Connect with us

LATEST NEWS

ತನ್ನ ಪಲ್ಲಂಗದಾಟಕ್ಕೆ ಮುದ್ದು ಮಕ್ಕಳನ್ನು ಬಲಿಕೊಟ್ಟ ಪಾಪಿ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹುಬ್ಬಳ್ಳಿ ಕೋರ್ಟ್..!

Published

on

ಹುಬ್ಬಳ್ಳಿ : ತನ್ನ ಪಲ್ಲಂಗದ ಆಟಕ್ಕೆ ಮುದ್ದು ಎರಡು ಮಕ್ಕಳನ್ನು ಬಲಿಕೊಟ್ಟ ಪಾಪಿ ತಾಯಿಗೆ ಹುಬ್ಬಳ್ಳಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಕ್ರಮ ಸಂಬಂಧಕ್ಕಾಗಿ ಹೆತ್ತ ಮಕ್ಕಳನ್ನು ಕೊಲೆಗೈದಿದ್ದ ತಾಯಿಗೆ ಹುಬ್ಬಳ್ಳಿಯ 5ನೇ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. 5 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.

ಹುಬ್ಬಳ್ಳಿಯ ನವ ಅಯೋಧ್ಯಾನಗರದಲ್ಲಿ ಮಹಿಳೆ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತವೆ ಎಂಬ ಕಾರಣಕ್ಕೆ ಹೆತ್ತ ಮಕ್ಕಳನ್ನೇ ಕೊಲೆ ಮಾಡಿದ್ದಳು.

ಈ ಘಟನೆ 2018ರಲ್ಲಿ ನಡೆದಿತ್ತು. ಇದೀಗ ಪ್ರಕರಣದ ತೀರ್ಪು ಹೊರಬಂದಿದ್ದು, ಮಹಿಳೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಮದುವೆಯಾಗಿ ಮಕ್ಕಳಿದ್ದರೂ ಪರಪುರುಷನ ಸಂಬಂಧ ಬೆಳೆಸಿದ್ದ ಮಹಿಳೆ ತನ್ನ ಪಲ್ಲಂಗದಾಟಕ್ಕೆ ಹೆತ್ತ ಮಕ್ಕಳು ಅಡ್ಡಿಯಾಗುತ್ತಾರೆ ಎಂದು ಎರಡು ಮಕ್ಕಳನ್ನು ಕೊಂದಿದ್ದಳು.

ಏನಿದು ಪ್ರಕರಣ..!!? : ಎರಡು ವರ್ಷಗಳ ಹಿಂದೆ ತನ್ನಿಬ್ಬರು ಮುದ್ದಾದ ಕಂದಮ್ಮಗಳನ್ನು ಆ ಪಾಪಿ ತಾಯಿ ಕೊಂದಿದ್ದಳು.

ಆ ರಾತ್ರಿ ಎರಡೂ ಮಕ್ಕಳಿಗೂ ಶಾಲೆಯ ಐಡೆಂಟಿ ಕಾರ್ಡ್ ಟ್ಯಾಗ್‌ನಿಂದ ನೇಣು ಬಿಗಿದಿದ್ದ ಈ ಪಾಪಿ ತಾಯಿ ತಾನೇನು ಮಾಡೇ ಇಲ್ಲ ಎಂದು ನಾಟಕ ಕೂಡ ಆಡಿದ್ದಳು.

ಆದರೆ, ಅನುಮಾನ ಬಂದ ಆಕೆಯ ಪತಿ ಪರಶುರಾಮ ಪೊಲೀಸರಿಗೆ ಪತ್ನಿ ಪ್ರೇಮಾ ಅಲಿಯಾಸ್ ಚೈತ್ರಾ ಹುಲಕೋಟಿ ಮೇಲೆ ದೂರು ದಾಖಲಿಸಿದ್ದ.

ಕೊನೆಗೂ ಪೊಲೀಸರ ತನಿಖೆಯ ವೇಳೆ ಹಾಗೂ ಸ್ಥಳೀಯರ ಸಾಕ್ಷಿಯಿಂದ ಆಕೆಯೇ ಮಕ್ಕಳನ್ನು ಕೊಂದಿದ್ದಳು ಎನ್ನುವುದು ಬಯಲಾಗಿತ್ತು. ಆದರೆ, ಅಷ್ಟೇ ಅಲ್ಲ, ಪೊಲೀಸ್ ತನಿಖೆ ವೇಳೆ ಮತ್ತೊಂದು ಭಯಾನಕ ಮಾಹಿತಿಯನ್ನು ಆಕೆ ಹೊರ ಹಾಕಿದ್ದಳು.

ಅಷ್ಟಕ್ಕೂ ಆಕೆ ಮಕ್ಕಳನ್ನು ಕೊಂದಿದ್ದು ತನ್ನ ಅನೈತಿಕ ಸಂಬಂಧಕ್ಕಾಗಿಯಂತೆ. ಅಲ್ಲದೆ ತನ್ನ ಪಲ್ಲಂಗದಾಟಕ್ಕೆ ಮಕ್ಕಳು ಅಡ್ಡಿ ಬರುತ್ತಿದ್ದವು ಎಂದು ಅವುಗಳನ್ನು ಸಾಯಿಸಿ ನಾಟಕವಾಡಿದ್ದಳು.

ಕೊನೆಗೂ ಹಳೇ ಹುಬ್ಬಳ್ಳಿ ಪೊಲೀಸರ ತನಿಖೆಯಿಂದ ಆಕೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾಳೆ.

ಕೆಲಸ ಮಾಡಿಕೊಂಡಿದ್ದ ಪರಶುರಾಮ ತನ್ನ ಸಂಬಂಧಿಕರ ಮಗಳೇ ಆಗಿದ್ದ ಅಪರಾಧಿ ಪ್ರೇಮಾಳನ್ನು ಮದುವೆಯಾಗಿದ್ದ. ಇಬ್ಬರಿಗೆ ನಾಲ್ಕು ವರ್ಷದ ಹೆಣ್ಣು ಮಗು ರೋಹಿಣಿ ಮತ್ತು ಐದು ವರ್ಷ ಮಗ ರೋಹಿತ್‌ ಎಂಬ ಮುದ್ದಾದ ಮಕ್ಕಳು ಜನಿಸಿದ್ದರು.

ಆದರೆ, ಗಂಡ ಕೆಲಸಕ್ಕೆ ಹೋದರೆ, ಇತ್ತ ಪತ್ನಿ ಅದೇ ಏರಿಯಾದವನ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದಳು.

ಅಲ್ಲದೆ ಕದ್ದುಮುಚ್ಚಿ ಚೆಲ್ಲಾಟವಾಡುತ್ತಿದ್ದ ಪ್ರೇಮಾಗೆ ಅದೆಷ್ಟು ಬಾರಿ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ.

ಕೊನೆಗೆ ಹೆತ್ತ ಮಕ್ಕಳನ್ನ ಕೊಂದು ಜೈಲು ಪಾಲಾಗಿದ್ದ ಈಕೆಗೆ ಸದ್ಯ ನ್ಯಾಯಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪಾಪಿ ತಾಯಿಯ ವಿರುದ್ಧ ಸೂಕ್ತ ಸಾಕ್ಷಾಧಾರ ಸಂಗ್ರಹಿಸಿ ಕೊನೆಗೂ ಅಕೆಗೆ ಶಿಕ್ಷೆ ಕೊಡಿಸುವಲ್ಲಿ ಹಳೆ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Published

on

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending