Connect with us

    DAKSHINA KANNADA

    ಬಜರಂಗದಳ ಮುಟ್ಟಿದರೆ ಕಾಂಗ್ರೆಸ್ ಸರ್ವನಾಶ : ಡಾ.ಭರತ್ ಶೆಟ್ಟಿ ವೈ ಎಚ್ಚರಿಕೆ..!

    Published

    on

    ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ.

    ಮಂಗಳೂರು :  ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ.

    ಮಾತ್ರವಲ್ಲ ಈಗಿನ ಅಳಿದುಳಿದ ನಿಮ್ಮ ಕಾಂಗ್ರೆಸ್ ಪಕ್ಷದ ಕುರುಹನ್ನು ಜನರೇ ಸಮೀಪದ ಅರಬೀ ಸಮುದ್ರದಲ್ಲಿ ವಿಸರ್ಜಿಸಲಿದ್ದಾರೆ.

    ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ,ಹಾಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

    ದೇಶ ಭಕ್ತ ,ಹಿಂದೂ ಸಮಾಜದ ಒಳಿತಿಗಾಗಿ ಹಾಗೂ ಸಾಮಾಜಿಕವಾಗಿ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಜರಂಗದಳ ಕೋಟಿ ಕೋಟಿ ಸದಸ್ಯರನ್ನು ಹೊಂದಿರುವ , ಪ್ರಬಲ ಹಿಂದೂ ಸಮಾಜದ ಅಸ್ಮಿತೆಯ ಪ್ರತಿರೂಪವಾಗಿದೆ. ರಾಷ್ಟ್ರೀಯತೆಯ ಶಕ್ತಿಯಾಗಿದೆ. ಒಗ್ಗಟ್ಟಿನ ಮತ್ತೊಂದು ಹೆಸರು ಬಜರಂಗದಳವಾಗಿದೆ.

    ಮುಸ್ಲಿಂ ಸಮಾಜದ ತುಷ್ಟೀಕರಣದ ನೀತಿಯ ಅಂಗವಾಗಿ ಬಜರಂಗದಳ ನಿಷೇಧ ಮಾಡುವ ಭರವಸೆ ನೀಡಿದೆ.

    ಇಂದಿರಾ ಗಾಂಧಿ ಆರ್‍ಎಸ್‍ಎಸ್ ನಿಷೇಧಿಸಲು ಯತ್ನಿಸಿ ಸೋತಿದ್ದರು. ಮುಸ್ಲಿಂ ಜಿಹಾದ್ ಹೋರಾಟವನ್ನು ಮಟ್ಟ ಹಾಕಲು ಆಗದ ಕಾಂಗ್ರೆಸ್ ವಿಶ್ವದ ಅತೀ ದೊಡ್ಡ ಸಂಘಟನೆಯ ನಿಷೇಧದ ಕುರಿತು ಕ್ರಮ ಕೈಗೊಳ್ಳುವ ಬಗ್ಗೆ ಮಾತನಾಡುತ್ತಿದೆ.

    ಹಾಗಾದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‍ನ ಯಾವ ಕುರುಹೂ ಇರುವುದಿಲ್ಲ .ಜನರೇ ಕಾಂಗ್ರೆಸ್ಸನ್ನು ಬುಡಸಹಿತ ಅರಬೀ ಸಮುದ್ರಕ್ಕೆ ಗುಡಿಸಿಹಾಕುತ್ತಾರೆ.

    ಕಾಂಗ್ರೆಸ್ ಈ ನಿರ್ಧಾರದಿಂದ ಹಿಂದೂ ವಿರೋಧಿ ಪಕ್ಷ ಎಂಬುದು ಇದೀಗ ಪೂರ್ಣಪ್ರಮಾಣದಲ್ಲಿ ಸಾಬೀತಾಗಿದೆ.

    ರಕ್ತದಾನ,ಆರೋಗ್ಯ ಶಿಬಿರ,ಸರಕಾರದ ಸೌಲಭ್ಯ ಮನೆ ಮನೆ ಮುಟ್ಟಿಸುವ ಕಾರ್ಯ,ಕೊರೊನಾ ಸಂದರ್ಭ ಕೊರೊನಾ ಸಂಕಷ್ಟದಲ್ಲಿದ್ದ ಕೋಟಿ ಕೋಟಿ ಜನತೆಗೆ ಕಿಟ್ ಒದಗಿಸುವ ಮೂಲಕ ಜನಮಾನಸದಲ್ಲಿ ಇರುವ ಸಂಘಟನೆ.

    ಹಿಂದೂ ಸಮಾಜದ ಭದ್ರ ಬುನಾದಿಗೆ ಕೊಡುಗೆ ನೀಡುವ ಸಂಘಟನೆಯನ್ನು ನಿಮಗೆ ಮುಟ್ಟಲೂ ಸಾದ್ಯವಿಲ್ಲ.

    ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ನಾಯಕರು ಹಿಂದೂ ಸಮಾಜಕ್ಕೆ ಅವಮಾನ ಮಾಡುತ್ತಲೇ ಬಂದಿದ್ದಾರೆ.

    ಇದಕ್ಕೆ ಹಿಂದೂ ಸಮಾಜ ಒಟ್ಟಾಗಿ ಸೂಕ್ತ ಉತ್ತರ ನೀಡಲಿದೆ.ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ ಸಂಘಟನೆಗಳನ್ನು ನಿಷೇಧ ಮಾಡಲು ಸಾಧ್ಯವಾಗಿಲ್ಲ ,ಆದರೆ ಬಿಜೆಪಿ ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

    ಕಾಂಗ್ರೆಸ್‍ಗೆ ವಿನಾಶ ಕಾಲ ಈಗಲೇ ಎದುರಾಗಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯನ್ನು ವಿಷ ಸರ್ಪ ಎಂದು ಹೇಳಿದರೆ, ಅವರ ಪುತ್ರ ಪ್ರಿಯಾಂಕ ಖರ್ಗೆ ನಾಲಾಯಕ್ ಎಂದು ಅವಹೇಳನದ ಮಾತು ಹೇಳಿದ್ದಾರೆ.

    ಇದೀಗ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ಮಾತು ಹೇಳಿ ಮಾಡಲು ಮುಂದಾಗಿ ಪದೇ ಪದೇ ಹಿಂದೂ ಸಮಾಜದ ನಾಶ ಮಾಡುವ ತಂತ್ರ ಹೂಡಿದಂತಿದ್ದು, ಒಂದು ವರ್ಗದ ಓಲೈಕೆ ಮಾಡುತ್ತಾ ಬಂದ ಈ ಹಿಂದೂ ವಿರೋಧಿ ಪಕ್ಷಕ್ಕೆ ಕರ್ನಾಟಕದ ಜನತೆ ಸೂಕ್ತ ಪಾಠವನ್ನು ಕಲಿಸುವುದು ನಿಶ್ಚಿತ.

    ನಿಮ್ಮ ಹಿಂದೂ ವಿರೋಧಿ ನೀತಿಯಿಂದ , ಸನಾತನ ಪರಂಪರೆ ಹಾಳು ಮಾಡುವ ಕುತಂತ್ರದಿಂದ ಆಡಳಿತಕ್ಕೆ ಬರುವುದು ಕನಸು ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending