LATEST NEWS
ಹುಬ್ಬಳ್ಳಿ : ಆಕಾಶ್ ಹ*ತ್ಯೆ ಪ್ರಕರಣ : ಹಲವರನ್ನು ವಶಕ್ಕೆ ಪಡೆದ ಪೊಲೀಸ್
ಹುಬ್ಬಳ್ಳಿ : ಮತ್ತೆ ಹುಬ್ಬಳ್ಳಿಯಲ್ಲಿ ನೆತ್ತ*ರು ಹರಿದಿದೆ. ಶನಿವಾರ ರಾತ್ರಿ(ಜೂ.22) ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್ ನನ್ನು ಹ*ತ್ಯೆ ಮಾಡಲಾಗಿದೆ. ಈ ಸಂಬಂಧ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶನಿವಾರ (ಜೂ.22) ರಾತ್ರಿ 30 ವರ್ಷದ ಆಕಾಶ್ ಮಠಪತಿಯನ್ನು ಲೋಹಿಯಾ ನಗರದ ಪವನ್ ಸ್ಕೂಲ್ ಹಿಂಭಾಗ ಕೊಲೆ ಮಾಡಲಾಗಿತ್ತು. ಪುತ್ರ ಆಕಾಶ್ ಕೊ*ಲೆ ಅವನ ಸ್ನೇಹಿತರಿಂದಲೇ ಆಗಿದೆ ಎಂದು ತಂದೆ ಶೇಖರಯ್ಯ ಮಠಪತಿ ಅನುಮಾನ ವ್ಯಕ್ತಪಡಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಖರಯ್ಯ ಮಠಪತಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮದ್ಯ ಕುಡಿಸಿ ಮಗ ಆಕಾಶ್ ನನ್ನು ಹ*ತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಕೊ*ಲೆಯಾದ ಆಕಾಶ್ ಮಠಪತಿ ಪತ್ನಿ, ಅತ್ತೆ, ಮಾವ ಸೇರಿದಂತೆ 12 ಜನರ ವಿರುದ್ಧ ದೂರು ನೀಡಿದ್ದು, ಈ ಪೈಕಿ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ : ರೇವಣ್ಣ ಕುಟುಂಬಕ್ಕೆ ಮತ್ತೊಂದು ಅಘಾ*ತ; ಸೂರಜ್ ರೇವಣ್ಣ ಬಂಧನ
ಮೃ*ತ ಆಕಾಶ್ ನದ್ದು ಪ್ರೇಮ ವಿವಾಹ. ಆಕಾಶ್ ಮತ್ತು ಪತ್ನಿ ಕಾವ್ಯ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ವಾಸವಾಗಿದ್ದರು. ಪ್ರೀತಿ ವಿಷಯಕ್ಕೂ ಹ*ತ್ಯೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
bangalore
ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!
ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್ಧಾಮ್ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್ಧಾಮ್ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಚಾರ್ಧಾಮ್ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್ಲೋಡ್ ಮಾಡುವುದು.
- 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್ಲೋಡ್ ಮಾಡಬೇಕು.
- ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.
ಕಾಶಿ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
- 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ
DAKSHINA KANNADA
ವೀರಪ್ಪ ಮೊಯ್ಲಿ ಪುತ್ರಿ ವಿಧಿವಶ..!
ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ.
ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಹಲವಾರು ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ವೇದಿಕೆಯಲ್ಲಿ ತಮ್ಮ ನೃತ್ಯ ಪ್ರದರ್ಶನ ನೀಡಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು. ಇತ್ತೀಚೆಗೆ ಮಕ್ಕಳಿಗಾಗಿ ಹಿಂದಿ ನಾಟಕ, ಕ್ಯುನ್ ಕ್ಯುನ್ ಲಡ್ಕಿ, ಅದೇ ಹೆಸರಿನ ಮಹಾಶ್ವೇತಾ ದೇವಿಯವರ ಪುಸ್ತಕದಿಂದ ಸ್ಫೂರ್ತಿ ಪಡೆದಿದ್ದಾರೆ ಮತ್ತು ರವೀಂದ್ರನಾಥ ಟ್ಯಾಗೋರ್ ಅವರು ಮಕ್ಕಳಿಗಾಗಿ ಬರೆದ ಇಂಗ್ಲಿಷ್ ನಾಟಕಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಮಾಜ ಸೇವೆಯಲ್ಲೂ ಮುಂಚೂಣಿಯಲ್ಲಿದ್ದ ಅವರು ಜನಾನುರಾಗಿ ಎಂದು ಹೆಸರು ಪಡೆದುಕೊಂಡಿದ್ದರು. 46 ವರ್ಷ ಪ್ರಾಯದ ಹಂಸ ಮೊಯ್ಲಿ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡು ನಿನ್ನೆ ಸಂಜೆ ತೀವೃ ಅಸ್ವಸ್ಥರಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
FILM
‘ಎಲ್ಲಾ ಹಣೆಬರಹ..ನಾವೇನು ಮಾಡೋಕ್ಕಾಗಲ್ಲ…’ ದರ್ಶನ್ ಕೊಲೆ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಬೆಂಗಳೂರು/ಮಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿದ್ದಾರೆ. ದೇಶದೆಲ್ಲೆಡೆ ಈ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ದರ್ಶನ್ ಕೊಲೆ ಪ್ರಕರಣದ ಬಗ್ಗೆ ಮೌನ ಮುರಿದಿದ್ದಾರೆ.
ಎಲ್ಲಾ ಹಣೆಬರಹ ಏನೂ ಮಾಡೋಕಾಗಲ್ಲ. ಇದೆಲ್ಲಾ ಒಂಥರಾ ಪಾರ್ಟ್ ಆಫ್ ದಿ ಲೈಫ್. ಒಳ್ಳೆಯದು ಕೆಟ್ಟದ್ದು ಎರಡೂ ನಡೆಯುತ್ತದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಎಲ್ಲರಿಗೂ ಒಂದು ನ್ಯಾಯ ಸಿಗಬೇಕು. ಎಲ್ಲಾ ಕುಟುಂಬಕ್ಕೂ ಒಳ್ಳೆದಾಗಬೇಕು’ ಎಂದು ಶಿವಣ್ಣ ಹೇಳಿದ್ದಾರೆ.
ದರ್ಶನ್ ಬೆಂಬಲಕ್ಕೆ ನಿಂತ ಪರಭಾಷಾ ನಟ; ಏನಂದ್ರು ನಾಗಶೌರ್ಯ?
ನ್ಯಾಯ ಏನಿದೆಯೋ ಅದು ಆಗುತ್ತದೆ. ಇದೆಲ್ಲ ಹಣೆಬರಹ ನಾವೇನು ಮಾಡೋಕಾಗಲ್ಲ. ನಾವ್ ಏನ್ ಮಾಡ್ತೀವಿ ಅದು ಸರಿನಾ ಅಂತ ಯೋಚನೆ ಮಾಡಬೇಕು. ಈ ಘಟನೆಯಿಂದ ರೇಣುಕಾಸ್ವಾಮಿ ಫ್ಯಾಮಿಲಿಗೆ ಆಗಲಿ, ದರ್ಶನ್ ಅವರ ಫ್ಯಾಮಿಲಿಗೆ ಆಗಲಿ ನೋವಾಗಿರುತ್ತೆ. ನ್ಯಾಯ ಏನಿದೆಯೋ ನೋಡೋಣ. ಈಗ ಮಾತಾಡಿ ಪ್ರಯೋಜನ ಇಲ್ಲ’ ಎಂದು ಹೇಳಿದ್ದಾರೆ.
- LATEST NEWS6 days ago
ಪ್ರೀತಂ ಗೌಡ ಸೇರಿ ನಾಲ್ವರ ಮೇಲೆ ಎಫ್ಐಆರ್..! ಪ್ರಜ್ವಲ್ ಗೆ ಮತ್ತೊಂದು ಸಂಕಷ್ಟ
- DAKSHINA KANNADA7 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- DAKSHINA KANNADA7 days ago
ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ
- DAKSHINA KANNADA3 days ago
ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು