LATEST NEWS
ಸುರತ್ಕಲ್ ಟೋಲ್ ವಿರೋಧಿ ಹೋರಾಟದಲ್ಲಿ ನಾನು ಬಲಿಪಶು: ಪ್ರತಿಭಾ ಕುಳಾಯಿ
ಮಂಗಳೂರು: ಸುರತ್ಕಲ್ ಟೋಲ್ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ.
ನಾನು ಹಿಂದೆಯೂ ತೆರಿಗೆ ಕಟ್ಟುತ್ತಾ ಬಂದಿದ್ದೇನೆ ಈಗಲೂ ತೆರಿಗೆ ಕಟ್ಟುತ್ತಿದ್ದೇನೆ.
ನನ್ನ ಆಸ್ತಿ ಹೆಚ್ಚಾಗಿದ್ದಾರೆ ಅದು ನನ್ನ ವ್ಯವಹಾರದಿಂದಲೇ ಎಂದು ಮಾಜಿ ಕಾರ್ಪೋರೇಟರ್ ಹಾಗೂ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಈ ಬಗ್ಗೆ ಸುರತ್ಕಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸುರತ್ಕಲ್ ಟೋಲ್
ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು
ಟೋಲ್ ರದ್ದು ಕುರಿತಂತೆ ಪ್ರಶ್ನಿಸಿದ್ದಕ್ಕೆ ನನ್ನನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ.
ನಾನು ರಾಜಕೀಯಕ್ಕೆ ಬರುವಾಗ ಹೇಗಿದ್ದೆ, ಈಗ ಎಷ್ಟು ಆಸ್ತಿ ಸಂಪಾದನೆ ಮಾಡಿದ್ದೇನೆ ಎಂದು “ಬಿಜೆಪಿ ಯುವಮೋರ್ಚಾ ಮಂಗಳೂರು ಉತ್ತರ” ಹೆಸರಿನ ಪೇಜ್ನಲ್ಲಿ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದೆ.
ಅದರಲ್ಲಿ ಹೇಳಿದಂತೆ ಟೋಲ್ ಆಗಿದ್ದು ಕಾಂಗ್ರೆಸ್ ಸರಕಾರ ಆಡಳಿತದಲ್ಲಿ ಇದ್ದಾಗ ಅಲ್ಲ, ಬಿಜೆಪಿ ಸರಕಾರ ಮತ್ತದರ ಜನಪ್ರತಿನಿಧಿಗಳ ಅಕ್ರಮದ ಕೂಸು ಈ ಟೋಲ್ ಗೇಟ್.
ಇನ್ನು ನಾನು ಆಗ ಹೇಗಿದ್ದೀನೋ ಈಗಲೂ ಹಾಗೇ ಇದ್ದೇನೆ. ನನ್ನಲ್ಲಿ ಹಿಂದೆಯೂ ಮನೆ, ಕಾರು ಎಲ್ಲವೂ ಇತ್ತು. ನನ್ನ ತಂದೆ ಮಾಡಿರುವ ಅಸ್ತಿಯು ಇತ್ತು.
ನಾನು ಹಿಂದೆಯೂ ತೆರಿಗೆ ಕಟ್ಟುತ್ತಾ ಬಂದಿದ್ದೇನೆ ಈಗಲೂ ತೆರಿಗೆ ಕಟ್ಟುತ್ತಿದ್ದೇನೆ. ನನ್ನ ಆಸ್ತಿ ಹೆಚ್ಚಾಗಿದ್ದಾರೆ ಅದು ನನ್ನ ವ್ಯವಹಾರದಿಂದಲೇ ಎಂದರು.
ಸುರತ್ಕಲ್ ಬಿ.ಸಿ ರೋಡ್ ರಸ್ತೆಯನ್ನು ನಾಲ್ಕು ಪಥದ ಟೋಲ್ ರಸ್ತೆಯನ್ನಾಗಿಸುವ ಯೋಜನೆ ರೂಪುಗೊಂಡಾಗ ಸಂಸದರಾಗಿ ಇದ್ದದ್ದು ನಳಿನ್ ಕುಮಾರ್ ಕಟೀಲ್.
ಅಲ್ಲಿಂದ ಇಲ್ಲಿಯವರೆಗೂ ನಳಿನ್ ಕುಮಾರ್ ಕಟೀಲ್ ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾಗಿದ್ದಾರೆ.
ಮೊದಲು ನವಮಂಗಳೂರು ಬಂದರು ಬಳಿ, ಆ ನಂತರ ಎನ್ಐಟಿಕೆ ಬಳಿ ಟೋಲ್ ಗೇಟ್ ನಿರ್ಮಿಸುವ ಪ್ರಸ್ತಾಪ ಸಿದ್ದಗೊಂಡಾಗ ಕ್ಷೇತ್ರದಲ್ಲಿ ಇದ್ದದ್ದು ಬಿಜೆಪಿ ಶಾಸಕರು.
ಎನ್ಐಟಿಕೆ ಬಳಿ ಟೋಲ್ ಗೇಟ್ ಸ್ಥಾಪಿಸುವಾಗ ಮೊಯ್ದಿನ್ ಬಾವ ಶಾಸಕರಾಗಿ ಇದ್ದದ್ದು ಹೌದು.
ಆದರೆ ಕೇಂದ್ರ ಸರಕಾರದ ಯೋಜನೆಯ ಭಾಗವಾದ ಟೋಲ್ ಗೇಟ್ ಎನ್ಐಟಿಕೆ ಬಳಿ ಸ್ಥಾಪನೆ ಆಗದಂತೆ ಶಾಸಕ ಮೊಯ್ದಿನ್ ಬಾವ ಹೋರಾಟ ನಿರತ ಸ್ಥಳೀಯರೊಂದಿಗೆ ಸೇರಿ
ಅವಿರತವಾಗಿ ಶ್ರಮಿಸಿದ್ದಾರೆ. ಕೊನೆಗೆ ನ್ಯಾಯಾಲಯ ಹಾಗೂ ನಾಗರಿಕರಿಗೆ “ಸುರತ್ಕಲ್ ಟೋಲ್ ಗೇಟ್ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸಲಿದೆ.
ಹೆಜಮಾಡಿ ಟೋಲ್ ಕೇಂದ್ರ ಕಾರ್ಯಾರಂಭಗೊಂಡ ನಂತರ ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲಾಗುವುದು” ಎಂದು ಕೋರ್ಟ್ಗೆ ಸ್ಪಷ್ಟನೆ ನೀಡಿ ಟೋಲ್ ಗೇಟ್ ಕಾರ್ಯಾರಂಭ ಮಾಡಲಾಯಿತು.
ಆ ಸಂದರ್ಭದಲ್ಲಿ ಕೇಂದ್ರ ಸರಕಾರವನ್ನು ಪ್ರತಿನಿಧಿಸುವ ಸಂಸದ ನಳಿನ್ ಕುಮಾರ್ ಕಟೀಲ್ ಜನರ ಜೊತೆ ನಿಂತಿದ್ದರೆ ಸುರತ್ಕಲ್ ಟೋಲ್ ಗೇಟ್ ಸ್ಥಾಪನೆಗೊಳ್ಳಲು ಸಾಧ್ಯವೇ ಇರಲಿಲ್ಲ.
ಕೇಂದ್ರ ಸರಕಾರದ ಹೆದ್ದಾರಿಗೆ ಸಂಬಂಧ ಪಟ್ಟ ವಿಷಯ ಸಂಸದರ ಜವಾಬ್ದಾರಿ ಆಗಿದ್ದರೂ ನಳಿನ್ ಕುಮಾರ್ ಕಟೀಲ್ ಜನರ ಜೊತೆ ನಿಲ್ಲದೆ ಟೋಲ್ ಗೇಟ್ ಲಾಬಿ ಜೊತೆ ನಿಂತರು.
ಟೋಲ್ ಗೇಟ್ ಸ್ಥಾಪನೆಯ ವಿರುದ್ದ ಹೋರಾಟ ಆರಂಭಿಸಿದ್ದು ಸುರತ್ಕಲ್ ನಾಗರಿಕ ಸಮಿತಿ ಹೊರತು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಅಲ್ಲ.
ಅಂದು ನಾಗರಿಕ ಸಮಿತಿ ಕೈಯಿಂದ ಖರ್ಚು ಮಾಡಿ ಟೋಲ್ ಸ್ಥಾಪನೆ ತಡೆಯಲು ಕೈಲಾದ ಕೆಲಸ ಮಾಡಿದೆ.
ಆ ನಂತರ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದೆ.
ಇದೆಲ್ಲದರ ಅರಿವಿಲ್ಲದೆ ಹಣಕಾಸು ವಿಚಾರದಲ್ಲಿ ಆರೋಪ ಮಾಡಿ ಶಾಸಕ ಭರತ್ ಶೆಟ್ಟಿ ತನ್ನ ಯೋಗ್ಯತೆಯನ್ನು ಬಯಲು ಮಾಡಿದ್ದಾರೆ.
ಬಿಜೆಪಿ ಯುವಮೋರ್ಚಾ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಜನರನ್ನು ಮಂಗ ಮಾಡೋ ಬದಲು ತನ್ನ ಶಾಸಕರನ್ನು ಸಂಸದರನ್ನು ಪ್ರಶ್ನೆ ಮಾಡಲಿ ಎಂದು ಪ್ರತಿಕ್ರಿಯಿಸಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ