Connect with us

    FILM

    ನಾನು ನಿಜವಾಗಿಯೂ ಅದೃಷ್ಟವಂತೆ; ಪವಿತ್ರ ಗೌಡ ಪುತ್ರಿಯಿಂದ ಭಾವುಕ ಪೋಸ್ಟ್

    Published

    on

    ಮಂಗಳೂರು/ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣ ರಾಜ್ಯವನ್ನೇ ಅದರನ್ನೂ ಚಿತ್ರರಂಗವನ್ನೇ ಬೆಚ್ಚಿಬೀಳಿಸಿದೆ. ನಟ ದರ್ಶನ್ ಹಾಗೂ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿ ಜೈಲು ಪಾಲಾಗಿದ್ದಾರೆ.  ಇವರಿಗೆ ಜಾಮೀನು ಸಿಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮತ್ತೊಂದೆಡೆ ದರ್ಶನ್ ಹಾಗೂ ಪವಿತ್ರಾ ಗೌಡ ಕುಟುಂಬಸ್ಥರು ಅವರ ಬಿಡುಗಡೆಗಾಗಿ ಪ್ರಯತ್ನ ಪಡುತ್ತಲೇ ಇದ್ದಾರೆ.

    ಮತ್ತೊಂದೆಡೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದಾರೆ. ದೇವಾಲಯಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನು, ಪವಿತ್ರ ಗೌಡ ಪುತ್ರಿ ಖುಷಿಗೌಡ ತಾಯಿಯ ಕಾಣಲು  ಆಗಾಗ್ಗೆ ಅಜ್ಜಿಯೊಂದಿಗೆ ಕಾರಾಗೃಹಕ್ಕೆ ಭೇಟಿ ನೀಡುತ್ತಿರುತ್ತಾರೆ. ಅಲ್ಲದೇ,  ತಾಯಿಯನ್ನು ನೆನೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿರುತ್ತಾರೆ. ಈ ಬಾರಿ ಖುಷಿ ಗೌಡ ತಾಯಿ ಪವಿತ್ರಾ ಗೌಡ ನೆನೆದು ಭಾವುಕ ಪೋಸ್ಟೊಂದನ್ನು ತಮ್ಮ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತನ್ನ ತಾಯಿ ಜೊತೆಗಿನ ಫೋಟೋ ಹಂಚಿಕೊಂಡು ತಾಯಿಯ ಗುಣಗಾನ ಮಾಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?

    ತಾಯಿಯನ್ನು ಹೊಗಳಿರುವ ಖುಷಿಗೌಡ ಆಕೆಯ ಮಾತುಗಳನ್ನು ನೆನಪಿಕೊಂಡಿದ್ದಾರೆ. ‘ಅವಳು ನನ್ನ ಪ್ರೇರಣೆ, ಎಂತಹದ್ದೇ ಪರಿಸ್ಥಿತಿ ಬಂದರೂ ಗಟ್ಟಿಯಾಗಿರಬೇಕು ಎಂದು ಆಕೆ ನನಗೆ ಕಲಿಸಿಕೊಟ್ಟಿದ್ದಾಳೆ. ಅವಳು ಯಾವಾಗಲೂ ತುಂಬಾ ಮುಕ್ತವಾಗಿ ಇರುತ್ತಾಳೆ ಹಾಗೂ ಸದಾ ನನಗೆ ಬೆಂಬಲ ನೀಡುತ್ತಾಳೆ. ಅವಳು ಶತಕೋಟಿಯಲ್ಲಿ ಒಬ್ಬಳು. ನನ್ನ ತಾಯಿಯಂತೆ ಯಾರೂ ಇಲ್ಲ. ಅವಳಂತಹ ತಾಯಿಯನ್ನು ಪಡೆಯಲು ನಾನು ನಿಜವಾಗಿಯೂ ಅದೃಷ್ಟವಂತೆ ಹಾಗೂ ಅವಳ ಮಗಳಾಗಿರುವುದಕ್ಕೆ ನಾನು ಕೃತಜ್ಞನಾಗಿದ್ದೇನೆ. ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ ಅಮ್ಮ’ ಎಂದು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಇದನ್ನೂ ಓದಿ : ಹೊಸ ಇತಿಹಾಸ : ಭರತನಾಟ್ಯ ರಂಗಪ್ರವೇಶಗೈದ ಚೀನಾದ ಬಾಲೆ!
    ಖುಷಿ ಗೌಡ ಕೈಯಲ್ಲಿ ರೆಡ್‌ ಕಾರ್ಪೆಟ್‌ :

    ಪವಿತ್ರಾ ಗೌಡ ಫ್ಯಾಷನ್ ಡಿಸೈನರ್ ಆಗಿದ್ದು, ರಾಜರಾಜೇಶ್ವರಿ ನಗರದ ತಮ್ಮ ನಿವಾಸದ ಬಳಿ ಇರುವ ರೆಡ್‌ ಕಾರ್ಪೆಟ್‌ 777 ಶಾಪನ್ನು ನಡೆಸುತ್ತಿದ್ದರು. ಆದರೆ, ಈಗ ಪರಪ್ಪರ ಅಗ್ರಹಾರ ಸೇರಿದ್ದಾರೆ.   ಸೆಲೆಬ್ರಿಟಿಗಳಿಗೆ ಭಿನ್ನ ವಿಭಿನ್ನವಾಗಿ ಉಡುಪು ವಿನ್ಯಾಸ ಮಾಡುತ್ತಿರುವ ಈ ರೆಡ್‌ ಕಾರ್ಪೆಟ್‌ ಸಂಸ್ಥೆಯನ್ನು ಮುನ್ನಡೆಸುವ  ಜವಾಬ್ದಾರಿ ಖುಷಿ ಗೌಡ ಹೆಗಲಿಗೇರಿದೆ. ಹೀಗಾಗಿ ರೆಡ್ ಕಾರ್ಪೆಟ್ ನ ನವೀನ ಶೈಲಿಯ ಉಡುಪುಗಳನ್ನು ಧರಿಸಿ ವೀಡಿಯೋ ಮಾಡಿ ಖುಷಿ ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿರುತ್ತಾರೆ.

    FILM

    ಸ್ವಂತ ಜಮೀನಿನಲ್ಲಿ ಅಭಿಮಾನಿ ಕಟ್ಟಿಸಿದ ʻಅಪ್ಪುʼ ದೇವಸ್ಥಾನ ಲೋಕಾರ್ಪಣೆ ಮಾಡಿದ ಅಶ್ವಿನಿ ಪುನೀತ್‌ರಾಜ್‌ ಕುಮಾರ್

    Published

    on

    ಹಾವೇರಿ: ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಪುನೀತ್‌ರಾಜ್‌ ಕುಮಾರ್ ಹೆಸರಿನಲ್ಲಿ ನಿರ್ಮಾಣವಾಗಿರುವ ದೇವಸ್ಥಾನವನ್ನು ಅವರ ಧರ್ಮಪತ್ನಿ ಅಶ್ವಿನಿ ಪುನೀತ್‌ರಾಜ್ ಕುಮಾರ್ ಉದ್ಘಾಟಸಿದರು.

    ಯಲಗಚ್ಚ ಗ್ರಾಮದ ಉಡಚ್ಚಮ್ಮ ದೇವಿಯ ದರ್ಶನ ಪಡೆದ ಅಶ್ವಿನಿಯವರನ್ನು ಗ್ರಾಮದ ಪ್ರಮುಖ ರಸ್ತೆಯಲ್ಲಿ ಕುಂಬಮೇಳದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜಕುಮಾರ್ 6 ಅಡಿ ಎತ್ತರದ ಅಪ್ಪು ಮೂರ್ತಿಯನ್ನು ಲೋಕಾರ್ಪಣೆ ಮಾಡಿದರು.

    ಪುನೀತ್ ಅವರ ಅಪ್ಪಟ ಅಭಿಮಾನಿ ಯಲಗಚ್ಚ ಗ್ರಾಮದ ಪ್ರಕಾಶ ಮೊರಬದ ತಮ್ಮ ಮನೆಯ ಸ್ವಂತ ಜಾಗದಲ್ಲಿ ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ದೇವಸ್ಥಾನ ನಿರ್ಮಿಸಿದ್ದಾರೆ. ದೇವಸ್ಥಾನದಲ್ಲಿ ಪುನೀತ್ ರಾಜಕುಮಾರ್ ಮೂರ್ತಿ ಅನಾವರಣ ಮಾಡಿದ ಅಶ್ವಿನಿ, ಪ್ರಕಾಶ ಅವರ ಪುತ್ರಿಗೆ ಅಪೇಕ್ಷಾ ಎಂದು ನಾಮಕರಣ ಮಾಡಿದರು. ಅಪ್ಪು ಮೂರ್ತಿಯನ್ನು ನೋಡಿದ ಅಶ್ವಿನಿ ಭಾವುಕರಾದರು.

    ಅಭಿಮಾನಿ ಮನೆಯಲ್ಲಿ ಮಾತನಾಡಿದ ಅವರು, ಅದಕ್ಕೇ ಅಭಿಮಾನಿಗಳೇ ದೇವರು ಅನ್ನೋದು, ಇಂತಹ ಅಭಿಮಾನಿ ಸಿಕ್ಕಿರುವುದು ನಮ್ಮ ಪುಣ್ಯ. ಸ್ವಂತ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಿದ್ದು ನಮ್ಮ ಪುಣ್ಯ ಎಂದರು.

    ಎಂಟು ತಿಂಗಳ ಹಿಂದೆ ಪ್ರಕಾಶ ಪಾದರಕ್ಷೆ ಧರಿಸದೇ ಕೆಲಸ ಆರಂಭಿಸಿದ್ದೆ. ದೇವಸ್ಥಾನ ಪೂರ್ಣಗೊಂಡ ಇಂದು ಆತ ಪಾದರಕ್ಷೆ ಹಾಕಿದ್ದೇನೆ. ಅಭಿಮಾನಿಗಳು ಪ್ರೀತಿಯಿಂದ ಕರೆದಿದ್ದಕ್ಕೆ ಬಂದು ದೇವಸ್ಥಾನ ಉದ್ಘಾಟನೆ ಮಾಡಿದ್ದೀರಿ. ನಮ್ಮ ಪಾಲಿನ ದೇವರು ನೀವು ಎಂದು ಅಭಿಮಾನಿ ಪ್ರಕಾಶ ಮತ್ತು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

    Continue Reading

    FILM

    ಒಟಿಟಿಗೆ ಎಂಟ್ರಿ ಕೊಟ್ಟ ‘ಸ್ತ್ರೀ 2’; ಕಲೆಕ್ಷನ್ ಹೇಗಿದೆ ಗೊತ್ತಾ!?

    Published

    on

    ಮಂಗಳೂರು/ಮುಂಬೈ: ಶ್ರದ್ಧಾ ಕಪೂರ್, ರಾಜ್ಕುಮಾರ್ ರಾವ್, ಪಂಕಜ್ ತ್ರಿಪಾಠಿ ನಟಿಸಿರುವಂತಹ ‘ಸ್ತ್ರೀ 2’ ಸಿನಿಮಾ ಈಗಾಗಲೇ ಗಲ್ಲಾ ಪೆಟ್ಟಿಗೆಯಲ್ಲಿ ಸಕತ್ ಸೌಂಡ್ ಮಾಡಿದೆ. ಕೋಟಿಗಟ್ಟಲೆ ದೋಚಿರುವ ಈ ಚಿತ್ರ ಕಳೆದ ಆಗಸ್ಟ್ನಲ್ಲಿ ಟೆಲಿ ಪರದೆಗೆ ಬಂದಿದ್ದು, ಇಲ್ಲೂ ಬರೋಬ್ಬರಿ 600 ಕೋಟಿಗಳಿಸಿದೆ.


    ‘ಸ್ತ್ರೀ 2’ ಸಿನಿಮಾ ಅಮೇಜಾನ್ ಪ್ರೈಮ್ ವೀಡಿಯೋದಲ್ಲಿ 349 ರೂಪಾಯಿ ಪಾವತಿಸಿ ವೀಕ್ಷಿಸಬಹುದು. ಅಮೇಜಾನ್ ಪ್ರೈಮ್ ವೀಡಿಯೋ ಮೂಲಕ ಸಿನಿಮಾ ನೋಡುವುದಾದರೂ ಪಾವತಿಸಿಯೇ ವೀಕ್ಷಿಸಬೇಕು.
    ಹಿಂದಿ ಭಾಷೆಯಲ್ಲಿ ಮಾತ್ರ ಸಿನಿಮಾನ ನೋಡಬಹುದು. ಚಂದಾದಾರರು ಇದನ್ನು ಉಚಿತವಾಗಿ ವೀಕ್ಷಿಸಬೇಕು ಎಂದರೆ ಮತ್ತಷ್ಟು ದಿನ ಕಾಯಬೇಕು. ಅಲ್ಲಿಯವರೆಗೆ ಹಣ ಪಾವತಿ ಮಾಡಿಯೇ ನೋಡಬೇಕಾಗಿದೆ.


    ಸ್ತ್ರೀ 2 ಸಿನಿಮಾವು ಹಾರರ್ ಕಾಮಿಡಿ ಪ್ರಕಾರದ ಚಿತ್ರವಾಗಿದೆ. ಚಿತ್ರದಲ್ಲಿ ಬರುವ ಪ್ರತೀ ಪಾತ್ರಗಳು ಜನರ ಮನಸೂರೆಗೊಳ್ಳುತ್ತವೆ. ಚಿತ್ರದ ಕಥೆ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.. ಪಾವತಿ ಮಾಡಿ ನೋಡಿದಕ್ಕೂ ಸಾರ್ಥಕವಾಯಿತು ಎಂದು ಹಲವರು ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

    Continue Reading

    FILM

    ಸೆನ್ಸಾರ್ ಆದೇಶ; ಬಾಲಿವುಡ್‌ನ ಹೊಸ ಚಿತ್ರಕ್ಕೆ 120 ಕಡೆ ಕತ್ತರಿ

    Published

    on

    ಮಂಗಳೂರು/ಪಂಜಾಬ್: ಜಾಬಿ ’95’ ಚಿತ್ರಕ್ಕೆ ಹನಿ ಟ್ರೆಹಾನ್ ನಿರ್ದೇಶನ ಮಾಡಿದ್ದು, ಸೆನ್ಸಾರ್ ಮಂಡಳಿಯವರು 85 ಕಡೆ ಕಟ್ ಮಾಡುವಂತೆ ಹೇಳಿದ್ದರು. ಈಗ ಪರಿಷ್ಕರಣಾ ಸಮಿತಿ ಕೂಡ ಸಿನಿಮಾ ವೀಕ್ಷಣೆ ಮಾಡಿದ್ದು, 120 ದೃಶ್ಯಗಳ ಬಗ್ಗೆ ಅಪಸ್ವರ ತೆಗೆದಿದೆ.


    ಸಿನಿಮಾ ನೋಡಿದ ಬಳಿಕ ಸೆನ್ಸಾರ್ ಮಂಡಳಿಯವರು 10 ಕಡೆ ಕತ್ತರಿ ಹಾಕಲು ಹೇಳಿರುವುದು ಸಾಕಷ್ಟು ಚರ್ಚೆ ಆಗುತ್ತಿದೆ. ದಿಲ್ಜಿತ್ ದೋಸಾಂಜ್ ನಟನೆಯ ‘ಪಂಜಾಬ್ ’95’ ಚಿತ್ರದ ಬಗ್ಗೆ ಸೆನ್ಸಾರ್ ಮಂಡಳಿಯವರು ವಿರೋಧ ವ್ಯಕ್ತ ಪಡಿಸಿದ್ದಾರೆ.
    ‘ಪಂಜಾಬಿ ’95’ ಚಿತ್ರಕ್ಕೆ ಹನಿ ಟ್ರೆಹಾನ್ ನಿರ್ದೇಶನ ಮಾಡಿದ್ದಾರೆ. ರೋನಿ ಸ್ಕ್ರೂವಾಲಾ ನಿರ್ಮಿಸಿದ್ದಾರೆ. ನೈಜ ಘಟನೆಗಳನ್ನು ಇದು ಆಧರಿಸಿದ್ದು, ಮಾನವ ಹಕ್ಕುಗಳ ಕಾರ್ಯಕರ್ತ ಜಸ್ವಂತ್ ಸಿಂಗ್ ಖಲ್ರಾ ಅವರ ಕಥೆಯಾಧರಿತ ಸಿನಿಮಾವಾಗಿದೆ. ಪಂಜಾಬ್‌ನ ದಂಗೆಯ ಅವಧಿಯಲ್ಲಿ ನಡೆದ ಕೊಲೆ ಹಾಗೂ ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಜಸ್ವಂತ್ ಪ್ರಯತ್ನಿಸಿದ್ದರು.
    ಜಸ್ವಂತ್ ಸಿಂಗ್ ಖಲ್ರಾ ಎಂದು ಬಿಂಬಿಸಲಾದ ನಾಯಕನ ಮರುನಾಮಕರಣ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದು ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದು, ಈ ಪಾತ್ರಕ್ಕೆ ಸಟ್ಲೆಜ್ ಎಂದು ಹೆಸರು ಇಡುವಂತೆ ಮಂಡಳಿ ಸೂಚಿಸಿದೆ. ‘ಖಲ್ರಾ ಅವರು ಸಿಖ್ ಸಮುದಾಯದಲ್ಲಿ ಪೂಜ್ಯ ವ್ಯಕ್ತಿಯಾಗಿದ್ದಾರೆ. ಅವರ ಹೆಸರನ್ನು ಮರುನಾಮಕರಣ ಮಾಡುವುದು ಅವರ ಪರಂಪರೆಗೆ ಅಗೌರವವಾಗುತ್ತದೆ’ ಎಂದು ತಂಡದವರು ವಾದಿಸಿದ್ದಾರೆ.
    ಪಂಜಾಬ್ ’95’ ಟೈಟಲ್​ ತೆಗೆಯುವಂತೆಯೂ ಸೂಚಿಸಲಾಗಿದೆ. ಈ ಟೈಟಲ್ ಸಾರ್ವಜನಿಕರ ಮೇಲೆ ಸಾಕಷ್ಟು ಪ್ರಭಾವ ಬೀರಬಹುದು ಎಂದು ಸೆನ್ಸಾರ್ ಮಂಡಳಿ ಅಭಿಪ್ರಾಯಪಟ್ಟಿದೆ. ಸಿನಿಮಾ ಉದ್ದಕ್ಕೂ ಪಂಜಾಬ್ ಹಾಗೂ ಜಿಲ್ಲೆಗಳ ಹೆಸರನ್ನು ಉಲ್ಲೇಖ ಮಾಡಬಾರದು ಎಂದು ಮಂಡಳಿ ಹೇಳಿದೆ. ಕೆನಡಾ ಮತ್ತು ಯುಕೆ ಉಲ್ಲೇಖಗಳು ಸೂಕ್ತವಲ್ಲವೆಂದು ಪರಿಗಣಿಸಲಾಗಿದ್ದು, ತೆಗೆದುಹಾಕುವಂತೆ ತಿಳಿಸಿದ್ದಾರೆ.

    Continue Reading

    LATEST NEWS

    Trending