Connect with us

    LATEST NEWS

    ಆಗಸ್ಟ್​​​ 1ರಿಂದ ಹೊಸ ನಿಯಮ ಜಾರಿ

    Published

    on

    ಜುಲೈ ತಿಂಗಳು ಮುಗಿದಿದ್ದು ನಾಳೆಯಿಂದ ಆಗಸ್ಟ್​ ಆರಂಭ ಆಗಲಿದೆ. ಆಗಸ್ಟ್ ಮೊದಲ ದಿನದಿಂದ ದೇಶದಲ್ಲಿ ಅನೇಕ ದೊಡ್ಡ ಬದಲಾವಣೆಗಳು ಆಗಲಿವೆ. ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳುವ ಜೊತೆಗೆ ಅನೇಕ ಲಾಭವನ್ನೂ ನಿರೀಕ್ಷೆ ಮಾಡಬಹುದಾಗಿದೆ.

    HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್

    ಎಚ್‌ಡಿಎಫ್‌ಸಿ ಬ್ಯಾಂಕ್‌ನ ಕ್ರೆಡಿಟ್ ಕಾರ್ಡ್ ಸಂಬಂಧಿತ ನಿಯಮಗಳಲ್ಲಿ ಆಗಸ್ಟ್‌ನಿಂದ ಹಲವು ಬದಲಾವಣೆಗಳು ಆಗಲಿವೆ. ಎಚ್‌ಡಿಎಫ್‌ಸಿ ಬ್ಯಾಂಕ್‌ ಶುಲ್ಕ ಪಾವತಿಯಿಂದ ಹಿಡಿದು CRED, Cheq, MobiKwik ಮತ್ತು ಫ್ರೀಚಾರ್ಜ್‌ನಂತಹ ಸೇವೆಗಳನ್ನು ಬಳಸುವವರೆಗೆ ಶೇಕಾಡ 1ರಷ್ಟು ವಹಿವಾಟು ಶುಲ್ಕವನ್ನು ವಿಧಿಸಲಾಗುತ್ತದೆ. ಇದರ ಮಿತಿ 15,000 ಕ್ಕಿಂತ ಹೆಚ್ಚಿನ ವಹಿವಾಟುಗಳನ್ನು ನಡೆಸುವವರಿಗೆ ಈ ಶುಲ್ಕ ವಿಧಿಸಲಾಗಿದೆ.

    LPG ಸಿಲಿಂಡರ್

    ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲನೇ ದಿನದಂದು ಗ್ಯಾಸ್ ಸಿಲಿಂಡರ್ ಬೆಲೆಯನ್ನು ನಿಗದಿಪಡಿಸುತ್ತವೆ. ಕಳೆದ ತಿಂಗಳು 19 ಕೆಜಿ ವಾಣಿಜ್ಯ ಅನಿಲದ ಬೆಲೆ ಇಳಿಕೆಯಾಗಿತ್ತು. ಆದರೆ ಮನೆಗಳಲ್ಲಿ ಬಳಸುವ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಬಾರಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

    ಗೂಗಲ್ ಮ್ಯಾಪ್

    ಆಗಸ್ಟ್ 1 ರಿಂದ ಭಾರತದಲ್ಲಿ ಗೂಗಲ್ ಮ್ಯಾಪ್ ಸೇವೆಗಳು ಅಗ್ಗವಾಗಲಿವೆ. ಈ ಗೂಗಲ್ ಮ್ಯಾಪ್ ಸೇವೆ ಪಡೆಯಲು ಗ್ರಾಹಕರು 70 ಪ್ರತಿಶತ ಕಡಿಮೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಸೇವೆಯ ಪಾವತಿಯನ್ನು ಈಗ ಡಾಲರ್‌ಗಳ ಬದಲಿಗೆ ಭಾರತೀಯ ರೂಪಾಯಿಗಳಲ್ಲಿ ಮಾಡಲಾಗುವುದು. ಇದು ಸಾಮಾನ್ಯ ಬಳಕೆದಾರರ ಮೇಲೆ ಪರಿಣಾಮ ಬೀರದಿದ್ದರೂ, ಅವರಿಂದ ಹೆಚ್ಚು ಶುಲ್ಕವನ್ನು ಪಡೆಯುವುದಿಲ್ಲ ಎಂದು ಹೇಳಿದೆ.

    ಬ್ಯಾಂಕ್‌ಗಳಿಗೆ 13 ದಿನ ರಜೆ

    ಆಗಸ್ಟ್‌ನಿಂದ ಹಲವು ಹಬ್ಬಗಳು ಬರುತ್ತಿದೆ, ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ, ಇದರ ನಂತರ ಆಗಸ್ಟ್‌ನಲ್ಲಿ 13 ದಿನಗಳ ಕಾಲ ಬ್ಯಾಂಕ್‌ಗಳು ಮುಚ್ಚಿರುತ್ತವೆ. ಭಾನುವಾರ ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರಗಳನ್ನು ಒಳಗೊಂಡಿದೆ. ರಕ್ಷಾ ಬಂಧನ ಮತ್ತು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಬ್ಯಾಂಕುಗಳು ರಜೆ ಇರುತ್ತದೆ.

    ಫಾಸ್ಟ್‌ಟ್ಯಾಗ್ ನಿಯಮದಲ್ಲಿ ಹೊಸ ಬದಲಾವಣೆ:

    ಫಾಸ್ಟ್‌ಟ್ಯಾಗ್ ನಿಯಮಗಳ ಹೊಸ ಬದಲಾವಣೆಗಳು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಇದು ಟೋಲ್ ಪಾವತಿಯಲ್ಲಿ ನವೀಕರಣವನ್ನು ತಂದಿದೆ. ಟೋಲ್ ಬೂತ್‌ಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡುಲು ಈ ವಿಧಾನಗಳನ್ನು ತರಲಾಗಿದೆ. ಈ ಬಗ್ಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇನ್ನು ಮುಂದೆ FASTag Know Your Customer (KYC) ಅಗತ್ಯವಾಗಿರುತ್ತದೆ ಎಂದು ಹೇಳಿದೆ. ಇದು ಆಗಸ್ಟ್ 1 ರಿಂದ ಕಡ್ಡಾಯವಾಗಿರುತ್ತದೆ.

    ಫಾಸ್ಟ್ಯಾಗ್ KYC

    ಫಾಸ್ಟ್ಯಾಗ್ ಹೊಸ ನಿಯಮಗಳ ಪ್ರಕಾರ, KYC ಅನ್ನು ಅಕ್ಟೋಬರ್ 31 ರೊಳಗೆ ಪೂರ್ಣಗೊಳಿಸಬೇಕು. ಫಾಸ್ಟ್‌ಟ್ಯಾಗ್ ಸೇವೆಗಳನ್ನು ನೀಡುವ ಕಂಪನಿಗಳು ಮೂರರಿಂದ ಐದು ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳಿಗೆ KYC ಅನ್ನು ಅಕ್ಟೋಬರ್ 31 ರೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದೆ. ಈ ಬಗ್ಗೆ ಪ್ರಕ್ರಿಯೆ ಆಗಸ್ಟ್​​ 1ರಿಂದಲ್ಲೇ ಪ್ರಾರಂಭವಾಗುತ್ತದೆ. ಇದರಲ್ಲಿ ಫಾಸ್ಟ್‌ಟ್ಯಾಗ್‌ ಸಂಖ್ಯೆಗಳನ್ನು ಕೂಡ ಬದಲಾವಣೆ ಮಾಡಬೇಕು ಎಂದು ಹೇಳಿದೆ.

    LATEST NEWS

    ಹನಿಟ್ರ್ಯಾಪ್ ಆರೋಪಿಗಳ ಸ್ಥಳ ಮಹಜರು..! ಸತ್ತಾರ್ ಮನೆ ಮುಂದೆ ಪ್ರತಿಭಟನೆ..!

    Published

    on

    ಮಂಗಳೂರು : ಹನಿಟ್ರ್ಯಾಪ್ ಪ್ರಕಣದಿಂದ ಮನನೊಂದು ಜೀವಾಂತ್ಯಗೊಳಿಸಿದ್ದ ಉದ್ಯಮಿ ಮುಮ್ತಾಜ್ ಅಲಿಯ ಆರೋಪಿಗಳ ಸ್ಥಳಮಹಜರು ನಡೆಸಲಾಗಿದೆ. ಕಾವೂರು ಮತ್ತು ಸುರತ್ಕಲ್ ಪೊಲೀಸರು ಬಿಗಿ ಭದ್ರತೆಯಲ್ಲಿ ಕೃಷ್ಣಾಪುರದ 7ನೇ ಬ್ಲಾಕ್‌ನಲ್ಲಿರುವ ಪ್ರಮುಖ ಆರೋಪಿ ಸತ್ತಾರ್ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಮುಮ್ತಾಜ್ ಅಲಿ ಬೆಂಬಲಿಗರು ಸತ್ತಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

    ಮುಮ್ತಾಜ್ ಅಲಿ ಜೀವಾಂತ್ಯಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಅವರ ಸಹೋದರ ಆರು ಜನರ ವಿರುದ್ಧ ದೂರು ನೀಡಿದ್ದರು. ರಹೆಮತ್ ಎಂಬ ಮಹಿಳೆ ಹಾಗೂ ಆಕೆಯ ಪತಿ ಮತ್ತು ಸತ್ತಾರ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನಾಗಿ ಮಾಡಲಾಗಿತ್ತು. ರೆಹಮತ್ ಹಾಗೂ ಶಾಫೀ ಎಂಬ ಆರೋಪಿಗಳನ್ನು ಪೊಲೀಸರು ಬಂಟ್ವಾಳ ತಾಲೂಕಿನ ನಂದಾವರದ ಬಳಿ ಬಂಧಿಸಿದ್ದು, ಆರೋಪಿ ಸತ್ತಾರ್ ಮುಂಬೈಗೆ ಪಲಾಯನ ಮಾಡುತ್ತಿದ್ದ ವೇಳೆ ಬಂಧಿಸಲಾಗಿತ್ತು. ರಹೆಮತ್ ಹಾಗೂ ಶಾಫೀ ಕೃಷ್ಣಾಪುರದ 7ನೇ ಬ್ಲಾಕ್‌ನಲ್ಲಿರುವ ಸತ್ತಾರ್ ಮನೆಗೆ ಭೇಟಿ ನೀಡಿದ್ದಾಗಿ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸತ್ತಾರ್ ಸಹಿತವಾಗಿ ಇನ್ನಿಬ್ಬರು ಆರೋಪಿಗಳನ್ನು ಕೃಷ್ಣಾಪುರದ ಸತ್ತಾರ್ ನಿವಾಸಕ್ಕೆ ಕರೆತರಲಾಗಿತ್ತು.

    ಪೊಲೀಸರು ಸ್ಥಳ ಮಹಜರಿಗೆ ಆಗಮಿಸಿದ ವಿಚಾರ ತಿಳಿಯುತ್ತಿದ್ದಂತೆ ಮುಮ್ತಾಜ್ ಅಲಿಯ ನೂರಾರು ಬೆಂಬಲಿಗರು ಸತ್ತಾರ್ ಮನೆಯ ಮುಂದೆ ಜಾಮಾಯಿಸಿದ್ದಾರೆ. ಈ ವೇಳೆ ಘೋಷಣೆಗಳನ್ನು ಕೂಗಿ ಸತ್ತಾರ್ ಹಾಗೂ ರಹೆಮತ್‌ಗೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸುರತ್ಕಲ್ ಹಾಗೂ ಕಾವೂರು ಪೊಲೀಸರು ಹೆಚ್ಚಿನ ಭದ್ರತೆಯಲ್ಲಿ ಸ್ಥಳಮಹಜರಿಗೆ ಬಂದಿದ್ದು, ಸತ್ತಾರ್ ಮನೆಯ ಮುಂದೆ ಜಮಾಯಿಸಿದ್ದ ಜನರನ್ನು ನಿಯಂತ್ರಿಸಿದ್ದಾರೆ. ಈ ವೇಳೆ ಕೊಂಚ ಕಾಲ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿತ್ತಾದರೂ, ಪೊಲೀಸರು ಆರೋಪಿಗಳ ಸ್ಥಳಮಹಜರು ನಡೆಸಿ ವಾಪಾಸಾಗಿದ್ದಾರೆ.  ಸಮಾಜ ಸೇವಕನಾಗಿ, ಧಾರ್ಮಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಮುಮ್ತಾಜ್ ಅಲಿ ರಹೆಮತ್ ಎಂಬ ಮಹಿಳೆಯ ಕಿರುಕುಳದಿಂದ ಜೀವಾಂತ್ಯಗೊಳಿಸಿದ್ದರು.

     

    Continue Reading

    LATEST NEWS

    ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ

    Published

    on

    ದೆಹಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವನ್ ಅವರ ಇಶಾ ಫೌಂಡೇಶನ್ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

    ಆಶ್ರಮವನ್ನು ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಸದ್ಗುರು ಜಗ್ಗಿ ವಾಸುದೇವನ್ ಅವರು ‘ಬ್ರೈನ್ ವಾಶ್’ ಮಾಡಲಾಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಇಶಾ ಫೌಂಡೇಶನ್ ವಿರುದ್ಧ ಆರೋಪಿಸಿದ್ದರು. ಇದೀಗ ಈ ಪ್ಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಗೀತಾ ಮತ್ತು ಲತಾ ಇಬ್ಬರೂ ವಯಸ್ಕರಾಗಿದ್ದು, ಅವರ ಸ್ವಂತ ಇಚ್ಛೆಯ ಆಶ್ರಮದಲ್ಲಿ ವಾಸಿಸುತ್ತಿರುವ ಕಾರಣ ಕಾನೂನುಬಾಹಿರ ಬಂಧನದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದೆ.

    ಆದಾಗ್ಯೂ, ಆದೇಶವು ಈ ಪ್ರಕರಣಕ್ಕೆ ಮಾತ್ರ. ಆಶ್ರಮದಲ್ಲಿ ವೈದ್ಯರೊಬ್ಬರ ಮೇಲೆ ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯದ ಆರೋಪವಿದೆ ಎಂದು ನ್ಯಾಯಾಲಯ ಹೇಳಿದೆ. ಬ್ರೈನ್ ವಾಶ್ ವಿಷಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್, ಆಶ್ರಮದ ಮೇಲೆ ದಾಳಿ ನಡೆಸಿದ ನಂತರ, ‘ಸಂಪೂರ್ಣವಾಗಿ ಅನುಚಿತ’ ರೀತಿಯಲ್ಲಿ ವರ್ತಿಸಿದೆ ಎದು ತಿಳಿಸಿದೆ.

    ಆಶ್ರಮಕ್ಕೆ ಸೇರಿದಾಗ ಅವರಿಬ್ಬರಿಗೂ 27 ಮತ್ತು 24 ವರ್ಷ. ಹೆಣ್ಣುಮಕ್ಕಳಿಬ್ಬರೂ ಅಪ್ರಾಪ್ತ ವಯಸ್ಸಿನವರಾಗಿರಲಿಲ್ಲ. ಅವರು ಹೈಕೋರ್ಟಿಗೆ ಹಾಜರಾಗುವ ಮೂಲಕ ಹೇಬಿಯಸ್ ಕಾರ್ಪಸ್ ಅರ್ಜಿಯ ಉದ್ದೇಶವನ್ನು ಪೂರೈಸಲಾಗಿದೆ. ಮುಂದೆ ಯಾವುದೇ ನಿರ್ದೇಶನಗಳ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

    Continue Reading

    BIG BOSS

    BBK11: ಓಪನ್ ಆಗಿದೆ ಬಿಗ್​ಬಾಸ್ ಮನೆಯ ಮುಖ್ಯದ್ವಾರ; ಕ್ಲೈಮ್ಯಾಕ್ಸ್​ನಲ್ಲಿ ಇದೆಯಾ ರೋಚಕ ಟ್ವಿಸ್ಟ್..!

    Published

    on

    ಬಿಗ್​ ಬಾಸ್​… ಆರಂಭದಲ್ಲೇ ರಣಾಂಗಣವಾಗಿ ಬದಲಾಗಿರೋ ಬಿಗ್ ಮನೆ ಅತಿರೇಕದ ಕದನಕ್ಕೂ ಸಾಕ್ಷಿಯಾಗಿದೆ. ಇದುವರೆಗೂ ಚರ್ಚೆಯಾಗುತ್ತಿದ್ದ ರೀತಿಯೇ ರಂಜಿತ್ ಹಾಗೂ ಲಾಯರ್ ಜಗದೀಶ್​ಗೆ ಕಿರುತೆರೆಯ ದೊಡ್ಮನೆಯಿಂದ ಗೇಟ್ ಪಾಸ್ ಸಿಕ್ಕಿದೆ. ಹೊರಹೋಗಲು ಡೋರ್ ಓಪನ್ ಆಗಿದೆ.

    ಬಿಗ್‌ಬಾಸ್ ಅಂದ್ರೆ.. ಟಾಸ್ಕ್‌, ಎಲಿಮಿನೇಟ್, ಸೇವ್, ಜಗಳ ಎಲ್ಲ ಮಿಕ್ಸ್​ ಮಸಾಲ ಇದ್ದೇ ಇರುತ್ತೆ. ಆದ್ರೆ, ಈ ಸಲದ ಬಿಗ್‌ಬಾಸ್‌ ಸೀಸನ್ ನೋಡಿದ್ರೆ ಜನಕ್ಕೆ ಇದೇನಪ್ಪ ಬರೀ ಜಗಳ ಅನಿಸುವಂತೆ ಆಗ್ಬಿಟ್ಟಿದೆ. ಆರಂಭದಿಂದ ಬಿಗ್ ಮನೆಯಲ್ಲಿ ಬರೀ ಜಗಳದ್ದೇ ಸದ್ದು. ಅದರ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಭಿಮಾನಿಗಳ ಪಾಲಿನ ಕಿಂಗ್ ಜಗದೀಶ್.

    ಆದ್ರೀಗ ಇದೇ ಜಗದೀಶ್, ಜಗಳದ ಜಟಾಪಟಿಯಿಂದ ಬಿಗ್ ಬಾಸ್​ ಮನೆಯಿಂದ ಹೊರಹೋಗೋ ಪರಿಸ್ಥಿತಿ ಬಂದಿದೆ. ಎಪಿಸೋಡ್‌ನಲ್ಲಿ ಬಿಗ್‌ಬಾಸ್‌ ಕಂಟೆಸ್ಟ್‌ಗಳಿಗೆ ಒಂದು ಟಾಸ್ಕ್‌ ಕೊಟ್ಟಿರುತ್ತೆ. ಟಾಸ್ಕ್‌ನಲ್ಲಿ ಗೆದ್ದೋರಿಗೆ ಇಬ್ಬರನ್ನ ಸೇವ್‌ ಮತ್ತು ನಾಮಿನೇಟ್‌ ಮಾಡೋ ಅವಕಾಶ ಇರುತ್ತೆ. ಆದರೆ ನಾಮಿನೇಟ್​ ವೇಳೆ ಜಗಳ ಆಗಿದ್ದೆ ಜಗಳ ಆಗೋಕೆ ಕಾರಣ ಆಗಿದೆ.

    ಈ ವಾರದ ನಾಮಿನೇಟ್‌ ಯಾರು?

    ಆಟ ಆದ ಮೇಲೆ.. ನೇರವಾಗಿ ನಾಮಿನೇಟ್‌ ಆಗಿದ್ದ ಅನುಷಾ.. ಐಶ್ವರ್ಯ, ಮಾನಸ, ಜಗದೀಶ್, ಗೋಲ್ಡ್‌ ಸುರೇಶ್, ಮೋಕ್ಷಿತಾ, ಧನರಾಜ್‌ ಹಾಗೂ ಉಗ್ರಂ ಮಂಜು ಈ ವಾರದ ನಾಮಿನೇಟ್‌ ಅಂತಾ ಬಿಗ್‌ಬಾಸ್ ಅಂತಿಮ ಪಟ್ಟಿಯನ್ನ ಡಿಸ್‌ಪ್ಲೇ ಮಾಡಿದೆ ಅಷ್ಟೇ.. ಅಷ್ಟೋತ್ತು ಆಟ ಆಡಿದವ್ರು ಈಗ ಗುಂಪು ಗುಂಪಾಗಿ ಸಮಜಾಯಿಷಿ ಕೋಡೋಕೆ ಶುರು ಮಾಡಿದರು.

    ಇಷ್ಟೇ ಆಗಿದ್ರೆ ಬಿಗ್‌ಬಾಸ್ ಮನೆ ರಣರಂಗ ಆಗುತ್ತಿರಲಿಲ್ಲ. ಆದ್ರೆ ಈ ಗ್ಯಾಪಲ್ಲಿ ಮಹಿಳಾ ಸ್ಪರ್ಧಿಯೊಬ್ಬರ ಬಗ್ಗೆ ಜಗದೀಶ್ ಹೇಳಿದ ಅದೊಂದು ಮಾತು ದೊಡ್ಡ ರಾದ್ದಾಂತ ಸೃಷ್ಟಿಸಿಬಿಟ್ಟಿತು. ಜಗದೀಶ್ ಆ ವರ್ಡ್‌ ಯೂಸ್‌ ಮಾಡ್ತಿದ್ದಂತೆ ಬಿಗ್‌ಬಾಸ್ ಮಹಿಳಾ ಮಣಿಗಳು ಲಾಯರ್‌ಗೆ ಪ್ರಶ್ನೆ ಮಾಡೋಕೆ ಶುರು ಮಾಡಿದರು.

    ಜಗದೀಶ್​​ ತಪ್ಪಾಗಿ ಮಾತನಾಡಿದ್ರಾ..?

    ಮಾಸನ ಹಾಗೂ ಜಗದೀಶ್ ಮಾತಿನ ಚಕಮಕಿ ವೇಳೇ ರಂಜಿತ್‌ ಬಂದು ಜಗದೀಶ್​​ರನ್ನ ತಳ್ಳಿದ್ದಾರೆ. ಅತ್ತ ಮಹಿಳೆಯರ ಬಗ್ಗೆ ಜಗದೀಶ್​​ ತಪ್ಪಾಗಿ ಮಾತಾಡಿದ್ದಾರೆ. ಹೀಗಾಗಿ ಈ ಇಬ್ಬರನ್ನ ಮನೆಯಿಂದ ಹೊರಬರಲು ಬಿಗ್‌ಬಾಸ್‌ ಸೂಚಿಸಿದ್ದು, ಮನೆಯ ಮುಖ್ಯದ್ವಾರ ಓಪನ್ ಆಗಿದೆ. ಡೋರ್ ಏನೋ ಓಪನ್ ಆಗಿದೆ. ಆದ್ರೆ, ಯಾರೂ ಹೊರಗೆ ಹೋಗಿರುವುದು ಎನ್ನುವುದು ತೋರಿಸಿಲ್ಲ. ಹೀಗಾಗಿ ಕ್ಲೈಮ್ಯಾಕ್ಸ್ ಇವತ್ತಿನ ಸಂಚಿಕೆಯಲ್ಲಿ ಕಾಣಸಿಗಲಿದೆ.

    Continue Reading

    LATEST NEWS

    Trending