Connect with us

LATEST NEWS

ಆವೇಷಕ್ಕೆ ಒಳಗಾದ ಹುಲಿವೇಷಧಾರಿ: ಉಡುಪಿ ಹುಲಿಸ್ಪರ್ಧೆಯಲ್ಲಿ ವಿಸ್ಮಯಕಾರಿ ಘಟನೆ

Published

on

ಉಡುಪಿ: ಇಲ್ಲಿ ನಡೆದ ಹುಲಿವೇಷ ಕುಣಿತದ ಸ್ಪರ್ಧೆ ಸಂದರ್ಭದಲ್ಲಿ ಹುಲಿ ವೇಷಧಾರಿಯೊಬ್ಬನ ಮೈಮೇಲೆ ಆವೇಶವಾಗಿ ಘರ್ಷಿಸಿದ ಪ್ರಸಂಗ ನಡೆದಿದೆ. ಕೂಡಲೇ ಸಂಘಟಕರು ಹುಲಿ ವೇಷಧಾರಿಯ ವರ್ತನೆಯನ್ನು ಕಂಡು ನಿಯಂತ್ರಿಸಲು ಮುಂದಾಗಿದ್ದಾರೆ. ನಾಲ್ಕೈದು ಮಂದಿ ಆಗಮಿಸಿ ನಿಯಂತ್ರಿಸಲು ಯತ್ನಿಸಿದಾಗ ಹುಲಿ ಅವರನ್ನು ದೂಡಿದ ಘಟನೆಯೂ ನಡೆದಿದೆ.

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಉಡುಪಿ ನಗರದ ನಿಟ್ಟೂರಿನಲ್ಲಿ ಹುಲಿವೇಷ ಕುಣಿತ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಸ್ಪರ್ಧೆ ಹಿನ್ನೆಲೆಯಲ್ಲಿ ಹತ್ತಾರು ತಂಡಗಳು ಇದರಲ್ಲಿ ಭಾಗವಹಿಸಿದ್ದವು. ಸಾವಿರಾರು ಮಂದಿ ವೇದಿಕೆಯ ಸುತ್ತಲೂ ನೆರೆದಿದ್ದರು. ಸ್ಪರ್ಧಾ ತಂಡವಾಗಿ ವೇದಿಕೆಗೆ ಆಗಮಿಸಿದ್ದ ಜ್ಯೂನಿಯರ್ಸ್‌ ಫ್ರೆಂಡ್ಸ್ ಕೊರಂಗ್ರಪಾಡಿ ತಂಡವು ಪ್ರದರ್ಶನ ನೀಡಲು ಆರಂಭಿಸಿತ್ತು.

ಈ ವೇಳೆ ಒಬ್ಬಂಟಿಯಾಗಿ ಕೊರಂಗ್ರಪಾಡಿ ತಂಡದ ನೇತೃತ್ವದಲ್ಲಿದ್ದ ಅಖಿಲೇಶ್‌ ವೇದಿಕೆ ಮಧ್ಯಭಾಗದಲ್ಲಿ ಪ್ರದರ್ಶನ ನೀಡುವ ವೇಳೆ ಈ ಘಟನೆ ನಡೆದಿದೆ. ಅಖಿಲೇಶ್‌ ಮೈಮೇಲೆ ಕುಣಿಯುತ್ತಲೇ ಆವೇಶವಾಗಿದ್ದು, ಅವರು ವೇದಿಕೆ ಮ್ಯಾಟನ್ನು ಬಾಯಿಯಿಂದ ಕಚ್ಚಿ ಹರಿದು ಹಾಕಿದ್ದಾರೆ.

ತಕ್ಷಣವೇ ಇತರ ವೇಷಧಾರಿಗಳು ತಮ್ಮ ತಂಡದ ನಾಯಕನನ್ನು ಹಿಡಿದು ನಿಯಂತ್ರಿಸಲು ಯತ್ನಿಸಿದ್ದಾರೆ. ಬಳಿಕ ತಾಸೆ ಬಡಿಯುವುದನ್ನೂ ನಿಲ್ಲಿಸಿ ಇವರನ್ನು ಉಪಚರಿಸಿದ್ದಾರೆ. ಈ ಸಂದರ್ಭ ಅವರು ಹುಲಿಯಂತೆಯೇ ರ್ಘರ್ಘಿಸಿದ್ದು, ನೆರೆದವರನ್ನೂ ಬೆಚ್ಚಿ ಬೀಳಿಸಿತ್ತು. ಇಂತಹ ಘಟನೆಗಳು ಅಪರೂಪಕ್ಕೊಮ್ಮೆ ನಡೆಯುತ್ತವೆ ಎಂದು ಸಂಘಟಕರು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending