Connect with us

    LATEST NEWS

    ನನ್ನದೂ ತಪ್ಪಿದೆ, ಯುವ ಹೇಳಿದ್ದಕ್ಕೆ ನಾನು ಮುಂದುವರೆದೆ…ಸಪ್ತಮಿ ಗೌಡ ಆಡಿಯೋ ವೈರಲ್!?

    Published

    on

    ಬೆಂಗಳೂರು/ ಮಂಗಳೂರು : ಸದ್ಯ ಚಂದನವನದಲ್ಲಿ ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ ದಂಪತಿ ವಿಚ್ಛೇದನದ ಬಗ್ಗೆ ಚರ್ಚೆ ನಡೆಯುತ್ತಿದೆ. ಇವರಿಬ್ಬರ ನಡುವೆ ಕಾಂತಾರ ಬೆಡಗಿ ಸಪ್ತಮಿ ಗೌಡ ಅವರ ಹೆಸರೂ ತಳುಕು ಹಾಕಿಕೊಂಡಿರೋದು ಹಳೇ ವಿಚಾರ. ಆದರೆ, ಸಪ್ತಮಿ ಗೌಡ ಅವರದ್ದೂ ಎನ್ನಲಾದ ಆಡಿಯೋವೊಂದು ವೈರಲ್ ಆಗುತ್ತಿದೆ.

    ಹೌದು, ನಟ ಯುವ ರಾಜ್​ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಬಯಸಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಯುವ ಪರ ವಕೀಲರು, ಶ್ರೀದೇವಿ ವಿರುದ್ಧ ಹಲವು ಆರೋಪಗಳನ್ನು ಸಹ ಮಾಡಿದ್ದರು. ವಿಚ್ಛೇದನ ಅರ್ಜಿಯಲ್ಲಿ ಸಹ ಅನೈತಿಕ ಸಂಬಂಧದ ಆರೋಪ ಮಾಡಲಾಗಿತ್ತು. ಅದಕ್ಕೆ ಪ್ರತಿಯಾಗಿ ಶ್ರೀದೇವಿ ಸಹ ಯುವ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದರು. ನಟಿ ಸಪ್ತಮಿ ಗೌಡ ಹೆಸರೂ ಈ ವೇಳೆ ಕೇಳಿ ಬಂದಿತ್ತು. ಇದೀಗ ಆಡಿಯೋ ವೈರಲ್ ಆಗಿದ್ದು ಸಂಚಲನ ಮೂಡಿಸಿದೆ.


    ಆಡಿಯೋದಲ್ಲಿ ಏನಿದೆ?

    ವೈರಲ್ ಆಗಿರೋ ಆಡಿಯೋ ಮಹಿಳೆಯೊಬ್ಬರು ಅಳುತ್ತಾ ರೆಕಾರ್ಡ್ ಮಾಡಿದ್ದಾಗಿದ್ದು, ಸಪ್ತಮಿ ಗೌಡ ಅವರ ಧ್ವನಿಯನ್ನು ಹೋಲುತ್ತಿದೆ.
    ‘ಹೌದು ನನ್ನಿಂದ ಹಲವರಿಗೆ ನೋವಾಗಿದೆ. ನನ್ನದು ತಪ್ಪಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ನಾನು ಗುರು (ಯುವ ಮೂಲ ಹೆಸರು) ನಂಬಿ ಮಾಡಿದೆ. ನಿಮ್ಮ ಸೆಟ್ ಅಲ್ಲಿ ಆಗಿದೆ, ಸಾರಿ ಸರ್’ ಎನ್ನಲಾಗಿದೆ. ಈ ಆಡಿಯೋವನ್ನು ಸಪ್ತಮಿ, ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.

    ‘ಗುರು ಬಂದು ಎಲ್ಲವನ್ನೂ ಹೇಳಿಕೊಂಡ ಮೇಲೆ ನಾನು ಮುಂದುವರೆದೆ. ಅದು ನಿಮ್ಮ ಸೆಟ್​ನಲ್ಲಿ ಆಯ್ತು, ಆಗಬಾರದಿತ್ತು, ಬೇಸರವಿದ್ದರೆ ದಯವಿಟ್ಟು ಕ್ಷಮಿಸಿ, ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ’

    ‘ನಾನು ಮೊದಲಿನಿಂದಲೂ ಹೇಳುತ್ತಲೇ ಇದ್ದೆ, ಇದೆಲ್ಲ ವರ್ಕೌಟ್ ಆಗಲ್ಲ ಎಂದು. ಅಲ್ಲದೆ ನಾನು ಎಂದಿಗೂ ಸಹ ಫ್ಯಾಮಿಲಿ ಬಿಟ್ಟು ಬಾ, ಪತ್ನಿ ಜೊತೆ ಬ್ರೇಕ್ ಅಪ್ ಮಾಡಿಕೊ ಎಂದು ಹೇಳಿಲ್ಲ ಸರ್ ನನ್ನನ್ನು ನಂಬಿ. ಬೇಕಾದರೆ ನನ್ನನ್ನು ಬೈಯ್ಯಿರಿ, ಗುರು (ಯುವ)ಗೆ ಅದು ಮೊದಲ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ನನಗೆ ಗೊತ್ತಿದೆ. ಯಾರಿಗೂ ತೊಂದರೆ ಆಗಬಾರದು ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ಯಿರಿ’ ಎಂದು ಹೇಳಲಾಗಿದೆ.

    ಶ್ರೀದೇವಿ ಹಾಗೂ ಯುವ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು. ಸಪ್ತಮಿ ಗೌಡ ಯುವ ಜೊತೆ ‘ಯುವ’ ಚಿತ್ರದ ನಾಯಕಿಯಾಗಿ ನಟಿಸಲು ಆಯ್ಕೆ ಆಗಿದ್ದರು. ಈ ವೇಳೆ ಇವರಿಬ್ಬರ ನಡುವೆ ಸಲುಗೆ ಏರ್ಪಟ್ಟಿತ್ತು ಎಂಬ ಮಾತು ಕೇಳಿ ಬಂದಿದೆ. ಹೀಗಾಗಿ ‘ಯುವ’ ಸಿನಿಮಾದ ಸೆಟ್​ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತುಗಳು ಸಹ ಈ ಹಿಂದೆ ಕೇಳಿ ಬಂದಿದ್ದವು.

    ಇದನ್ನೂ ಓದಿ : ಒಂಟಿಯಾಗಿ ಸಿಗುವಂತೆ ಹೇಳಿದ್ದ ಖ್ಯಾತ ನಟ : ಸೂರ್ಯವಂಶ ಬೆಡಗಿಯಿಂದ ಆರೋಪ

    ಇದೇ ಕಾರಣಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಸಪ್ತಮಿ ಹಾಗೂ ಯುವ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿತ್ತು. ಆ ಸಂದರ್ಭದಲ್ಲೇ ಸಪ್ತಮಿ ಗೌಡ, ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಈ ಆಡಿಯೋ ಕಳಿಸಿದ್ದರು ಎನ್ನಲಾಗಿದೆ.

    DAKSHINA KANNADA

    ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

    Published

    on

    ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.

    ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.

    ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್

    ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    Continue Reading

    LATEST NEWS

    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 3 ಮೃ*ತ್ಯು, 7 ಗಾ*ಯ

    Published

    on

    ಮಂಗಳೂರು/ಹರಿಯಾಣ: ಹರಿಯಾಣದ ಸೋನಿಪತ್‌ನಲ್ಲಿ ಇಂದು (ಸೆ.28) ಬೆಳಿಗ್ಗೆ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋ*ಟವು ಸಂಭವಿಸಿದ್ದು, 3 ಜನರ ಮೃ*ತ್ಯು ಹಾಗೂ 7 ಮಂದಿಗೆ ಗಂ*ಭೀರ ಗಾಯವಾಗಿದೆ.


    ವೇದ್ ಎಂಬುವವರ ಮನೆಯಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದು, ಮನೆಯಲ್ಲಿ ಸಂಗ್ರಹಿಸಿದ ರಾಸಾಯನಿಕಗಳಿಂದ ಬೆಂ*ಕಿ ಅವ*ಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಮೂವರ ದೇಹವು ಛಿಧ್ರ*ವಾಗಿದ್ದು, ಗಾ*ಯಾಳುಗಳನ್ನು ಆಸ್ಪತ್ರೆಗೆ ಚಿಕಿ*ತ್ಸೆಗಾಗಿ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ವೇದ್ ಪರಾರಿಯಾಗಿದ್ದಾನೆ. ಈ ಕುರಿತು ಸೋನಿಪತ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು : ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ

    Published

    on

    ಮಂಗಳೂರು : ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾ ನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.

    ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು,  ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ‌ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.

    ಈ ಸಂದರ್ಭ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದಲ್ಲಿ 98ಕ್ಕೂ ಅಧಿಕ ನಾಗರಿಕರು ರಕ್ತದಾನ ಮಾಡಿದರು.

    ಇದನ್ನೂ ಓದಿ : ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ

    ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯತೆ ಮೆರೆದು ಮಾದರಿಯಾದರು.

    Continue Reading

    LATEST NEWS

    Trending