Connect with us

    DAKSHINA KANNADA

    ನೆಟ್ಟಾರು ಆರೋಪಿಗಳ ಆಸ್ತಿ ಮುಟ್ಟುಗೋಲು ಮಾಡಿದ್ರೆ ಮಸೂದ್, ಫಾಸಿಲ್‌ನದ್ದು ಯಾಕಿಲ್ಲ: ಖಾದರ್ ಪ್ರಶ್ನೆ

    Published

    on

    ಮಂಗಳೂರು: ದ.ಕ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಯ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಸಿಕೊಳ್ಳುವುದಾಗಿ ನೀಡಿದ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ.

    ಆದರೆ ಕೋಮು ದ್ವೇಷಕ್ಕೆ ಕೊಲೆಯಾದ ಫಾಸಿಲ್, ಮಸೂದ್ ಇನ್ನಿತರ ಕೊಲೆ ಪ್ರಕರಣದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ವಿಚಾರದಲ್ಲಿ ಮೌನ ಏಕೆ? ಎಂದು ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರು ಪ್ರಶ್ನಿಸಿದ್ದಾರೆ.


    ಹಂತಕ ಆರೋಪಿಗಳ ಆಸ್ತಿ ಮುಟ್ಟುಗೋಲು ವಿಚಾರವಾಗಿ ಹೆಚ್ಚುವರಿ ಪೊಲೀಸ್ ನಿರ್ದೇಶಕ (ಎಡಿಜಿಪಿ) ಯವರಿಗೆ ಬರೆದ ಮನವಿ ಪತ್ರದಲ್ಲಿ ಉಲ್ಲೇಖಿಸಿ ‘ದ.ಕ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಆರೋಪಿಗಳನ್ನು ಬಂಧಿಸಲು, ಅವರನ್ನು ಕಾನೂನು ಕ್ರಮಕ್ಕೆ ಒಳಪಡಿಸಲು ಮತ್ತು ಕೊಲೆಗಳ ಸರಣಿ ಮುಂದುವರೆಯದಂತೆ ತಡೆಯಲು ಪೊಲೀಸ್ ಇಲಾಖೆ ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ.

    ಪ್ರವೀಣ್ ನೆಟ್ಟಾರು ಕೊಲೆಯ ಆರೋಪಿಗಳ ಆಸ್ತಿ ಮುಟ್ಟುಗೋಲು ವಿಚಾರವನ್ನು ನಾನು ಸ್ವಾಗತಿಸುತ್ತೇನೆ. ಕೊಲೆ ಹಾಗೂ ಸಮಾಜದಲ್ಲಿ ಭಯವನ್ನು ಹುಟ್ಟಿಸುವ ಸಮಾಜಘಾತುಕ ದುಷ್ಕರ್ಮಿಗಳ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಕ್ಕೆ ಎಲ್ಲರ ಬೆಂಬಲವೂ ಇದೆ.

    ಆದರೆ ಫಾಸಿಲ್, ಮಸೂದ್ ಕೊಲೆ ಆರೋಪಿಗಳ ಆಸ್ತಿ ಮುಟ್ಟುಗೋಲು ವಿಚಾರದಲ್ಲಿ ಮೌನ ಏಕೆ? ಎಂದು ಪ್ರಶ್ನಿಸಿ ನಾಗರಿಕ ಸಮಾಜದ ಅನುಮಾನ ಮತ್ತು ಪ್ರಶ್ನೆಗಳನ್ನು ತೆರೆದಿಟ್ಟಿದ್ದಾರೆ.

    ಅನುಮಾನಗಳನ್ನು ಬಗೆಹರಿಸಿ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸ ಬರುವಂತಹ ಸೂಕ್ತ ಉತ್ತರವನ್ನು ನಿಮ್ಮಿಂದ ನಿರೀಕ್ಷಿಸಿದ್ದೇನೆ. ಉತ್ತರ ನೀಡುತ್ತೀರಿ ಎನ್ನುವ ವಿಶ್ವಾಸ ನನಗಿದೆ’ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿಗಳಿಗೆ ಬರೆದಿರುವ ಪತ್ರದಲ್ಲಿ ಖಾದರ್‌ ಉಲ್ಲೇಖಿಸಿದ್ದಾರೆ.

    DAKSHINA KANNADA

    ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್

    Published

    on

    ಉಳ್ಳಾಲ : ಕೊಣಾಜೆ ದೇರಳಕಟ್ಟೆ ಸಮೀಪದಲ್ಲಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಲವ- ಕುಶ ಜೋಡುಕರೆ ನರಿಂಗಾನ ಜೋಡುಕರೆ ಕಂಬಳೋತ್ಸವಕ್ಕೆ ಶನಿವಾರ ಚಾಲನೆ ದೊರಕಿದ್ದು, ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದರು.

    ಸಿಎಂ ಅವರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ಆರತಿ ಬೆಳಗಿ ಸ್ವಾಗತಿಸಲಾಯಿತು. ಸ್ಪೀಕರ್ ಯು ಟಿ ಖಾದರ್ ಸಿಎಂ ಅವರನ್ನು ವೇದಿಕೆಗೆ ಕರೆದುಕೊಂಡು ಬಂದರು. ಸಭಾ ಕಾರ್ಯಕ್ರಮವನ್ನು ಸಿಎಂ ಅವರು ಉದ್ಘಾಟಿಸಿದರು.

    ಇದನ್ನೂ ಓದಿ: ನರಿಂಗಾನ ಕಂಬಳದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ; ತುಳುವಿಗೆ ಎರಡನೇ ರಾಜ್ಯಭಾಷೆ ಸ್ಥಾನಮಾನದ ಭರವಸೆ 

    ಇಂದಿನ ಕಂಬಳ ಕಾರ್ಯಕ್ರಮಕ್ಕೆ ಬಂದಿದ್ದ ನಟಿ ಶಾನ್ವಿ ಶ್ರೀವಾಸ್ತವ್, ಕಂಬಳದ ಓಟವನ್ನು ಬೆರಗುಗಣ್ಣಿನಿಂದ ವೀಕ್ಷಣೆ ಮಾಡಿದರು. ಮಾತ್ರವಲ್ಲದೆ ಕಂಬಳದ ಓಟವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದುಕೊಂಡರು.

    Continue Reading

    DAKSHINA KANNADA

    60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ

    Published

    on

    ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತೆಂಗಿನಕಾಯಿ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

    ಎಳನೀರು ಭರ್ಜರಿ ಮಾರಾಟವಾದ ಹಿನ್ನೆಲೆ ತೆಂಗಿನಕಾಯಿ ಕಡಿಮೆಯಾಗಿದ್ದು, ಈ ಹಿನ್ನೆಲೆ ದರ ಏರಿಕೆಯಾಗಿದೆ.

    ಈ ಮೊದಲು ಒಂದು ತೆಂಗಿನಕಾಯಿಗೆ 20, 25, 30 ರೂ. ದರ ಇತ್ತು. ಈಗ 65 ರೂ.ವರೆಗೆ ಮಾರಾಟವಾಗುತ್ತಿದೆ. ಕೆಜಿಗೆ 32-33 ಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಈಗ 60 ರೂ.ಗೆ ತಲುಪಿದೆ. ತೆಂಗಿನ ಇಳುವರಿ ಕಡಿಮೆಯಾಗಿದ್ದು, ಎಳನೀರಿಗೂ ಭಾರಿ ಪ್ರಮಾಣದಲ್ಲಿ ಕೊಯ್ದು ಮಾಡುವುದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.

    Continue Reading

    Ancient Mangaluru

    ಕಾಸರಗೋಡು: ಗಲ್ಫ್‌ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು

    Published

    on

    ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕುಂಬಳೆಯಲ್ಲಿ ಶನಿವಾರ ಸಂಜೆ ನಡೆದಿದೆ.

     

    ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಕಂದಮ್ಮನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

    ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎನ್ನಲಾಗಿದೆ.

    Continue Reading

    LATEST NEWS

    Trending