DAKSHINA KANNADA
‘ಜಗತ್ತಿನಲ್ಲಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿನಲ್ಲೇ ಬಲಿಷ್ಠ’-ವಿಶ್ವೇಶ್ವರ ಹೆಗಡೆ ಕಾಗೇರಿ
ಮಂಗಳೂರು: ಜಗತ್ತಿನಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಅತ್ಯಂತ ಸಮರ್ಥವಾಗಿ ಅನುಷ್ಠಾನಗೊಳಿಸಿದ ದೇಶ ಭಾರತ ಚಹಾ ಮಾರುವ ಸಾಮಾನ್ಯ ಓರ್ವ ದೇಶದ ಪ್ರಧಾನಿ, ರಾಷ್ಟ್ರಪತಿಯಾಗುವ ಅವಕಾಶವನ್ನು ಈ ದೇಶದ ಸಂವಿಧಾನ ನೀಡಿದೆ ಎಂದು ವಿಧಾನ ಸಭಾ ಸಭಾಧ್ಯಕ್ಷ್ಯರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ ದ.ಕ.ಜಿಲ್ಲೆ, ಮಹಾನಗರಪಾಲಿಕೆ, ಎಸ್.ಡಿ.ಎಂ ಕಾಲೇಜು, ಜಿಲ್ಲಾ ವಾಣೀಜ್ಯೋದ್ಯಮ ಸಂಘ, ಹಾಗೂ ವಿಶ್ವ ವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಚುನಾವಣಾ ಸುಧಾರಣಾ ಕ್ರಮದ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.
75 ವರ್ಷದಲ್ಲಿ ಭಾರತ ಮಾಡಿದ ಸಾಧನೆ ನೋಡಿದರೆ ಹೆಮ್ಮೆ ಅನಿಸುತ್ತದೆ. ಅಭಿವೃದ್ಧಿ ಹೊಂದಿದ ಎಲ್ಲಾ ಕ್ಷೇತ್ರಗಳಲ್ಲಿ ಭಾರತೀಯರಾದ ನಾವು ಗುರುತಿಸಿಕೊಂಡಿದ್ದೇವೆ.
ಈ ದೇಶ ಈ ಪ್ರಗತಿ ಕಾಣಲು ಸಾಧ್ಯವಾದದ್ದು ನಮ್ಮ ಸಂವಿಧಾನದಿಂದಲೇ. ಸಂವಿಧಾನದ ಶ್ರೇಷ್ಠ ಕೊಡುಗೆ ಎಷ್ಟು ಅದ್ಭುತವಾಗಿದೆ ಅಂದರೆ ಆ ಹಿರಿಯರನ್ನು ನೆನೆಸಿಕೊಳ್ಳೋದೆ ಒಂದು ರೀತಿಯ ಪುಣ್ಯ. ಸಂವಿದಾನದಲ್ಲಿ ನಮ್ಮ ದೇಶ ಭಾರತವೇ ಅಗ್ರಮಾನ್ಯವಾಗಿದೆ.
ಸಾಮಾನ್ಯರಲ್ಲಿ ಸಾಮಾನ್ಯನೊಬ್ಬ ಇಲ್ಲಿ ಒಬ್ಬ ಜನಪ್ರತಿನಿಧಿ ಆಗಲು ಸಾಧ್ಯವಿದೆ ಅಂದರೆ ಸಂವಿಧಾನದ ಶ್ರೇಷ್ಠತೆಯನ್ನು ಮನಗಾಣಬೇಕು. ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಗಳನ್ನು ಮನೆಯಲ್ಲಿ ಫೊಟೋ ಹಾಕಿಸಿಕೊಳ್ಳಬೇಕು ಪ್ರತೀ ಕ್ಷೇತ್ರದಲ್ಲಿ ಭಾರತೀಯರ ಸಾಧನೆ ಹೆಮ್ಮೆ ಪಡುವಂತದ್ದು.
ನಾವು ಅಭಿಮಾನ ಪಡುವಂತಹ ಎಲ್ಲಾ ಸಂಗತಿಗಳು ಭಾರತದಲ್ಲಿದೆ. ನಮ್ಮಲ್ಲಿರುವ ಜವಾಬ್ದಾರಿಯನ್ನು ಇನ್ನೊಬ್ಬರ ಮೇಲೆ ಹೊರಿಸದೆ ನಮ್ಮ ಕರ್ತವ್ಯವನ್ನು ನಾವು ಆತ್ಮವಲೋಕನದ ಮೂಲಕ ಮಾಡಿದಾಗ ವಿಷವರ್ತುಲ ಪರಿಹಾರವಾಗುತ್ತದೆ.
ಕರೋನಾ ಬಂದಂತಹ ಸಂದರ್ದಲ್ಲಿ ಮೋದಿಯವರ ಕಾರ್ಯವೈಖರಿಯನ್ನು ನಾವು ನೋಡಿದ್ದೇವೆ. ಮುಂದುವರಿದ ದೇಶಗಳು ಉತ್ಪಾದಿಸಿದಷ್ಟೇ ವೇಗದಲ್ಲಿ ಭಾರತ ಕೂಡ ಲಸಿಕೆಯನ್ನು ಉತ್ಪಾದಿಸಿ ಉಚಿತವಾಗಿ ವಿತರಿಸಿ ಸೋಂಕು ನಿವಾರಿಸುವಲ್ಲಿ ಗೆದ್ದಿದೆ.
ಜಾತಿ, ಭಾಷೆ, ವೇಷ, ಗಡಿ, ನೀರು ಈ ಎಲ್ಲಾ ಕಾರಣಗಳಿಂದ ಬೇಧ ಭಾವಗಳು ನಿರ್ಮಾಣವಾಗಿದೆ. ಇದಕ್ಕೆ ಶಿಕ್ಷಣ ಕಾರಣವೋ, ಅಥವಾ ಕುಟುಂಬ ವ್ಯವಸ್ಥೆಯ ಸಡಿಲತೆಯೋ ಅನ್ನುವಂತದ್ದು ವಿಶ್ಲೇಷಣೆಗೆ ಬಿಟ್ಟಿದ್ದು.
ಇದರಲ್ಲಿ ಬರೀ ರಾಜಕಾರಣಿಗಳು ಅಪರಾಧಿಗಳು ಎಂದರೆ ಸಮಂಜಸವಲ್ಲ. ನಾವೆಲ್ಲರೂ ತಪ್ಪಿನಲ್ಲಿ ಭಾಗಿಯಾಗಿದ್ದೇವೆ. ಹೀಗಾಗಿ ಎಲ್ಲರೂ ಕೂಡ ಜವಬ್ದಾರರಾಗಬೇಕು’ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ದ.ಕ.ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ “ಚುನಾವಣೆಯಲ್ಲಿ ಚುನಾವಣಾ ಗುರುತು ಚೀಟಿ ಎಷ್ಟು ಮುಖ್ಯವಾಗಿರುತ್ತದೆ, ಜೊತೆಗೆ ಇವತ್ತಿನ ಯುವ ಜನಾಂಗ ಓಟರ್ ಐಡಿ ಮಾಡಿಸಿಕೊಳ್ಳುವಲ್ಲಿ ಎಷ್ಟು ಆಲಸ್ಯವನ್ನು ತೋರಿಸುತ್ತಿದ್ದಾರೆ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯೊಳಗಡೆ ಯುವ ಜನಾಂಗ ತೊಡಗಿಸಿಕೊಳ್ಳುವಿಕೆಯಲ್ಲಿ ಎಷ್ಟು ಹಿಂಜರಿಯುತ್ತಿದ್ದಾರೆ ಎಂಬುದವುದರ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾ ಸಭಾಧ್ಯಕ್ಷ್ಯರಾದ ವಿಶ್ವೇಶ್ವರ ಹೆಗಡೆ, ಕಾಗೇರಿ ಮಾತನಾಡಿ “ಜಗತ್ತು ಯಾವೆಲ್ಲಾ ಕ್ಷೇತ್ರದಲ್ಲಿ ಅಭಿವೃದ್ದಿಯನ್ನು ಕಂಡಿದೆಯೋ ಆ ಎಲ್ಲಾ ಕ್ಷೇತ್ರಗಳಲ್ಲೂ ಭಾರತೀಯರು ನಾವು ಇದ್ದೇವೆ,. ಇದು ನಾವು ಹೆಮ್ಮೆ ಪಡುವಂತಹ ವಿಚಾರ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮ.ನಾ.ಪ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಣಾ ಅಧಿಕಾರಿ ಡಾ.ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!