DAKSHINA KANNADA
‘ಜಗತ್ತಿನಲ್ಲಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿನಲ್ಲೇ ಬಲಿಷ್ಠ’-ವಿಶ್ವೇಶ್ವರ ಹೆಗಡೆ ಕಾಗೇರಿ
ಮಂಗಳೂರು: ಜಗತ್ತಿನಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಅತ್ಯಂತ ಸಮರ್ಥವಾಗಿ ಅನುಷ್ಠಾನಗೊಳಿಸಿದ ದೇಶ ಭಾರತ ಚಹಾ ಮಾರುವ ಸಾಮಾನ್ಯ ಓರ್ವ ದೇಶದ ಪ್ರಧಾನಿ, ರಾಷ್ಟ್ರಪತಿಯಾಗುವ ಅವಕಾಶವನ್ನು ಈ ದೇಶದ ಸಂವಿಧಾನ ನೀಡಿದೆ ಎಂದು ವಿಧಾನ ಸಭಾ ಸಭಾಧ್ಯಕ್ಷ್ಯರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ ದ.ಕ.ಜಿಲ್ಲೆ, ಮಹಾನಗರಪಾಲಿಕೆ, ಎಸ್.ಡಿ.ಎಂ ಕಾಲೇಜು, ಜಿಲ್ಲಾ ವಾಣೀಜ್ಯೋದ್ಯಮ ಸಂಘ, ಹಾಗೂ ವಿಶ್ವ ವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಚುನಾವಣಾ ಸುಧಾರಣಾ ಕ್ರಮದ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.
75 ವರ್ಷದಲ್ಲಿ ಭಾರತ ಮಾಡಿದ ಸಾಧನೆ ನೋಡಿದರೆ ಹೆಮ್ಮೆ ಅನಿಸುತ್ತದೆ. ಅಭಿವೃದ್ಧಿ ಹೊಂದಿದ ಎಲ್ಲಾ ಕ್ಷೇತ್ರಗಳಲ್ಲಿ ಭಾರತೀಯರಾದ ನಾವು ಗುರುತಿಸಿಕೊಂಡಿದ್ದೇವೆ.
ಈ ದೇಶ ಈ ಪ್ರಗತಿ ಕಾಣಲು ಸಾಧ್ಯವಾದದ್ದು ನಮ್ಮ ಸಂವಿಧಾನದಿಂದಲೇ. ಸಂವಿಧಾನದ ಶ್ರೇಷ್ಠ ಕೊಡುಗೆ ಎಷ್ಟು ಅದ್ಭುತವಾಗಿದೆ ಅಂದರೆ ಆ ಹಿರಿಯರನ್ನು ನೆನೆಸಿಕೊಳ್ಳೋದೆ ಒಂದು ರೀತಿಯ ಪುಣ್ಯ. ಸಂವಿದಾನದಲ್ಲಿ ನಮ್ಮ ದೇಶ ಭಾರತವೇ ಅಗ್ರಮಾನ್ಯವಾಗಿದೆ.
ಸಾಮಾನ್ಯರಲ್ಲಿ ಸಾಮಾನ್ಯನೊಬ್ಬ ಇಲ್ಲಿ ಒಬ್ಬ ಜನಪ್ರತಿನಿಧಿ ಆಗಲು ಸಾಧ್ಯವಿದೆ ಅಂದರೆ ಸಂವಿಧಾನದ ಶ್ರೇಷ್ಠತೆಯನ್ನು ಮನಗಾಣಬೇಕು. ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಗಳನ್ನು ಮನೆಯಲ್ಲಿ ಫೊಟೋ ಹಾಕಿಸಿಕೊಳ್ಳಬೇಕು ಪ್ರತೀ ಕ್ಷೇತ್ರದಲ್ಲಿ ಭಾರತೀಯರ ಸಾಧನೆ ಹೆಮ್ಮೆ ಪಡುವಂತದ್ದು.
ನಾವು ಅಭಿಮಾನ ಪಡುವಂತಹ ಎಲ್ಲಾ ಸಂಗತಿಗಳು ಭಾರತದಲ್ಲಿದೆ. ನಮ್ಮಲ್ಲಿರುವ ಜವಾಬ್ದಾರಿಯನ್ನು ಇನ್ನೊಬ್ಬರ ಮೇಲೆ ಹೊರಿಸದೆ ನಮ್ಮ ಕರ್ತವ್ಯವನ್ನು ನಾವು ಆತ್ಮವಲೋಕನದ ಮೂಲಕ ಮಾಡಿದಾಗ ವಿಷವರ್ತುಲ ಪರಿಹಾರವಾಗುತ್ತದೆ.
ಕರೋನಾ ಬಂದಂತಹ ಸಂದರ್ದಲ್ಲಿ ಮೋದಿಯವರ ಕಾರ್ಯವೈಖರಿಯನ್ನು ನಾವು ನೋಡಿದ್ದೇವೆ. ಮುಂದುವರಿದ ದೇಶಗಳು ಉತ್ಪಾದಿಸಿದಷ್ಟೇ ವೇಗದಲ್ಲಿ ಭಾರತ ಕೂಡ ಲಸಿಕೆಯನ್ನು ಉತ್ಪಾದಿಸಿ ಉಚಿತವಾಗಿ ವಿತರಿಸಿ ಸೋಂಕು ನಿವಾರಿಸುವಲ್ಲಿ ಗೆದ್ದಿದೆ.
ಜಾತಿ, ಭಾಷೆ, ವೇಷ, ಗಡಿ, ನೀರು ಈ ಎಲ್ಲಾ ಕಾರಣಗಳಿಂದ ಬೇಧ ಭಾವಗಳು ನಿರ್ಮಾಣವಾಗಿದೆ. ಇದಕ್ಕೆ ಶಿಕ್ಷಣ ಕಾರಣವೋ, ಅಥವಾ ಕುಟುಂಬ ವ್ಯವಸ್ಥೆಯ ಸಡಿಲತೆಯೋ ಅನ್ನುವಂತದ್ದು ವಿಶ್ಲೇಷಣೆಗೆ ಬಿಟ್ಟಿದ್ದು.
ಇದರಲ್ಲಿ ಬರೀ ರಾಜಕಾರಣಿಗಳು ಅಪರಾಧಿಗಳು ಎಂದರೆ ಸಮಂಜಸವಲ್ಲ. ನಾವೆಲ್ಲರೂ ತಪ್ಪಿನಲ್ಲಿ ಭಾಗಿಯಾಗಿದ್ದೇವೆ. ಹೀಗಾಗಿ ಎಲ್ಲರೂ ಕೂಡ ಜವಬ್ದಾರರಾಗಬೇಕು’ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ದ.ಕ.ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ “ಚುನಾವಣೆಯಲ್ಲಿ ಚುನಾವಣಾ ಗುರುತು ಚೀಟಿ ಎಷ್ಟು ಮುಖ್ಯವಾಗಿರುತ್ತದೆ, ಜೊತೆಗೆ ಇವತ್ತಿನ ಯುವ ಜನಾಂಗ ಓಟರ್ ಐಡಿ ಮಾಡಿಸಿಕೊಳ್ಳುವಲ್ಲಿ ಎಷ್ಟು ಆಲಸ್ಯವನ್ನು ತೋರಿಸುತ್ತಿದ್ದಾರೆ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯೊಳಗಡೆ ಯುವ ಜನಾಂಗ ತೊಡಗಿಸಿಕೊಳ್ಳುವಿಕೆಯಲ್ಲಿ ಎಷ್ಟು ಹಿಂಜರಿಯುತ್ತಿದ್ದಾರೆ ಎಂಬುದವುದರ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾ ಸಭಾಧ್ಯಕ್ಷ್ಯರಾದ ವಿಶ್ವೇಶ್ವರ ಹೆಗಡೆ, ಕಾಗೇರಿ ಮಾತನಾಡಿ “ಜಗತ್ತು ಯಾವೆಲ್ಲಾ ಕ್ಷೇತ್ರದಲ್ಲಿ ಅಭಿವೃದ್ದಿಯನ್ನು ಕಂಡಿದೆಯೋ ಆ ಎಲ್ಲಾ ಕ್ಷೇತ್ರಗಳಲ್ಲೂ ಭಾರತೀಯರು ನಾವು ಇದ್ದೇವೆ,. ಇದು ನಾವು ಹೆಮ್ಮೆ ಪಡುವಂತಹ ವಿಚಾರ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮ.ನಾ.ಪ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಣಾ ಅಧಿಕಾರಿ ಡಾ.ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ