Connect with us

LATEST NEWS

‘ನನಗೆ ಆಯುರ್ವೇದ ವೈದ್ಯರಿಂದ ಚಿಕಿತ್ಸೆ ಬೇಕು’ ಎಂದ ಯಾಸೀನ್‌ ಭಟ್ಕಳ್‌

Published

on

ದೆಹಲಿ: ಇಂಡಿಯನ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಯಾಸಿನ್ ಭಟ್ಕಳ್ ತಿಹಾರ್ ಜೈಲು ಆಡಳಿತ ಮಂಡಳಿ ಬಳಿಯಲ್ಲಿ ಆಯುರ್ವೇದ ವೈದ್ಯರಿಂದ ಚಿಕಿತ್ಸೆ ಕೊಡಿಸಬೇಕು ಎಂದು ಕೇಳಿಕೊಂಡಿದ್ದಾರೆ.

ಹಾಗೂ ಜೈಲು ಆಡಳಿತ ಆಯುರ್ವೇದ ಚಿಕಿತ್ಸೆ ಕೊಡಿಸಬೇಕು ಎಂಬ ಯಾಸಿನ್ ಭಟ್ಕಳ್ ಕೋರಿಕೆಯನ್ನು ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

ಯಾಸಿನ್ ಭಟ್ಕಳ್​ಗೆ ಗಂಟು ನೋವಿನ ಸಮಸ್ಯೆ ಇದೆ. ಆ ಬಗ್ಗೆ ಅವರು ಆಯುರ್ವೇದಿಕ್ ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲು ಕೇಳಿಕೊಂಡಿದ್ದಾರೆ.

ಅದನ್ನು ನಾವು ನೀಡುತ್ತೇವೆ ಎಂದು ಜೈಲು ಡಿಜಿ ಸಂದೀಪ್ ಗೋಯೆಲ್ ಹೇಳಿಕೆ ನೀಡಿದ್ದಾರೆ.
ಯಾಸಿನ್ ಭಟ್ಕಳ್ ಇಂಡಿಯನ್ ಮುಜಾಹಿದೀನ್ ಸಂಘಟನೆ ಮಾಡಿರುವ ಆರೋಪ ಹೊತ್ತುಕೊಂಡಿದ್ದಾರೆ. ಹಾಗೂ ಭಾರತದ ಕೆಲವು ಕಡೆಗಳಲ್ಲಿ ನಡೆದ ಬಾಂಬ್ ದಾಳಿಯ ಆರೋಪ ಹೊಂದಿದ್ದಾರೆ.

ಜರ್ಮನಿ ಬೇಕರಿ ಬ್ಲಾಸ್ಟ್, ದೆಹಲಿಯ ಜಾಮಿಯಾ ಮಸೀದಿ ಶೂಟಿಂಗ್, ವಾರಣಾಸಿ ಬ್ಲಾಸ್ಟ್, ಹೈದರಾಬಾದ್ ಬ್ಲಾಸ್ಟ್ ಹಾಗೂ ಮುಂಬೈ ಬಾಂಬ್ ದಾಳಿಯ ಆರೋಪ ಯಾಸಿನ್ ಮೇಲಿದೆ.
ಭಯೋತ್ಪಾದಕ,

ಉಗ್ರಗಾಮಿ ಯಾಸಿನ್​ನನ್ನು 2013 ರಲ್ಲಿ ನೇಪಾಳದಲ್ಲಿ ಬಂಧಿಸಲಾಗಿತ್ತು. ಇಂಡಿಯನ್ ಮುಜಾಹಿದೀನ್​ನ ಮತ್ತೊಬ್ಬ ಅಸಾದುಲ್ಲಾ ಅಖ್ತರ್ ಜೊತೆಗೆ ಯಾಸಿನ್​ನನ್ನು ಬಂಧಿಸಲಾಗಿತ್ತು. ಆ ಮೂಲಕ ಇಂಡಿಯನ್ ಮುಜಾಹಿದೀನ್ ಸಂಘಟನೆಯ ಹಲವರ ಹೆಸರು ಬಯಲಾಗಿತ್ತು.
ಜೈಲು ಅಧಿಕಾರಿಗಳು ನೀಡಿರುವ ಮಾಹಿತಿಯಂತೆ, ಯಾಸಿನ್ ಭಟ್ಕಳ್ ತಿಹಾರ್ ಜೈಲಿನ, ಜೈಲು ಸಂಖ್ಯೆ 2 ರಲ್ಲಿ ಬಂಧಿತರಾಗಿದ್ದಾರೆ.

ಗ್ಯಾಂಗ್​ಸ್ಟರ್ ಛೋಟಾ ರಾಜನ್ ಹಾಗೂ ಇಂಡಿಯನ್ ಮುಜಾಹಿದೀನ್​ನ ತೆಹ್​ಸೀನ್ ಅಖ್ತರ್ ಕೂಡ ಅದೇ ಜೈಲಿನಲ್ಲಿ ಇದ್ದಾರೆ.
ಮುಂಬೈನ ಮುಕೇಶ್ ಅಂಬಾನಿ ಮನೆಯ ಮುಂದೆ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಎಸ್​ಯುವಿ ಕಾರ್ ನಿಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದ ಜೈಶ್ ಉಲ್ ಹಿಂದ್ ಸಂಘಟನೆಯ ಜೊತೆಗೆ ಟೆಲಿಗ್ರಾಂ ಚಾನಲ್​​ ಮೂಲಕ ಸಂವಹನ ನಡೆಸಿದ್ದ ತೆಹ್​ಸೀನ್ ಅಖ್ತರ್ ಇದೀಗ ಹಲವು ತನಿಖಾ ಕಾರ್ಯಗಳ ಸುಳಿಯಲ್ಲಿ ಇದ್ದಾನೆ.

LATEST NEWS

ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ

Published

on

ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.

ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು.  ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್‌ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಸಾ*ವಿನಲ್ಲೂ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

Trending