Connect with us

    MANGALORE

    ಕಷ್ಟ ಬಂತೆಂದು ಆತ್ಮಹತ್ಯೆಯ ನಿರ್ಧಾರ ಮಾಡದಿರಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ

    Published

    on

    ಮಂಗಳೂರು: ಜೀವನದಲ್ಲಿ ಕಷ್ಟ ಬಂತೆಂದು ಏಕಾಏಕಿ ಆತ್ಮಹತ್ಯೆಯ ನಿರ್ಧಾರ ಮಾಡದಿರಿ. ಎನೇ ಕಷ್ಟವಿದ್ದರೂ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ತಿಳಿಸಿ.

    ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಒಕ್ಕೂಟದ ಪ್ರಮುಖ ಧ್ಯೇಯವಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಹೇಳಿದರು.


    ಅವರು ಬಂಟ್ಸ್ ಹಾಸ್ಟೆಲ್’ನಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆದ ಸಮಾಜ ಕಲ್ಯಾಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಇಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಪ್ರತಿ ತಿಂಗಳು ಆರ್ಥಿಕ ಕಷ್ಟದಲ್ಲಿರುವ ಫಲಾನುಭವಿಗಳಿಗೆ ಸಹಾಯಧನ ವಿತರಿಸುತ್ತಿದೆ. ಕೊರೋನದಂತಹ ಲಾಕ್ಡೌನ್ ಸಂದರ್ಭದಲ್ಲೂ 1.5 ಕೋಟಿ ರೂ ಗಳಷ್ಟು ಹಣವನ್ನು ದಾನಿಗಳಿಂದ ಸಂಗ್ರಹಿಸಿ ಕಷ್ಟದಲ್ಲಿದವರಿಗೆ ನೀಡಿದ್ದೇವೆ.

    ಉಳ್ಳವರಿಂದ ಸಂಗ್ರಹಿಸಿ ಇಲ್ಲದವರಿಗೆ ನೀಡುವುದು ಒಕ್ಕೂಟದ ಕಾರ್ಯ, ನಮ್ಮ ಶಕ್ತಿಯಾನುಸಾರ ಮುಂದೆಯೂ ಸಹಾಯ ಮಾಡಲಿದ್ದೇವೆ ಎಂದರು.

    ಇಂದು ಯಾವುದೇ ಬಂಟ ಶಾಸಕರು, ಸಚಿವರು 1ರೂಪಾಯಿಯ ಸಹಾಯವನ್ನು ಒಕ್ಕೂಟಕ್ಕೆ ಮಾಡಿಲ್ಲ. ಬೇರೆ ಸಮಾಜದ ರಾಜಕೀಯ ಮುಖಂಡರಿಗೆ ಅವರ ಸಮಾಜದ ಮೇಲಿರುವಷ್ಟು ಪ್ರೀತಿ, ಅಭಿಮಾನ ನಮ್ಮವರಿಗಿಲ್ಲ.

    ಆಸ್ಪತ್ರೆಗಳಲ್ಲೂ ಕಷ್ಟದಲ್ಲಿ ಇರುವವರಿಗೆ ವಿನಾಯಿತಿ ನೀಡುತ್ತಿಲ್ಲ. ಸಾಯುವಾಗ ಕೂಡಿಟ್ಟದನ್ನು ಹೊತ್ತುಕೊಂಡು ಹೋಗಲಿದ್ದಾರೆಯೇ ಎಂದು ಬೇಸರ ವ್ಯಕ್ತ ಪಡಿಸಿದರು.
    ದಾನಿಗಳಿಲ್ಲದೆ ನಾವು ಎನೂ ಮಾಡಲು ಸಾಧ್ಯವಿಲ್ಲ,

    ದಾನಿಗಳು ನೀಡಿದ ಹಣವನ್ನು ಒಕ್ಕೂಟಕ್ಕೆ ಬಂದ ಅರ್ಜಿಗಳನ್ನು ಪರಿಶೀಲಿಸಿ ಸಹಾಯಧನ ನೀಡುತ್ತಿದ್ದೇವೆ. ಕಟೀಲು ಶ್ರೀದೇವಿಯ ಆರ್ಶಿವಾದದಿಂದ ಮುಂದೆಯೂ ನೀಡಲಿದ್ದೇವೆ. ಎಲ್ಲರಿಗೂ ದೇವರು ಅನುಗ್ರಹಿಸಲಿ ಎಂದು ಹಾರೈಸಿದರು.


    ಈ ಸಂದರ್ಭ ಬೆಂಗಳೂರು ಬಂಟರ ಸಂಘದ ದಿ. ಮುಲ್ಕಿ ಸುಂದರರಾಮ್ ಶೆಟ್ಟಿ ಸ್ಮಾರಕ ಪ್ರಶಸ್ತಿ ಪುರಸ್ಕೃತ ಐಕಳ ಹರೀಶ್ ಶೆಟ್ಟಿ ಅವರನ್ನು ಒಕ್ಕೂಟದ ಪದಾಧಿಕಾರಿಗಳು,

    ವಿವಿಧ ಬಂಟರ ಸಂಘಗಳ ಪ್ರಮುಖರು ತಮ್ಮ ಅಭಿಮಾನ ದ್ಯೋತಕವಾಗಿ ಸನ್ಮಾನಿಸಿ ಅಭಿನಂದಿಸಿದರು.


    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕಟೀಲ್, ಪತ್ರಕರ್ತರಾದ ವಿದ್ಯಾಧರ ಶೆಟ್ಟಿ ಹಾಗೂ ಅಶೋಕ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ರೋಹಿತ್ ಕಟೀಲ್ ಅವರು, ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಇಂದು ಮನೆ ಮಾತಾಗಿದೆ.

    ಹಿಂದೆ ಬಂಟರ ಸಂಘವನ್ನು ಕೇಳುವವರಿಲ್ಲ, ಆದರೆ ಐಕಳ ಅವರು ಒಕ್ಕೂಟದ ಅಧ್ಯಕ್ಷರಾದ ನಂತರ 3-4 ವರ್ಷದಲ್ಲಿ ಸಮಾಜದ ಎಲ್ಲಾ ವರ್ಗದ ಕಷ್ಟದಲ್ಲಿರುವ ಧ್ವನಿಯಾಗಿದ್ದಾರೆ.

    ಒಕ್ಕೂಟದ ಸಮಾಜ ಸೇವೆಯು ವಿಶ್ವದೆಲ್ಲೆಡೆ ಪ್ರಸಿದ್ಧಿ ಪಡೆಯಲಿ ಎಂದು ಹಾರೈಸಿದರು.
    ಪತ್ರಕರ್ತ ವಿದ್ಯಾಧರ ಶೆಟ್ಟಿ ಸನ್ಮಾನ ಸ್ವೀಕರಿಸಿ ಮಾತನಾಡಿ,

    ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದೇ ಎಂದು ಗೊತ್ತಾಗಿದ್ದೆ ಐಕಳ ಅವರು ಅಧ್ಯಕ್ಷರಾದಗ ಬಡವರ ಕಣ್ಣೀರೊರೆಸುವ ಹರೀಶಣ್ಣ ಹಾಗೂ ಅವರ ಜೊತೆಗಾರರಿಗೆ ದೇವರ ಮತ್ತಷ್ಟು ಶಕ್ತಿ ನೀಡಲೆಂದರು.


    ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಕರ್ತ ಅಶೋಕ ಶೆಟ್ಟಿ ಅವರು, ಹೊರಗಿನ ಸನ್ಮಾನಕ್ಕಿಂತ ನಮ್ಮ ಸಮಾಜದ ಸನ್ಮಾನ ಮುಖ್ಯ, ಇದು ದೇವರ ಪ್ರಸಾದದಂತೆ. ಅಂತರರಾಷ್ಟ್ರೀಯ ಮಟ್ಟ ಸಂಸ್ಥೆಯಾಗಿರುವ ಒಕ್ಕೂಟ ಗುರುತಿಸಿ ಸನ್ಮಾನಿಸಿರುವುದಕ್ಕೆ ಚಿರರುಣಿಯಾಗಿರುವ ಎಂದರು.

    ಒಕ್ಕೂಟದ ಪೋಷಕರು, ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಅವರನ್ನು ಮತ್ತು ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಉದ್ಯವಿು , ಒಕ್ಕೂಟದ ಪೋಷಕರು ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಮಾತನಾಡಿ,

    ಶೃದ್ಧೆ, ಕ್ಷಮತೆ, ಗೌರವವಿದ್ದಲ್ಲಿ ತನ್ನೆಡೆಗೆ ಪುರಸ್ಕಾರ, ಸನ್ಮಾನಗಳು ನಮ್ಮನ್ನು ಹುಡುಕಿ ಬರುತ್ತದೆ. ಐಕಳ ಅವರು ತನ್ನ ವ್ಯವಹಾರ ಬಿಟ್ಟು ತನ್ನ ಜೀವನವನ್ನೇ ಸೇವೆಯಾಗಿ ಮುಡಿಪಾಗಿಟ್ಟಿದ್ದಾರೆ.

    ಮುಂದಿನ ದಿನಗಳಲ್ಲಿ ಒಕ್ಕೂಟದ ಕಾರ್ಯಗಳಿಗೆ ತನ್ನಿಂದಾಗುವ ಸಹಾಯ ಮಾಡುವ ಭರವಸೆ ನೀಡಿದರು.
    ಫಲಾನುಭವಿಗಳಿಗೆ ಸಹಾಯಧನ ವಿತರಣೆ: ಒಕ್ಕೂಟದ ಸಮಾಜದ ಕಲ್ಯಾಣ ಯೋಜನೆಯಡಿಯಲ್ಲಿ ವೈದ್ಯಕೀಯ, ಹೆಣ್ಮಕ್ಕಳ ವಿವಾಹ ಸಹಾಯ, ವಸತಿ ಸಹಾಯಹಸ್ತ ಹಾಗೂ ಇನ್ನಿತರ ಆರ್ಥಿಕ ಕಷ್ಟದಲ್ಲಿರುವ ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಿಸಲಾಯಿತು.
    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಅವರು ಸ್ವಾಗತಿಸಿದರು.

    ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕಾರ ಶೆಟ್ಟಿ ಪ್ರಸ್ತಾವಿಕ ಮಾತುಗಳ್ನಾಡಿದರು. ಶರತ್ ಶೆಟ್ಟಿ ನಿರೂಪಿಸಿದರು. ಸಿಂಧ್ಯಾ ಶೆಟ್ಟಿ ಪ್ರಾರ್ಥಿಸಿದರು. ಒಕ್ಕೂಟದ ಜೊತೆ ಕಾರ್ಯದರ್ಶಿ ಸಂಕಬೈಲ್ ಸತೀಶ್ ಅಡಪ ವಂದಿಸಿದರು.
    ಕಾರ್ಯಕ್ರಮದಲ್ಲಿ ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಲ್ಕೆಬೈಲ್, ಸುರತ್ಕಲ್, ಇರಾ, ಸಾಲೆತ್ತೂರು, ಕಂಕನಾಡಿ ಮತ್ತಿತರ ಬಂಟರ ಸಂಘಗಳ ಪ್ರಮುಖರು,

    ಸಹಾಯಧನ ಪಡೆಯಲು ಬಂದ ಫಲಾನುಭವಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending