DAKSHINA KANNADA
ಅಕ್ರಮ ಪ್ರವೇಶ ಅಕ್ರಮ ಪೂಜೆ: ಕೊಂಡಾಣ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಭಂಡಾರಮನೆಯಲ್ಲಿ ಬಹಿರಂಗಗೊಂಡಿದೆ ಒಳಜಗಳ..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ತೊಕ್ಕೊಟ್ಟು ಬಳಿಯ ಕಾರಣೀಕ ದೈವಸ್ಥಾನ ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ಮತ್ತು ಮುಂಡತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಭಕ್ತಾಧಿಗಳ ದಿಕ್ಕು ತಪ್ಪಿಸುವ ಪ್ರಯತ್ನಗಳನ್ನು ಒಂದು ತಂಡ ಮಾಡುತ್ತಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಆರೋಪಿಸಿದ್ದಾರೆ. ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ಮತ್ತು ಮುಂಡತ್ತಾಯ ದೈವಸ್ಥಾನದ ವಠಾರದಲ್ಲಿ ಸೋಮವಾರ ವ್ಯವಸ್ಥಾಪನಾ ಸಮಿತಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು. ಮೇ.23 ರಂದು ವ್ಯವಸ್ಥಾಪನಾ ಸಮಿತಿ ಭಂಡಾರಮನೆಗೆ ಹಾಕಿದ ಬೀಗವನ್ನು ಒಡೆದು ಅಕ್ರಮವಾಗಿ ಪ್ರವೇಶಗೈದ ಮುತ್ತಣ್ಣ ಶೆಟ್ಟಿ ಎಂಬವರು ಪೂಜೆ ನೆರವೇರಿಸಿದ್ದಾರೆ.
ಕೊರೊನಾ ಕಾರಣದಿಂದ ಸ್ಥಗಿತಗೊಂಡ ಜಾತ್ರೆಗೆ ಬದಲಾಗಿ ಹೋಮ ಮಾಡಲು ಸಿದ್ಧತೆ ಮಾಡಲಾಗಿತ್ತು . ಆದರೆ ಧಾರ್ಮಿಕ ದತ್ತಿ ಇಲಾಖೆ ವ್ಯವಸ್ಥಾಪನಾ ಸಮಿತಿ ಮೂಲಕ ಭಂಡಾರಮನೆಯ ಬಾಗಿಲಿಗೆ ಹಾಕಿಸಿದ್ದ ಬೀಗದ ಮೇಲೆ ಮುತ್ತಣ್ಣ ಶೆಟ್ಟಿ ಎಂಬವರು ಮತ್ತೊಂದು ಬೀಗ ಹಾಕಿದ್ದರು.
ಇದರಿಂದ ಹೋಮ ನೆರವೇರಿಸಲು ಅಸಾಧ್ಯವಾಗಿತ್ತು.ಅದಕ್ಕಾಗಿ ಅರ್ಚಕ ಕಾರಂತರ ಉಪಸ್ಥಿತಿಯಲ್ಲಿ ಹೊರಗಿನಿಂದಲೇ ವ್ಯವಸ್ಥಾಪನಾ ಸಮಿತಿ ಪ್ರಾರ್ಥನೆ ನಡೆಸಿ ವಾಪಸ್ಸಾಗಿದ್ದರು.
ಮರುದಿನ ಮುತ್ತಣ್ಣ ಶೆಟ್ಟಿ ವ್ಯವಸ್ಥಾಪನಾ ಸಮಿತಿ ಹಾಕಿರುವ ಬೀಗವನ್ನು ಒಡೆದು, ಹಿಂದಿನ ದಿನ ತರಿಸಿದ್ದ ಪೂಜಾ ಸಾಮಗ್ರಿಗಳನ್ನು ಉಪಯೋಗಿಸಿಕೊಂಡು ಭಂಡಾರಮನೆಗೆ ಅಕ್ರಮವಾಗಿ ಪ್ರವೇಶಗೈದು ಪೂಜೆ ನೆರವೇರಿಸಿದ್ದರು.
ಈ ಮೂಲಕ ಭಕ್ತರ ಮನಸ್ಸನ್ನು ನೋಯಿಸುವ ಉದ್ದೇಶವನ್ನು ಇಟ್ಟುಕೊಂಡಿರುವ ತಂಡದ ವಿರುದ್ಧ ಜಿಲ್ಲಾಧಿಕಾರಿ , ಸಹಾಯಕ ಆಯುಕ್ತರು ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು ಸಲ್ಲಿಸಿ ಕ್ರಮಕೈಗೊಳ್ಳಲು ಒತ್ತಾಯಿಸಲಾಗಿದೆ. ಕ್ಷೇತ್ರದ ಪಾವಿತ್ರ್ಯತೆಯನ್ನು ಉಳಿಸಬೇಕು.
ಮುಂದೆ ಇಂತಹ ಕೀಳು ನಡವಳಿಕೆ ನಡೆಯಬಾರದು ಅನ್ನುವುದೇ ಉದ್ದೇಶವಾಗಿದೆ. ಕೊರೊನಾ ಮಹಾಮಾರಿಯಿಂದಾಗಿ ಸರಕಾರದ ಆದೇಶದಂತೆ ಜಾತ್ರೆ ನಡೆಸಲಾಗಿಲ್ಲ .
ಭಕ್ತಾಧಿಗಳು ಬರುವುದನ್ನು ಪೊಲೀಸ್ ತಡೆದಿರುವುದು, ಭಕ್ತರಿಗೆ ಕಾಣಿಕೆ ಹಾಕಲು ಅವಕಾಶ ನೀಡದಿರುವುದು ಸರಿಯಲ್ಲ. ಈ ಬಗ್ಗೆ ವ್ಯವಸ್ಥಾಪನಾ ಸಮಿತಿ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಮುಂದಿನ ದಿನಗಳಲ್ಲಿ ಕೊರೊನಾ ರೋಗ ದೂರವಾದ ಮೇಲೆ ಗ್ರಾಮದ ಭಕ್ತಾಧಿಗಳ ಸಭೆ ಕರೆದು ಚರ್ಚಿಸಿ ಪೂಜೆ ನಡೆಸುವ ಚಿಂತನೆ ಮಾಡಲಾಗಿದೆ.
ಭಂಡಾರಮನೆಯ ಕೀಲಿ ಕೈಯನ್ನು ಹತ್ತು ವರ್ಷಗಳ ಹಿಂದೆ ಜಾಗದ ಜಮೀನ್ದಾರರಾದ ಸಂಪಕ್ಕ ಶೆಡ್ತಿಯವರು ಅಂದಿನ ಅಧ್ಯಕ್ಷ ದೇವಾನಂದ ಶೆಟ್ಟಿಯವರಿಗೆ ಭಂಡಾರ ಮನೆಯಲ್ಲಿ ಪ್ರಾರ್ಥನೆಯೊಂದಿಗೆ ನೀಡಿದ್ದರು.
ಸಮಿತಿ ಬದಲಾಗುತ್ತಿದ್ದ ಹಾಗೆ ಧಾರ್ಮಿಕ ಇಲಾಖೆಯಿಂದ ನೂತನ ಸಮಿತಿಗೆ ನೀಡಿದ್ದಾರೆ . ಹಳೆಯ ಬೀಗಗಳನ್ನು ಬದಲಾಯಿಸುವ ಬಗ್ಗೆಯೂ ಧಾರ್ಮಿಕ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದರು.
ಅದರಂತೆ ಮೇ 14 ರಂದು ಸಂಕ್ರಮಣ ದಿವಸ , ಅರ್ಚಕ ನಾರಾಯಣ ಮೂಲ್ಯ ಪೂಜೆ ಮುಗಿಸಿದ ಮೇಲೆ ಸತಃ ತಾವೇ ಬೀಗ ಹಾಕಿದ್ದಾರೆ. ಆ ಬೀಗದ ಮೇಲೆ ಮುತ್ತಣ್ಣ ಶೆಟ್ಟಿ ಬೇರೆ ಬೀಗವನ್ನು ಹಾಕಿದ್ದು ಮೇ.22 ರಂದು ಬೆಳಿಗ್ಗೆ ಗಣಹೋಮದ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂದಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶಿವಪ್ರಸಾದ್ ಆಚಾರ್ಯ, ಶಂಕರ್ ಬಲ್ಯ, ದಿನಮಣಿ ರಾವ್, ಪ್ರಮೀಳಾ ಚಂದ್ರಶೇಖರ್ ಉಪಸ್ಥಿತರಿದ್ದರು.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ