LATEST NEWS
ಮಂಗಳೂರು: ಸ್ವಾತಂತ್ರ್ಯ ಅಮೃತೋತ್ಸವದಲ್ಲಿ ಮಿಂದೆದ್ದ ಕೆನರಾ ಹೈಸ್ಕೂಲ್
ಮಂಗಳೂರು: ದೇಶದ ಮಹನೀಯರ ತ್ಯಾಗ, ಬಲಿದಾನ, ನಿಸ್ವಾರ್ಥ ಬದುಕಿನ ದ್ಯೋತಕವಾದ ಸ್ವಾತಂತ್ರ್ಯವೆಂಬ ಹಕ್ಕಿ ರೆಕ್ಕೆ ಬಿಚ್ಚಿ ಹಾರಿ 75 ಸಂವತ್ಸರಗಳು ಕಳೆದು ರಾಷ್ಟ್ರ ಹೊಸ ಭರವಸೆಗಳ ಕಡೆ ಮುನ್ನಡೆಯುತ್ತಿದೆ.
ದೇಶವಾಸಿಯ ಕಣಕಣದಲ್ಲೂ ರಾಷ್ಟ್ರಪ್ರೇಮದ ಸೌಗಂಧ ಸೂಸಬೇಕು, ತಾಯಿ ಭಾರತೀಯ ಪರಮ ವೈಭವ ಕಾಣಬೇಕು, ಇದಕ್ಕಾಗಿ ಪ್ರತಿಯೊಬ್ಬನಲ್ಲೂ ಹೊಸ ಚೈತನ್ಯದ ಶಕ್ತಿ ಉದ್ದಿಪನಗೊಳ್ಳಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ವಿದ್ಯಾಸಂಸ್ಥೆಗಳ ಸ್ವಾತಂತ್ರ್ಯೋತ್ಸವದ ಅಮೃತೋತ್ಸವವು ಸಂಭ್ರಮದಿಂದ ಕೆನರಾ ಹೈಸ್ಕೂಲ್ ಮೈನ್ ನ ಮೈದಾನದಲ್ಲಿ ಆಚರಿಸಲ್ಪಟ್ಟಿತು.
ಮಂಗಳೂರಿನ ಪ್ರಖ್ಯಾತ ಚರ್ಮರೋಗ ತಜ್ಞ ಶ್ರೀ ಗಣೇಶ್ ಪೈ ಅವರು ಅತಿಥಿಯಾಗಿ ಭಾಗವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಧ್ವಜವಂದನೆಯೊಂದಿಗೆ ರಾಷ್ಟ್ರಗೀತೆ ಮೊಳಗಿತು. ಸ್ಪರ್ಧಾತ್ಮಕ ಜಗತ್ತಿನ ವಾಸ್ತವತೆಯನ್ನು
ಅರ್ಥ ಮಾಡಿಕೊಳ್ಳುತ್ತಾ ನೈತಿಕತೆಯ ಎಳೆಗಳನ್ನು ನೇಯುತ್ತಾ ದೇಶಭಕ್ತಿಯ ರಕ್ಷಾ ಗುಚ್ಛದ ಪರಿಕಲ್ಪನೆಯನ್ನು ಬಿಂಬಿಸುವ ಶಿಕ್ಷಣ ನೀಡುವಲ್ಲಿ ಕೆನರಾ ವಿದ್ಯಾ ಸಂಸ್ಥೆ ಮುಂಚೂಣಿಯಲ್ಲಿದೆ. ಅದರ ಪ್ರತಿಫಲನವನ್ನು ಈ ಕಾರ್ಯಕ್ರಮದ ಮೂಲಕ ಎಲ್ಲರು ಕಾಣಲು ಸಾಧ್ಯವಾಯಿತು.
ಹಲವು ತೊರೆಗಳು ಹರಿದು ಒಂದುಗೂಡಿ ನದಿ ಪ್ರವಾಹವಾಗುವಂತೆ ವಿದ್ಯಾರ್ಥಿ ಪ್ರವಾಹ ಡೊಂಗರಕೇರಿ, ಕೆನರಾ ಮೈದಾನದಲ್ಲಿ ಹರಿಯಿತು. ಅತಿಥಿಗಳ ಆಗಮನವಾದಂತೆ ಶಾಲಾ ಪ್ರಾರ್ಥನೆ ಹಾಗೂ ವಂದೇಮಾತರಂ ಮೊಳಗಿತು. ಸ್ಥಾಪಕರ ಪ್ರತಿಮೆಗೆ ಮಾಲಾರ್ಪಣೆಯಾದ ನಂತರ ರಾಷ್ಟ್ರಧ್ವಜಾರೋಹಣ ನೆರವೇರಿತು.
ಧ್ವಜ ವಂದನೆಯ ಜೊತೆಗೆ ರಾಷ್ಟ್ರಗೀತೆಯು ಮೈದಾನದಲ್ಲಿ ಪ್ರತಿಧ್ವನಿಸಿತು. ನಂತರ ಕೆನರಾ ಸಂಸ್ಥೆಗಳ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಯಕ್ಷಗಾನ ರೂಪಕ, ಮೋಹಿನಿಯಾಟ್ಟಂ, ಗುಜರಾತಿ ನೃತ್ಯ, ದೇಶ್ ರಂಗೀಲಾ, ಪಂಜಾಬಿ,
ಒಡಿಸ್ಸಿ, ಕಥಕ್, ಭರತನಾಟ್ಯ ನೃತ್ಯ ಪ್ರದರ್ಶನಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಛದ್ಮವೇಷಗಳು ಅನಾವರಣಗೊಂಡವು. ಇದರ ಜೊತೆಗೆ ಉದಯೋನ್ಮುಖ ಪ್ರತಿಭೆ ಅಖಿಲ್ ಶರ್ಮ ಇವರಿಂದ ಕುಂಚದಿಂದ ಚಿತ್ರ ಚಿತ್ತಾರಗಳು ಮೂಡಿಬಂದುವು. ದೇಶಭಕ್ತಿಯನ್ನು ಸಾರುವ ಹಾಡಿಗೆ ವಿದ್ಯಾರ್ಥಿ ಸಮೂಹ ನೃತ್ಯ ಮಾಡುತ್ತಾ ಸಮಾರಂಭಕ್ಕೆ ಹೊಸ ಕಳೆಯನ್ನು ತುಂಬಿದರು.
ಆಡಳಿತ ಮಂಡಳಿಯ ಮಾನ್ಯ ಕಾರ್ಯದರ್ಶಿ ಶ್ರೀ. ಎಂ. ರಂಗನಾಥ್ ಭಟ್, ಖಜಾಂಚಿ ಶ್ರೀ.ಎಂ. ವಾಮನ್ ಕಾಮತ್, ಸಹ ಖಜಾಂಚಿ ಶ್ರೀ. ಜಗನ್ನಾಥ್ ಕಾಮತ್, ಕೆನರಾ ಹೈಸ್ಕೂಲ್ ಮೈನ್ ಹಾಗೂ ಕನ್ನಡ ಪ್ರಾಥಮಿಕ ಶಾಲಾ ಸಂಚಾಲಕ ಬಸ್ತಿ ಪುರುಷೋತ್ತಮ ಶೆಣೈ, ಜಂಟಿ ಕಾರ್ಯದರ್ಶಿ ಹಾಗೂ ಕೆನರಾ ಇಂಗ್ಲೀಷ್ ಪ್ರಾಥಮಿಕ ಶಾಲೆ,
ಕೆನರಾ ಸಿ.ಬಿ.ಎಸ್.ಇ ಸಂಚಾಲಕ ಶ್ರೀ ಕೆ.ಸುರೇಶ್ ಕಾಮತ್, ಜಂಟಿ ಕಾರ್ಯದರ್ಶಿ ಹಾಗೂ ಕೆನರಾ ಪದವಿಪೂರ್ವ ಕಾಲೇಜ್ ಸಂಚಾಲಕ ಶ್ರೀ. ಟಿ ಗೋಪಾಲ್ ಕೃಷ್ಣ ಶೆಣೈ, ಕೆನರಾ ಪದವಿ ಕಾಲೇಜ್ ಮ್ಯಾನೇಜರ್ ಶ್ರೀ ಕೆ. ಶಿವಾನಂದ ಶೆಣೈ,
ಕೆನರಾ ಪದವಿಪೂರ್ವ ಕಾಲೇಜ್ ಮ್ಯಾನೇಜರ್ ಶ್ರೀ.ರಾಘವೇಂದ್ರ ಕುಡ್ವ, ಆಡಳಿತ ಮಂಡಳಿಯ ಸದಸ್ಯ ಶ್ರೀ. ಎಂ ನರೇಶ್ ಶೆಣೈ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಉಜ್ವಲ ಮಲ್ಯ ಉಪಸ್ಥಿತರಿದ್ದರು.
ಕೆನರಾ ಸಂಸ್ಥೆಯ ಅಭಿಮಾನಿಗಳು, ಶಿಕ್ಷಕ ಶಿಕ್ಷಕೇತರ ಬಂಧುಗಳು, ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. R.J ಕಿರಣ್ ಶೆಣೈ, ಶಿಕ್ಷಕಿ ಶ್ರೀಮತಿ ವಿಜೇತ ಕಾರ್ಯಕ್ರಮ ನಿರೂಪಿಸಿದರು.
DAKSHINA KANNADA
ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!
ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.
ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.
ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.
ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
- bangalore7 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA6 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ