Connect with us

LATEST NEWS

“ಒಬ್ಬ ಹಿಂದೂ ಹುಡುಗಿ ಹೋದ್ರೆ 10 ಮುಸ್ಲಿಂ ಹುಡುಗೀರನ್ನು ಹಾರಿಸಿ…!”

Published

on

ಬಾಗಲಕೋಟೆ: ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.


ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಹಿಂದೂ ಜನರಿಗೆ, ಹಿಂದೂಗಳ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಮುಸ್ಲಿಮರಿಗೆ ನಾವು ಎಚ್ಚರಿಕೆ ಕೊಡಬೇಕು.

ಹಿಂದೂ ಯುವಕರಿಗೂ ಲೈನ್ ಹೊಡೆಯೋದು ಗೊತ್ತು. ತರುಣ ಶಕ್ತಿಗೆ ನಾನು ಆಹ್ವಾನ ಕೊಡುತ್ತೇನೆ, ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಸ್ಬೇಕು ಎಂದು ನಾನು ಹೇಳುತ್ತೇನೆ.

LATEST NEWS

ಕಣಗಿಲೆ ಹೂ ತಿಂದು ಇಹಲೋಕ ತ್ಯಜಿಸಿದ ಯುವತಿ!

Published

on

ತಿರುವನಂತಪುರಂ : ಕಣಗಿಲೆ(Oleander flower) ಹೂವು ಹಾಗೂ ಅದರ ಎಲೆಯ ರಸವನ್ನು ಸೇವಿಸಿ ಯುವತಿಯೊಬ್ಬಳು ಮೃ*ತಪಟ್ಟ ಘಟನೆ ಕೇರಳದ ಹರಿಪಾಡ್ ಸಮೀಪದ ಪಲ್ಲಿಪ್ಪಾಡ್ ನಲ್ಲಿ ನಡೆದಿದೆ. ಪಲ್ಲಿಪ್ಪಾಡ್‌ನ ನೀಂದೂರ್‌ನ ಕೊಂಡುರೆತ್ತು ಮನೆಯ ಸುರೇಂದ್ರನ್‌ ಅವರ ಪುತ್ರಿ ಸೂರ್ಯ ಸುರೇಂದ್ರನ್‌(24) ಮೃ*ತಪಟ್ಟವರು.


ಯುಕೆಗೆ ಹೋಗಬೇಕಿದ್ದವಳು ಸಾ*ವಿನ ಕದ ತಟ್ಟಿದಳು :

ಸೂರ್ಯ ಸುರೇಂದ್ರನ್‌ ಅವರ ಭಾನುವಾರ ನರ್ಸಿಂಗ್‌ ಕೆಲಸಕ್ಕೆ ಸೇರಲು ಯುಕೆಗೆ ತೆರಳುತ್ತಿದ್ದರು. ಕೆಲಸಕ್ಕಾಗಿ ವಿಮಾನ ನಿಲ್ದಾಣಕ್ಕೆ ಬಂದಾಗ ನೆಡುಂಬಶ್ಶೇರಿ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದಾರೆ. ನಂತರ ಆಕೆಯನ್ನು ಅಂಗಮಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತಿರುವಲ್ಲಾ ಬಳಿಯ ಪರುಮಳದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಸೋಮವಾರ ಮೃ*ತಪಟ್ಟಿದ್ದಾಳೆ.

ಫೋನ್ ನಲ್ಲಿ ಮಾತನಾಡುತ್ತಾ ಹೂ ತಿಂದ ಯುವತಿ :

ಸೂರ್ಯ ಸುರೇಂದ್ರನ್‌ ಅವರ ಭಾನುವಾರ ನರ್ಸಿಂಗ್‌ ಕೆಲಸಕ್ಕೆ ಸೇರಲು ಯುಕೆಗೆ ತೆರಳುವ ತಯಾರಿಯಲ್ಲಿದ್ದರು. ಭಾನುವಾರ ಬೆಳಗ್ಗೆ ಮನೆಯಿಂದ ಫೋನ್ ಮೂಲಕ ಸಂಬಂಧಿಕರು ಮತ್ತು ಸ್ನೇಹಿತರಿಗೆ ತನ್ನ ಪ್ರಯಾಣದ ವಿಷಯವನ್ನು ತಿಳಿಸಿದ್ದಾಳೆ.

ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಾ ಓಡಾಡುವಾಗ, ಗೊತ್ತಿಲ್ಲದೆ ಎಲೆ ಮತ್ತು ಹೂವನ್ನು ಕಚ್ಚಿದ್ದಾರೆ. ತಕ್ಷಣವೇ ಅದನ್ನು ಉಗುಳಿದ್ದಾರೆ. ಆದರೂ, ಎಲೆ ಮತ್ತು ಹೂವಿನ ರಸದ ಕೆಲವು ಹನಿಗಳು ದೇಹಕ್ಕೆ ಸೇರಿಕೊಂಡಿದ್ದವು ಎಂದು ಮೃ*ತ ಯುವತಿ ಸೂರ್ಯ ಸುರೇಂದ್ರನ್‌ ತನ್ನ ಪೋಷಕರು ಮತ್ತು ವೈದ್ಯರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶ ಕಂಡುಬಂದಿದೆ ಎಂದು ಬಹಿರಂಗಪಡಿಸಿದ್ದಾರೆ. ಆದರೆ, ಆಕೆಯ ಹೊಟ್ಟೆಯಲ್ಲಿ ಹೂವು ಅಥವಾ ಎಲೆಯ ಅವಶೇಷಗಳು ಕಂಡುಬಂದಿಲ್ಲ. ಆಕೆಯ ಸಾ*ವಿಗೆ ನಿಜವಾಗಿಯೂ ಕಣಗಿಲೆ ಹೂ ಕಾರಣವಾಯ್ತ ಅನ್ನೋದು ತನಿಖೆಯಿಂದ ತಿಳಿಯಬೇಕಿದೆ.

Continue Reading

DAKSHINA KANNADA

ಅಯ್ಯೋ… ಟೀ ಕುಡಿದರೆ ಕಪ್ಪಗಾಗ್ತಾರಾ?

Published

on

ಮಂಗಳೂರು: ಸಾಮಾನ್ಯವಾಗಿ ಭಾರತ ದೇಶದಲ್ಲಿ ಜಾಸ್ತಿಯಾಗಿ ಟೀ ಕುಡಿಯುತ್ತಾರೆ. ಅದರಲ್ಲೂ ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ ಕುಡಿದರೆ ಇನ್ನು ಕೆಲವರು ತಿಂಡಿ ತಿನ್ನುವಾಗ ಟೀ ಕುಡಿಯುತ್ತಾರೆ. ಕೆಲವರಿಗೆ ಟೀ ಕುಡಿಯದೇ ಇದ್ದರೆ ತಲೆನೋವು ಶುರುವಾಗಿ ಬಿಡುತ್ತದೆ. ಆದರೆ ಈಗ ಟೀ ಅಲ್ಲೂ ಗ್ರೀನ್ ಟೀ, ಬ್ಲೂ ಟೀ, ಲೆಮನ್ ಟೀ ಹೀಗೆ ವೆರೈಟಿ ವೆರೈಟಿ ಟೀಗಳಿದೆ.
ಆದರೆ ಅನೇಕ ಕಡೆ ವಿಚಿತ್ರ ನಂಬಿಕೆ ಇದೆ. ಟೀ ಕುಡಿದ್ರೆ ಕಪ್ಪಾಗುತ್ತಾರೆ ಎನ್ನುವ ಒಂದು ಸಂಗತಿ. ಹೌದು, ಟೀ ಕುಡಿದರೆ ಕಪ್ಪಾಗುತ್ತೇವೆ ಎಂದು ಅನೇಕರು ಹೇಳುವುದನ್ನು ಕೇಳಿರುತ್ತೇವೆ. ಅಲ್ಲದೇ ಇದೇ ಕಾರಣಕ್ಕೆ ಅದೆಷ್ಟೋ ಜನರು ಟೀ ಅನ್ನು ಕುಡಿಯುವುದಿಲ್ಲ ಎಂದು ಹೇಳಬಹುದು. ಆದರೆ ನಿಜವಾಗಿಯೂ ಟೀ ಕುಡಿದರೆ ಕಪ್ಪಾಗುತ್ತಾರಾ? ಇದು ಸತ್ಯವೇ? ಇದೇ ಪ್ರಶ್ನೆಗೆ ಇಲ್ಲಿದೆ ನೋಡಿ ಸರಿಯಾದ ಉತ್ತರ.

ಕೆಲ ಆಹಾರ ಚರ್ಮದ ಮೇಲೆ ಪರಿಣಾಮ ಬೀರುತ್ತದೆ:

ಆನುವಂಶಿಕ ಅಂಶಗಳ ಹೊರತಾಗಿ, ಚರ್ಮದ ಬಣ್ಣವು ನೀವು ಸೂರ್ಯನಲ್ಲಿ ಎಷ್ಟು ಹೊತ್ತು ಇರುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ನಾವು ತಿನ್ನುವುದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಕೆಲ ಆಹಾರವು ಚರ್ಮದ ಮೇಲೆಯೂ ಸಹ ಪರಿಣಾಮ ಬೀರುತ್ತದೆ. ಆದರೆ ನ್ಯಾಯೋಚಿತ ಬಣ್ಣವು ಅಂದರೆ ದೇಹದ ಹುಟ್ಟಿನ ಬಣ್ಣವು ಆಹಾರ ಸೇವನೆಯಿಂದ ಕಪ್ಪು ಬಣ್ಣಕ್ಕೆ ತಿರುಗುವುದಿಲ್ಲ ಎನ್ನಲಾಗುತ್ತದೆ. ಹಾಲಿನ ಟೀ ಕುಡಿಯುವುದರಿಂದ ಹೃದಯದ ಮೇಲೆ ಪರಿಣಾಮ ಬೀರುತ್ತದೆ.
ಕಡಿಮೆ ಸಕ್ಕರೆಯೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಟೀ ಕುಡಿಯುವುದರಿಂದ ಚರ್ಮ ಕಪ್ಪಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಇದಕ್ಕೆ ವಿರುದ್ಧವಾಗಿ, ಚಹಾವು ಚರ್ಮಕ್ಕೆ ಪ್ರಯೋಜನಕಾರಿ ಎಂದು ಸಂಶೋಧನೆ ತೋರಿಸಿದೆ.

ಅತಿಯಾದರೆ ಅಮೃತವೂ ವಿಷ :

ಅತಿಯಾದರೆ ಅಮೃತವೂ ವಿಷ ಎಂಬ ಮಾತಿದೆ. ಅದರಂತೆ ಟೀ ಅಥವಾ ಚಹಾ ಸೇವನೆ ಸಹ ಅತಿಯಾದರೆ ಅದೂ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮಬೀರುತ್ತದೆ. ಬಿಸಿ ಮಾಡಿದ್ದ ಟೀ ತಣ್ಣಗಾದ ಬಳಿಕ ಅದನ್ನು ಕುಡಿಯುವುದರಿಂದ ದೇಹಕ್ಕೆ ಹಾನಿಯುಂಟಾಗುತ್ತದೆ. ಮೂರ್ನಾಲ್ಕು ಗಂಟೆಗಳಿಗೂ ಮುನ್ನ ಬಿಸಿ ಮಾಡಿದ ಚಹಾವನ್ನು ಕುಡಿದರೆ, ನಿಮಗೆ ಗೊತ್ತಿಲ್ಲದ ರೀತಿ ಇದು ನಿಮ್ಮ ದೇಹದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಚಹಾವನ್ನು ಪದೇ ಪದೇ ಬಿಸಿ ಮಾಡಬಾರದು:

ಚಹಾವನ್ನು ಪದೇ-ಪದೇ ಬಿಸಿ ಮಾಡುವುದರಿಂದ ಅದರಲ್ಲಿರುವ ಎಲ್ಲಾ ಪೋಷಕಾಂಶಗಳು ಹೋಗುತ್ತವೆ. ಕೋಲ್ಡ್ ಟೀ ಬ್ಯಾಕ್ಟೀರಿಯಾವನ್ನು ಸೃಷ್ಟಿಸುತ್ತದೆ. ನೀವು ಚಹಾವನ್ನು ಎಷ್ಟು ಸಮಯ ಬೆಚ್ಚಗಾಗಿಸುತ್ತೀರೋ ಅಷ್ಟು ಹೆಚ್ಚು ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.

Continue Reading

FILM

ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ; ಯಾವ ಸಿನಿಮಾ? ಇಲ್ಲಿದೆ ಡಿಟೇಲ್ಸ್

Published

on

ಮಂಗಳೂರು / ಮುಂಬೈ : ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ. ಸ್ಯಾಂಡಲ್ ವುಡ್ ನ ‘ಕಿರಿಕ್ ಪಾರ್ಟಿ’ ಮೂಲಕ ಜನಮನ ಗೆದ್ದು, ಸದ್ಯ ಪರಭಾಷೆ ಅಂಗಳಲ್ಲಿ ಮಿಂಚುತ್ತಿರುವ ನಟಿ. ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಬಾಲಿವುಡ್ ಸಿನಿಮಾ ‘ಅನಿಮಲ್’ ಇತ್ತೀಚೆಗೆ ತೆರೆಕಂಡು ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ಅವರು ನಟಿಸಿದ್ದರು. ಇನ್ನು ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳದಲ್ಲಿ ಭದ್ರವಾಗಿ ನೆಲೆಯೂರಲಿದ್ದಾರೆ ಎಂದೇ ಭಾಸವಾಗಿತ್ತು. ಇದೀಗ ಮತ್ತೊಂದು ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ.

ಭಾಯ್ ಜಾನ್ ಜೊತೆ ರಶ್ಮಿಕಾ :


‘ಅನಿಮಲ್’ ಸಿನಿಮಾ ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಇದೀಗ ರಶ್ಮಿಕಾ ಮಂದಣ್ಣ ನಟ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ. ಎ.ಆರ್. ಮುರುಗದಾಸ್ ನಿರ್ದೇಶನದ ಮುಂದಿನ ಬಹುನಿರೀಕ್ಷಿತ ‘ಸಿಕಂದರ್’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಈ ಚಿತ್ರ ಮುಂದಿನ ಈದ್ ಹಬ್ಬಕ್ಕೆ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

2022 ರಲ್ಲಿ ಅಮಿತಾಬ್ ಬಚ್ಚನ್ ನಟನೆಯ ‘ಗುಡ್ ಬೈ’ ಸಿನಿಮಾ ಮೂಲಕ ರಶ್ಮಿಕಾ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದರು. ಬಳಿಕ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸಿದ್ದರು. ಆದಾದ ಬಳಿಕ ಅನಿಮಲ್ ಸಿನಿಮಾ ಭಾರೀ ಯಶಸ್ಸು ತಂದು ಕೊಟ್ಟಿತ್ತು. ಸದ್ಯ ಅವರು ಅಲ್ಲು ಅರ್ಜುನ್ ಜೊತೆ ನಟಿಸಿದ ‘ಪುಷ್ಪ : ದಿ ರೂಲ್’ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಅಲ್ಲದೇ ತಮಿಳೀನಲ್ಲಿ ಧನುಷ್ ಜೊತೆಗೆ ಕುಬೇರ ಸಿನಿಮಾ ದಲ್ಲಿ ನಟಿಸುತ್ತಿದ್ದಾರೆ. ವಿಕ್ಕಿ ಕೌಶಲ್ ಜೊತೆ ‘ಚಾವ’ ಸಿನಿಮಾದಲ್ಲಿ ಅವರು ಬಿಝಿಯಾಗಿದ್ದಾರೆ.

ರಶ್ಮಿಕಾ ಟ್ವೀಟ್ :

ಸಲ್ಮಾನ್ ಖಾನ್ ಜೊತೆಗೆ ಇದೇ ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಎ.ಆರ್.ಮುರುಗದಾಸ್ ನಿರ್ದೇಶನದ ‘ಸಿಕಂದರ್’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರವಾಗುತ್ತಿರುವ ಬಗ್ಗೆ ನಡಿಯಾಲ್ವಾಲ ಗ್ರಾಂಡ್ ಸನ್ ಖಾತೆಯ ಮೂಲಕ ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ : ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಕೂಡ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನನ್ನ ಮುಂದಿನ ಸಿನಿಮಾದ ಬಗ್ಗೆ ಕೇಳುತ್ತಿದ್ದವರಿಗೆ ಇಲ್ಲಿದೆ ಮಾಹಿತಿ. ಸರ್ಪ್ರೈಸ್…ಸಿಕಂದರ್ ಸಿನಿಮಾದ ಭಾಗವಾಗಿರುವುದು ನನಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ.

Continue Reading

LATEST NEWS

Trending