Connect with us

STATE

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 16 ಕರುಗಳ ರಕ್ಷಣೆ

Published

on

ಚಾಮರಾಜನಗರ: ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡಲಾಗುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು, ಒಟ್ಟು 16 ಕರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಕರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಕ್ರಮವಾಗಿ ತಮಿಳುನಾಡಿಗೆ ಸಾಗಣೆ ಮಾಡಲಾಗುತ್ತಿದ್ದ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ವಿ.ಸಿ.ಅಶೋಕ್ ಅವರು ತಕ್ಷಣ ಧಾವಿಸಿ ವಾಹನ ಅಡ್ಡಗಟ್ಟಿ ವಿಚಾರಿಸಿದ್ದಾರೆ. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ವೀಡಿಯೋ ಕಾಲ್ ತಂದ ಆಪತ್ತು; ಪತ್ನಿಗೆ ಹೆದರಿಸಲು ಹೋಗಿ ಇಹಲೋಕ ತ್ಯಜಿಸಿದ ಜಿಮ್ ಟ್ರೈನರ್

Published

on

ಬೆಂಗಳೂರು : ಸಾ*ವು ಯಾವಾಗ? ಹೇಗೆ ಬರುತ್ತೆ? ಅನ್ನೋದು ಹೇಳೋಕ್ಕಾಗಲ್ಲ. ಕೆಲವರು ಆಕಸ್ಮಿಕವಾಗಿ ಸಾ*ವನ್ನಪ್ಪಿದರೆ, ಇನ್ನು ಕೆಲವರು ಆತ್ಮಹ*ತ್ಯೆ ಮಾಡಿಕೊಳ್ಳುವ ಮೂಲಕ ವಿಧಿವ*ಶರಾಗುತ್ತಾರೆ. ಆದ್ರೆ, ಇಲ್ಲೊಬ್ಬ ತಾನು ಮಾಡಿದ ಎಡವಟ್ಟಿನಿಂದ ಇಹಲೋಕ ತ್ಯಜಿಸಿದ್ದಾರೆ.

ಆತ ಜಿಮ್ ಟ್ರೈನರ್‌. ಪತ್ನಿಗೆ ಹೆದರಿಸಲು ಹೋಗಿ ನಿಜವಾಗಲೂ ದೇವರ ಪಾದ ಸೇರಿದ್ದಾನೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಮಿತ್ ಕುಮಾರ್ (28) ಎಂಬಾತ ಮೃ*ತ ದುರ್ದೈವಿ.

ಕೌಟುಂಬಿಕ ಕಲಹ !?

ಅಮಿತ್ ಮೂಲತ: ಬಿಹಾರ್ ಮೂಲದವರು. ಕಳೆದ ಒಂದು ವರ್ಷದ ಹಿಂದೆ  ಅಮಿತ್ ತಾನು ಪ್ರೀತಿಸಿದ ಪ್ರೇಯಸಿಯನ್ನೇ ವಿವಾಹವಾಗಿದ್ದ. ಇಬ್ಬರೂ ಉತ್ತಮ ಜೀವನ ನಡೆಸುತ್ತಿದ್ದರು. ಆದರೆ ಇತ್ತೀಚೆಗೆ ಸಂಸಾರ ಹದಗೆಟ್ಟಿತ್ತು ಎಂದು ಹೇಳಲಾಗಿದೆ.

ಅಮಿತ್ ಹಾಗೂ ಪತ್ನಿ ನಡುವೆ ಗಲಾಟೆ ನಡೆದಿತ್ತು. ಹೀಗಾಗಿ ಪತ್ನಿ ಮನೆ ಬಿಟ್ಟು ಹೋಗಿದ್ದಳು. ಇದರಿಂದಾಗಿ ಅಮಿತ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ತನ್ನ ಪತ್ನಿ ಹೆಚ್ಚು ಸಮಯವನ್ನು ಮೊಬೈಲ್‌ನಲ್ಲಿ ಕಳೆಯುವುದು ಅಮಿತ್‌ಗೆ ಬೇಸರ ತಂದಿತ್ತು. ಇದರಿಂದಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಗಲಾಟೆ ಬಳಿಕ ಪತ್ನಿ ಮನೆ ಬಿಟ್ಟು ಹೋಗಿದ್ದಳು. ಆಕೆಗೆ ವಾಪಸ್ ಮನೆಗೆ ಬರುವಂತೆ ಅಮಿತ್ ಕರೆ ಮಾಡಿ ಹೇಳಿದ್ದಾನೆ. ಆದರೆ ಪತ್ನಿ ಕೇಳಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕಟ್ಟಡದ ಬೆಂಕಿ ನಂದಿಸುವಾಗ ನೀರು ಖಾಲಿ; ಅಗ್ನಿಗೆ ಆಹುತಿಯಾದ ಅಗ್ನಿಶಾಮಕ ಸಿಬ್ಬಂದಿ

ವೀಡಿಯೋ ಕಾಲ್…ಎಡವಟ್ಟು!

ನರ್ಸಿಂಗ್ ಮಾಡುತ್ತಿದ್ದ ಪತ್ನಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಳು. ಜೊತೆಗೆ ಬೇರೆ ಸ್ನೇಹಿತರೊಂದಿಗೆ ಹೆಚ್ಚು ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಇದರಿಂದಾಗಿ ಅಮಿತ್ ವಿಡಿಯೋ ಕಾಲ್ ಮಾಡಿ ಮನೆಗೆ ಬರುವಂತೆ ಪತ್ನಿಗೆ ಹೆದರಿಸಲು ಹೋಗಿದ್ದಾನೆ.
ವಿಡಿಯೋ ಕಾಲ್ ಆನ್ ಇರುವಾಗಲೇ ನೇ*ಣು ಬಿಗಿದುಕೊಳ್ಳುವಂತೆ ನಟಿಸಲು ಹೋಗಿ ನಿಜವಾಗಲೂ ನೇ*ಣಿಗೆ ಶರಣಾಗಿದ್ದಾನೆ.

ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಲು ಮುಂದಾದ ವೇಳೆ ಮೊಬೈಲ್ ಕೈ ಜಾರಿದ್ದು, ಪರಿಣಾಮ ಅಮಿತ್​ ಕುತ್ತಿಗೆಗೆ ಹಗ್ಗ ಬಿಗಿದುಕೊಂಡಿದೆ. ಇದರಿಂದಾಗಿ ಅಮಿತ್ ಇಹಲೋಕ ತ್ಯಜಿಸಿದ್ದಾನೆ. ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಒಂದು ರೇಷ್ಮೆ ಸೀರೆ ತಯಾರಿಸಲು ಎಷ್ಟು ರೇಷ್ಮೆ ಹುಳುಗಳು ಬೇಕು ಗೊತ್ತೇ..?

Published

on

ಮಂಗಳೂರು: ಹೆಣ್ಮಕ್ಕಳಿಗೆ ರೇಷ್ಮೆ ಸೀರೆ ಅಂದರೆ ಭಾರೀ ಇಷ್ಟ. ಯಾವೂದೇ ಒಂದು ಶುಭ ಕಾರ್ಯಕ್ರಮಕ್ಕೆ ಹೋಗಬೇಕಾದರೆ ಹೆಣ್ಮಕ್ಕಳಿಗೆ ರೇಷ್ಮೆ ಸಾರಿ ಬೇಕೇ ಬೇಕು. ಅಮ್ಮನ ರೇಷ್ಮೆ ಸೀರೆಯನ್ನು ಕಂಡರಂತೂ ಎಲ್ಲಿಲ್ಲದ ಪ್ರೀತಿ. ರೇಷ್ಮೆ ಸೀರೆಯ ಬೆಲೆ ಜಾಸ್ತಿ ಆದರೂ ಹಣ ಹೊಂದಿಸಿಕೊಂಡು ಹೋಗಿ ಅದನ್ನು ಖರೀದಿ ಮಾಡುತ್ತಾರೆ. ಹಬ್ಬ, ಹರಿದಿನ, ಪೂಜೆ, ದೇವಸ್ಥಾನ, ಮದುವೆ ಹೀಗೆ ಯಾವೂದೇ ಸಮಾರಂಭಕ್ಕೆ ರೇಷ್ಮೆ ಸೀರೆ ಬೇಕೇ ಬೇಕು.

ಸಾಮಾನ್ಯವಾಗಿ ಮಹಿಳೆಯರ ರೇಷ್ಮೆ ಸೀರೆ ತುಂಬಾನೇ ದುಬಾರಿ ಇರುತ್ತೆ. ಯಾಕೆಂದರೆ ಇದನ್ನು ತಯಾರಿಸುವುದು ಅಷ್ಟು ಸುಲಭದ ಕೆಲಸವಲ್ಲ. ನಯವಾದ, ಮೃದುವಾದ ಸೀರೆಯನ್ನು ತಯಾರಿಸಬೇಕೆಂದರೆ ಬಹಳಷ್ಟು ಕಷ್ಟ ಪಡಬೇಕಾಗುತ್ತದೆ. ಈ ರೇಷ್ಮೆ ಸೀರೆಯನ್ನು ಹೇಗೆ ತಯಾರಿಸುತ್ತಾರೆ ಎನ್ನುವುದನ್ನು ತಿಳಿಯೋಣ.

ರೇಷ್ಮೆ ಸೀರೆ ತಯಾರಿಸುವುದು ಹೇಗೆ ?

ರೇಷ್ಮೆ ಸೀರೆ ನಮ್ಮ ಸಂಸ್ಕೃತಿಯ ಪ್ರತೀಕ. ಪ್ರತಿಯೊಬ್ಬ ಹೆಂಗಳೆಯರ ಬಳಿ ಒಂದಾದರೂ ರೇಷ್ಮೆ ಸೀರೆ ಇದ್ದೇ ಇರುತ್ತದೆ. ಒಂದು ವೇಳೆ ಇಲ್ಲದಿದ್ದರೆ ಖರೀದಿಸಲೇ ಬೇಕು ಎನ್ನುವ ಆಸೆ ಇದ್ದೇ ಇರುತ್ತದೆ.

ರೇಷ್ಮೆ ಸೀರೆಯನ್ನು ತಯಾರಿಸುವುದು ರೇಷ್ಮೆ ನೂಲಿನಿಂದ. ಒಂದು ಹೆಣ್ಣು ಹುಳು ಒಮ್ಮೆಗೆ 300-500 ಮೊಟ್ಟೆಗಳನ್ನು ಇಡುತ್ತದೆ. ಈ ಎಲ್ಲಾ ಮೊಟ್ಟೆಗಳನ್ನು ಒಂದೇ ಸ್ಥಳದಲ್ಲಿ ಇರಿಸಬೇಕಾಗುತ್ತದೆ. ಇದರಿಂದ ಲಾರ್ವಾಗಳು ಹೊರಹೊಮ್ಮುತ್ತವೆ. ಅದರ ಸಹಾಯದಿಂದ ರೇಷ್ಮೆ ನೂಲು ತಯಾರಿಸಿ ಸೀರೆ ಮಾಡಲಾಗುತ್ತದೆ.

ಮೊದಲಿಗೆ ರೇಷ್ಮೆ ಹುಳುವಿನ ಕೃಷಿ ಮಾಡಬೇಕು. ಈ ಕೃಷಿಗೆ ತುಂಬಾ ಕಷ್ಟಪಡಬೇಕಾಗುತ್ತದೆ. ಪರಿಶ್ರಮ ಹಾಕಿದರೆ ಇದು ಬಂಗಾರದ ಕೃಷಿ. ಇನ್ನು ಪ್ರತಿಯೊಂದು ರೇಷ್ಮೆ ಹುಳುವನ್ನು ಕೈಯಿಂದಲೇ ತೆಗೆದು ಅವುಗಳನ್ನು ಸಣ್ಣ ವಿಭಾಗಗಳಲ್ಲಿ ಚಂದ್ರಿಕೆಯಲ್ಲಿ ಇರಿಸಲಾಗುತ್ತದೆ. ಬಳಿಕ ಅವುಗಳ ಮೇಲೆ ಮಲ್ಬೆರಿ ಎಲೆಗಳನ್ನು ಹೊಂದಿಸಲಾಗುತ್ತೆ. ರೇಷ್ಮೆ ಹುಳುಗಳು ಈ ಎಲೆಗಳನ್ನು ತಿನ್ನುತ್ತವೆ. ಆಹಾರ ಸೇವನೆ ನಿಂತಾಗ, ಅವು ನೂಲನ್ನು ಬಿಡಲು ಆರಂಭಿಸುತ್ತದೆ.

ಈ ಸಂಪೂರ್ಣ ಪ್ರಕ್ರಿಯೆಯು 3ರಿಂದ 8 ದಿನಗಳನ್ನು ತೆಗೆದುಕೊಳ್ಳುತ್ತದೆ. ರೇಷ್ಮೆ ಹುಳು 100 ಮೀಟರ್ ಉದ್ದದ ರೇಷ್ಮೆಯ ಒಂದೇ ದಾರವನ್ನು ಮಾಡುತ್ತದೆ. ಈ ದಾರವು ಅವುಗಳ ಪಕ್ಕದಲ್ಲಿರುವ ನೈಸರ್ಗಿಕ ಅಂಟಿಗೆ ಅಂಟಿಕೊಂಡಿರುತ್ತದೆ. ಅರ್ಧ ಕಿಲೋ ರೇಷ್ಮೆ ಮಾಡಲು 2600 ರಿಂದ 3000 ರೇಷ್ಮೆ ಹುಳುಗಳ ಪರಿಶ್ರಮ ಇರುತ್ತದೆ. ಒಂದು ಸುಂದರವಾದ ಸೀರೆ ತಯಾರಾಗಲು ಸುಮಾರು 1700-2500 ರೇಷ್ಮೆ ಹುಳುಗಳು ಸಾಯುತ್ತವೆ.

ರೇಷ್ಮೆಗೆ ಬಣ್ಣ ಹಾಕೋದು ಹೇಗೆ?

ದಾರವನ್ನು ಬ್ಲೀಚಿಂಗ್ ಮಾಡಿದ ನಂತರ ಒಣಗಿಸಿ ನಂತರ ರೇಷ್ಮೆಗೆ ಬಣ್ಣ ಹಾಕಲಾಗುತ್ತೆ. ರೇಷ್ಮೆ ಗುಣಮಟ್ಟದ ಮೇಲೆ ಪರಿಣಾಮ ಬೀರದಂತೆ ಬಣ್ಣವನ್ನು ಸಹ ನೈಸರ್ಗಿಕ ವಸ್ತುಗಳಿಂದ ತಯಾರಿಸಲಾಗುತ್ತದೆ. ಹಲವಾರು ದಿನಗಳವರೆಗೆ ಪದೇ ಪದೇ ಬಣ್ಣ ಹಾಕಿ ಒಣಗಿಸಲಾಗುತ್ತೆ.

ಸೀರೆ ಹೇಗೆ ತಯಾರಿಸಲಾಗುತ್ತದೆ?

ಕೊನೆಗೆ ದಾರ ಸಿದ್ದವಾದ ಬಳಿಕ ಆ ಎಳೆಗಳು ಮಗ್ಗಕ್ಕೆ ಹೋಗುತ್ತವೆ. ಪವರ್ ಲೂಮ್ ಮತ್ತು ಹ್ಯಾಂಡ್ ಲೂಮ್‌ನಲ್ಲಿ ರೇಷ್ಮೆ ಸೀರೆಗಳನ್ನು ತಯಾರಿಸಬಹುದು. ಈ ಎಳೆಗಳನ್ನು ಸ್ಥಿರ ಮಾದರಿಯಲ್ಲಿ ನೇಯಲಾಗುತ್ತದೆ. ಈ ಪ್ರಕ್ರಿಯೆಯಿಂದ ಬಟ್ಟೆಯನ್ನು ತಯಾರಿಸಲಾಗುತ್ತದೆ. ಒಂದು ಸೀರೆಯನ್ನು ತಯಾರಿಸಲು 4-5 ದಿನಗಳಿಂದ 2-3 ತಿಂಗಳವರೆಗೆ ತೆಗೆದುಕೊಳ್ಳುತ್ತದೆ.

 

ಸಿಲ್ಕ್ ಮಾರ್ಕ್ ನೋಡಿ ರೇಷ್ಮೆ ಸೀರೆ ಖರೀದಿಸಿ

ನಾವು ಚಿನ್ನ ಖರೀದಿಸುವಾಗ ಹಾಲ್‌ಮಾರ್ಕ್ ನೋಡಿ ಖರೀದಿಸುತ್ತೇವೆ. ಅದೇ ರೀತಿ ರೇಷ್ಮೆ ಸೀರೆ ಖರೀದಿಸುವಾಗ ಸಿಲ್ಕ್ ಮಾರ್ಕ್ ನೋಡುವುದು ಕೂಡ ಮುಖ್ಯ. ಈ ಬಗ್ಗೆ ಹಲವಾರು ವರ್ಷಗಳಿಂದ ಸಿಲ್ಕ್ ಮಾರ್ಕ್ ಆರ್ಗನೈಜೇಷನ್ ಆಫ್ ಇಂಡಿಯಾ ಜಾಗೃತಿ ಮೂಡಿಸುತ್ತಾ ಬಂದಿದೆ.

Continue Reading

LATEST NEWS

WATCH VIDEO : ಫ್ರೀ ಬಸ್‌ನಲ್ಲಿ ಮಹಿಳೆಯರ ‘ಶಕ್ತಿ’ ಪ್ರದರ್ಶನ…ರಣರಂಗವಾದ ಬಸ್‌..!

Published

on

ಬೀದರ್ : ಫ್ರೀ…ಫ್ರೀ…ಫ್ರೀ…ರಾಜ್ಯ ಸರ್ಕಾರದ ಫ್ರೀ ಯೋಜನೆಗಳಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣವೂ ಒಂದು. ಹೀಗಾಗಿ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿ ಕಾಣಬಹುದು. ಬಸ್ ನಲ್ಲಿ ಮಹಿಳೆಯರಿಂದ ಸೀಟ್ ಭರ್ತಿ ಆಗಿರುತ್ತದೆ. ಸೀಟ್ ಗಾಗಿ ಜಗಳ ಮಾಮೂಲಿ. ಆದ್ರೆ, ಇಲ್ಲಿ ಜಗಳ ಮಾತ್ರವಲ್ಲ, ಹೊಡೆದಾಟ ನಡೆದಿದೆ. ಹಾಗಂತ ಕೈನಲ್ಲಿ ಹೊಡೆದಾಡಿಕೊಂಡಿದ್ದು, ಮಾತ್ರವಲ್ಲ. ಚಪ್ಪಲಿಯಲ್ಲೇ ಹೊಡೆದಾಡಿಕೊಂಡಿದ್ದಾರೆ.


ಸೀಟು ನನ್ನನ್ನು…ನನ್ನದು :

ಬಸ್ ರಣರಂಗವಾಗಿ ಬದಲಾದ ಘಟನೆ ನಡೆದಿರುವುದು ಬೀದರ್ ಜಿಲ್ಲೆಯಲ್ಲಿ. ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಬಟ್ಟೆ ಎಳೆದು ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬೀದರ್‌ನಿಂದ ಕಲಬುರಗಿಗೆ ಹೋಗುವ ಬಸ್ಸಿನಲ್ಲಿ ಈ ಅವಾಂತರ ನಡೆದಿದೆ.

ಇದನ್ನೂ ಓದಿ : ಅಯ್ಯೋ! ರಾಖಿ ಸಾವಂತ್ ಗೆ ಏನಾಯ್ತು? ಆಸ್ಪತ್ರೆಗೆ ದಾಖಲಾದ ಬಾಲಿವುಡ್ ಡ್ರಾಮಾ ಕ್ವೀನ್

ಸರ್ಕಾರದ ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದಿದ್ದ ಇಬ್ಬರು ಮಹಿಳೆಯರು ಈ ರಣರಂಗದ ಪ್ರಮುಖ ಪಾತ್ರಧಾರಿಗಳು. ಮಕ್ಕಳು, ಮಹಿಳೆಯರು, ಗಂಡಸರು ಪ್ರೇಕ್ಷಕರಾಗಿದ್ದರು. ಯಾರಿದ್ದರೋ ಇಲ್ವೋ ಅದು ಖ್ಯವಲ್ಲ. ಸೀಟ್ ಮುಖ್ಯ ಎನ್ನುತ್ತಾ, ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದಾಡಿಕೊಂಡಿದ್ದಾರೆ. ಪಾಪ! ಮಕ್ಕಳು ಭಯದಿಂದ ಮೂಕ ಪ್ರೇಕ್ಷರಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸೀಟಿನ ಮೇಲೆ ಕುಳಿತಿದ್ದ ಯುವತಿ ಬಳಿ ‘ಸೀಟು ನನ್ನದು’ ಎಂದು ಮತ್ತೊಬ್ಬ ಮಹಿಳೆ ಜಗಳಕ್ಕೆ ನಿಂತಿದ್ದಾರೆ. ನಾನು ಸೀಟು ಬಿಡಲ್ಲ ಎಂದು ಹೇಳಿದ್ದಾಳೆ ಆಕೆ. ಅಲ್ಲಿಗೆ ಶುರು…ಮಾತಿಗೆ ಮಾತು ಬೆಳೆದು ಬಳಿಕ ಚಪ್ಪಲಿ ಹೊಡೆದಾಟದವರೆಗೆ ಸೀಟ್ ಗಾಗಿ ಯುದ್ಧ ನಡೆದಿದೆ.

Continue Reading

LATEST NEWS

Trending