Connect with us

    DAKSHINA KANNADA

    ರೈ ರಾಜಕೀಯಕ್ಕೆ ಬರುವ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ-ಹರಿಕೃಷ್ಣ ಬಂಟ್ವಾಳ

    Published

    on

    ಮಂಗಳೂರು: ‘ರಮಾನಾಥ ರೈ ರಾಜಕೀಯ ಪ್ರವೇಶಿಸುವ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನದು 50 ವರ್ಷ ರಾಜಕೀಯ ಜೀವನವಾಯಿತು. ಮೊದಲು ನಾನು ಮತ್ತು ರಮಾನಾಥ ರೈ ಒಟ್ಟಿಗೆ ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದೆವು. ಬಂಟ್ವಾಳದ ನರನಾಡಿ ಎಲ್ಲಾನೂ ಗೊತ್ತಿದೆ. ರಮಾನಾಥ ರೈ ಈ ಸಲವೂ ಓಟಿನಲ್ಲಿ ಗೆಲ್ಲೋದಿಲ್ಲ’ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ಸವಾಲೆಸೆದರು.


    ಎರಡು ದಿನಗಳ ಹಿಂದೆ ಬಿಜೆಪಿಯವರು ನಾರಾಯಣ ಗುರುವಿಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಪತ್ರಿಕಾಗೋಷ್ಠಿ ಕರೆದು ದೂರಿದ್ದ ಹಿನ್ನೆಲೆ ಅವರಿಗೆ ಪ್ರತಿಕ್ರಿಯಿಸಲು ಮಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಿಜೆಪಿಯವರು ನಾರಾಯಣ ಗುರುವಿಗೆ ಅವಮಾನ ಮಾಡಿದ್ದಾರೆ ಎಂದು ರೈಯವರು ದೂರಿದ್ದಾರೆ.

    ಇದು ಅವರ 2023ರ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆಗೆ ಅನುಗುಣವಾಗಿ ಮಾತಾಡಿದ್ದಾರೆ ಅನ್ನುವುದನ್ನು ತೋರಿಸುತ್ತದೆ. ಮೊನ್ನೆ ನಡೆದ ರಾಜ್ಯಮಟ್ಟದ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಲು ಏನು ಕಾರಣ ಎಂಬುದನ್ನು ಉಸ್ತುವಾರಿ ಸಚಿವರೇ ಸ್ಪಷ್ಟಪಡಿಸಿದ್ದಾರೆ.

    ಇವರ ಆಡಳಿತ ಇರುವ ಸಂದರ್ಭ ಕಾಟಾಚಾರಕ್ಕೆ 100 ಸಂಖ್ಯೆಯ ಒಳಗೆ ಜನರನ್ನು ಸೇರಿಸಿಕೊಂಡು ನಾರಾಯಣ ಗುರುಗಳ ಕಾರ್ಯಕ್ರಮವನ್ನು ಮಾಡಿದ್ದರು.

    ಈ ರೀತಿ ನಾರಾಯಣ ಗುರುಗಳ ಕಾರ್ಯಕ್ರಮ ಮಾಡಿದ್ರೆ ಏನು ಪ್ರಯೋಜನ ಆಗುತ್ತೆ? ನಾರಾಯಣ ಗುರುಗಳಿಗೆ ಬಿಜೆಪಿಯಿಂದ ಅವಮಾನವಾಗುವಂತಹ ಸಂದರ್ಭ ಯಾವತ್ತೂ ಬರಲು ಸಾಧ್ಯವೇ ಇಲ್ಲ.

    ನಾವು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜೆಯನ್ನು ಸಲ್ಲಿಸಿದ ಬಳಿಕ ನಗರದ ಟಿಎಂಪೈ ಸಭಾಂಗಣದಲ್ಲಿ ನಾರಾಯಣ ಗುರುಗಳ ಜಯಂತಿಯನ್ನು ಆಚರಣೆ ಮಾಡಿದ್ದೇವೆ.

    ಹಾಗಿದ್ದ ಮೇಲೆ ಬಿಜೆಪಿಯಿಂದ ಗುರುಗಳಿಗೆ ಹೇಗೆ ಅವಮಾನವಾದಂತಾಗುತ್ತದೆ ರೈಗಳೇ..?ಎಲ್ಲಿಯಾದ್ರೂ ನಾವುಗಳು ನಾರಾಯಣ ಗುರುಗಳಿಗೆ ಅವಮಾನ ಮಾಡಿದ್ದೇವಾ…?.

    ಮೊನ್ನೆ ಬಿಜೆಪಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಹೆಸರು ಎತ್ತಿಲ್ಲ ಎಂಬ ಆರೋಪವನ್ನು ನೀವು ಮಾಡಿದ್ದೀರಿ.

    ಆದ್ರೆ ನಮ್ಮ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರು ನಾರಾಯಣ ಗುರುಗಳ ಹೆಸರು ಹೇಳಿಯೇ ಭಾಷಣ ಆರಂಭ ಮಾಡಿದ್ದಾರೆ. ನಿಮಗೆ ಅನುಮಾನ ಇದ್ದರೆ ಬಿಜೆಪಿ ಜನಸ್ಪಂದನ ಕಾರ್ಯಕ್ರಮದ ವಿಡಿಯೋದ ಒಂದು ತುಣುಕು ತೆಗೆದು ನೋಡಿ ಎಂದು ಸವಾಲು ಎಸೆದರು.

    ರಮಾನಾಥ ರೈ ಈ ಜನ್ಮದಲ್ಲಿ ಓಟಿನಲ್ಲಿ ಗೆಲ್ಲೋದಿಲ್ಲ. ಬೇಕಾದ್ರೆ ಬರೆದುಕೊಳ್ಳಿ, ನಾನು ಹೇಳಿದ ಟೈಮಿಂಗ್ಸ್ ಕೂಡಾ ಬರೆದಿಟ್ಟುಕೊಳ್ಳಿ. 15000 ಸಾವಿರಕ್ಕಿಂತ ಜಾಸ್ತಿ ಓಟಿನಲ್ಲಿ ರಮಾನಾಥ ರೈ ಗೆದ್ದರೆ ನಾನು ಸ್ವಯಂ ನಿವೃತ್ತಿ ಘೋಷಣೆ ಮಾಡ್ತೇನೆ. ನೀನು ಮಾಡ್ತೀಯಾ ಎಂದು ನಾನು ಯು.ಟಿ ಖಾದರ್‌ ಅವರಲ್ಲಿ ಆವತ್ತೇ ಹೇಳಿದ್ದೆ.

    ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅವರು ಕೂಡಾ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ ಅವರನ್ನು ಸ್ವಾಗತಿಸಲು ಎಲ್ಲರೂ ತಯಾರಿ ನಡೆಸಿ ಎಂದು ಪೊಲೀಸ್ ಇಲಾಖೆ ಹೇಳಿದಾಗ ನಾವೂ ಕೂಡಾ ಎಲ್ಲಾ ಸಿದ್ಧತೆ ಮಾಡಿ ಕಾದು ಕೂತಿದ್ದರೂ ಸಿಎಂಗೆ ಗುಂಡು ತುಂಡು ಕೊಟ್ಟು ದೇವಸ್ಥಾನಕ್ಕೆ ಬಾರದೇ ಸೀದಾ ಕಾರಿನಲ್ಲಿ ಕರೆದುಕೊಂಡು ಹೋಗುವಾಗ ನಿಮಗೆ ಅವಮಾನ ಆಗುತ್ತಿದೆ ಅಂತ ಅನಿಸಿಲ್ವಾ? ರೈ ಅವರೇ ‘ ಎಮದು ವ್ಯಂಗ್ಯವಾಗಿ ನುಡಿದರು.

     

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending