Connect with us

DAKSHINA KANNADA

ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರು ಪಾದುಕಾ ಮಂಟಪದ ಉದ್ಘಾಟನೆ..

Published

on

ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರು ಪಾದುಕಾ ಮಂಟಪದ ಉದ್ಘಾಟನೆ

Inauguration of Sri Sudheendra Theertha Swamiji’s Guru Paduka Mantapa..

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ನೂತನವಾಗಿ ನಿರ್ಮಿಸಲಾದ ನವೀಕೃತ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರು ಪಾದುಕಾ ಮಂಟಪದ ಉದ್ಘಾಟನೆಯು ಬುಧವಾರ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.

ಬಳಿಕ ಸಂಸ್ಥಾನದ ಕೀರ್ತಿಯನ್ನು ಉತ್ತುಂಗಕ್ಕೇರಿಸಿ ಜತೆಗೆ ಸಮಾಜವನ್ನೂ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿ ಶಿಷ್ಯವರ್ಗದ ಪಾಲಿಗೆ ಮಾತನಾಡುವ ದೇವರೆನಿಸಿದ್ದ  ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರು ಪಾದುಕೆಯನ್ನು ಶ್ರೀಗಳವರು ಪ್ರತಿಷ್ಠಾಪಿಸಿದರು.

ಗುರುವಾರದಂದು ಮಹಾಪ್ರಸ್ಥಾನಗೈದ ವೃಂದಾವನಸ್ಥರಾದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಐದನೇ ಪುಣ್ಯತಿಥಿ ಆರಾಧನೆ ಯು ಈ ಬಾರಿ ಮಂಗಳೂರಿನ ಶ್ರೀ ವೆಂಕಟರಮಣ ದೇವಳದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜರ ಗಲಿದ್ದು ,ರಾತ್ರಿ ಶ್ರೀ ದೇವಳದಲ್ಲಿ ವಿಶೇಷ ಸ್ವರ್ಣ ಗರುಡೋತ್ಸವ , ಸಂಸ್ಥಾನದಲ್ಲಿ ಪ್ರಧಾನ ಶ್ರೀ ವೇದವ್ಯಾಸ ದೇವರಿಗೆ ಕನಕಾಭಿಷೇಕ , ಗಂಗಾಭಿಷೇಕ , ಲಘು ವಿಷ್ಣು ಅಭಿಷೇಕಗಳು ನಡೆಯಲಿವೆ .

ರಾತ್ರಿ ಸಂಸ್ಥಾನದ ಶ್ರೀ ವೇದವ್ಯಾಸ ದೇವರಿಗೆ  ಸ್ವರ್ಣ ಗರುಡ ವಾಹನ ಸೇವೆ ಶ್ರೀಗಳವರ ದಿವ್ಯ ಹಸ್ತಗಳಿಂದ ನಡೆಯಲಿರುವುದು .

ಶ್ರೀಗಳವರು ಈ ಬಾರಿ ಒಂದು ತಿಂಗಳ ಪರ್ಯಂತ ಶ್ರೀದೇವಳದಲ್ಲಿ ಮೊಕ್ಕಾಂ ಮಾಡಲಿದ್ದು ಈ ಸಂದರ್ಭದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಶ್ರೀ ವಾಯುಸ್ತುತಿ , ಶ್ರೀ ನರಸಿಂಹ ಸ್ತುತಿ ನಮಸ್ಕಾರ , ಶ್ರೀ ವೀರ ವೆಂಕಟೇಶ ದೇವರ ಲಕ್ಷ ಪ್ರದಕ್ಷಿಣಾ ನಮಸ್ಕಾರ , ಸಂಸ್ಥಾನದ ದೇವರ ಸನ್ನಿಧಿಯಲ್ಲಿ ಲಕ್ಷ ತುಳಸಿ ಅರ್ಚನೆ , ಚಂಡಿಕಾ ಹವನ , ಗಾಯತ್ರಿ ಹವನ , ವಾಯುಸ್ತುತಿ ಹವನ ಕಾರ್ಯಕ್ರಮಗಳು ನಡೆಯಲಿರುವುದು .

ಈ ಸಂದರ್ಭದಲ್ಲಿ ಶ್ರೀ ದೇವಳದ ಮೊಕ್ತೇಸರರಾದ ಸಿ . ಎಲ್ . ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಉಪಸ್ಥಿತರಿದ್ದರು .

Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರಿನಲ್ಲಿ ಕಳವುಗೈದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ..!

Published

on

ಪುತ್ತೂರು: ಅಂತರ್‌ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ ಮನೆ ನಿವಾಸಿಯಾಗಿದ್ದು, ಆತನ ಮೇಲೆ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ 2023 ರಲ್ಲಿಯೇ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಡಿಸೆಂಬರ್‌ 19 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BANTWAL

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Published

on

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Continue Reading

DAKSHINA KANNADA

ಮಂಗಳೂರಿನಲ್ಲಿ ಮೂರು ದಿನ ನೀರು ಪೂರೈಕೆ ವ್ಯತ್ಯಯ

Published

on

ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ ಶುಕ್ರವಾರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ವ್ಯತ್ಯಯಗೊಳ್ಳಲಿದೆ ಎಂದು ಪಾಲಿಕೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ತಿಳಿಸಿದ್ದಾರೆ.

ತುಂಬೆ- ಬೆಂದೂರ್‌ವೆಲ್–ಪಣಂಬೂರು ಪ್ರದೇಶಗಳಿಗೆ ನೀರು ಪೂರೈಸುವ 1 ಸಾವಿರ ಮಿಲಿ ಮೀಟರ್ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲಪಡಿಸುವುದು, ತುಂಬೆ ರಾಮಲ್‌ಕಟ್ಟೆ ಬಳಿ ಕೆಯುಐಡಿಎಫ್‌ಸಿ ವತಿಯಿಂದ ಬಲ್ಕ್‌ ಫ್ಲೋ ಮೀಟರ್‌ ಅಳವಡಿಕೆ ಹಾಗೂ ಪಾಲಿಕೆ ವತಿಯಿಂದ 900 ಮಿ.ಮೀ ವ್ಯಾಸದ ಕೊಳವೆಯನ್ನು ಕೆಐಒಸಿಎಲ್‌ ಬಳಿ ಬದಲಾಯಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಂಗಳೂರಿನ ಬೆಂದೂರ್‌ವೆಲ್‌ಗಿಂತ ತಗ್ಗಿನಲ್ಲಿರುವ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರು ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್‌ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯು ಭಾಗಶಃ ಸ್ಥಗಿತಗೊಳ್ಳಲಿದೆ. ಕಾನ, ಬಾಳ, ಕುಳಾಯಿ, ಮುಕ್ಕ, ಪಣಂಬೂರು ಪ್ರದೇಶಗಳಿಗೆ ನೀರು ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

Continue Reading

LATEST NEWS

Trending