ತಿದೆ. ಇಡಿ ಕೊತ್ತಂಬರಿಯನ್ನು ಕೈಲಿಟ್ಟು ಸ್ವಲ್ಪ ಜೋರಾಗಿ ತಿಕ್ಕಿದಾಗ ಅದರಿಂದ ಸುವಾಸನೆ ಹೊರಡುತ್ತದೆ. ಮಾರುಕಟ್ಟೆಯಿಂದ ತಂದಿರೋ ಪುಡಿಯನ್ನು ಈ ಸುವಾಸನೆ ಜೊತೆ ಹೋಲಿಸಿ ನೋಡಿ. ಆ ಸುವಾಸನೆ ಬಾರದೆ ಯಾವುದೋ ಸಸ್ಯಗಳ ಪರಿಮಳ ಬಂದ್ರೆ ಅದು ಕಲಬೆರಕೆಯಾಗಿದೆ ಎಂದು ಅಂದಾಜಿಸಬಹುದಾಗಿದೆ.
ದಾಲ್ಜಿನಿ
ತೊಗಟೆಯಾಗಿ ಮಾರುಕಟ್ಟೆಯಲ್ಲಿ ಸಿಗುವ ದಾಲ್ಚಿನಿ ಬಹುತೇಕ ನಕಲಿಯಾಗಿರುತ್ತದೆ. ಅಮರಕ ಎಂಬ ಮರದ ತೊಗಟೆಯನ್ನು ಕತ್ತರಿಸಿ ದಾಲ್ಚಿನಿ ಎಂದು ಮಾರಾಟ ಮಾಡಲಾಗುತ್ತಿದೆ. ಇದರ ಅಸಲಿಯತ್ತು ಗುರುತಿಸುವುದು ಬಹಳ ಸುಲಭವಾಗಿದೆ. ದಾಲ್ಚಿನಿಯ ತೊಗಟೆಯನ್ನು ಕೈಲಿ ತೆಗೆದುಕೊಂಡು ನಿಮ್ಮ ಕೈಗಳಿಗೆ ಜೋರಾಗಿ ಉಜ್ಜಿಕೊಳ್ಳಿ. ಕೈನಲ್ಲಿ ಕೆಂಪು ಅಥವಾ ಕಂದು ಬಣ್ಣ ಮೂಡಿದ್ರೆ ಅದು ಅಸಲಿಯಾಗಿದ್ದು, ಬಣ್ಣ ಬಾರದೇ ಇದ್ರೆ ಅದು ನಕಲಿ ಎಂದು ಅರ್ಥ.
ಕರಿ ಮೆಣಸು
ಕರಿಮೆಣಸು ಇಲ್ಲದೆ ಮಾಂಸಾಹಾರಿ ಪದಾರ್ಥವೇ ಇಲ್ಲ ಅನ್ನಬಹುದು. ಇನ್ನು ತರಕಾರಿ ಅಡುಗೆಯಲ್ಲೂ ಇದನ್ನು ಯಥೇಚ್ಛವಾಗಿ ಬಳಕೆ ಮಾಡಲಾಗುತ್ತದೆ. ಆದ್ರೆ, ಪಪ್ಪಾಯಿ ಕಾಳುಗಳನ್ನು ಕರಿಮೆಣಸಿನ ಜೊತೆ ಸೇರಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇದರ ಅಸಲಿಯತ್ತು ಪರೀಕ್ಷೆ ಮಾಡಲು ನೀರಿನಲ್ಲಿ ಹಾಕಬೇಕು. ಅಸಲಿ ಕರಿಮೆಣಸುಗಳು ನೀರಿನಲ್ಲಿ ಮುಳುಗಿದರೆ ಪಪ್ಪಾಯಿ ಬೀಜಗಳು ನೀರಿನಲ್ಲಿ ತೇಲುತ್ತದೆ.
ಇದನ್ನೂ ಓದಿ : KARKALA : ಸಿಡಿದ ಸುಡುಮದ್ದು ತಯಾರಿಕಾ ಘಟಕ; ಮಹಿಳೆಯರಿಗೆ ಗಂಭೀರ ಗಾಯ
ಜೀರಿಗೆ
ಜೀರಿಗೆ ಯಾವುದೇ ಭಕ್ಷ್ಯಕ್ಕೆ ಪರಿಮಳವನ್ನು ಸೇರಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಇದು ನಿಜವೋ ಅಲ್ಲವೋ ಎಂದು ಗುರುತಿಸುವುದು ತುಂಬಾ ಸುಲಭ. ಇದಕ್ಕಾಗಿ ನೀವು ಎರಡು ಬೆರಳುಗಳ ನಡುವೆ ಜೀರಿಗೆಯನ್ನು ಉಜ್ಜಬೇಕು. ಜೀರಿಗೆಯಲ್ಲಿ ಕಲಬೆರಕೆ ಇದ್ದರೆ ನಿಮ್ಮ ಬೆರಳುಗಳು ಕಪ್ಪಾಗುತ್ತವೆ. ಅದು ನಿಜವಾಗಿದ್ದರೆ, ಅದು ನಿಮ್ಮ ಬೆರಳುಗಳನ್ನು ಕಪ್ಪಾಗಿಸುವುದಿಲ್ಲ.
ಕಲಬೆರಕೆ ಆಹಾರ ಸೇವನೆಯಿಂದ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಆದಷ್ಟು ಕಲಬೆರೆಕೆ ವಸ್ತುಗಳ ಬಗ್ಗೆ ಜನರು ಜಾಗೃತರಾಗಬೇಕಾಗಿದೆ. ಪ್ರತಿಯೊಂದು ವಸ್ತುವನ್ನು ಪರೀಕ್ಷೆ ಮಾಡಿ ತೆಗೆದುಕೊಳ್ಳುವುದು ಕಷ್ಟ. ಆದ್ರೆ, ಅದನ್ನು ಬಳಸುವ ಮೊದಲು ಈ ಸಿಂಪಲ್ ಟೆಸ್ಟ್ ಮಾಡಿದ್ರೆ ಆರೋಗ್ಯ ಕಾಪಾಡಿಕೊಳ್ಳಬಹುದು.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ