DAKSHINA KANNADA
ಶಾಲೆ ಆರಂಭ..! ನಿಮ್ಮ ಮಕ್ಕಳು ಶಾಲೆಗೆ ಹೋಗುವಾಗ ಅಳುತ್ತಾರಾ? ಹೀಗೆ ಮಾಡಿ
ಬೆಂಗಳೂರು: ಬರೋಬ್ಬರಿ ಎರಡು ತಿಂಗಳುಗಳ ಬೇಸಿಗೆ ರಜೆ ಮುಗಿದು ಶಾಲೆ ಶುರುವಾಗಲು ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಶಾಲೆಗಳು ಮತ್ತೆ ಪುನರಾರಂಭಗೊಳ್ಳಲಿದೆ. ಆದರೆ ಮಕ್ಕಳು ಇನ್ನೂ ರಜೆಯ ಮೂಡ್ನಲ್ಲೇ ಇದ್ದಾರೆ. ಇಷ್ಟು ದಿನ ತಂದೆ ತಾಯಿಯ ಜೊತೆಗೆ ಇರುತ್ತಿದ್ದ ಮಕ್ಕಳಿಗೆ ಶಾಲೆ ಆರಂಭ ಎಂದರೆ ಮುಖವು ಬಾಡಿಕೊಳ್ಳುತ್ತದೆ. ಹೀಗಾಗಿ ಬೆಳಗ್ಗೆ ಎದ್ದ ಕೂಡಲೇ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿ ಅಳುವ ಮಕ್ಕಳೇ ಹೆಚ್ಚು.
ಇನ್ನು ಕೆಲವು ಮಕ್ಕಳು ನನಗೆ ಹುಷಾರಿಲ್ಲ ಎಂದು ನೆಪ ಹೇಳಿ ಶಾಲೆಗೆ ಹೋಗುವುದರಿಂದ ತಪ್ಪಿಸಿಕೊಳ್ಳುತ್ತಾರೆ. ಈ ಸಮಯದಲ್ಲಿ ಮಕ್ಕಳ ಮನವೊಲಿಸಿ ಶಾಲೆಗೆ ಬಿಟ್ಟು ಬರುವುದು ಹೆತ್ತವರಿಗಂತೂ ಬಲು ಕಷ್ಟದ ಕೆಲಸ. ಅದರಲ್ಲೂ ಮೊದಲ ದಿನ ನರ್ಸರಿ, ಎಲ್ಕೆಜಿ, ಯುಕೆಜಿ ಶಾಲೆಗೆ ಹೋಗುವ ಮಕ್ಕಳ ಅಳು ಅಂತೂ ಯಾರಿಗೂ ಬೇಡ. ಹೀಗಾಗಿ ನಿಮ್ಮ ಮಕ್ಕಳು ಮೊದಲ ದಿನ ಶಾಲೆಗೆ ಹೋಗಲು ಹಿಂದೇಟು ಹಾಕಿ ಅಳುತ್ತ ಕೂತರೆ, ಪೋಷಕರೇ ನೀವು ಹೀಗೆ ಮಾಡಿ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಿ.
ಶಾಲೆಯ ಬಗೆಗಿನ ಭಯವನ್ನು ನಿವಾರಿಸಿ:
ತಂದೆ ತಾಯಿಯರು ಮೊದಲು ಮಾಡಬೇಕಾದ ಕೆಲಸವೆಂದರೆ ಶಾಲೆ ಬಗೆಗಿನ ಭಯವನ್ನು ಕಡಿಮೆ ಮಾಡುವುದು. ಶಾಲೆಯ ಬಗ್ಗೆ ಒಳ್ಳೆಯದನ್ನು ಹೇಳಿ ಮಕ್ಕಳು ಶಾಲೆಯನ್ನು ಪ್ರೀತಿಸುವಂತೆ ಮಾಡಬೇಕು.
ಟಿಫನ್ ಬಾಕ್ಸ್ ಗೆ ಮಕ್ಕಳ ಇಷ್ಟದ ತಿಂಡಿ ತಿನಿಸುಗಳನ್ನು ಹಾಕಿಕೊಡಿ:
ಮಕ್ಕಳಿಗೆ ಇಷ್ಟವಾದ ತಿಂಡಿ ತಿನಿಸುಗಳನ್ನು ನೀಡುವುದರಿಂದ ಮಕ್ಕಳನ್ನು ಸ್ವಲ್ಪ ಸಮಾಧಾನ ಪಡಿಸಬಹುದು. ಇಷ್ಟದ ತಿಂಡಿ ತಿನಿಸುಗಳನ್ನು ಟಿಫನ್ ಬಾಕ್ಸ್ ಗೆ ಹಾಕಿ ಕೊಟ್ಟು, ಮಧ್ಯಾಹ್ನ ಸ್ನೇಹಿತರಿಗೆ ಕೊಟ್ಟು ತಿನ್ನು ಎಂದೇಳಿದರೆ, ಖುಷಿ ಖುಷಿಯಿಂದ ಶಾಲೆಗೆ ಹೋಗಲು ಮನಸ್ಸು ಮಾಡುತ್ತಾರೆ.
ಹೊಸ ಬಟ್ಟೆ ಬ್ಯಾಗ್, ಚಪ್ಪಲಿ ಕೊಡಿಸಿ ಖುಷಿ ಪಡಿಸಿ:
ಮಕ್ಕಳು ಹೊಸ ಬಟ್ಟೆ, ಬ್ಯಾಗ್, ಛತ್ರಿ ಇದನ್ನೆಲ್ಲಾ ತಂದುಕೊಟ್ಟರೆ ಶಾಲೆಗೆ ಹೋಗುತ್ತಾರೆ. ಹೀಗಾಗಿ ಅವರಿಗಿಷ್ಟವಾಗುವ ಬ್ಯಾಗ್, ಚಪ್ಪಲಿ ಕೊಡಿಸಿ ಮಕ್ಕಳನ್ನು ಶಾಲೆಗೆ ಹೋಗುವಂತೆ ಮಾಡಬಹುದು.
ಹುಷಾರಿಲ್ಲ ಎಂದೇಳಿದರೆ ಆರೋಗ್ಯವನ್ನೊಮ್ಮೆ ಗಮನಿಸಿ:
ಶಾಲೆಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಹುಷಾರಿಲ್ಲ ಎಂದು ನೆಪ ಹೇಳಿ ರಜೆ ಹಾಕುವ ಮಕ್ಕಳು ಇದ್ದಾರೆ. ಆದರೆ ಈ ವೇಳೆಯಲ್ಲಿ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಗಮನಿಸಿ. ಒಂದು ವೇಳೆ ಹುಷಾರಿಲ್ಲವೆಂದರೆ ರಜೆ ಹಾಕುವುದು ಒಳಿತು.
ಶಿಕ್ಷಕರ ಜೊತೆ ಮಾತನಾಡಿ:
ಮಗು ಶಾಲೆಗೆ ಹೋಗಲು ಹಿಂಜರಿಯುವುದರ ಬಗ್ಗೆ ಶಿಕ್ಷಕರ ಜೊತೆಗೆ ಮಾತನಾಡಿ. ಕೆಲವು ದಿನಗಳ ಕಾಲ ನೀವೇ ಮಗುವನ್ನು ಶಾಲೆಗೆ ಬಿಟ್ಟು ಬನ್ನಿ. ಮಗು ಶಾಲೆಯಲ್ಲಿ ಎಲ್ಲಾ ಮಕ್ಕಳ ಜೊತೆಗೆ ಬೆರೆಯುತ್ತದೆಯೇ, ಆಟ ಪಾಠದಲ್ಲಿ ತೊಡಗಿಕೊಳ್ಳುತ್ತಾರೆಯೇ ಎಂದು ತಿಳಿದುಕೊಳ್ಳಿ.
ಗದರಿಸಿ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಬೇಡಿ:
ಶಾಲೆಯೆಂದರೆ ಮಕ್ಕಳು ಹೆದರುವುದಕ್ಕೆ ಮುಖ್ಯ ಕಾರಣವೇ ಹೋಮ್ ವರ್ಕ್. ಬರೆಯಲು, ಓದಲು ತುಂಬಾ ಇರುತ್ತದೆ ಎನ್ನುವ ಕಾರಣಕ್ಕೆ ಶಾಲೆಗೆ ಹೋಗಲು ಹಿಂದೇಟು ಹಾಕುತ್ತಾರೆ. ಈ ವೇಳೆ ಹೆತ್ತವರು ಮಕ್ಕಳನ್ನು ಗದರಿಸುವುದಲ್ಲ. ಸಮಾಧಾನ ಪಡಿಸಿ ಶಾಲೆಗೆ ಕಳುಹಿಸಿಕೊಡಿ.
Baindooru
ಬಿಗ್ ಬಾಸ್ ಗೆ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಹಿಂದೂ ಫೈರ್ ಬ್ರಾಂಡ್ ಚೈತ್ರಾ
ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋದು ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11 ರ ಸ್ಪರ್ಧಿಗಳು ಯಾರು ಅನ್ನೋ ‘ರಾಜ ರಾಣಿ’ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೇಲಿ ರಿವೀಲ್ ಆಗುತ್ತಿದೆ.
ಎಂಟ್ರಿ ಕೊಟ್ಟ ಚೈತ್ರಾ!
ಮೊದಲ ಸ್ಪರ್ಧಿಯಾಗಿ ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, 2ನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್ ಬಿಗ್ ಬಾಸ್ ಮನೆ ಸೇರುತ್ತಿದ್ದು, ಇನ್ನೂ 3ನೇ ಸ್ಪರ್ಧಿಯಾಗಿ ‘ಬಿಗ್ ಬಾಸ್’ ಮನೆಯೊಳಗೆ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಎಂಟ್ರಿ ಕೊಟ್ಟಿದ್ದಾರೆ.
ಖಡಕ್ ಮಾತುಗಳಿಂದಲೇ, ಹಿಂದುತ್ವದ ಹೆಸರಿನಲ್ಲಿ ಭಾಷಣ ಮಾಡಿ, ತಮ್ಮದೇ ಆದ ಅಪಾರ ಹಿಂಬಾಲಕರನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಚೈತ್ರಾ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಅಲ್ಲದೇ, ಖಾಸಗಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಇದೆ.
ಇದನ್ನು ಓದಿ: ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!
ವಂಚನೆ ಪ್ರಕರಣ:
ಪ್ರಖರ ಭಾಷಣಗಳ ಮೂಲಕ ಗಮನ ಸೆಳೆದಿದ್ದ ಚೈತ್ರಾ ಕಾಂಟ್ರವರ್ಸಿಗಳ ಮೂಲಕವೂ ಸದ್ದು ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಟಿಕೆಟ್ ಕೊಡುವ ವಿಚಾರದಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಡಿ ಜೈಲು ಪಾಲಾಗಿದ್ದರು.
ಸದ್ಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿರುವ ಚೈತ್ರಾ ಅಲ್ಲಿ ಹೇಗಿರ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.
DAKSHINA KANNADA
ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.
ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್
ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
DAKSHINA KANNADA
ಮಂಗಳೂರು : ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ
ಮಂಗಳೂರು : ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾ ನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.
ಈ ಸಂದರ್ಭ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದಲ್ಲಿ 98ಕ್ಕೂ ಅಧಿಕ ನಾಗರಿಕರು ರಕ್ತದಾನ ಮಾಡಿದರು.
ಇದನ್ನೂ ಓದಿ : ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ
ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯತೆ ಮೆರೆದು ಮಾದರಿಯಾದರು.
- LATEST NEWS7 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS5 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS5 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS4 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ