Connect with us

LATEST NEWS

ಕೊರೊನಾ ಸಂಕಷ್ಠದಲ್ಲಿ ಹದರಾಬಾದ್ ಹುಡುಗಿಗೆ ಒಲಿಯಿತು: 2ಕೋ.ಸಂಬಳದ ಕೆಲಸ..!

Published

on

ಹೈದರಾಬಾದ್:ಕೊರೊನಾ ಬಂದ ನಂತರ ಕೆಲಸ ಗಿಟ್ಟಿಸಿಕೊಳ್ಳುವುದು ಮೊದಲಿನಷ್ಟು ಸುಲಭವಿಲ್ಲ. ಎಷ್ಟೇ ಬುದ್ಧಿವಂತಿಕೆಯಿದ್ದರೂ ಅವಕಾಶದ ಬಾಗಿಲುಗಳು ತೆರೆಯದೇ ಅನೇಕರು ನಿರುದ್ಯೋಗಿಗಳಾಗಿ ಉಳಿದಿದ್ದಾರೆ.

ಇನ್ನು ಕೆಲವರು ಕೈ ತುಂಬಾ ಸಂಬಳ ನೀಡುವ ಒಳ್ಳೆಯ ಕೆಲಸವನ್ನು ಕಳೆದುಕೊಂಡು ಅನಿವಾರ್ಯವಾಗಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ.

ಇಂತಹ ಕಾಲದಲ್ಲಿ ಹೈದರಾಬಾದ್​ನ ಯುವತಿಯೊಬ್ಬಳಿಗೆ ಸಾಫ್ಟ್​ವೇರ್ ದಿಗ್ಗಜ ಮೈಕ್ರೋಸಾಫ್ಟ್ ಸಂಸ್ಥೆ ವಾರ್ಷಿಕ 2ಕೋಟಿ ರೂಪಾಯಿ ಸಂಬಳ ನೀಡುವುದಾಗಿ ಹೇಳಿ ಕೆಲಸ ನೀಡಿ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದೆ.ಹೈದರಾಬಾದ್ ಮೂಲದ ದೀಪ್ತಿ ನಾರ್ಕುತಿ ಎಂಬ ಯುವತಿಗೆ ಇಷ್ಟು ದೊಡ್ಡ ಮಟ್ಟದ ಕೆಲಸ ಸಿಕ್ಕಿದ್ದು, ಆಕೆ ತನ್ನ ಲಿಂಕ್ಡ್​ ಇನ್​ ಖಾತೆಯಲ್ಲಿ ಹೇಳಿಕೊಂಡಿರುವಂತೆ ಮೈಕ್ರೋಸಾಫ್ಟ್​ನಲ್ಲಿ ಸಾಫ್ಟ್​ವೇರ್ ಡೆವಲಪ್​ಮೆಂಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅಮೆರಿಕಾ ದೇಶದ ಸಿಯಾಟಲ್​ನಲ್ಲಿ ಇರುವ ಮೈಕ್ರೋಸಾಫ್ಟ್ ಸಂಸ್ಥೆಯ ಪ್ರಧಾನ ಕಾರ್ಯಾಲಯದಲ್ಲಿ ದೀಪ್ತಿ ಕೆಲಸ ಮಾಡಲಿದ್ದು, ಓದು ಮುಗಿಸುತ್ತಿದ್ದಂತೆಯೇ ಭಾರೀ ವೇತನದ ಕೆಲಸ ಸಿಕ್ಕಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಫ್ಲಾರಿಡಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ ದೀಪ್ತಿ ಗಣಕ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ವಿದ್ಯಾಭ್ಯಾಸ ಮುಗಿಸುವ ಮುನ್ನವೇ ಆಕೆಗೆ ಅತ್ಯುನ್ನತ ಕಂಪೆನಿಗಳಿಂದ ಆಫರ್ ಬಂದಿತ್ತು ಎನ್ನಲಾಗಿದೆ.

ಅಮೆಜಾನ್, ಗೋಲ್ಡ್​ಮನ್, ಸಚ್ಸ್​ನಂತಹ ಸಂಸ್ಥೆಗಳು ಭಾರೀ ವೇತನದ ಕೆಲಸ ನೀಡುವುದಾಗಿ ಹೇಳಿದ್ದವು. ಕ್ಯಾಂಪಸ್ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ಸುಮಾರು 300 ವಿದ್ಯಾರ್ಥಿಗಳ ಪೈಕಿ ದೀಪ್ತಿ ವಾರ್ಷಿಕ 2 ಕೋಟಿ ರೂಪಾಯಿ ವೇತನ ನೀಡುವ ದೊಡ್ಡ ಮಟ್ಟದ ಕೆಲಸಕ್ಕೆ ಆಯ್ಕೆಯಾಗಿದ್ದಾರೆ.

ಈ ಹಿಂದೆ 2014-15ರಲ್ಲಿ ಮೈಕ್ರೋಸಾಫ್ಟ್​ನಲ್ಲಿ ಸ್ಟುಡೆಂಟ್ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದ ಅನುಭವ ಹೊಂದಿರುವ ದೀಪ್ತಿ ಮೇ.17ರಿಂದ ತಮ್ಮ ಔದ್ಯೋಗಿಕ ಜೀವನ ಆರಂಭಿಸಿದ್ದಾರೆ.

ಹೈದರಾಬಾದ್​ನ ಒಸ್ಮಾನಿಯ ವಿಶ್ವವಿದ್ಯಾಲಯದಲ್ಲಿ ಬಿಟೆಕ್​ ಪದವಿ ಪೂರೈಸಿದ್ದ ದೀಪ್ತಿ, ಜೆಪಿ ಮಾರ್ಗನ್​ನಲ್ಲಿ ಕೆಲಸಕ್ಕೆ ಸೇರಿದ್ದರು. ಬಳಿಕ ಓದುವ ಆಸಕ್ತಿ ತೋರಿಸಿ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಅವರು ಉನ್ನತ ವ್ಯಾಸಂಗಕ್ಕೆ ಅಮೆರಿಕಾಕ್ಕೆ ಹೋಗಿದ್ದರು.

ದೀಪ್ತಿ ನಾರ್ಕುತಿ ಅವರ ತಂದೆ ಡಾ.ವೆಂಕಣ್ಣ ಹೈದರಾಬಾದ್ ಪೊಲೀಸ್ ಇಲಾಖೆಯಲ್ಲಿ ಫೊರೆನ್ಸಿಕ್​ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

FILM

ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ಚಂದನ್ ಗೌಡ-ಕವಿತಾ ದಂಪತಿ

Published

on

ಚಂದನ್ ಗೌಡ – ಕವಿತಾ ದಂಪತಿ ಯಾರಿಗೆ ತಾನೇ ಗೊತ್ತಿಲ್ಲ. ಈ ಜೋಡಿ ‘ಲಕ್ಷ್ಮೀ ಬಾರಮ್ಮಾ’ ಮೂಲಕಾನೇ ಫೇಮಸ್. ಈ ಧಾರಾವಾಹಿಯಲ್ಲಿ ಕೆಲವು ಸಮಯ ನಟಿಸಿದ್ದ ಚಂದನ್ ಹೊರಬಂದಿದ್ದರು. ಕವಿತಾ ಕೂಡಾ ಅಷ್ಟೇ ಈ ಧಾರಾವಾಹಿ ಖ್ಯಾತಿ ನೀಡಿದ್ದರೂ, ನಂತರ ದಿನಗಳಲ್ಲಿ ಹೊರನಡೆದಿದ್ದರು. ಆದ್ರೆ, ಈ ಜೋಡಿ ರಿಯಲ್ ನಲ್ಲಿ ಒಂದಾಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು. ಇದೀಗ ಚಂದು – ಲಚ್ಚಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹಂಚಿಕೊಂಡ ದಂಪತಿ :

ನಟ ಚಂದನ್ ಕುಮಾರ್, ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ಸಂಭ್ರಮ ಹಂಚಿಕೊಂಡಿದ್ದಾರೆ. ನಟಿ ಕವಿತಾ ಗೌಡ ಚಂದನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆಅಭಿಮಾನಿಗಳಿಂದ, ನಟ, ನಟಿಯರಿಂದ ಶುಭ ಹಾರೈಕೆ ಹರಿದು ಬರುತ್ತಿದೆ. ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ವಿನಯ್ ಗೌಡ, ಪ್ರಿಯಾಂಕಾ ಚಿಂಚೋಳಿ ಮೊದಲಾದವರು ಶುಭಾಶಯ ತಿಳಿಸಿದ್ದಾರೆ. 2021 ಮೇ 14ರಂದು ಲಾಕ್ ಡೌನ್ ಸಂದರ್ಭದಲ್ಲಿ ಈ ಜೋಡಿ ಮದುವೆಯಾಗಿತ್ತು.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

ಬ್ಯುಸಿ ಲೈಫ್ :

ಕೆಲ ತಿಂಗಳುಗಳಿಂದ ಕವಿತಾ ಗೌಡ ಅವರು ಉದ್ಯಮದ ಕಡೆಗೆ ಮುಖ ಮಾಡಿದ್ದರು. ಚಂದನ್ ಜೊತೆ ಸೇರಿ ಒಂದಾದ ಮೇಲೆ ಒಂದರಂತೆ ಹೋಟೆಲ್ ಬ್ರ್ಯಾಂಚ್ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಮೇಕಪ್ ಸ್ಟುಡಿಯೋವನ್ನು ಕೂಡ ಆರಂಭಿಸಿದ್ದಾರೆ.

Continue Reading

FILM

ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

Published

on

ಬ್ಯೂಟಿ ಕ್ವೀನ್ ಎಂದು ಕಿರೀಟ ಮುಡಿಗೇರಿಸಿಕೊಂಡವಳು ಎರಡೇ ವರ್ಷಕ್ಕೆ ಹಂತಕರ ಗುಂಡೇಟಿಕೆ ಬಲಿಯಾಗಿದ್ದಾಳೆ. ರೆಸ್ಟೋರೆಂಟ್‌ನಲ್ಲಿ ಆರಾಮವಾಗಿ ವಿರಾಮಿಸಿ ಬಗೆ ಬಗೆಯ ಸೀಫುಡ್ ಆರ್ಡರ್ ಮಾಡಿದ್ರು.  ಇನ್ನೇನು ಫುಡ್‌ಅನ್ನು ಆಹ್ಲಾದಿಸಬೇಕು ಅನ್ನೋವಷ್ಟರಲ್ಲಿ ದುರಂತ ಅಂದ್ರೆ ಹಂತಕರ ಗುಂಡೇಟಿಗೆ ಈ ಸುಂದರಿ ಬಲಿಯಾಗಿದ್ದಾರೆ.

23ವರ್ಷಕ್ಕೆ ಬ್ಯೂಟಿ ಕ್ವೀನ್ ಆದ ಲ್ಯಾಂಡಿ

ಲ್ಯಾಂಡಿ ಪರ್ರಾಗಾ ಗೊಯ್ಬುರೊ ತನ್ನ 23 ವರ್ಷಕ್ಕೆ ಬ್ಯೂಟಿ ಕ್ವೀನ್ ಕಿರೀಟವನ್ನು ಮುಡಿಗೇರಿಸಿಕೊಂಡವಳು. 2022ರ ಮಿಸ್‌ ಈಕ್ವೆಡಾರ್ ಸ್ಪರ್ಧೆಯಲ್ಲಿ ಬ್ಯೂಟಿ ಕ್ವೀನ್ ಆಗಿ ಲಕ್ಷಾಂತರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾಳೆ.  ಬಿಕಿನಿ ಕ್ವೀನ್ ಎಂದೆನಿಸಿಕೊಂಡ ಈಕೆ ಇನ್ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಫಾಲೋವರ್ಸ್‌ಗಳನ್ನು ಹೊಂದಿದ್ದಾಳೆ. ಹಲವು ಉದ್ಯಮಗಳನ್ನು ಕೂಡ ಈಕೆ ನಡೆಸುತ್ತಿದ್ದಳು.  ಲ್ಯಾಂಡಿ ಪರ್ರಾಗಾ ಸಾವಿನ ಸುದ್ದಿ ಕೇಳಿ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ.

ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

ಸಾವಿಗೆ ಕಾರಣವಾದ ಇನ್ಸ್ಟಾಗ್ರಾಮ್ ಪೋಸ್ಟ್:

ಎ.28ರಂದು ಕ್ವೆವೆಡೊ ನಗರದ ರೆಸ್ಟೋರೆಂಟ್‌ವೊಂದಕ್ಕೆ ಲ್ಯಾಂಡಿ ತೆರಳಿದ್ದರು. ಈ ವೇಳೆ ವೆರೈಟಿ ಸೀ ಫುಡ್‌ಗಳನ್ನು ಆರ್ಡರ್ ಮಾಡಿದ್ದಾರೆ. ಫುಡ್‌ಗಳು ಟೇಬಲ್ ಮೇಲೆ ಬಂದ ಕೂಡಲೇ ಫೊಟೋ ಕ್ಲಿಕ್ಕಿಸಿ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೊಟೋ ಲ್ಯಾಂಡಿಯ ಪ್ರಾಣಕ್ಕೆ ಕುತ್ತು ತಂದಿತ್ತು. ಹಂತಕರು ಪೋಸ್ಟ್ ಮಾಡಿದ್ದ ಫೊಟೋದ ಜಾಲವನ್ನು ಹಿಡಿದು ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು ಲ್ಯಾಂಡಿ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾರೆ. ರೆಸ್ಟೋರೆಂಟ್‌ಗೆ ಬಂದ ದುಷ್ಕರ್ಮಿಗಳು ಲ್ಯಾಂಡಿ ಮೇಲೆ ಗನ್‌ನಿಂದ ಶೂಟ್ ಮಾಡಿ ಪರಾರಿಯಾಗಿದ್ದಾರೆ. ಈಕ್ವೆಡಾರ್‌ನ ಸುಂದರಿ ದುಷ್ಕರ್ಮಿಗಳ ಗುಂಡೇಟಿಗೆ ರಕ್ತದ ಮಡುವಿನಲ್ಲಿ ಬರ್ಬರವಾಗಿ  ಹತ್ಯೆಯಾಗಿದ್ದಾರೆ. ಹಂತಕರು ಈಕೆಯ ಇನ್ಸ್ಟಾಗ್ರಾಮ್‌ನ್ನು ಫಾಲೋ ಮಾಡಿ ಹತ್ಯೆ ಮಾಡಿದ್ದು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಈ ವೀಡಿಯೋ ರೆಸ್ಟೋರೆಂಟ್‌ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹತ್ಯೆಗೆ ಕಾರಣವೇನು ಎಂಬುದನ್ನು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು ವಿಶೇಷ ತಂಡ ರಚನೆ ಮಾಡಿದ್ದಾರೆ. 2023ರಲ್ಲಿ ಅಟಾರ್ನಿ ಜನರಲ್ ಕಚೇರಿಯಲ್ಲಿ ನಡೆದ ಸಂಘಟಿತ ಅಪರಾಧ ಪ್ರಕರಣದಲ್ಲಿ, ಡ್ರಗ್ ಕಳ್ಳ ಸಾಗಾಣಿಕೆಯಲ್ಲಿ ಲ್ಯಾಂಡಿ ಹೆಸರು ಕೇಳಿಬಂದಿತ್ತು. ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ ತನ್ನ ಬಾಯ್‌ಫ್ರೆಂಡ್‌ನಿಂದ ದೂರಾಗಿದ್ದ ಲ್ಯಾಂಡ್ರಿಯ ಈ ನಿಗೂಢ ಬರ್ಬರ ಹತ್ಯೆಗೆ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.

 

 

 

Continue Reading

FILM

ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

Published

on

ಮುಂಬೈ/ಮಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಸಿನೆಮಾ ಲೋಕದಲ್ಲಿ ತಮ್ಮದೇ ಆದ ಸ್ಟಾಂಡ್‌ ಕ್ರಿಯೇಟ್ ಮಾಡಿದ್ದಾರೆ. ಕೇವಲ ತಮಿಳು ಭಾಷೆ ಅಲ್ಲದೇ ಎಲ್ಲಾ ಭಾಷೆಗಳಲ್ಲಿಯೂ ರಜನಿಗೆ ಫ್ಯಾನ್ಸ್ ಇದ್ದಾರೆ. ಇನ್ನು ಅವರ ಚಾರ್ಮ್ ಅಬ್ಬಾ…! ವಯಸ್ಸಲ್ಲಿ 73 ಆದರೂ ಚಿರ ಯುವಕನಂತೆ ಕಾಣಿಸುವ ಎನರ್ಜಿ ಇವರದು. ಇನ್ನು ಇವರ ಸಿನೆಮಾ ರಿಲೀಸ್ ಆದ್ರೆ ಸಾಕು ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತೆ. ಅದಕ್ಕೆ ಇತ್ತೀಚೆಗೆ ರಿಲೀಸ್ ಆದ ಜೈಲರ್ ಸಿನೆಮಾವೇ ಸಾಕ್ಷಿ. ಇದೀಗ ರಜನಿ ಹಾಗೂ ಐಶ್ವರ್ಯ ರೈ ಗೆ ಸಂಬಂಧಪಟ್ಟ ಹಳೆ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

rajani-aishwarya

14 ವರ್ಷಗಳ ಹಿಂದೆಯೇ ಕೆಲವರು ರಜನಿಕಾಂತ್ ಅವರನ್ನು ಹೀರೋ ಅಲ್ಲ ಎಂಬಂತೆ ವರ್ತಿಸಿದ್ದರಂತೆ. ಹೀಗಂತ ಖುದ್ದು ರಜನಿ ಅವರು ರೋಬೋ ಸಿನೆಮಾ ಪ್ರೆಸ್‌ಮೀಟ್‌ ನಲ್ಲಿ ಇಂಟ್ರಸ್ಟಿಂಗ್ ವಿಷಯವನ್ನು ಹಂಚಿಕೊಂಡಿದ್ದರು. ಇದೀಗ ಈ ವೀಡಿಯೋ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ.

ಐಶ್ವರ್ಯ ರೈ ಬಚ್ಚನ್‌ಗೆ, ಸೊಸೆಯ ‘ವಾಟ್‌ ದಿ ಹೆಲ್‌ ನವ್ಯಾ’ದಲ್ಲಿ ಡಿಮ್ಯಾಂಡ್‌…!

ಪ್ರೆಸ್‌ಮೀಟ್‌ನಲ್ಲಿ ಮಾತು ಆರಂಭಿಸಿದ ರಜನಿ ‘ನನ್ನ ಜೊತೆ ಹೀರೋಯಿನ್‌ ಆಗಿ ನಟಿಸಿರುವುದಕ್ಕೆ ಐಶ್ವರ್ಯಾಗೆ ಧನ್ಯವಾದಗಳು. ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ನನ್ನ ಸಹೋದರನ ಮನೆಗೆ ಹೋಗಿದ್ದೆ. ಪಕ್ಕದ ಮನೆ ರಾಜಸ್ಥಾನ ಕುಟುಂಬದವರು ನನ್ನನ್ನು ನೋಡಲು ಬಂದರು. ಅದರಲ್ಲಿ ನಂದುಲಾಲ್ ಎಂಬವರು ನನ್ನನ್ನು ಮಾತನಾಡಿಸಿದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಸರ್ ನಿಮ್ಮ ತಲೆ ಕೂದಲಿಗೆ ಏನಾಗಿದೆ ಎಂದು ಕೇಳಿದರು. ಬಿಡಿ ಎಲ್ಲಾ ಉದುರಿ ಹೋಗಿದೆ ಎಂದು ಹೇಳಿದೆ. ನಿಮ್ಮ ನಿವೃತ್ತಿ ಜೀವನ ಹೇಗಿದೆ. ಲೈಫ್ ಎಂಜಾಯ್ ಮಾಡ್ತಿದ್ದೀರಾ ಎಂದು ಕೇಳಿದರು. ಇಲ್ಲಾ ನಾನೊಂದು ಸಿನೆಮಾ ಮಾಡ್ತಾ ಇದ್ದೇನೆ. ಐಶ್ವರ್ಯ ರೈ ಹೀರೋಯಿನ್ ಅಂದೆ. ‘ಹೀರೋ ಯಾರು ಸರ್’ ಎಂದು ಮರು ಪ್ರಶ್ನಿಸಿದರು.  ಅವರ ಜೊತೆ ಇದ್ದವರು ಡ್ಯಾಡಿ ಇವರೇ ಹೀರೋ ಎಂದು ಮೆಲುಧ್ವನಿಯಲ್ಲಿ ಹೇಳ್ತಾರೆ. ನಂದುಲಾಲ್  ಮೌನವಾಗಿ ನನ್ನನ್ನೇ ದಿಟ್ಟಿಸಿ ನೋಡಿ ಏನೂ ಮಾತನಾಡದೆ ಹೊರಟು ಬಿಟ್ಟರು. ಅಷ್ಟರಾಗಲೇ ಮನೆ ಒಳಗಡೆಯಿಂದು ಒಂದು ಧ್ವನಿ ಬರುತ್ತೆ. ಐಶ್ವರ್ಯ ರೈ ಗೆ ಏನಾಗಿದೆ..? ಅಲ್ಲಾ ಅಭಿಷೇಕ್ ಹೇಗೆ ಒಪ್ಪಿದ್ರು..? ಅಮಿತಾಬಚನ್‌ಗಾದ್ರು ಎನಾಗಿದೆ.. ಐಶ್ವರ್ಯಾಳನ್ನು ಇವರ ಜೊತೆ ಹೀರೋಯಿನ್ ಮಾಡಲು ಒಪ್ಪಿದ್ದಾರಲ್ಲ  ಎಂಬ ಮಾತು ಕೇಳಿ ಬಂತು ಎಂದು ರಜನಿಕಾಂತ್ ಸಿನೆಮಾ ಪ್ರೆಸ್ ಮೀಟ್‌ನಲ್ಲಿ ನಡೆದ ಘಟನೆಯನ್ನು ಮೆಲುಕು ಹಾಕಿದ್ದರು.

Continue Reading

LATEST NEWS

Trending