Connect with us

DAKSHINA KANNADA

ಮಳೆ ನೀರು ಹರಿವಿಗೆ ತಡೆ ಒಡ್ಡಿದ್ದಲ್ಲಿ ನಿರ್ಧಾಕ್ಷಿಣ್ಯ ಕ್ರಮದೊಂದಿಗೆ ತೆರವು ಮಾಡಿ : ನಳಿನ್ ಕುಮಾರ್ ಕಟೀಲ್ ಸೂಚನೆ 

Published

on

ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು.

ಅವರು ಜು.8ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದಲ್ಲಿ ಮಳೆ ನೀರು ಹರಿದು ಹೋಗದಂತೆ ಎಲ್ಲೆಲ್ಲಿ ಚರಂಡಿಗಳಿಗೆ ತಡೆಗಳನ್ನು ಒಡ್ಡಲಾಗಿದೆಯೋ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕು, ಬೇಕಿದ್ದರೆ ಯಂತ್ರಗಳನ್ನು ಸಹ ಬಳಸಿಕೊಳ್ಳಿ ಎಂದ ಸಂಸದರು, ಅಗತ್ಯವಿದ್ದರೆ ಪೊಲೀಸರ ನೆರವು ಕೂಡ ಪಡೆಯುವಂತೆ ತಿಳಿಸಿದರು.

ಮಳೆಗಾಲದಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು, ವಿದ್ಯುತ್ ಸೇರಿದಂತೆ ಇತರೆ ಸಮಸ್ಯೆಗಳು ಕಂಡುಬಂದರೆ ಕೂಡಲೇ ಅವುಗಳನ್ನು ನಿಭಾಯಿಸಲು ಅನುಕೂಲವಾಗುವಂತೆ ಸಿಬ್ಬಂದಿಗಳ ದೂರವಾಣಿ, ಮೊಬೈಲ್ ನಂಬರ್‍ ಗಳನ್ನು ಸಾರ್ವಜನಿಕರ ಅನುಕೂಲಕ್ಕೆ ಪ್ರಕಟಿಸುವಂತೆ ಸೂಚಿಸಿದರು.

ಪ್ರಾಕೃತಿಕ ಸೇರಿದಂತೆ ಯಾವುದೇ ರೀತಿಯ ಅವಘಡಗಳು ಜಿಲ್ಲೆಯಲ್ಲಿ ಸಂಭವಿಸಿದರೆ ಕೂಡಲೇ ಅಲ್ಲಿ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ಮಾರ್ಗದರ್ಶನ ಹಾಗೂ ಚಿಕಿತ್ಸೆಗೆ ನೆರವು ನೀಡುವಂತಹ ವೈದ್ಯರ ತಂಡವನ್ನು ಎಲ್ಲಾ ತಾಲೂಕುಗಳಲ್ಲಿಯೂ ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಅವರಿಗೆ ತಿಳಿಸಿದರು.

ನಗರದಲ್ಲಿ ಮಳೆ ಹಾಗೂ ಪ್ರವಾಹ ಸ್ಥಿತಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಲು ನಿಯೋಜಿಸಲಾಗಿರುವ ಮೂವರು ಎಂಜಿನಿಯರುಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು, ಮಳೆಗಾಲವಾದ ಕಾರಣ ಯಾವುದೇ ರಸ್ತೆಗಳನ್ನು ತುಂಡರಿಸಬಾರದು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ, ಜಿಲ್ಲಾಧಿಕಾರಿಯವರ ಪಿಡಿ ಖಾತೆಯಲ್ಲಿ 15 ಕೋಟಿ ರೂ.ಗಳ ಅನುದಾನವಿದೆ, ಪ್ರತಿ ತಾಲೂಕಿನ ತಹಶೀಲ್ದಾರರ ಖಾತೆಯಲ್ಲಿ 45 ಲಕ್ಷ ರೂ.ಗಳ ವರೆಗೆ ಹಣವಿದ್ದು, ಮಳೆ, ನೆರೆಯಿಂದಾಗಿ ಮನೆ ಹಾನೀಗೀಡಾದಲ್ಲಿ ಕೂಡಲೇ ಚೆಕ್ ಮೂಲಕ ಪರಿಹಾರ ನೀಡುವಂತೆ ಸೂಚಿಸಲಾಗಿದೆ,

ಪ್ರತಿಯೊಂದು ಗ್ರಾಮ ಪಂಚಾಯತ್‍ನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನೆಯಾಗಿದೆ, ವಿಪರೀತ ಮಳೆಯಿಂದಾಗಿ ಶಾಲಾ ಮಕ್ಕಳಿಗೆ ರಜೆ ನೀಡುವ ಬಗ್ಗೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ನಿರ್ಧರಿಸಿ ರಜೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಎಸ್‍ಡಿಆರ್‍ಎಫ್‍ನಲ್ಲಿ 67, ಎನ್‍ಡಿಆರ್‍ಎಫ್‍ನಲ್ಲಿ 20 ಸಿಬ್ಬಂದಿಗಳಿದ್ದು, ಪ್ರಾಕೃತಿಕ ಅವಘಡಗಳ ಸಂದರ್ಭದಲ್ಲಿ ನೆರವು ನೀಡುತ್ತಿದ್ದಾರೆ ಎಂದ ಜಿಲ್ಲಾಧಿಕಾರಿಯವರು, ಲೋಕೋಪಯೋಗಿ, ಸಣ್ಣ ನೀರಾವರಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರುಗಳು ಏರ್‍ಪೋರ್ಟ್‍ಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಅವಲೋಕಿಸುವಂತೆ ತಿಳಿಸಿದ ಅವರು, ಏರ್‍ಪೋರ್ಟ್‍ನಲ್ಲಿ ಅಣಕು ಕಾರ್ಯಾಚರಣೆಗಳನ್ನು ಹಮ್ಮಿಕೊಳ್ಳುವಂತೆ ಏರ್‍ಪೋರ್ಟ್ ಅಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು, ಕೇಂದ್ರ ಸ್ಥಾನ ಬಿಡಬೇಕಿದ್ದಲ್ಲೀ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಅನುಮತಿ ಪಡೆಯಬೇಕು,

ಅದನ್ನು ಉಲ್ಲಂಘಿಸಿದ್ದಲ್ಲೀ ವಿಪತ್ತು ನಿರ್ವಹಣಾ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆಯ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ ವೇದಿಕೆಯಲ್ಲಿದ್ದರು. ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿದ್ದರು.

DAKSHINA KANNADA

ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?

Published

on

ಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್‌ನ ಬ್ಯೂಟಿ ಕ್ವೀನ್‌ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.

ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.

ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಮಲಯಾಳಂ ಸಿನಿಮಾದಲ್ಲಿ ಬಿಝಿ :

‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

ಮಲಯಾಳಂನಲ್ಲಿ RIAL 5- ಹಾರ‌ರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.

Continue Reading

DAKSHINA KANNADA

ಟಿಕೆಟ್ ಕೈ ತಪ್ಪಿದ್ರೂ ಕೈ ಬಿಡದ ಹೈಕಮಾಂಡ್‌..! ಕೇರಳದ ಸಹ ಉಸ್ತುವಾರಿಯಾದ ನಳಿನ್ ಕುಮಾರ್ ಕಟೀಲ್‌

Published

on

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಬಾರಿ ನಿರಾಸೆ ತಂದಿತ್ತು. ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಹೊಸ ಮುಖವನ್ನು ಪಕ್ಷ ಕಣಕ್ಕೆ ಇಳಿಸಿದೆ. ಇದು ನಳಿನ್ ಕುಮಾರ್ ಕಟೀಲ್‌ ಅವರಿಗೆ ಬೇಸರ ತಂದಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಬಹಳಷ್ಟು ಭಾವುಕರಾಗಿದ್ದ ನಳಿನ್ ಕುಮಾರ್ ಕಟೀಲ್ ಪಕ್ಷ ನಿಂತ ನೀರಾಗಬಾರದು, ಹೊಸ ಮುಖಗಳು ಬರುತ್ತಿರಬೇಕು, ನಾನು ಪಕ್ಷ ಗುಡಿಸಿ ಒರೆಸು ಅಂತ ಹೇಳಿದ್ರೂ ಮಾಡ್ತೇನೆ ಅಂತ ಹೇಳಿದ್ದರು. ಆದ್ರೆ ಇದೀಗ ಪಕ್ಷ ಅವರಿಗೆ ಕೇರಳದ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ.

Continue Reading

DAKSHINA KANNADA

ಗಾಂ*ಜಾ ಸಾಗಾಟದ ವೇಳೆ ಪೊಲೀಸರ ಬಲೆಗೆ ಬಿದ್ದ ಆರೋಪಿ..!

Published

on

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇಧಿತ ಮಾ*ದಕ ವಸ್ತು ಗಾಂ*ಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂ*ಜಾವನ್ನು ಬುಧವಾರ(ಮಾ.27) ದಂದು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ.  ಈತ ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂ*ಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಯಿಂದ ಗೂಡ್ಸ್ ಟೆಂಪೋ, 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂ*ಜಾ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ  ಎಂದು ಅಂದಾಜಿಸಲಾಗಿದೆ. ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹ*ಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂ*ಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.

Continue Reading

LATEST NEWS

Trending