Thursday, March 23, 2023

ಹೈದರಾಬಾದ್‌: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ, 6 ಮಂದಿ ಸಜೀವ ದಹನ..!

ಬಹು ಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ನಾಲ್ವರು ಯುವತಿಯರು ಸೇರಿದಂತೆ 6 ಮಂದಿ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ತೆಲಂಗಾಣದ ಸೆಕುಂದರಾಬಾದ್‌ ನಲ್ಲಿ ನಡೆದಿದೆ.

ಹೈದ್ರಾಬಾದ್ : ಬಹು ಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ನಾಲ್ವರು ಯುವತಿಯರು ಸೇರಿದಂತೆ 6 ಮಂದಿ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ತೆಲಂಗಾಣದ ಸೆಕುಂದರಾಬಾದ್‌ ನಲ್ಲಿ ನಡೆದಿದೆ. 

ಸಂಜೆ 7.30 ರ ವೇಳೆಗೆ ಸೆಕುಂದರಾಬಾದ್‌ ನ ಸ್ವಪ್ನಲೊಕ್‌ ಕಟ್ಟಡದ 5 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ರಮೇಣ ಬೆಂಕಿ 6 ಮತ್ತು 7 ನೇ ಮಳಿಗೆಗಳಿಗೂ ಆವರಿಸಿದೆ.

ದಟ್ಟವಾದ ಹೊಗೆ ಮತ್ತು ಬೆಂಕಿಯಿಂದಾಗಿ ಹೊರ ಬರಲಾಗದೆ 13 ಮಂದಿ ಸಿಲುಕಿಕೊಂಡಿದ್ದು, ಅವರಲ್ಲಿ 7 ಮಂದಿಯನ್ನು ರಕ್ಷಿಸಲಾಯಿತು.

ಆದರೆ ಉಳಿದ 6 ಮಂದಿ ಹೊಗೆಯಿಂದ ಉಸಿರುಕಟ್ಟಿ ಮೃತ ಪಟ್ಟಿದ್ದಾರೆ.

ಪ್ರಮೀಳಾ, ವೆನ್ನೆಲಾ, ಶ್ರಾವಣಿ, ಪ್ರಶಾಂತ್, ತ್ರಿವೇಣಿ, ಶಿವ ಮೃತ ದುರ್ದೈವಿಗಳು.

ಎಲ್ಲರೂ ತೆಲಂಗಾಣದ ವಾರಂಗಲ್‌ ಮತ್ತು ಕಮ್ಮಂ ಜಿಲ್ಲೆಗೆ ಸೇರಿದವರಾಗಿದ್ದಾರೆ.

ಈ ಕಟ್ಟಡದಲ್ಲಿ ಬೇರೆ ಬೇರೆ ಕಂಪೆನಿಗಳ ಕಚೇರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಮೃತ ಪಟ್ಟವರು ಮಾರ್ಕೆಟಿಂಗ್‌ ಕಂಪೆನಿಯೊಂದರ ಉದ್ಯೋಗಿಗಳಾಗಿರುತ್ತಾರೆ. 10 ಕ್ಕೂ ಅಧಿಕ ಆಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಹಕರಿಸಿದವು.

ವಿದ್ಯುತ್‌ ಶಾರ್ಟ್‌ ಸಕ್ಯೂಟ್‌ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...