ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ ಅಫಿಡವಿಟ್ಗಳಿಗೆ ಸಂಬಂಧಿಸಿದಂತೆ ಈ ನೋಟಿಸ್ ಕಳುಹಿಸಲಾಗಿದೆ.
ಈ ನೋಟಿಸ್ಗೆ ಪ್ರತಿಕ್ರಿಯೆ ನೀಡಿದ ಪವಾರ್, “2004, 2009, 2014 ಮತ್ತು 2020ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸಲ್ಲಿಸಿರುವ ಎಲ್ಲ ಅಫಿಡವಿಟ್ಗಳಲ್ಲಿರುವ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಯು ಪ್ರಸ್ತುತ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪವಾರ್, “ನನಗೆ ಆದಾಯ ತೆರಿಗೆ ಇಲಾಖೆಯಿಂದ ಪ್ರೇಮ ಪತ್ರ ಬಂದಿದೆ.” ಎಂದು ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರು ಜಾರಿ ನಿರ್ದೇಶನಾಲಯದ ಮುಂದೆ ಶುಕ್ರವಾರ ಹಾಜರಾದರು. ಈ ವೇಳೆ ಅವರು ತಮ್ಮನ್ನು ‘ನಿರ್ಭೀತ’ ಎಂದು ವರ್ಣಿಸಿಕೊಂಡಿದ್ದಾರೆ.
“ನಾನು ನಿರ್ಭೀತ ವ್ಯಕ್ತಿ. ಏಕೆಂದರೆ ನನ್ನ ಜೀವನದಲ್ಲಿ ನಾನು ಯಾವ ತಪ್ಪನ್ನೂ ಮಾಡಿಲ್ಲ. ಇದೆಲ್ಲವೂ ರಾಜಕೀಯ. ಇದು ಮುಂದೆ ನಮಗೆ ಗೊತ್ತಾಗಲಿದೆ.
ಈಗ ನಾನು ತಟಸ್ಥ ಸಂಸ್ಥೆಗೆ ಹೋಗುತ್ತಿರುವ ಭಾವನೆ ಇದೆ. ನಾನು ಅವರನ್ನು ಸಂಪೂರ್ಣವಾಗಿ ನಂಬುತ್ತೇನೆ” ಎಂದು ರಾವತ್ ತಿಳಿಸಿದ್ದಾರೆ.