Connect with us

    BIG BOSS

    ಬಿಗ್‌ಬಾಸ್ ಶೂಟಿಂಗ್ ಮುಗಿಸಿ ಆಸ್ಪತ್ರೆಗೆ ಬಂದಿದ್ದೆ, ಕೊನೆಯ ಬಾರಿಗೆ ಪ್ರಜ್ಞೆಯಲ್ಲಿದ್ದಾಗ ನೋಡಲಾಗಲಿಲ್ಲ: ಕಿಚ್ಚ ಭಾವುಕ

    Published

    on

    ತಾಯಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ನಟ ಸುದೀಪ್ ತಾಯಿಯ ಕುರಿತು ಸುದೀರ್ಘವಾದ ಭಾವುಕ ಟ್ವೀಟ್‌ವೊಂದನ್ನು ಹಂಚಿಕೊಂಡಿದ್ದಾರೆ.

    ನನ್ನ ತಾಯಿ, ಯಾವುದೇ ಪಕ್ಷಪಾತವಿಲ್ಲದ, ಅತ್ಯಂತ ಪ್ರೀತಿಯ, ಕ್ಷಮಿಸುವ, ಕಾಳಜಿ ವಹಿಸುವ ಮತ್ತು ಪ್ರೀತಿಯನ್ನು ಕೊಡುವ ನನ್ನ ಬದುಕಿನಲ್ಲಿ ಮೌಲ್ಯಯುತವಾದನ್ನು ತೋರಿಸಿದವಳು ಮತ್ತು ಯಾವಾಗಲೂ ಅದನ್ನು ಪಾಲಿಸುವ ಮೌಲ್ಯವನ್ನು ಹೇಳಿಕೊಟ್ಟ ಜೀವವದು. ಬದುಕಿನಲ್ಲಿ ನನ್ನ ಪಕ್ಕದಲ್ಲಿಯೇ ಇದ್ದ ಮಾನವ ರೂಪದ ನಿಜವಾದ ದೇವರಾಗಿದ್ದರು ನನ್ನಮ್ಮ ಎಂದು ಬರೆದುಕೊಂಡಿದ್ದಾರೆ.

    ನಟ ಸುದೀಪ್ ತಾಯಿ ಸರೋಜ ಅವರು ಅ.20ರಂದು ಬೆಳಗ್ಗೆ ಇಹಲೋಕ ತ್ಯಜಿಸಿದರು. ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅ.20ರಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿತು.

    ಪೋಸ್ಟ್‌ನಲ್ಲಿ ಏನಿದೆ?

    ನನ್ನ ತಾಯಿ, ಯಾವುದೇ ಪಕ್ಷಪಾತವಿಲ್ಲದ, ಅತ್ಯಂತ ಪ್ರೀತಿಯ, ಕ್ಷಮಿಸುವ, ಕಾಳಜಿ ವಹಿಸುವ ಮತ್ತು ಪ್ರೀತಿಯನ್ನು ಕೊಡುವ ನನ್ನ ಬದುಕಿನಲ್ಲಿ ಮೌಲ್ಯಯುತವಾದನ್ನು ತೋರಿಸಿದವಳು ಮತ್ತು ಯಾವಾಗಲೂ ಅದನ್ನು ಪಾಲಿಸುವ ಮೌಲ್ಯವನ್ನು ಹೇಳಿಕೊಟ್ಟ ಜೀವವದು. ಬದುಕಿನಲ್ಲಿ ನನ್ನ ಪಕ್ಕದಲ್ಲಿಯೇ ಇದ್ದ ಮಾನವ ರೂಪದ ನಿಜವಾದ ದೇವರಾಗಿದ್ದರು ನನ್ನಮ್ಮ.

    ನನಗೆ ಹಬ್ಬ ಎಂದರೆ ಅದು ನನ್ನ ತಾಯಿ. ನನ್ನ ಮೊದಲ ಅಭಿಮಾನಿ, ಹಿತೈಷಿ ಎಲ್ಲವೂ ಅವರಾಗಿದ್ದರು. ಕೆಟ್ಟ ಕೆಲಸವನ್ನೂ ಇಷ್ಟಪಟ್ಟವರು, ಒಳ್ಳೆಯ ಕೆಲಸ ಮಾಡಿದಾಗಲಂತೂ ಬೆನ್ನು ತಟ್ಟಿ ಸಂಭ್ರಮಿಸಿದವರು. ಈಗ ಆ ಎಲ್ಲ ಸುಂದರ ಘಳಿಗೆಗಳು ನೆನಪು ಮಾತ್ರ. ನಾನೀಗ ಅನುಭವಿಸುತ್ತಿರುವ ಸಂಕಟವನ್ನು ಹಂಚಿಕೊಳ್ಳಲು ನನ್ನಲ್ಲಿ ಪದಗಳಿಲ್ಲ. ಅವರಿಲ್ಲದ ಶೂನ್ಯವನ್ನು ಒಪ್ಪಿಕೊಳ್ಳಲು ನನ್ನಿಂದ ಆಗುತ್ತಿಲ್ಲ. ಕೇವಲ 24 ಗಂಟೆಗಳಲ್ಲಿ ಎಲ್ಲವೂ ಬದಲಾಗಿ ಹೋಯಿತು.

    ಪ್ರತಿನಿತ್ಯವೂ ನನ್ನ ಮೊಬೈಲ್‌ಗೆ ಬೆಳಗ್ಗೆ 5.30ಕ್ಕೆ ಮೊದಲ ಮೆಸೇಜ್ ಬರುವುದು ಅದು ನನ್ನ ತಾಯಿಯಿಂದಲೇ. `ಗುಡ್ ಮಾರ್ನಿಂಗ್ ಕಂದ’ ಎಂಬ ಸಂದೇಶ ಬರುತ್ತಿತ್ತು. ಅಮ್ಮನಿಂದ ನನಗೆ ಕೊನೆಯ ಸಲ ಸಂದೇಶ ಬಂದಿದ್ದು, ಅಕ್ಟೋಬರ್ 18ರಂದು. ಮಾರನೇ ದಿನ ಬೆಳಗ್ಗೆ ನಾನು ಬಿಗ್‌ಬಾಸ್ ಮನೆಯ ಸೆಟ್‌ನಲ್ಲಿದ್ದೆ. ಅಂದು ಅಮ್ಮನ ಸಂದೇಶ ನನಗೆ ತಲುಪಲೇ ಇಲ್ಲ. ಕಳೆದ ಹಲವು ವರ್ಷಗಳಿಂದ ನಾನು ಯಾವತ್ತೂ ಸಂದೇಶವನ್ನು ಮಿಸ್ ಮಾಡಿಕೊಂಡವನು ಅಲ್ಲ. ಇದೇ ಮೊದಲ ಬಾರಿಗೆ ಅಮ್ಮ ಸಂದೇಶ ಕಳುಹಿಸಲಿಲ್ಲ.

    ನಾನೇ ಅಮ್ಮನ ಮೊಬೈಲ್‌ಗೆ ಸಂದೇಶ ಕಳುಹಿಸಿದೆ. ಕರೆ ಮಾಡಿ ಈ ಕುರಿತು ವಿಚಾರಿಸೋಣವೆಂದರೆ, ಬಿಗ್‌ಬಾಸ್ ಚಿತ್ರೀಕರಣದ ಒತ್ತಡದಲ್ಲಿದ್ದೆ. ಹಾಗಾಗಿ ಸಾಧ್ಯವಾಗಲಿಲ್ಲ. ಶನಿವಾರದ ಬಿಗ್‌ಬಾಸ್ ಎಪಿಸೋಡ್ ಚಿತ್ರೀಕರಣಕ್ಕಾಗಿ ಇನ್ನೇನು ವೇದಿಕೆಯ ಮೇಲೆ ಹತ್ತಬೇಕು ಎನ್ನುವಷ್ಟರಲ್ಲಿ ಅಮ್ಮನಿಗೆ ಹುಷಾರಿಲ್ಲದ, ಅವರು ಆಸ್ಪತ್ರೆಗೆ ದಾಖಲಾಗಿರುವ ಸಂದೇಶ ಬಂತು. ಕೂಡಲೇ ಸಹೋದರಿಗೆ ಕರೆ ಮಾಡಿ, ಡಾಕ್ಟರ್ ಜೊತೆ ಮಾತನಾಡಿ ನಾನು ಸ್ಟೇಜ್ ಮೇಲೆ ಹತ್ತಿದೆ.

    ನಾನು ಚಿತ್ರೀಕರಣದಲ್ಲಿ ಇರುವಾಗಲೇ ಅಮ್ಮನ ಆರೋಗ್ಯ ಸ್ಥಿತಿ ಗಂಭೀರ ಅಂತ ನನ್ನ ತಂಡದವರು ತಿಳಿಸಿದರು. ಎಂತಹ ಅಸಹಾಯಕ ಸ್ಥಿತಿ ನನ್ನದು. ಮೊದಲ ಬಾರಿಗೆ ಇಂಥದ್ದೊಂದು ಸನ್ನಿವೇಶ ನನಗೆ ಎದುರಾಗಿದ್ದು. ಶೂಟಿಂಗ್ ಮಾಡುತ್ತಿರುವಾಗಲೇ ನನ್ನ ತಲೆಯಲ್ಲಿ ಹಲವಾರು ವಿಷಯಗಳು ಚಲಿಸುತ್ತಿದ್ದವು. ಸಾಕಷ್ಟು ಭಯವಿತ್ತು. ಶನಿವಾರದ ಎಪಿಸೋಡ್ ಮುಗಿಸಲೇಬೇಕು ಎನ್ನುವ ಒತ್ತಡವೂ ಇತ್ತು. ಎಲ್ಲವನ್ನೂ ನಿಭಾಯಿಸಬೇಕಿತ್ತು. ಮನಸ್ಸನ್ನು ಶಾಂತಚಿತ್ತಕ್ಕೆ ತಂದು ಶನಿವಾರದ ಎಪಿಸೋಡ್ ಮುಗಿಸಿಕೊಟ್ಟೆ. ಇದೆಲ್ಲವೂ ಸಾಧ್ಯವಾಗಿದ್ದು, ನನ್ನ ತಾಯಿ ಹೇಳಿಕೊಟ್ಟ ಪಾಠದಿಂದ.

    ಎಲ್ಲ ಒತ್ತಡವನ್ನೂ ನಿಭಾಯಿಸಿಕೊಂಡು ಶನಿವಾರದ ಎಪಿಸೋಡ್ ಮುಗಿಸಿಕೊಟ್ಟು ಕೂಡಲೇ ಆಸ್ಪತ್ರೆಯತ್ತ ಧಾವಿಸಿದೆ. ನಾನು ಆಸ್ಪತ್ರೆ ತಲುಪುವ ಮುನ್ನವೇ ಅಮ್ಮನನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದರು. ಅತ್ಯಂತ ನೋವಿನ ಸಂಗತಿ ಅಂದರೆ, ನನ್ನ ತಾಯಿ ಪ್ರಜ್ಞೆಯಲ್ಲಿರುವಾಗ ಕೊನೆಯ ಬಾರಿಗೆ ಅವರನ್ನು ನೋಡಲು ಆಗಲೇ ಇಲ್ಲ. ಅವರು ಕೊನೆಯುಸಿರು ಎಳೆಯುವ ಮುನ್ನ ಅಮ್ಮ ನೋವಿನಲ್ಲೇ ಸಾಕಷ್ಟು ಹೋರಾಡಿದ್ದಳು. ಕೆಲವೇ ಕೆಲವು ಗಂಟೆಗಳಲ್ಲಿ ಏನೆಲ್ಲ ಬದಲಾವಣೆ ಆಗಿದ್ದವು.

    ಅಮ್ಮ ಇಲ್ಲ ಅನ್ನುವುದು ಸತ್ಯ. ಆದರೆ, ವಾಸ್ತವವನ್ನು ಹೇಗೆ ಸ್ವೀಕರಿಸಬೇಕು ಅನ್ನೋದು ಗೊತ್ತಾಗಲಿಲ್ಲ. ಮೊನ್ನೆಯಷ್ಟೇ ಚಿತ್ರೀಕರಣಕ್ಕೆ ಹೊರಡುವ ಮುನ್ನ ಬಿಸಿ ಅಪ್ಪುಗೆಯೊಂದನ್ನು ಕೊಟ್ಟು ಕಳುಹಿಸಿದ್ದರು. ಕೆಲವೇ ಕೆಲವು ಗಂಟೆಗಳಲ್ಲಿ ಇಲ್ಲವಾಗಿ ಹೋದರು. ನಾನು ನನ್ನ ತಾಯಿಯನ್ನು ಕಳೆದುಕೊಂಡಿದ್ದೇನೆ. ಈ ಮಂಗಳಕರ ದಿನವು ಪ್ರಕೃತಿಯು ಈ ಭೂಮಿಯಿಂದ ತಾಯಿಯನ್ನು ಕರೆದುಕೊಂಡು ಹೋಗಿದೆ ಎಂದು ಸಮಾಧಾನಿಸಿಕೊಳ್ಳುವೆ. ನನ್ನ ಬದುಕಿನ ಅತ್ಯಂತ ಬೆಲೆಬಾಳುವ ಮುತ್ತೊಂದು ನನ್ನಿಂದ ಜಾರಿಹೋಗಿದೆ. ನನ್ನ ತಾಯಿ ಶಾಂತಿಯಿಂದಲೇ ತುಂಬಿರೋ ಮಡಿಲನ್ನು ಸೇರಿದ್ದಾರೆ ಎಂದು ಖಾತ್ರಿಯಿದೆ.

    ಅಮ್ಮನಿಗೆ ಗೌರವ ಸಲ್ಲಿಸಲು ಆಗಮಿಸಿದ್ದ ಪ್ರತಿಯೊಬ್ಬರಿಗೂ ನಾನು ಋಣಿ ಮತ್ತು ಧನ್ಯವಾದಗಳನ್ನು ತಿಳಿಸುತ್ತೇನೆ. ಇದು ನಿಜವಾಗಿಯೂ ನಿಮ್ಮೆಲ್ಲರ ಕರುಣೆಯಾಗಿತ್ತು. ನನ್ನ ತಾಯಿ ಆತ್ಮಕ್ಕೆ ಶಾಂತಿ ಕೋರಿದ ಎಲ್ಲರಿಗೂ ಧನ್ಯವಾದಗಳು. ಅಮ್ಮಾ, ಚೆನ್ನಾಗಿ ವಿಶ್ರಾಂತಿ ಪಡೆಯಿರಿ. ನಾನು ನಿಮ್ಮನ್ನು ಸದಾ ಪ್ರೀತಿಸುತ್ತೇನೆ ಮತ್ತು ಅಮೂಲ್ಯವಾದದ್ದನ್ನು ಕಳೆದುಕೊಂಡಿದ್ದೇನೆ ಎಂದು ಸುದೀಪು ಬರೆದುಕೊಂಡಿದ್ದಾರೆ.

    BIG BOSS

    ‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

    Published

    on

    ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಅವರು ಕಟುವಾಗಿ ಖಂಡಿಸಿದ್ದರು. ಹಾಗಂತ ಚೈತ್ರಾ ಅವರು ತಮ್ಮ ಮಾತಿನ ವರಸೆಯನ್ನು ಬದಲಿಸಿಕೊಂಡಿದ್ದಾರಾ? ಖಂಡಿತಾ ಇಲ್ಲ. ಸೋಮವಾರದ (ಅಕ್ಟೋಬರ್​ 21) ಸಂಚಿಕೆಯಲ್ಲಿ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ಬಗ್ಗೆ ಅವರು ಮಾತನಾಡಿದ್ದಾರೆ.

    ಕಳೆದ ವಾರ ಜಗದೀಶ್ ಅವರಿಗೆ ಉಗ್ರಂ ಮಂಜು ಅವರು ಚಪ್ಪಲಿ ತೋರಿಸಿದ್ದರು. ಅದು ಸರಿಯಲ್ಲ ಎಂದು ಸುದೀಪ್ ಅವರು ಹೇಳಿದ್ದರು. ಇಂಥ ಹಲವು ಕಾರಣಗಳಿಂದಾಗಿ ಮನೆಯ ಸದಸ್ಯರಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಅಷ್ಟಾದರೂ ಕೂಡ ಚೈತ್ರಾ ಅವರು ಮಾತಿನ ವರಸೆ ಬದಲಾಯಿಸಿಕೊಂಡಿಲ್ಲ. ಸಂದರ್ಭ ಬಂದರೆ ತಾವು ಮೆಟ್ಟಿನಲ್ಲಿ ಹೊಡೆಯುವುದಾಗಿ ಚೈತ್ರಾ ಹೇಳಿದ್ದಾರೆ.

    ಈ ಮೊದಲು ಹಂಸಾ ಅವರ ಬಗ್ಗೆ ಗೋಲ್ಡ್ ಸುರೇಶ್ ಏನೇನೋ ಕಮೆಂಟ್ ಮಾಡಿದ್ದರು. ಹಂಸಾ ಅವರದ್ದು ಲವ್​ ಸ್ಟೋರಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದರು. ಅದರಿಂದ ಹಂಸಾಗೆ ಬೇಸರ ಆಯಿತು. ಹಾಗಾಗಿ ಅವರು ಈ ವಿಚಾರವನ್ನು ಚೈತ್ರಾ ಕುಂದಾಪುರ ಜೊತೆ ಚರ್ಚೆ ಮಾಡುತ್ತಿದ್ದರು. ಆಗ ಚೈತ್ರಾ ಅವರ ಮಾತುಗಳು ಮೆಟ್ಟಿನ ತನಕ ಹೋಯಿತು.

    ‘ನನ್ನ ಕ್ಯಾರೆಕ್ಟರ್ ಬಗ್ಗೆ ಯಾರಾದರೂ ಮಾತಾಡಿದರೆ ಮೆಟ್ಟು ತಗೊಂಡು ಹೊಡಿತೀನಿ. ಅದರಿಂದ ನಾನು ಹೊರಗೆ ಹೋದ್ರೂ ಚಿಂತೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ’ ಎಂದು ಚೈತ್ರಾ ಕುಂದಾಪುರ ಅವರ ಹೇಳಿದ್ದಾರೆ. ಇಂಥ ಮಾತುಗಳನ್ನು ಆಡಿದ್ದಕ್ಕೆ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಯಾವ ರೀತಿ ಪಂಚಾಯ್ತಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.

    Continue Reading

    BIG BOSS

    Watch Video: ಬಿಗ್​ ಬಾಸ್​ನಲ್ಲಿ ಪಾತ್ರೆ ತೊಳೆದ ಪರಿಣಾಮ; ಲಾಯರ್ ಜಗದೀಶ್​ಗೆ ಮನೆಯಲ್ಲಿ ಎಂಥಾ ಸ್ಥಿತಿ ನೋಡಿ..!

    Published

    on

    ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಸ್ದದು ಮಾಡಿದ್ದು ಲಾಯರ್ ಜಗದೀಶ್. ಮೂರು ವಾರ ಕಳೆಯುವುದರ ಒಳಗೆ ಅವರು ದೊಡ್ಮನೆಯಿಂದ ಔಟ್ ಆದರು. ಹೊರ ಹೋದ ಬಳಿಕ ಅವರಿಗೆ ಸೃಷ್ಟಿ ಆಗಿರೋ ಅಭಿಮಾನಿ ಬಳಗ ಎಂಥದ್ದು ಎಂಬುದು ಗೊತ್ತಾಗಿದೆ. ಈಗ ಅವರು ಮನೆಯಲ್ಲೂ ಪಾತ್ರೆ ತೊಳೆಯೋ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ.

    ‘ಬಿಗ್ ಬಾಸ್’ ಮನೆಯಲ್ಲಿ ಜಗದೀಶ್ ಅವರು ಜಗಳಕ್ಕೆ ಮಾತ್ರ ನಿಲ್ಲುತ್ತಿರಲಿಲ್ಲ. ಅವರು ಅಗತ್ಯ ಬಂದಾಗ ಪಾತ್ರೆ ತೊಳೆಯುತ್ತಿದ್ದರು. ಇದು ಅವರ ನೆಚ್ಚಿನ ಕಾಯಕಗಳಲ್ಲಿ ಒಂದಾಗಿತ್ತು. ಈ ಕಾರಣದಿಂದಲೇ ಹಗಲು ರಾತ್ರಿ ಎನ್ನದೆ ಸಿಕ್ಕ ಸಿಕ್ಕಾಗಲೆಲ್ಲ ಅಡುಗೆ ಮನೆಯ ವಾಶ್ ಬೇಸ್​ನಲ್ಲಿ ನಿಲ್ಲುತ್ತಿದ್ದರು. ಇದು ಅವರ ಪತ್ನಿಯ ಗಮನಕ್ಕೆ ಬಂದಿದೆ.

    ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರು ಫನ್ ಆಗಿ ಒಂದು ವಿಡಿಯೋ ಮಾಡಿದ್ದಾರೆ. ಈ ವಿಡಿಯೋದಲ್ಲಿ ಕೀರ್ತಿ ಅವರು ಜಗದೀಶ್ ಮನೆ ಒಳಗೆ ಬರುತ್ತಾರೆ. ಅಲ್ಲಿ ಜಗದೀಶ್ ಅವರು ಪಾತ್ರೆ ತೊಳೆಯುತ್ತಾ ನಿಂತಿರುತ್ತಾರೆ. ‘ಏನ್ ಸರ್ ಸಂದರ್ಶನ ಕೊಡ್ತೀನಿ ಅಂಥ ಹೇಳಿ ಪಾತ್ರೆ ತೊಳೆಯುತ್ತಿದ್ದೀರಲ್ಲ’ ಎಂದು ಪ್ರಶ್ನೆ ಮಾಡಿದರು ಕೀರ್ತಿ. ಇದಕ್ಕೆ ಜಗದೀಶ್ ಉತ್ತರ ಕೊಟ್ಟರು.

    ‘ಏನ್ ಮಾಡೋದು. ನಮ್ಮ ಮನೆ, ನಮ್ ಪಾತ್ರೆ ತೊಳೆಯೋದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನೆ ಮಾಡಿದರು ಜಗದೀಶ್. ಇದಕ್ಕೆ ಜಗದೀಶ್ ಪತ್ನಿ ಉತ್ತರ ನೀಡುತ್ತಾರೆ. ‘ಬಿಗ್ ಬಾಸ್ ಮನೆಯಲ್ಲಿ ರಾತ್ರಿ-ಹಗಲು ಎನ್ನದೇ ತೊಳೆಯುತ್ತಿದ್ದರು. ಹೀಗಾಗಿ ತೊಳೆಸುತ್ತಾ ಇದ್ದೇನೆ’ ಎನ್ನುತ್ತಾರೆ ಜಗದೀಶ್ ಪತ್ನಿ.

    ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಹಲವರು ಹಲವು ರೀತಿಯ ಕಮೆಂಟ್ ಮಾಡಿದ್ದಾರೆ. ಅನೇಕರ ಗಮನ ಮನೆಯ ಮೇಲೆ ಹೋಗಿದೆ. ಮನೆ ಅಷ್ಟು ಕಲರ್​ಫುಲ್ ಆಗಿಲ್ಲ. ಹೀಗಾಗಿ, ಕೆಲವರು ಜಗದೀಶ್ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ‘ನೀವೇನಾ ನಿಮ್ಮ ಮನೆಯ ನಾಯಿಗೆ ಒಂದು ಲಕ್ಷ ರೂಪಾಯಿ ಖರ್ಚು ಮಾಡುವವರು’ ಎಂದು ಪ್ರಶ್ನೆ ಮಾಡಿದ್ದಾರೆ.

    Watch Video:

    Continue Reading

    BIG BOSS

    ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ; ಚೈತ್ರಾ ಕುಂದಾಪುರ

    Published

    on

    ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು. ಈಗ ಬಿಗ್ ಬಾಸ್ ನೋಡುತ್ತಿರುವವರಿಗೆ ಅವರ ಮೇಲಿದ್ದ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಚೈತ್ರಾ ಕುಂದಾಪುರಗೆ ಮದುವೆ ಫಿಕ್ಸ್ ಆಗಿದೆಯಂತೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.

    ‘ಬಿಗ್ ಬಾಸ್’ ಒಳಗೆ ಹೋದಾಗ ಕೆಲವರ ಮಧ್ಯೆ ಆಪ್ತತೆ ಬೆಳೆಯುತ್ತದೆ. ಇದನ್ನು ಪ್ರೀತಿ ಎಂದು ಬಿಂಬಿಸುವ ಕೆಲಸ ಆಗುತ್ತದೆ. ಇದು ಕೆಲವರಿಗೆ ಇಷ್ಟ ಆದರೆ, ಇನ್ನೂ ಕೆಲವರಿಗೆ ಇಷ್ಟ ಆಗುವುದಿಲ್ಲ. ಚೈತ್ರಾ ಕುಂದಾಪುರಗೆ ಈ ವಿಚಾರದಲ್ಲಿ ನಂಬಿಕೆ ಇಲ್ಲ. ತಮ್ಮ ವಿಚಾರದಲ್ಲಿ ಯಾರಾದರೂ ಕಥೆ ಕಟ್ಟೋಕೆ ಬಂದರೆ ಸರಿ ಇರಲ್ಲ ಎಂದು ಅವರು ಹೇಳಿದ್ದಾರೆ.

    ಚೈತ್ರಾ, ಹಂಸಾ ಹಾಗೂ ಮಾನಸಾ ಒಂದು ಕಡೆ ಕುಳಿತು ಮಾತನಾಡುತ್ತಿದ್ದರು. ‘ನಂದು, ರಂಜಿತ್ ಹಾಗೂ ತ್ರಿವಿಕ್ರಂದು ಲವ್​ಸ್ಟೋರಿ ಎಂದು ಸುರೇಶ್ ಹೇಳಿಕೆ ಕೊಟ್ಟರು. ಹೀಗೆಲ್ಲ ಹೇಳಿದ್ರೆ ಕಷ್ಟ ಆಗುತ್ತದೆ. ಅವರ ಜೊತೆ ಯಾಕೆ ಕ್ಲೋಸ್ ಆದೆ ಎಂದರೆ ಅವರು ಯಾರ ಬಗ್ಗೆಯೂ ಮಾತನಾಡಲ್ಲ. ಆದರೆ ಸುರೇಶ್ ಜೊತೆ ಕುಳಿತರೆ ನೆಗೆಟಿವ್ ವೈಬ್ಸ್ ಜಾಸ್ತಿ. ಈ ಕಾರಣಕ್ಕೆ ರಂಜಿತ್ ಹಾಗೂ ತ್ರಿವಿಕ್ರಂ ಜೊತೆ ಕ್ಲೋಸ್ ಆಗಿದ್ದೇನೆ’ ಎಂದು ಹಂಸಾ ಸ್ಪಷ್ಟನೆ ಕೊಟ್ಟರು.

    ‘ನಾನು ವಿಕ್ಕಿ ಜೊತೆ ಕ್ಲೋಸ್ ಆಗಿದ್ದೇನೆ ಎಂದು ಸುರೇಶ್​ ಅಣ್ಣ ಹೆಳುತ್ತಲೇ ಇದ್ದಾರೆ. ನನ್ನ ವಿಚಾರದಲ್ಲಿ ಯಾರಾದರೂ ಲವ್​​ಸ್ಟೋರಿ ಶುರು ಮಾಡಿದರೆ ಮೆಟ್ಟು​ ತೆಗೆದುಕೊಂಡು ಹೊಡೆಯುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನನ್ನ ಕ್ಯಾರೆಕ್ಟರ್​​ಗೆ ಯಾರೂ ಕಳಂಕ ತರಬಾರದು ಎಂದು ನಾನು ಬಯಸುತ್ತೇನೆ. ಮದುವೆ ಫಿಕ್ಸ್​ ಮಾಡಿಕೊಂಡು ಬಂದಿದ್ದೇನೆ. ಯಾರ ಜೊತೆಯೂ ಸಂಬಂಧ ಕಟ್ಟೋದು ಇಟ್ಟುಕೊಳ್ಳಬೇಡಿ’ ಎಂದರು ಚೈತ್ರಾ.

    Continue Reading

    LATEST NEWS

    Trending