Connect with us

    DAKSHINA KANNADA

    ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರು ಪಾದುಕಾ ಮಂಟಪದ ಉದ್ಘಾಟನೆ..

    Published

    on

    ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರು ಪಾದುಕಾ ಮಂಟಪದ ಉದ್ಘಾಟನೆ

    Inauguration of Sri Sudheendra Theertha Swamiji’s Guru Paduka Mantapa..

    ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ನೂತನವಾಗಿ ನಿರ್ಮಿಸಲಾದ ನವೀಕೃತ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರು ಪಾದುಕಾ ಮಂಟಪದ ಉದ್ಘಾಟನೆಯು ಬುಧವಾರ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.

    ಬಳಿಕ ಸಂಸ್ಥಾನದ ಕೀರ್ತಿಯನ್ನು ಉತ್ತುಂಗಕ್ಕೇರಿಸಿ ಜತೆಗೆ ಸಮಾಜವನ್ನೂ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿ ಶಿಷ್ಯವರ್ಗದ ಪಾಲಿಗೆ ಮಾತನಾಡುವ ದೇವರೆನಿಸಿದ್ದ  ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರು ಪಾದುಕೆಯನ್ನು ಶ್ರೀಗಳವರು ಪ್ರತಿಷ್ಠಾಪಿಸಿದರು.

    ಗುರುವಾರದಂದು ಮಹಾಪ್ರಸ್ಥಾನಗೈದ ವೃಂದಾವನಸ್ಥರಾದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಐದನೇ ಪುಣ್ಯತಿಥಿ ಆರಾಧನೆ ಯು ಈ ಬಾರಿ ಮಂಗಳೂರಿನ ಶ್ರೀ ವೆಂಕಟರಮಣ ದೇವಳದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜರ ಗಲಿದ್ದು ,ರಾತ್ರಿ ಶ್ರೀ ದೇವಳದಲ್ಲಿ ವಿಶೇಷ ಸ್ವರ್ಣ ಗರುಡೋತ್ಸವ , ಸಂಸ್ಥಾನದಲ್ಲಿ ಪ್ರಧಾನ ಶ್ರೀ ವೇದವ್ಯಾಸ ದೇವರಿಗೆ ಕನಕಾಭಿಷೇಕ , ಗಂಗಾಭಿಷೇಕ , ಲಘು ವಿಷ್ಣು ಅಭಿಷೇಕಗಳು ನಡೆಯಲಿವೆ .

    ರಾತ್ರಿ ಸಂಸ್ಥಾನದ ಶ್ರೀ ವೇದವ್ಯಾಸ ದೇವರಿಗೆ  ಸ್ವರ್ಣ ಗರುಡ ವಾಹನ ಸೇವೆ ಶ್ರೀಗಳವರ ದಿವ್ಯ ಹಸ್ತಗಳಿಂದ ನಡೆಯಲಿರುವುದು .

    ಶ್ರೀಗಳವರು ಈ ಬಾರಿ ಒಂದು ತಿಂಗಳ ಪರ್ಯಂತ ಶ್ರೀದೇವಳದಲ್ಲಿ ಮೊಕ್ಕಾಂ ಮಾಡಲಿದ್ದು ಈ ಸಂದರ್ಭದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಶ್ರೀ ವಾಯುಸ್ತುತಿ , ಶ್ರೀ ನರಸಿಂಹ ಸ್ತುತಿ ನಮಸ್ಕಾರ , ಶ್ರೀ ವೀರ ವೆಂಕಟೇಶ ದೇವರ ಲಕ್ಷ ಪ್ರದಕ್ಷಿಣಾ ನಮಸ್ಕಾರ , ಸಂಸ್ಥಾನದ ದೇವರ ಸನ್ನಿಧಿಯಲ್ಲಿ ಲಕ್ಷ ತುಳಸಿ ಅರ್ಚನೆ , ಚಂಡಿಕಾ ಹವನ , ಗಾಯತ್ರಿ ಹವನ , ವಾಯುಸ್ತುತಿ ಹವನ ಕಾರ್ಯಕ್ರಮಗಳು ನಡೆಯಲಿರುವುದು .

    ಈ ಸಂದರ್ಭದಲ್ಲಿ ಶ್ರೀ ದೇವಳದ ಮೊಕ್ತೇಸರರಾದ ಸಿ . ಎಲ್ . ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಉಪಸ್ಥಿತರಿದ್ದರು .

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಸಿಎಂ ರಾಜಿನಾಮೆ ನೀಡಬೇಕು; ಕ್ಯಾಪ್ಟನ್‌ ಬ್ರಿಜೇಶ್ ಚೌಟ ಒತ್ತಾಯ

    Published

    on

    ಮಂಗಳೂರು: ಸಿದ್ದರಾಮಯ್ಯ 14 ಸೈಟ್ ವಾಪಾಸ್‌ ಕೊಟ್ಟಿರುವುದು ಅವರಿಗೆ ಅವರ ತಪ್ಪಿನ ಅರಿವಾದಂತೆ ಇದೆ. ಅವರು ಬದುಕುಳಿಯುವ ಕೊನೆಯ ಯತ್ನವಾಗಿ ಕಾಣುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.


    ಸಂವಿಧಾನದ ಆಶಯಗಳಿಗೆ ಗೌರವ ನೀಡಬೇಕು ಕೇವಲ ಕುರ್ಚಿಗೆ ಅಂಟಿಕೊಂಡಿರುವುದಲ್ಲ . ಸಿದ್ದರಾಮಯ್ಯ ಕೇವಲ ಕುರ್ಚಿಗಾಗಿಯೇ ಇರುವಂತೆ ಮಾಡುತ್ತಾರೆ ಎಂದು ಹೇಳಿದರು.
    ಆಮಿಷಗಳಿಗೆ ಜನರನ್ನು ಒಳಪಡಿಸುತ್ತಾ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಕಿಂಚಿತ್ತೂ ಆಭಿವೃದ್ಧಿ ಕಾಣುತ್ತಿಲ್ಲ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಿದ್ದಾರೆ. ದಲಿತರ ಜಾಗವನ್ನು ಕಬಳಿಸಿ, ಪತ್ನಿ ಹೆಸರಿಗೆ ಸೈಟ್ ಮಾಡಿಕೊಂಡಿದ್ದಾರೆ ಎಂದರು.

    Continue Reading

    BANTWAL

    ಬಸ್ಸಿನಿಂದ ಪರಿಸರ ಮಾಲಿನ್ಯ; ಸಾರ್ವಜನಿಕರ ಆಕ್ರೋಶ

    Published

    on

    ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ  ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು  ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


    ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ ನಿರ್ವಹಣೆ ಇಲ್ಲದ ಬಸ್ಸುಗಳನ್ನು ರಸ್ತೆಯಲ್ಲಿ ಓಡಿಸುತ್ತಿದ್ದು, ಇದರಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರವೇ ನಿವಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

    ಕಪ್ಪು ಹೋಗೆ ಹೊರ ಸೂಸುವ ಬಸ್ಸಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.

    Continue Reading

    DAKSHINA KANNADA

    ಬಸ್ಸುಗಳು ಮುಖಾಮುಖಿ; ದಂಪತಿಗೆ ಗಾಯ

    Published

    on

    ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸ್ ಅಡ್ಡಹೊಳೆ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿಹೊಡೆದು ವಾಹನಗಳು ಜಖಂಗೊಂಡಿದೆ.


    ಹಾಸನ ಮೂಲದ ದಂಪತಿಗಳಾದ ನಾಗೇಂದ್ರ ಪ್ರಸಾದ್ (60) ಮತ್ತು ಭಾರತಿ (54) ಎಂಬುವವರಿಗೆ ಗಾಯಗಳಾಗಿದ್ದು, ಶಿರಾಡಿಯ ಆಂಬ್ಯುಲೆನ್ಸ್ ಮೂಲಕ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
    ಇತ್ತೀಚೆಗೆ ಅತೀ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಚಾಲಕನ ಅತಿವೇಗ ಹಾಗೂ ಅಜಾಗರುಕತೆ ಮುಖ್ಯ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ನೆಲ್ಯಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending