LATEST NEWS
ಪಿಎಫ್ಐ ಬಾಲ ಬಿಚ್ಚಿದ್ರೆ ಬಾಲನೂ ಕಟ್, ತಲೆನೂ ಕಟ್ : ಸಿ.ಟಿ ರವಿ..!
ಪಿಎಫ್ಐ ಬಾಲ ಬಿಚ್ಚಿದ್ರೆ ಬಾಲನೂ ಕಟ್ ತಲೆನೂ ಕಟ್; ಸಿ.ಟಿ ರವಿ ಸ್ಪೋಟಕ ಹೇಳಿಕೆ..!
ಬೆಂಗಳೂರು:ಸಿಎಫ್ಐ ನವರು ಬಾಲ ಬಿಚ್ಚಿ ಮೆರೆಯುವ ಕಾಲ ಈಗಿಲ್ಲ. ಬಾಲ ಬಿಚ್ಚಿದರೆ ಬಾಲನೂ ಕಟ್, ತಲೆನೂ ಕಟ್ ಮಾಡಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಚೇರಿ ಮೇಲೆ ಪಿಎಫ್ಐ ಕಾರ್ಯಕರ್ತರ ಮುತ್ತಿಗೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಅಕ್ರಮವಾಗಿ ಹಣ ಚಲಾವಣೆ ಮಾಡಲಾಗುತ್ತದೆ.ಆದರೆ ಇಡಿ ತನಿಖೆ ಮಾಡಬೇಡ ಎನ್ನಲೂ ಪಿಎಫ್ಐ ಯಾರು ಎಂದು ಖಾರವಾಗಿ ಪ್ರಶ್ನಿಸಿದರು.ಸಿಎಎ ವಿರುದ್ಧದ ಪ್ರತಿಭಟನೆಗೆ ನೂರಾರು ಕೋಟಿ ರೂ ಅಕ್ರಮ ಹಣ ದೇಶವಿದೇಶದಿಂದ ಬಂದ ಮಾಹಿತಿ ಇದೆ.ಅದರ ಬಗ್ಗೆ ಇಡಿ ತನಿಖೆ ಮಾಡಿದ್ರೆ ಇವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುವುದು ಏಕೆ? ಭಾರತ ಇರುವುದು ಭಯೋತ್ಪಾದನೆ ಮಾಡಲು ಅಲ್ಲ. ಭಯೋತ್ಪಾದನೆಗೆ ವಿದೇಶದಿಂದ ಹಣ ಬರುವುದನ್ನ ತಡೆಯಲು ತನಿಖೆ ನಡೆಯಬೇಕಿದೆ.
ತನಿಖೆಯ ಬಳಿಕ ಇವರ ಉದ್ದೇಶ-ದುರುದ್ದೇಶವನ್ನು ಜಗತ್ತಿಗೆ ಹೆಳಿ, ಹೆಡೆಮುರಿಕಟ್ಟುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
LATEST NEWS
ಸಾಕು ಪ್ರಾಣಿಗಳ ಕೃತ್ಯಕ್ಕೆ ಮಾಲೀಕರೇ ಜವಾಬ್ದಾರಿ : ಕರ್ನಾಟಕ ಹೈಕೋರ್ಟ್
ಬೆಂಗಳೂರು : ಅಪಾಯಕಾರಿ ತಳಿಯ ಶ್ವಾನಗಳು ಮಾತ್ರ ಜನರಿಗೆ ಗಾಯವನ್ನುಂಟು ಮಾಡಲ್ಲ. ಯಾವ ನಾಯಿಯೂ ಉಗ್ರವಾಗಬಹುದು ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ.
ಕೇಂದ್ರ ಸರ್ಕಾರದ ಮೂರು ನಿಯಮಗಳಾದ ಪ್ರಾಣಿಗಳ ಜನನ ನಿಯಂತ್ರಣ (ನಾಯಿಗಳು) ನಿಯಮಗಳು, 2001, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ನಾಯಿ ಸಂತಾನೋತ್ಪತ್ತಿ ಮತ್ತು ಮಾರುಕಟ್ಟೆ) ನಿಯಮಗಳು, 2017 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ (ಪೆಟ್ ಶಾಪ್) ನಿಯಮಗಳು, 2018 ಅಡಿಯಲ್ಲಿ ಅಂತಹ ಮಾರ್ಗಸೂಚಿಗಳನ್ನು ನೀಡಲು ಪರಿಗಣಿಸಬಹುದು ಎಂದು ಕೋರ್ಟ್ ಹೇಳಿದೆ.
ಸಾಕು ಪ್ರಾಣಿ ಮಾಲೀಕರ ಹೊಣೆ :
ನಾಯಿ ಕಚ್ಚಿದರೆ ಅದು ಯಾವುದೇ ನಾಯಿಯಾಗಿದ್ದರೂ ಅದು ನಾಯಿ ಕಚ್ಚಿದ್ದೇ ಆಗಿರುತ್ತದೆ. ಅದು ಬ್ರಾಂಡೆಡ್ ಅಪಾಯಕಾರಿ ನಾಯಿ ಅಥವಾ ಇತರ ಯಾವುದೇ ಸಾಮಾನ್ಯ ನಾಯಿಯಾಗಿರಬಹುದು. ಸಾಕು ಪ್ರಾಣಿ ಮಾಲೀಕರು ತಮ್ಮ ನಾಯಿಗಳ ಕೃತ್ಯಕ್ಕೆ ಸಂಪೂರ್ಣವಾಗಿ ಜವಾಬ್ದಾರರಾಗುತ್ತಾರೆ. ಸಾಕು ಪ್ರಾಣಿಗಳ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸೂಕ್ತವಾಗಿ ರಚಿಸಲಾದ ಸಮಿತಿಯು ಜವಾಬ್ದಾರಿಯುತ ಸಾಕುಪ್ರಾಣಿಗಳ ಮಾಲೀಕತ್ವದ ಪರಿಕಲ್ಪನೆಯನ್ನು ರಕ್ಷಿಸಬೇಕು ಮತ್ತು ಬೇಜವಾಬ್ದಾರಿಯುತ ಸಾಕುಪ್ರಾಣಿ ಮಾಲೀಕತ್ವವನ್ನು ದಂಡನೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಪಾಯಕಾರಿ ಶ್ವಾನಗಳ ಸಾಕಣೆ ನಿಷೇಧಿಸಿ ಮಾರ್ಚ್ 12, 2024 ರಂದು ಹೊರಡಿಸಿದ್ದ ವಿವಾದಾತ್ಮಕ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಏ.10) ರದ್ದುಗೊಳಿಸಿದೆ. ಇಂತಹ ಆಲೋಚನಾ ಪ್ರಕ್ರಿಯೆಯು ಸಮಸ್ಯೆಯನ್ನು ಪರಿಹರಿಸುವುದಿಲ್ಲ ಮತ್ತು ನಾಯಿ ಮಾಲೀಕರು ಅಥವಾ ಯಾವುದೇ ಸಾಕುಪ್ರಾಣಿಗಳು ಮಾಲೀಕರು ಯಾವುದೇ ನಾಗರಿಕರಿಗೆ / ಇತರ ಜೀವಿಗಳಿಗೆ ಹಾನಿಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿ : ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಆಯಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಮತ್ತು ಇತರ ಪ್ರಾಣಿಗಳ ಸಂರಕ್ಷಣೆಗೆ ಸಾಕುಪ್ರಾಣಿ ಮಾಲೀಕರು ಜವಾಬ್ದಾರರಾಗಿರುತ್ತಾರೆ. ಸಾಕುಪ್ರಾಣಿಗಳಿಂದಾಗುವ ಯಾವುದೇ ರೀತಿಯ ಬೇಜವಾಬ್ದಾರಿಯುತ ನಡವಳಿಕೆಗೆ ಸಾಕುಪ್ರಾಣಿ ಮಾಲೀಕರೇ ಜವಾಬ್ದಾರರಾಗಿರುತ್ತಾರೆ ಎಂದು ಕೋರ್ಟ್ ತಿಳಿಸಿದೆ.
BELTHANGADY
ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.
ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.
ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ
ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
LATEST NEWS
ಬಿಕಿನಿ ತೊಟ್ಟು ಬಸ್ಸಿನಲ್ಲಿ ಅಡ್ಡಾಡಿದ ಯುವತಿ
ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ವಿಡೀಯೋಗಳು ಒಂದಾ.. ಎರಡಾ.. ಪ್ರತಿದಿನವೂ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವರಗೆ ವಿಡಿಯೋಗಳನ್ನು ಟ್ರೋಲ್ ಮಾಡೋದೆ ಒಂದು ಕೆಲಸವಾಗಿರುತ್ತದೆ. ಸದ್ಯ ಅದೇ ರೀತಿಯ ಘಟನೆಯೊಂದು ದೆಹಲಿಯಲ್ಲಿ ವೈರಲ್ ಆಗ್ತಾ ಇದೆ.
ಬೇಸಿಲ ಬೇಗೆಗೆ ಸೆಖೆ ಜಾಸ್ತಿ ಆಗಿ ಹೋಗಿದೆ. ಹಾಗಾಗಿ ಇಲ್ಲೊಬ್ಬಳು ಕೇವಲ ಒಳ ಉಡುಪನ್ನು ಧರಿಸಿ ಅರೆಬೆತ್ತಲೆಯಾಗಿ ಬಸ್ಸಿನಲ್ಲಿ ಅಡ್ಡಾಡ್ಡಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮಹಿಳೆಯ ಈ ವರ್ತನೆಯನ್ನು ಕಂಡು ಜನರು ಗರಂ ಆಗಿದ್ದಾರೆ.
ಸೆಲೆಬ್ರಿಟಿಗಳು, ಇನ್ಫ್ಲುಯೆನ್ಸರ್ ಗಳು ಫೋಟೋಶೂಟ್ ಗಳಿಗಾಗಿ ಬಿಕಿನಿ ಧರಿಸುವುದು ಹೊಸದೇನಲ್ಲ. ಆದರೆ ಇಲ್ಲೊಬ್ಬಳು ಯುವತಿ ಮಾತ್ರ ಸಾರ್ವಜನಿಕ ಸ್ಥಳದಲ್ಲಿ ಬಿಕಿನಿ ತೊಟ್ಟು ಓಡಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾಳೆ. ಹೌದು ದೆಹಲಿಯಲ್ಲಿ ಯುವತಿಯೊಬ್ಬಳು ಕೇವಲ ಒಳ ಉಡುಪು ಧರಿಸಿ ಸಾರ್ವಜನಿಕವಾಗಿ DTC ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ಪ್ರಯಾಣಿಸಿದ್ದಾಳೆ.
ಈಕೆ ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ನಿಂತಿರುವ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ಇದೆ. ಆಕೆಯ ಈ ಅವತಾರವನ್ನು ನೋಡಲಾರದೆ ಆಕೆಯ ಹತ್ತಿರ ಇದ್ದಂತಹ ಸಹ ಪ್ರಯಾಣಿಕರ ಅಲ್ಲಿಂದ ಎದ್ದು ಹೋಗಿದ್ದಾರೆ.
- LATEST NEWS7 days ago
‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
- DAKSHINA KANNADA7 days ago
ಬತ್ತೇರಿ ಹೆಸರು ‘ಗಣಪತಿ ವೆಟ್ಟಂ’… ಟೀಕೆಗೆ ಗುರಿಯಾದ ಸುರೇಂದ್ರನ್ ಹೇಳಿಕೆ.
- chikkamagaluru6 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!
- DAKSHINA KANNADA5 days ago
ಮೂಡುಬಿದಿರೆ : ಜೂನ್ 14 ರಿಂದ ಮೂರು ದಿನಗಳ ಕಾಲ ಹಲಸು – ವೈವಿಧ್ಯಮಯ ಹಣ್ಣುಗಳ ಮಹಾಮೇಳ