DAKSHINA KANNADA
“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”
ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ. ಹಿಂಸೆಯನ್ನು ಬೆಂಬಲಿಸುವ ಪಕ್ಷ ಅಲ್ಲ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಂಟ್ವಾಳದ ಹರೀಶ್ ಪೂಜಾರಿ ಹತ್ಯೆಯ ಆರೋಪಿ ಮೂರು ಹತ್ಯೆಯ ಆರೋಪಿ. ಅವನು ಹಾಗಾದ್ರೆ ಕೊಲೆ ಮಾಡುವವರ ಪಕ್ಷದವನು ಅಂತ ಆಯ್ತು. ಹಾಗಾದ್ರೆ ಆ ಪಕ್ಷಕ್ಕೆ ಓಟು ಹಾಕೋದು ಎಷ್ಟು ಸರಿ.
ಆ ಹತ್ಯೆಯ ದೋಷ ಓಟು ಹಾಕಿದ ಎಲ್ಲರಿಗೂ ಬರುತ್ತೆ. ಗಲಾಟೆ ನಮಗೆ ಬೇಡ. ಗಲಾಟೆಯಿಂದ ಕಾಂಗ್ರೆಸ್ಗೆ ಖಂಡಿತಾ ಲಾಭ ಇಲ್ಲ. ಆದರೆ ಯಾರಿಗೆ ಲಾಭ ಇದೆ ಅನ್ನುವುದನ್ನು ತಿಳಿದುಕೊಳ್ಳಿ. ಅಹಿಂಸೆಯಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದದ್ದು. ಹಿಂಸೆಯಿಂದಲ್ಲ. ಘರ್ಷಣೆ, ಗಲಾಟೆಗಳು ಯಾರು ಮಾಡ್ತಾರೆ, ಅದು ಆಗದಂತೆ ನಾವೆಲ್ಲರೂ ನೋಡಿಕೊಳ್ಳಬೇಕು’ ಎಂದು ಹೇಳಿದರು.
ಇನ್ನು ಹತ್ಯೆ ಆರೋಪಿಗಳ ಆಸ್ತಿ ಮುಟ್ಟುಗೋಲು ವಿಚಾರವಾಗಿ ಮಾತನಾಡಿದ ಅವರು ‘ಎಡಿಜಿಪಿ ಅಲೋಕ್ ಕುಮಾರ್ ಅವರು ಆರೋಪಿಗಳ ಆಸ್ತಿ ಮುಟ್ಟುಗೋಲು ಬಗ್ಗೆ ಹೇಳಿದ್ರು. ಆದರೆ ನಾನು ಅವರಿಗೆ ಸಲಹೆ ಕೊಡುವುದು ಏನಂದ್ರೆ ನಿಮಗೆ ಸಾಧ್ಯ ಇದ್ರೆ ಈ ಹತ್ಯೆಗಳ ಸೂತ್ರದಾರ ಯಾರೆಂದು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಿ.
ಈ ಜಿಲ್ಲೆಯಲ್ಲಿ ಗಲಾಟೆ ಎಲ್ಲ ನಿಂತು ಹೋಗುತ್ತದೆ. ಸ್ವಲ್ಪ ಹೆಚ್ಚು ಕೆಲಸ ಮಾಡ್ಬೇಕು. ಸೂತ್ರದಾರನ ಸೂಚನೆ ಮೇರೆಗೆ ಅವರು ಕೆಲಸ ಮಾಡುತ್ತಾರೆ. ಇವತ್ತು ಹಿಂದುಳಿದ ವರ್ಗದ ಬಹುತೇಕ ಜನ ಆರೋಪಿ ಸ್ಥಾನದಲ್ಲಿ ಇದ್ದಾರೆ. ಹೆಚ್ಚಲ್ಲ. ಬಹುಭಾಗ. ಸೂತ್ರದಾರರು ಅನಾಯಾಸವಾಗಿ ಇದ್ದಾರೆ. ಅವರು ನಮ್ಮಲ್ಲಿ ಇದ್ರೂ ಕೂಡಾ ಅವರಿಗೆ ಶಿಕ್ಷೆ ಆಗ್ಬೇಕು. ಸೂತ್ರದಾರರೇ ಕುಮ್ಮಕ್ಕುದಾರರು’ ಎಂದು ವಾಗ್ದಾಳಿ ನಡೆಸಿದರು.
ಇನ್ನು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕಾರಿನ ಮೇಲೆ ನಡೆದ ಮೊಟ್ಟೆ ದಾಳಿ ಕುರಿತು ಮಾತನಾಡಿ ‘ಅವರು ಪ್ರಕೃತಿ ವಿಕೋಪ ಆದ ಸ್ಥಳವನ್ನು ಭೇಟಿ ಮಾಡಲು ಹೋಗಿದ್ದ ಸಂದರ್ಭ ಅವರ ಕಾರಿಗೆ ಮೊಟ್ಟೆ ಬಿಸಾಡಿದ್ದಾರೆ. ಕಾರಣ ಯಾವುದೇ ಇರಬಹುದು. ಆದರೆ ಅವರು ಒಬ್ಬ ವಿಪಕ್ಷ ನಾಯಕ ಹಾಗೂ ಸಮಾಜದಲ್ಲಿ ಸ್ಥಾನಮಾನ ಇರುವವರು. ಆದ್ದರಿಂದ ಈ ಕುಕೃತ್ಯ ಸಲ್ಲದು. ಈ ಕೃತ್ಯವನ್ನು ಕಾಂಗ್ರೆಸ್ ಖಂಡಿಸುತ್ತದೆ.
ಏನೇ ಘಟನೆ ಆದ್ರೂ ಕೂಡಾ ಕಾಂಗ್ರೆಸ್ ಕುಮ್ಮಕ್ಕಿದೆ ಅಂತ ಹೇಳ್ತಾರೆ. ಆದ್ರೆ ಮೊನ್ನೆ ಕೂಡಾ ಸುಮಾರು ಹತ್ಯೆಗಳಾಯಿತು. ಸುಮಾರು ಹತ್ಯೆ ನಮ್ಮ ಅವಧಿಯಲ್ಲಿ ಕೂಡಾ ಆಗಿತ್ತು. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಮ್ಮ ಪಕ್ಷದ ಹಿಂದೂ ಕಾರ್ಯಕರ್ತರ ಮೇಲಾಗಲಿ, ಮುಸ್ಲಿಂ ಕಾರ್ಯಕರ್ತರ ಮೇಲಾಗಲಿ ಎಫ್ಐಆರ್ ಕೇಸ್ ಇಲ್ಲ. ಜನರಿಗೆ ಗೊತ್ತಾಗಲಿ ಅನ್ನುವುದಕ್ಕೆ ಮತ್ತೊಮ್ಮೆ ಹೇಳುತ್ತಿದ್ದೇನೆ.
ಆರೋಪಿಗಳು ಯಾರು ಅಂತ ಕೇಳಿದ್ರೆ ಒಂದು ರಾಜ್ಯದಲ್ಲಿ ಅಧಿಕಾರ ಮಾಡುತ್ತಿರುವಂತಹ ಪಕ್ಷ, ಇನ್ನೊಂದು ಸಣ್ಣ ಪಕ್ಷ. ದ.ಕ ಜಿಲ್ಲೆಯಲ್ಲಿ ಮತೀಯವಾದಿಗಳು, ಆ ಸಂಘಟನೆಗಳು ಅವರ ಪರಾಕಾಷ್ಠೆಯನ್ನು ಮರೆಯುತ್ತಿದ್ದಾರೆ. ಅವರ ಕಾರ್ಯಕರ್ತರು ಈ ಹತ್ಯೆಯಲ್ಲಿ ಭಾಗಿದಾರರು. ಬಿಜೆಪಿಯ ಹೆಚ್ಚು ಜನ ಈ ಹತ್ಯೆಯಲ್ಲಿ ಆರೋಪಿ ಸ್ಥಾನದಲ್ಲಿದ್ದಾರೆ. ಅದರ ನಂತರದ ಸ್ಥಾನವನ್ನು ಎಸ್ಡಿಪಿಐ ತೆಗೆದುಕೊಳ್ಳುತ್ತದೆ. ಹಿಂದೂಗಳ ಹತ್ಯೆಯಾಯ್ತು. ಅದರ ಸೂತ್ರದಾರರು ಕೂಡಾ ಸಂಘಟನೆಯವರಾಗಿರುತ್ತಾರೆ’ ಎಂದು ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ‘ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಅವರೇ ಆದ ಒಂದು ಸ್ಥಾನಮಾನ ಇದೆ. ಆದರೆ ಬಿಜೆಪಿಯ ಕಾರ್ತಕರ್ತರು ಮಡಿಕೇರಿಯಲ್ಲಿ ಅವರ ಕಾರನ್ನು ತಡೆಯಲು ಯತ್ನಿಸಿ ಮೊಟ್ಟೆ ಎಸೆದಿರುವುದು ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಬೆಳವಣಿಗೆ ಅಲ್ಲ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಸರಕಾರ ಇಂತಹ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಿದ್ಧರಾಮಯ್ಯನವರ ವಿರುದ್ಧ ಬಿಜೆಪಿ ಕ್ಷಮೆ ಯಾಚನೆ ಮಾಡಬೇಕು ಎಂದರು. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ.
ಸಿದ್ಧರಾಮಯ್ಯನವರು ಮಾಜಿ ಮಂತ್ರಿಗಳು. ಅವರು ಜವಾಬ್ದಾರಿಯಿಂದ ಅಲ್ಲಿಗೆ ನೆರೆಹಾನಿ ವೀಕ್ಷಿಸಲು ಹೋಗಿದ್ದಾರೆ. ಆದರೆ ಅವರನ್ನು ತಡೆದು ಮೊಟ್ಟೆ ಎಸೆಯುವ ಕೃತ್ಯ ಸರಿಯಲ್ಲ. ಇದನ್ನು ಯಾರು ಬೇಕಾದರೂ ನಾಳೆ ಮಾಡಬಹುದು. ಆದರೆ ಅದು ಅಶ್ಲೀಲ ಕೃತ್ಯ ಇದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.
BELTHANGADY
ಕಾಂಗ್ರೆಸ್ ಹಿರಿಯ ಮುಖಂಡ ವಸಂತ ಬಂಗೇರ ವಿಧಿವಶ
ಬೆಳ್ತಂಗಡಿ: ಕಾಂಗ್ರೆಸ್ ಹಿರಿಯ ಮುಖಂಡ ಬೆಳ್ತಂಗಡಿ ಮಾಜಿ ಶಾಸಕ, ಸಚಿವ ವಸಂತ ಬಂಗೇರ(79 ವ) ಇಂದು(ಮೇ.8) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಇವರು ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಮುಂದೆ ಓದಿ..; ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್; 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
1946 ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ಜನಿಸಿದ ಇವರು ದಿ. ಕೇದೆ ಸುಬ್ಬ ಪೂಜಾರಿ ಹಾಗೂ ದಿ. ದೇವಕಿ ದಂಪತಿ ಪುತ್ರ. 1972 ರಲ್ಲಿ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಆಗುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. 1983 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 1985 ರಲ್ಲಿ ಮತ್ತೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1989 ರಲ್ಲಿ ಬಿಜೆಪಿ ತೊರೆದು ಜೆಡಿಎಸ್ನಿಂದ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಮತ್ತೆ 1994 ರಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸುಮಾರು 52 ವರ್ಷಗಳ ಕಾಲ ರಾಜಕೀಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂಧು ವರ್ಗದವರನ್ನು ಅಗಲಿದ್ದಾರೆ.
ಮೇ. 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
DAKSHINA KANNADA
ಮೇ 9 ರಂದು SSLC ಫಲಿತಾಂಶ ಪ್ರಕಟ…!
ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ
2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.
ಫಲಿತಾಂಶವನ್ನು ನೋಡಲು ಈ ವೆಬ್ಸೈಟ್ ಬಳಸಿ..!
ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು. kseab.karnataka.gov.in ಹಾಗೂ karresults.nic.in ವೆಬ್ಸೈಟ್ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಕಲಾವೈವಿಧ್ಯತೆಗೆ ಮಾರುಹೋದ ವಿದೇಶಿಗರು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ವೈವಿಧ್ಯಮಯ ಕ್ಷೇತ್ರವನ್ನು ಒಳಗೊಂಡಿರುವ ಕರಾವಳಿ ನಗರಿ. ಇಲ್ಲಿಗೆ ಬಂದ ವಿದೇಶಿ ಪ್ರಜೆಗಳು ಇಲ್ಲಿನ ವಿಶೇಷತೆಗಳನ್ನು ನೋಡಿ ಮನಸೋಲುತ್ತಾರೆ. ನವಮಂಗಳೂರು ಬಂದರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಹಲವು ವಿದೇಶಿ ಪ್ರವಾಸಿ ಹಡಗುಗಳು ಬಂದಿದ್ದು, ಇಲ್ಲಿನ ವಿಶೇಷ ತಾಣಗಳಿಗೆ ಭೇಟಿ ನೀಡಿ ಆನಂದ ಪಟ್ಟರು.
ವಿದೇಶಿ ಹಡಗಿನಲ್ಲಿ ಬಂದಿಳಿದ ಯುಎಸ್ಎ, ನೆದರ್ ಲ್ಯಾಂಡ್, ಉಕ್ರೇನ್, ಯುನೈಟೆಡ್ ಕಿಂಗ್ಡಂ, ಅಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಪಿಲಿಫೈನ್ಸ್ ದೇಶದ ಸುಮಾರು 120 ಜನ ವಿದೇಶಿಗಳು, ಜಗತ್ಪ್ರಸಿದ್ದ ಸಾವಿರ ಕಂಬ ಬಸದಿಗೆ ಭೇಟಿ ನೀಡಿ ಅಲ್ಲಿ ಕಲಾಸೌಂದರ್ಯಕ್ಕೆ ಮಾರು ಹೋದರು.
ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!
ಮಂಗಳೂರು ಮೂಲದ ಕ್ಯಾಲಿಫೋರ್ನಿಯ ಉದ್ಯೋಗಿ ಸಚಿನ್ ಪಡಿವಾಳ್ ಅವರನ್ನು ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಸನ್ಮಾನಿಸಿದರು. ಈ ಸಂದರ್ಭ ಮಂಗಳೂರು ಟ್ರಾವೆಲ್ ಗೈಡ್ ರೋಹನ್, ರೋಷನ್, ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.
- DAKSHINA KANNADA5 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- dehali6 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY6 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
- LATEST NEWS5 days ago
ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?