MANGALORE
ಮಂಗಳೂರು: ಬೆಂಗರೆಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಸಂಭ್ರಮ
ಮಂಗಳೂರು: ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಮಂಗಳೂರು ನಗರದ ಬೆಂಗರೆಯ ರಿಕ್ಷಾಪಾರ್ಕ್ ಬಳಿ ಧ್ವಜಾರೋಹಣ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಮಾಜ ಸೇವಕರಾದ ಬಾಹುಜಾನ್ ಬೆಂಗ್ರೆಯವರು ಧ್ವಜಾರೋಹಣ ನಡೆಸಿ ಅಮೃತಮಹೋತ್ಸವದ ಶುಭಾಶಯ ಕೋರಿದರು.
ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಬೆಂಗರೆ ಬಿಜೆಪಿ ಘಟಕದ ಅಧ್ಯಕ್ಷರಾದ ಎಂ.ಸಲೀಂ ವಹಿಸಿದ್ದರು. ರಿಕ್ಷಾ ಪಾರ್ಕ್ನ ಅಧ್ಯಕ್ಷರಾದ ಅಝೀಝ್, ಅಶ್ರಫ್, ಫಾರೂಕ್, ರಿಝ್ವಾನ್ ಉಪಸ್ಥಿತರಿದ್ದರು. ನಂತರ ಸೇರಿದ್ದವರಿಗೆ ಸಿಹಿತಿನಿಸು ಹಂಚಲಾಯಿತು.
ಬೆಂಗರೆ ಕಡಲ ತೀರದಲ್ಲಿ ಸ್ವಾತಂತ್ರ್ಯ ಸಂಭ್ರಮ
ಬೆಂಗರೆ ಕಡಲ ತೀರದಲ್ಲಿ ಚೈಲ್ಡ್ ಫಂಡ್ ಇಂಡಿಯಾ ಸಂಘದಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಬೆಂಗರೆ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶ್ರಫ್ ಬೆಂಗರೆ ಧ್ವಜಾರೋಹಣ ನೆರವೇರಿಸಿ, ಶುಭಾಶಯ ಹೇಳಿದರು.
ಸಂಜೆಯ ವೇಳೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಸಮಾಜ ಸೇವಕರಾದ ಬಾಹುಜಾನ್ ಬೆಂಗ್ರೆ, ಗೃಹರಕ್ಷಕ ಇಲಾಖೆಯ ರವೂಫ್, ಚೈಲ್ಡ್ ಫಂಡ್ ಇಂಡಿಯಾ ಅಧ್ಯಕ್ಷ ಸತ್ತಾರ್,
ಕಾರ್ಯದರ್ಶಿ ಸಲೀಮ್ ಹಾಗೂ ಶಿಕ್ಷಕಿಯರಾದ ಯಾಸ್ಮೀನ್, ಮೊಹರುನ್ನೀಸಾ, ಕುಂಞ್ಙಮೋನು ಕಜ, ನಬೀರ್, ಅಬ್ಬಾಸ್, ಅಶ್ರಫ್, ಬಿಎಫ್ಸಿ ಕುಂಞ್ಙಮೋನು ಇದ್ದರು. ಕಾರ್ಯಕ್ರಮದ ನಂತರ ಸಿಹಿತಿನಿಸು ಹಂಚಲಾಯಿತು.
BELTHANGADY
ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.
ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.
ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ
ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
DAKSHINA KANNADA
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
ಇತ್ತೀಚಿನ ದಿನಗಳಲ್ಲಿ ತುಳುನಾಡಿನ ದೈವಾರಾಧನೆ ವಿಶ್ವ ಪ್ರಸಿದ್ದಿಯನ್ನು ಪಡೆದುಕೊಳ್ಳುತ್ತಿದ್ದು, ಸಾವಿರಾರು ಜನ ತುಳುನಾಡ ದೈವಗಳನ್ನು ನಂಬಲು ಆರಂಭಿಸಿದ್ದಾರೆ. ಆದ್ರೆ ದೈವಗಳನ್ನು ನಂಬುವ ಬಗೆ ಹೇಗೆ ಅನ್ನೋದು ಗೊತ್ತಿಲ್ಲದೆ ಇದ್ರೂ ಭಕ್ತಿಯಿಂದ ಕೈ ಮುಗಿದವರನ್ನು ದೈವಗಳು ಎಂದಿಗೂ ಕೈ ಬಿಟ್ಟಿಲ್ಲ. ಹೀಗಾಗಿ ಸೆಲೆಬ್ರೆಟಿಗಳೂ ಸೇರಿದಂತೆ ಪ್ರತಿನಿತ್ಯ ಹಲವಾರು ಜನ ದೈವ ಸಾನಿಧ್ಯಕ್ಕೆ ಬಂದು ಭಕ್ತಿಯಿಂದ ಕೈ ಮುಗಿಯುತ್ತಿದ್ದಾರೆ. ಅದರಲ್ಲೂ ಕುತ್ತಾರು ಕೊರಗಜ್ಜನ ಕ್ಷೇತ್ರವಂತೂ ನಿತ್ಯ ಹೊರ ಜಿಲ್ಲೆಯ ಭಕ್ತರಿಂದ ತುಂಬಿ ತುಳುಕುತ್ತಿರುತ್ತದೆ.
ದೈವಾರಾಧನೆಯೇ ಪ್ರಮುಖವಾಗಿರುವ ತುಳುನಾಡಿನಲ್ಲಿ ಜನ ದೇವರಿಗಿಂತ ಹೆಚ್ಚು ಭಯ ಪಡೋದು ದೈವಗಳಿಗೆ. ಪ್ರಕೃತಿಯ ಆರಾಧನೆಯ ಮೂಲಕ ಇಲ್ಲಿನ ನೆಲ, ಜಲ, ಹಾಗೂ ಪರಿಸರ ಎಲ್ಲದರಲ್ಲೂ ದೈವಗಳನ್ನು ಕಾಣುವ ಸಂಸ್ಕೃತಿ ತುಳುನಾಡಿನದ್ದು. ಸಾವಿರದ ಎರಡು ದೈವಗಳು ಇಲ್ಲಿ ಆರಾಧಿಸಲ್ಪಡುತ್ತದೆ ಅನ್ನೋದು ಇತ್ತೀಚಿನ ವರೆಗೆ ಸಂಶೋಧಕರು ಕಂಡು ಕೊಂಡಿರೋ ಸತ್ಯ ಕೂಡ.
ಕೊರಗಜ್ಜ ಯಾರು ಏನು ಅನ್ನೋದು ಇಲ್ಲಿ ಮುಖ್ಯವಾಗದೇ ಇದ್ರೂ ಕೊರಗಜ್ಜ ಸಮಸ್ಯೆಗಳಿಗೆ ಪರಿಹಾರ ನೀಡ್ತಾನೆ ಅನ್ನೋದು ನಂಬಿ ಬರುವ ಭಕ್ತರಿಗೆ ಇರುವ ಆಶಾಕಿರಣ. ಯಾವುದೇ ಮದ್ಯವರ್ತಿ ಇಲ್ಲದೆ ತಾವೇ ಕೊರಗಜ್ಜನಿಗೆ ಪೂಜೆ ಸಲ್ಲಿಸಿ ಅವರಿಗೆ ಇಷ್ಟವಾದುದನ್ನು ಕೊಟ್ಟು ಕೈ ಮುಗಿದು ಬೇಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ಮೇಲು ಕೀಳೆಂಬ ಭೇದ-ಭಾವ ಇಲ್ಲ. ಇನ್ನು ಕೊರಗಜ್ಜ ಶ್ರೀಮಂತನಿಂದಲೂ ಬಡವನಿಂದಲೂ ಕೇಳೋದು ಎಲೆ ಅಡಿಕೆ , ಚಕ್ಕುಲಿ, ಹಾಗೂ ಒಂದು ಸ್ವಲ್ಪ ಮದ್ಯ ಅಷ್ಟೇ…
ಕೇವಲ ಎಲೆ-ಅಡಿಕೆಗೆ ನಮ್ಮ ಕಷ್ಟಕಾರ್ಪಣ್ಯಗಳನ್ನು ಪರಿಹಾರ ಮಾಡೊ ದೈವ ಎಂದರೆ ಸ್ವಾಮಿ ಕೊರಗಜ್ಜ. ಅಜ್ಜನನ್ನು ಆರಾಧಿಸಬೇಕೆಂದರೆ ದೊಡ್ಡ ದೊಡ್ಡ ದೈವ ಸ್ಥಾನಗಳೇ ಬೇಕೆಂದಿಲ್ಲ. ಕೇವಲ ಮನಸಿನಲ್ಲೇ ಸ್ವಾಮಿ ಕೊರಗಜ್ಜ ಅಂತ ಕಷ್ಟದ ಸಮಯದಲ್ಲಿ ನೆನೆಸಿದ್ರೆ ಸಾಕು ಅದ್ಯಾವುದೋ ರೂಪದಲ್ಲಿ ಬಂದು ಕಷ್ಟ ಪರಿಹಾರ ಮಾಡ್ತಾರೆ ಅನ್ನೋ ನಂಬಿಕೆ ತುಳುನಾಡಿನ ಜನರಲ್ಲಿ ಇದೆ. ಇನ್ನು ಕೊರಗಜ್ಜನ ಹಲವು ಕ್ಷೇತ್ರಗಳು ತುಳುನಾಡಿನಲ್ಲಿದ್ದು ಅಲ್ಲಿಗೆ ಎಲೆ ಅಡಿಕೆ, ಚಕ್ಕುಲಿ, ಮದ್ಯದ ಹರಕೆ ಹೇಳಿಕೊಂಡ್ರೆ ಮುಗಿತು.
ಇನ್ನು ಕೊರಗಜ್ಜನಿಗೆ ಅಗೇಲು ನೀಡುವ ಸಂಪ್ರದಾಯವಿದ್ದು ಅಲ್ಲಿ ಕೊರಗಜ್ಜನಿಗೆ ಕೋಡೊದು ಅನ್ನ, ಬಸಳೆಯ ಸಾರು, ಮೀನಿನ ಪದಾರ್ಥ, ಕೋಳಿಯ ಪದಾರ್ಥ, ಬೇಯಿಸಿದ ಮೊಟ್ಟೆ, ನಿಂಬೆ ಹಣ್ಣಿನ ಉಪ್ಪಿನಕಾಯಿ ಹಾಗೂ ಮದ್ಯ ಮಾತ್ರ. ಇದಿಷ್ಟಕ್ಕೆ ತೃಪ್ತಿಪಟ್ಟುಕೊಳ್ಳುವ ಕೊರಗಜ್ಜ “ಅಜ್ಜಾ ಕಾಪುಲೆ ನಮನ್.. ಈರೆಗ್ ಬಾಜೆಲ್ ಕೊರ್ಪೆ” ಅಂತ ಹೇಳಿದರೆ ಸಾಕು ಕ್ಷಣ ಮಾತ್ರದಲ್ಲಿ ಭಕ್ತರ ಇಚ್ಛೆಯನ್ನು ನೆರವೇರಿಸುತ್ತಾನೆ.
ನೀವು ಕೊರಗಜ್ಜನ ಫೋಟೊವನ್ನು ಮನೆಯಲ್ಲಿ ಇಡಬಹುದಾ.. ಎಂದು ನೋಡುವುದಾದರೆ ಅಜ್ಜನ ಫೋಟೋ ಮಾತ್ರವಲ್ಲ ಯಾವ ದೈವಗಳ ಫೋಟೋವನ್ನೂ ಮನೆಯಲ್ಲಿ ಇಟ್ಟು ಆರಾಧನೆ ಮಾಡುವ ಪದ್ಧತಿ ಅಷ್ಟು ಬಳಕೆಯಲ್ಲಿಲ್ಲ. ಫೋಟೋ ಇಟ್ಟು ಆರಾಧನೆ ಮಾಡಬೇಕೆಂದು ಎಲ್ಲೂ ಹೇಳಿಲ್ಲ. ತಿನ್ನುವಂತಹ ಆಹಾರದಲ್ಲಿ, ನಾವು ನೋಡುವಂತಹ ನೋಟದಲ್ಲಿ, ನಾವು ಮಾಡುವ ಒಳ್ಳೆಯ ಕೆಲಸದಲ್ಲಿ, ಅಜ್ಜನ ಪ್ರಸಾದದಲ್ಲಿ ಅಜ್ಜ ಇರುತ್ತಾನೆ. ಹೀಗಾಗಿ ಅಜ್ಜನ ಫೋಟೋ ಇಟ್ಟು ಪೂಜಿಸುವ ಕ್ರಮ ಇಲ್ಲ. ಪವಿತ್ರವಾದ ಹೃದಯದಲ್ಲಿ ನಾವು ಯಾವ ದೈವವನ್ನು ನಂಬುತ್ತೇವೊ ಆ ದೈವಕ್ಕೆ ನೆಲೆ ಕೊಟ್ಟರೆ ನಾವು ಎಲ್ಲಿ ನಿಂತು ಕೈ ಮುಗಿದರೂ ಕೂಡ ಕೊರಗಜ್ಜ ಆಗಲಿ ಅಥವಾ ಇನ್ನು ಯಾವೂದೇ ದೈವವಾಗಲಿ ಅಲ್ಲಿ ಬಂದು ನಮ್ಮನ್ನು ಕಾಪಾಡಿಯೇ ಕಾಪಾಡುತ್ತಾರೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- chikkamagaluru7 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!
- DAKSHINA KANNADA6 days ago
ಮೂಡುಬಿದಿರೆ : ಜೂನ್ 14 ರಿಂದ ಮೂರು ದಿನಗಳ ಕಾಲ ಹಲಸು – ವೈವಿಧ್ಯಮಯ ಹಣ್ಣುಗಳ ಮಹಾಮೇಳ
- DAKSHINA KANNADA4 days ago
ಮಂಗಳೂರಿನ ಮೊದಲ ಬಸ್ ಇದೇ ನೋಡಿ…!
- LATEST NEWS7 days ago
ನಿದ್ದೆ ಮಾಡುತ್ತಿರುವಂತೆ ನಟನೆ…ಆದರೆ ಮಾಡಿದ್ದು ಕಳ್ಳತನ…!