DAKSHINA KANNADA
ಜಿಲ್ಲೆಯ ಮರಳು ಕೇರಳಕ್ಕೆ ಅಕ್ರಮ ಸಾಗಾಟ-ಹೀಗೇ ಮುಂದುವರೆದ್ರೆ ದ.ಕ ಡಿಸಿಯಿಂದ ಕಠಿಣ ಕ್ರಮದ ಎಚ್ಚರಿಕೆ
ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಇರುವ ಮರಳು ನಮ್ಮ ಜಿಲ್ಲೆಯ ಉಪಯೋಗಕ್ಕೆ ಬಳಕೆ ಮಾಡಬೇಕು. ಸದ್ಯಕ್ಕೆ ನನಗಿರುವ ಮಾಹಿತಿ ಪ್ರಕಾರ ನಮ್ಮ ಜಿಲ್ಲೆಯ ಮರಳು ರಾತ್ರಿಯ ವೇಳೆಗೆ ಕೇರಳದ ಕಡೆಗೆ ಹೋಗುತ್ತಿದೆ ಅನ್ನುವ ಮಾಹಿತಿ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು.
ಮರಳು ಹೊರ ರಾಜ್ಯಗಳಿಗೆ ಅಕ್ರಮವಾಗಿ ಸಾಗಾಟವಾಗುತ್ತಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕಳೆದ ಒಂದು ವಾರದ ಹಿಂದೆ ರಾತ್ರಿ 11 ಗಂಟೆಯ ಸಮಯದಲ್ಲಿ ಕೇರಳ ಭಾಗಗಕ್ಕೆ ನಮ್ಮ ಕಡೆಯಿಂದ ಎಷ್ಟು ಮರಳು ತುಂಬಿದ ಲಾರಿಗಳು ಬರುತ್ತವೆ ಅನ್ನುವುದನ್ನು ನೋಡುವುದಕ್ಕೆ ಹೋಗಿದ್ದೆ.
ಆಗ ಸುಮಾರು 2 ರಿಂದ 3 ಮರಳು ಲಾರಿಗಳು ನಮ್ಮ ಕಡೆಯಿಂದ ಕೇರಳ ಕಡೆಗೆ ಬಂದು ನಿಂತಿದ್ದನ್ನು ನಾನು ಗಮನಿಸಿದ್ದೇನೆ. ಆದ್ರೆ ಇವುಗಳು ನಿಯಮಗಳನ್ನು ಪಾಲನೇ ಮಾಡಿದೆಯೋ ಅಥವಾ ಮಾಡಿಲ್ಲವೋ ಅನ್ನುವುದನ್ನು ಪರಿಶೀಲನೆ ಮಾಡುವುದಕ್ಕೆ ಹೋಗಿಲ್ಲ.
ಈ ಹಿಂದೆ ಮರಳು ಇಲ್ಲಿ ಮರಳು ಸಾಗಾಟಕ್ಕೆ ಅಧಿಕೃತವಾಗಿ ಪರವಾನಿಗೆ ನೀಡಿದ್ರೆ ಅಂತಹ ಸಂದರ್ಭದಲ್ಲಿ ನಮಗೆ ಪರಿಶೀಲನೆ ಮಾಡುವುದಕ್ಕೆ ಅವಕಾಶವಿಲ್ಲ.
ಇನ್ನು ಮುಂದಿನ ದಿನಗಳಲ್ಲಿ ಅಕ್ರಮ ಮರಳು ಸಾಗಾಟದ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದ್ರೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
DAKSHINA KANNADA
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಗಣಪತಿ ವಿಗ್ರಹದ ವಿಸರ್ಜನೆ
ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ 3ದಿನಗಳ ಕಾಲ ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಗುರುವಾರ ರಾತ್ರಿ ಸಂಪನ್ನಗೊಂಡಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಯೋಗದಲ್ಲಿ ನಡೆದ ಈ ಉತ್ಸವದ ಕೊನೆಗೆ ಶ್ರೀ ಸಿದ್ದಿವಿನಾಯಕ ದೇವರಿಗೆ ಮಹಾಪೂಜೆ ನೆರವೇರಿಸಲಾಯಿತು.
ಬಳಿಕ ಕಡೆಂಜ ಅಶೋಕ್ ಕುಮಾರ್ ಚೌಟ ಶೋಭಾಯಾತ್ರೆಯನ್ನು ಉದ್ಘಾಟಿಸಿದರು. ಚೆಂಡೆ ವಾದ್ಯ ಮೇಳ ಮತ್ತು ಭಜನಾ ಸೇವೆಗಳ ಜೊತೆಗೆ ಸಾಗಿ ಬಂದ ಶೋಭಾಯಾತ್ರೆಯು ಬಂಟ್ಸ್ ಹಾಸ್ಟೆಲ್ ನ ಹಿಂಭಾಗವಾಗಿ ಹೊರಟು ಪಿವಿಸ್ ಸರ್ಕಲ್, ನವಭಾರತ ಸರ್ಕಲ್, ಡೊಂಗರಕೇರಿ, ನ್ಯೂ ಚಿತ್ರ ಆಗಿ ಕಾರ್ ಸ್ಟ್ರೀಟ್ ಗೆ ಸಾಗಿ ಕುಡ್ತೇರಿ ಮಹಮ್ಮಾಯಿ ದೇವಸ್ಥಾನದ ಕೆರೆಗೆ ಬಂದು ಗಣಪತಿ ಮೂರ್ತಿಯ ವಿಗ್ರಹದ ವಿಸರ್ಜನೆ ಮಾಡಲಾಯಿತು.
3ಜಿಲ್ಲೆಗಳಿಂದ ಆಗಮಿಸಿದ ಬಂಟರ ಮತ್ತು ಊರ – ಪರವೂರ ಭಕ್ತರು ವೈಭವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು .
DAKSHINA KANNADA
ಹಿಂದೂ ನಾಯಕರ ಫೇಸ್ಬುಕ್ ಅಕೌಂಟ್ ಹ್ಯಾಕ್- ಶ್ರೀಕಾಂತ್ ಶೆಟ್ಟಿ ಆರೋಪ..!
ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್ ಖಾತೆಗಳನ್ನು ನಿಷ್ಕ್ರೀಯಗೊಳಿಸಿದಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಆರೋಪಿಸಿದ್ದಾರೆ.
ಉಡುಪಿ: ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್ ಖಾತೆಗಳನ್ನು ನಿಷ್ಕ್ರೀಯಗೊಳಿಸಲಾಗಿದೆ.
ಆದರೆ ಇದನ್ನು ಸ್ವತಃ ಫೇಸ್ಬುಕ್ ಸಂಸ್ಥೆಯೇ ನಿಷ್ಕ್ರೀಯಗೊಳಿಸಿದೆಯೋ ಅಥವಾ ಯಾರದ್ದೋ ದೂರಿನ ಆಧಾರದಲ್ಲಿ ನಿಷ್ಕ್ರೀಯಗೊಳಿಸಲಾಗಿದೆಯೋ ಎನ್ನುವುದು ತಿಳಿದು ಬಂದಿಲ್ಲ.
ಆದರೆ ಇದು ಹಿಂದೂ ವಿಚಾರಧಾರೆಯ ಪ್ರಚಾರ ಮತ್ತು ಹೋರಾಟ ನಡೆಸುತ್ತಿರುವವರ ಮೇಲೆ ನಡೆದ ವ್ಯವಸ್ಥಿತ ಸೈಬರ್ ದಾಳಿಯಾಗಿದೆ ಎಂದು ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಆರೋಪಿಸಿದ್ದಾರೆ.
ಸ್ವತಃ ಶ್ರೀಕಾಂತ್ ಶೆಟ್ಟಿ ಸಂಘಟನೆಯ ಇತರ ಪ್ರಚಾರಕರಾದ ಪ್ರವೀಣ್ ಯಕ್ಷಮಠ, ಕೆ ಟಿ ಉಲ್ಲಾಸ್, ಸುಕೃತ್ ಭಾರದ್ವಾಜ್, ಅರವಿಂದ ಕೋಟೇಶ್ವರ ಮೊದಲಾದ 20ಕ್ಕೂ ಹೆಚ್ಚು ಮಂದಿಯ ಫೇಸ್ಬುಕ್ ಪೇಜ್ಗಳನ್ನು ಡಿಲಿಟ್ ಮಾಡಲಾಗಿದೆ.
ನಾವು ಯಾರೂ ಸಾಮಾಜಿಕ ಸಾಮರಸ್ಯವನ್ನು ಕೆಡಿಸಿಲ್ಲ. ಗಲಭೆ ಸೃಷ್ಟಿಸಿಲ್ಲ. ಕೇವಲ ಹಿಂದೂಪರ ಹೋರಾಟ ಮಾಡುತ್ತಿರುವವರು.
ಆದ್ದರಿಂದ ಹಿಂದೂ ಚಳುವಳಿಯಲ್ಲಿ ಭಾಗವಹಿಸುತ್ತಿರುವವರನ್ನು ಹತ್ತಿಕ್ಕುವ ಹುನ್ನಾರ ಇದು ಎನ್ನುವುದು ಸಾಬೀತಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿರುವ ಕೆಲಸ ಇದು.
2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂವಾದಿ ಸಂಗಟನೆಳು ಮೋದಿ ಪರವಾಗಿ ಯಶಸ್ವಿ ಕೆಲಸ ಮಾಡಿದ್ದೆವು.
2024ರ ಚುನಾವಣೆಯಲ್ಲಿ ಮತ್ತೇ ಅದಾಗಬಾರದು ಎನ್ನುವ ಪೂರ್ವ ತಯಾರಿ ಇದಾಗಿದೆ ಎಂದವರು ಹೇಳಿದ್ದಾರೆ.
ಆದರೆ ಆರ್ಎಸ್ಎಸ್ನ ಭಾಗವಾಗಿರುವ ಹಿಂದು ಜಾಗರಣ ವೇದಿಕೆ ಸಾಮಾಜಿಕ ಜಾಲತಾಣಗಳನ್ನು ನಂಬಿಕೊಂಡಿರುವ ಫೇಸ್ಬುಕ್ ಉಳಿಯಲ್ಲ.
ಆನ್ ಗ್ರೌಂಡ್ ಜನರ ಮಧ್ಯೆ ಕೆಲಸ ಮಾಡವ ವೇದಿಕೆ.
ಈ ಫೇಸ್ಬುಕ್ ಖಾತೆಗಳ ನಿಷ್ಕ್ರೀಯ ಕೃತ್ಯವನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
DAKSHINA KANNADA
Mangaluru: ಅಯ್ಯೋ… ಸಂಚಾರಿ ಪೊಲೀಸರ ಕಷ್ಟಕ್ಕೆ ಸ್ಪಂದಿಸುವವರು ಯಾರು..?
ಮಂಗಳೂರು ನಗರದಲ್ಲಿ ಹೊಂಡಗುಂಡಿಗಳನ್ನು ಸರಿಪಡಿಸುವ ಗತಿ ಇಲ್ಲದ ಕಾರಣ, ಇದೀಗ ಸಂಚಾರಿ ಪೊಲೀಸರೇ ಹಾರೆ ಕೈಯಲ್ಲಿ ಹಿಡಿದುಕೊಂಡು ಬಿರುಬಿಸಿಲಿಗೆ ಹೊಂಡಗುಂಡಿಗಳನ್ನು ತುಂಬಿಸುತ್ತಿದ್ದಾರೆ.
ಮಂಗಳೂರು: ಮಂಗಳೂರು ನಗರದಲ್ಲಿ ಹೊಂಡಗುಂಡಿಗಳನ್ನು ಸರಿಪಡಿಸುವ ಗತಿ ಇಲ್ಲದ ಕಾರಣ, ಇದೀಗ ಸಂಚಾರಿ ಪೊಲೀಸರೇ ಹಾರೆ ಕೈಯಲ್ಲಿ ಹಿಡಿದುಕೊಂಡು ಬಿರುಬಿಸಿಲಿಗೆ ಹೊಂಡಗುಂಡಿಗಳನ್ನು ತುಂಬಿಸುತ್ತಿದ್ದಾರೆ.
ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ ಸಭ್ ಇನ್ಸ್ ಪೆಕ್ಟರ್ ಈಶ್ವರ ಸ್ವಾಮಿ , ಎಎಸ್ಐ ವಿಶ್ವನಾಥ ರೈ ಅವರು ಹಾರೆ, ಗುದ್ದಲಿ ಹಿಡಿದು ಈ ದುರಸ್ತಿ ಕಾರ್ಯವನ್ನು ಮಾಡಿದ್ದಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲೂ ಈ ವಿಡಿಯೋ ವೈರಲ್ ಆಗುತ್ತಿದೆ.
ಮಂಗಳೂರಿನ ಬಹುತೇಕ ರಸ್ತೆಗಳಲ್ಲಿ ಈಗ ಹೊಂಡಗಳೇ ಇವೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದ್ದರೂ ಆಟಕ್ಕುಂಟು…ಲೆಕ್ಕಕ್ಕಿಲ್ಲ ಎಂಬಂತಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗುಂಡಿಗಳೂ ಇವೆ. ಆದರೆ ಇದನ್ನು ಸರಿಪಡಿಸಬೇಕಾದ ಹೆದ್ದಾರಿ ಇಲಾಖೆ ಅದಕ್ಕೆ ಮುಂದಾಗುತ್ತಿಲ್ಲ.
ಅದಕ್ಕೆ ಹೆದ್ದಾರಿಯ ಗುಂಡಿಗಳನ್ನು ಕೂಡಾ ಸಂಚಾರಿ ಪೊಲೀಸರೇ ಹಾರೆ ಹಿಡಿದು ತುಂಬಿಸುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ಹೇಳಿ…ಕೇಳಿ ನಗರದ ನಂತೂರು ವೃತ್ತ ಸಾವಿನ ಸರಮಾಲೆಗೆ ಕಾರಣವಾಗಿರುವ ಜಂಕ್ಷನ್. ಇಲ್ಲಿ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಹಲವು ಮಾರ್ಪಾಟುಗಳನ್ನು ಮಾಡಿದ್ದಾರೆ.
ಸದ್ಯ ಇತ್ತೀಚೆಗೆ ಸಾವಿನ ಸಂಖ್ಯೆ ಇಳಿಮುಖವಾಗಿದೆ. ಇಲ್ಲಿನ ಹೆದ್ದಾರಿಗಳ ಹೊಂಡ ತುಂಬಿ, ಸಾವಿಗೆ ನ್ಯಾಯ ಕೊಡಿ ಎಂದು ಸಾಮಾಜಿಕ ಕಾರ್ಯಕರ್ತರು ಕೈಯಲ್ಲಿ ಪ್ಲೇಕಾರ್ಡ್ ಹಿಡಿದು ಪ್ರತಿಭಟನೆಯನ್ನೂ ನಡೆಸಿದ್ದರು.
ಇದೀಗ ನಂತೂರಿನ ಹೊಂಡಗುಂಡಿಗಳನ್ನು ಸಂಚಾರಿ ಪೊಲೀಸರೇ ತುಂಬಿಸುತ್ತಿರುವುದು ಪಾಪ ಅನ್ನಿಸಿದರೂ ಅವರ ಕಾರ್ಯಕ್ಕೆ ವಾಹನ ಸವಾರರು, ಜನತೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಬಿರುಬಿಸಿಲಿಗೂ ಅವರು ಸಿಮೆಂಟ್, ಜಲ್ಲಿಕಲ್ಲು ಮಿಕ್ಸರ್ ಹಾಕಿ ರಸ್ತೆ ಸರಿಪಡಿಸುತ್ತಿರುವುದು ನೋಡಿದರೆ ಅಯ್ಯೋ ಅನ್ನಿಸುತ್ತಿದೆ.
ಇನ್ನೊಂದೆಡೆ ರಸ್ತೆ ಬ್ಲಾಕ್ ಆಗಿ ಜನ ಹಿಡಿಶಾಪ ಹಾಕುತ್ತಿದ್ದಾರೆ.
- FILM6 days ago
‘ಜವಾನ್’ ಶಾಕಿಂಗ್ ಕಲೆಕ್ಷನ್ – ಕೇವಲ 7 ದಿನಗಳಲ್ಲಿ ವಿಶ್ವದಾದ್ಯಂತ 700 ಕೋಟಿ..!
- LATEST NEWS6 days ago
“ಕಚೇರಿ ವೇಳೆಯಲ್ಲಿ ಗಂಟೆ ಗಟ್ಟಲೆ ಕಾಫಿ, ಟೀಗೆ ಹೋಗುವ ಸರ್ಕಾರಿ ನೌಕರರ ವಿರುದ್ದ ಕಠಿಣ ಕ್ರಮ”
- FILM6 days ago
ಸೈಮಾ 2023-ಅತೀ ಹೆಚ್ಚು ಪ್ರಶಸ್ತಿ ಗೆದ್ದು ಬೀಗಿದ ಕನ್ನಡದ “ಕಾಂತಾರ”
- bangalore6 days ago
ಮುಂದಿನ ವಾರವೇ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ವರ್ಷನ್- ರಿಲೀಸ್ ಡೇಟ್?