DAKSHINA KANNADA
ಶಾಲೆ ಆರಂಭ..! ನಿಮ್ಮ ಮಕ್ಕಳು ಶಾಲೆಗೆ ಹೋಗುವಾಗ ಅಳುತ್ತಾರಾ? ಹೀಗೆ ಮಾಡಿ
ಬೆಂಗಳೂರು: ಬರೋಬ್ಬರಿ ಎರಡು ತಿಂಗಳುಗಳ ಬೇಸಿಗೆ ರಜೆ ಮುಗಿದು ಶಾಲೆ ಶುರುವಾಗಲು ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಶಾಲೆಗಳು ಮತ್ತೆ ಪುನರಾರಂಭಗೊಳ್ಳಲಿದೆ. ಆದರೆ ಮಕ್ಕಳು ಇನ್ನೂ ರಜೆಯ ಮೂಡ್ನಲ್ಲೇ ಇದ್ದಾರೆ. ಇಷ್ಟು ದಿನ ತಂದೆ ತಾಯಿಯ ಜೊತೆಗೆ ಇರುತ್ತಿದ್ದ ಮಕ್ಕಳಿಗೆ ಶಾಲೆ ಆರಂಭ ಎಂದರೆ ಮುಖವು ಬಾಡಿಕೊಳ್ಳುತ್ತದೆ. ಹೀಗಾಗಿ ಬೆಳಗ್ಗೆ ಎದ್ದ ಕೂಡಲೇ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿ ಅಳುವ ಮಕ್ಕಳೇ ಹೆಚ್ಚು.
ಇನ್ನು ಕೆಲವು ಮಕ್ಕಳು ನನಗೆ ಹುಷಾರಿಲ್ಲ ಎಂದು ನೆಪ ಹೇಳಿ ಶಾಲೆಗೆ ಹೋಗುವುದರಿಂದ ತಪ್ಪಿಸಿಕೊಳ್ಳುತ್ತಾರೆ. ಈ ಸಮಯದಲ್ಲಿ ಮಕ್ಕಳ ಮನವೊಲಿಸಿ ಶಾಲೆಗೆ ಬಿಟ್ಟು ಬರುವುದು ಹೆತ್ತವರಿಗಂತೂ ಬಲು ಕಷ್ಟದ ಕೆಲಸ. ಅದರಲ್ಲೂ ಮೊದಲ ದಿನ ನರ್ಸರಿ, ಎಲ್ಕೆಜಿ, ಯುಕೆಜಿ ಶಾಲೆಗೆ ಹೋಗುವ ಮಕ್ಕಳ ಅಳು ಅಂತೂ ಯಾರಿಗೂ ಬೇಡ. ಹೀಗಾಗಿ ನಿಮ್ಮ ಮಕ್ಕಳು ಮೊದಲ ದಿನ ಶಾಲೆಗೆ ಹೋಗಲು ಹಿಂದೇಟು ಹಾಕಿ ಅಳುತ್ತ ಕೂತರೆ, ಪೋಷಕರೇ ನೀವು ಹೀಗೆ ಮಾಡಿ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಿ.
ಶಾಲೆಯ ಬಗೆಗಿನ ಭಯವನ್ನು ನಿವಾರಿಸಿ:
ತಂದೆ ತಾಯಿಯರು ಮೊದಲು ಮಾಡಬೇಕಾದ ಕೆಲಸವೆಂದರೆ ಶಾಲೆ ಬಗೆಗಿನ ಭಯವನ್ನು ಕಡಿಮೆ ಮಾಡುವುದು. ಶಾಲೆಯ ಬಗ್ಗೆ ಒಳ್ಳೆಯದನ್ನು ಹೇಳಿ ಮಕ್ಕಳು ಶಾಲೆಯನ್ನು ಪ್ರೀತಿಸುವಂತೆ ಮಾಡಬೇಕು.
ಟಿಫನ್ ಬಾಕ್ಸ್ ಗೆ ಮಕ್ಕಳ ಇಷ್ಟದ ತಿಂಡಿ ತಿನಿಸುಗಳನ್ನು ಹಾಕಿಕೊಡಿ:
ಮಕ್ಕಳಿಗೆ ಇಷ್ಟವಾದ ತಿಂಡಿ ತಿನಿಸುಗಳನ್ನು ನೀಡುವುದರಿಂದ ಮಕ್ಕಳನ್ನು ಸ್ವಲ್ಪ ಸಮಾಧಾನ ಪಡಿಸಬಹುದು. ಇಷ್ಟದ ತಿಂಡಿ ತಿನಿಸುಗಳನ್ನು ಟಿಫನ್ ಬಾಕ್ಸ್ ಗೆ ಹಾಕಿ ಕೊಟ್ಟು, ಮಧ್ಯಾಹ್ನ ಸ್ನೇಹಿತರಿಗೆ ಕೊಟ್ಟು ತಿನ್ನು ಎಂದೇಳಿದರೆ, ಖುಷಿ ಖುಷಿಯಿಂದ ಶಾಲೆಗೆ ಹೋಗಲು ಮನಸ್ಸು ಮಾಡುತ್ತಾರೆ.
ಹೊಸ ಬಟ್ಟೆ ಬ್ಯಾಗ್, ಚಪ್ಪಲಿ ಕೊಡಿಸಿ ಖುಷಿ ಪಡಿಸಿ:
ಮಕ್ಕಳು ಹೊಸ ಬಟ್ಟೆ, ಬ್ಯಾಗ್, ಛತ್ರಿ ಇದನ್ನೆಲ್ಲಾ ತಂದುಕೊಟ್ಟರೆ ಶಾಲೆಗೆ ಹೋಗುತ್ತಾರೆ. ಹೀಗಾಗಿ ಅವರಿಗಿಷ್ಟವಾಗುವ ಬ್ಯಾಗ್, ಚಪ್ಪಲಿ ಕೊಡಿಸಿ ಮಕ್ಕಳನ್ನು ಶಾಲೆಗೆ ಹೋಗುವಂತೆ ಮಾಡಬಹುದು.
ಹುಷಾರಿಲ್ಲ ಎಂದೇಳಿದರೆ ಆರೋಗ್ಯವನ್ನೊಮ್ಮೆ ಗಮನಿಸಿ:
ಶಾಲೆಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಹುಷಾರಿಲ್ಲ ಎಂದು ನೆಪ ಹೇಳಿ ರಜೆ ಹಾಕುವ ಮಕ್ಕಳು ಇದ್ದಾರೆ. ಆದರೆ ಈ ವೇಳೆಯಲ್ಲಿ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಗಮನಿಸಿ. ಒಂದು ವೇಳೆ ಹುಷಾರಿಲ್ಲವೆಂದರೆ ರಜೆ ಹಾಕುವುದು ಒಳಿತು.
ಶಿಕ್ಷಕರ ಜೊತೆ ಮಾತನಾಡಿ:
ಮಗು ಶಾಲೆಗೆ ಹೋಗಲು ಹಿಂಜರಿಯುವುದರ ಬಗ್ಗೆ ಶಿಕ್ಷಕರ ಜೊತೆಗೆ ಮಾತನಾಡಿ. ಕೆಲವು ದಿನಗಳ ಕಾಲ ನೀವೇ ಮಗುವನ್ನು ಶಾಲೆಗೆ ಬಿಟ್ಟು ಬನ್ನಿ. ಮಗು ಶಾಲೆಯಲ್ಲಿ ಎಲ್ಲಾ ಮಕ್ಕಳ ಜೊತೆಗೆ ಬೆರೆಯುತ್ತದೆಯೇ, ಆಟ ಪಾಠದಲ್ಲಿ ತೊಡಗಿಕೊಳ್ಳುತ್ತಾರೆಯೇ ಎಂದು ತಿಳಿದುಕೊಳ್ಳಿ.
ಗದರಿಸಿ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಬೇಡಿ:
ಶಾಲೆಯೆಂದರೆ ಮಕ್ಕಳು ಹೆದರುವುದಕ್ಕೆ ಮುಖ್ಯ ಕಾರಣವೇ ಹೋಮ್ ವರ್ಕ್. ಬರೆಯಲು, ಓದಲು ತುಂಬಾ ಇರುತ್ತದೆ ಎನ್ನುವ ಕಾರಣಕ್ಕೆ ಶಾಲೆಗೆ ಹೋಗಲು ಹಿಂದೇಟು ಹಾಕುತ್ತಾರೆ. ಈ ವೇಳೆ ಹೆತ್ತವರು ಮಕ್ಕಳನ್ನು ಗದರಿಸುವುದಲ್ಲ. ಸಮಾಧಾನ ಪಡಿಸಿ ಶಾಲೆಗೆ ಕಳುಹಿಸಿಕೊಡಿ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ